Homeಕರ್ನಾಟಕಕೇರಳ ಹಾಗೂ ಕರ್ನಾಟಕದ ಕರಾವಳಿಯಾದ್ಯಂತ ಸರಳ ‘ಬಕ್ರೀದ್’ ಆಚರಣೆ

ಕೇರಳ ಹಾಗೂ ಕರ್ನಾಟಕದ ಕರಾವಳಿಯಾದ್ಯಂತ ಸರಳ ‘ಬಕ್ರೀದ್’ ಆಚರಣೆ

ಪ್ರವಾದಿ ಇಬ್ರಾಹಿಂ ಹಾಗೂ ಅವರ ಮಗ ಇಸ್ಮಾಯಿಲ್ ಅವರ ತ್ಯಾಗ-ಬಲಿದಾನದ ನೆನೆಪಿನಲ್ಲಿ ವಿಶ್ವದಾದ್ಯಂತ ಮುಸಲ್ಮಾನರು ಬಕ್ರೀದ್ ಹಬ್ಬ ಆಚರಿಸುತ್ತಾರೆ.

- Advertisement -
- Advertisement -

ತ್ಯಾಗ ಮತ್ತು ಬಲಿದಾನದ ಸಂಕೇಂತವಾದ ಬಕ್ರೀದ್ ಹಬ್ಬವನ್ನು ಕೇರಳ ಸೇರಿದಂತೆ ಕರ್ನಾಟದ ಕರಾವಳಿಯಾದ್ಯಂತ ಅತ್ಯಂತ ಸರಳವಾಗಿ ಆಚರಿಸಲಾಗುತ್ತಿದೆ. ಪ್ರವಾದಿ ಇಬ್ರಾಹಿಂ ಮತ್ತು ಅವರ ಪುತ್ರ ಇಸ್ಮಾಯಿಲ್ ಅವರ ತ್ಯಾಗ ಮತ್ತು ಬಲಿದಾದನ ನೆನಪಿಗೆ ಮುಸಲ್ಮಾನರು ಈ ಹಬ್ಬವನ್ನು ಆಚರಿಸುತ್ತಾರೆ.

ಹಬ್ಬವನ್ನು ಅತ್ಯಂತ ಸರಳವಾಗಿ ಆಚರಿಸಲು ಸರಕಾರ ಹೊರಡಿಸಿದ ಮಾರ್ಗಸೂಚಿಯಂತೆ ಸುರಕ್ಷಿತ ಅಂತರ ಕಾಪಾಡಿ ಮಸೀದಿಗಳಲ್ಲಿ ಸಾಮೂಹಿಕವಾಗಿ ಈದ್ ಪ್ರಾರ್ಥನೆಯನ್ನು ಮಾಡಲಾಯಿತು. ದಕ್ಷಿಣ ಕನ್ನಡ, ಉಡುಪಿ ಹಾಗು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಾದ್ಯಂತ ತಮ್ಮ ವ್ಯಾಪ್ತಿಯಲ್ಲಿರುವ ಮಸೀದಿಗಳಲ್ಲಿ ಮುಸ್ಲಿಮರು ಬಕ್ರೀದ್ ನಮಾಝ್ ಮಾಡಿದರು.

ದ.ಕ ಜಿಲ್ಲೆಯಲ್ಲಿ ಕೊರೊನಾ ಪ್ರಯುಕ್ತ ಈದ್ಗಾದಲ್ಲಿ ಸಾಮೂಹಿಕ ನಮಾಝ್‌ಗೆ ನಿರ್ಬಂಧ ವಿಧಿಸಲಾಗಿದ್ದರಿಂದ ಅಲ್ಲಿ ನಮಾಝ್ ಇರಲಿಲ್ಲ. ಅಲ್ಲದೆ 60 ವರ್ಷಕ್ಕಿಂದ ಮೇಲ್ಪಟ್ಟ ಹಾಗೂ 10 ವರ್ಷಕ್ಕಿಂತ ಕೆಳಗಿನ ಪ್ರಾಯದವರು ಮಸೀದಿ ಪ್ರವೇಶಿಸಲು ಅವಕಾಶ ಇರಲಿಲ್ಲ.

ತ್ಯಾಗ ಬಲಿದಾನದ ಹಬ್ಬಕ್ಕೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಶುಭಾಶಯ ಹೇಳಿದ್ದಾರೆ. ತಮ್ಮ ಟ್ವೀಟ್‌ನಲ್ಲಿ “ತ್ಯಾಗ ಮತ್ತು ಬಲಿದಾನದ ಮಹತ್ವವನ್ನು ಸಾರುವ ಬಕ್ರೀದ್ ಹಬ್ಬದ ಆಶಯಗಳು ನಮ್ಮೆಲ್ಲರ ಬದುಕಿನ ಮೌಲ್ಯಗಳಾಗಲಿ.‌ ಸುಖ-ಕಷ್ಟಗಳೆರಡರ ಕಾಲದಲ್ಲಿಯೂ ಸೌಹಾರ್ದತೆಯ ಬಂಧ ನಮ್ಮೆಲ್ಲರನ್ನು ಬೆಸೆದಿರಲಿ” ಎಂದು ಶುಭಾಶಯ ಹೇಳಿದ್ದಾರೆ.

ಕೇರಳದಲ್ಲೂ ಇಂದು ಬಕ್ರೀದನ್ನು ಆಚರಿಸಲಾಗುತ್ತಿದೆ. ಕೇರಳದ ಮಲಪ್ಪುರಂ ಹಾಗೂ ಇತರ ಜಿಲ್ಲೆಗಳಲ್ಲಿ ಸರಳವಾಗಿ ಹಾಗೂ ಅಂತರ ಕಾಪಾಡಿಕೊಂಡು ಹಬ್ಬದ ನಮಾಝ್ ನಡೆಸಲಾಯಿತು.

ಕೇರಳ ಮುಸ್ಲಿಮರ ಧಾರ್ಮಿಕ ಮತ್ತು ಆಧ್ಯಾತ್ಮಿಕ ನಾಯಕರಾದ ಕಾಂತಪುರಂ ಎ ಪಿ ಅಬೂಬಕರ್ ಮುಸ್ಲಿಯಾರ್ ಮತ್ತು ಸೆಯ್ಯದ್ ಹೈದರಾಲಿ ಶಿಹಾಬ್ ತಂಙಲ್ ಸೇರಿದಂತೆ ಸಾಮಾಜಿಕ ಮುಖಂಡರು, ತಮ್ಮ ಸಹೋದರರನ್ನು ಕೊರೊನಾ ಕಾರ್ಯಸೂಚಿಯ ಮಿತಿಯಲ್ಲಿ ಈದ್ ಆಚರಿಸಲು ಒತ್ತಾಯಿಸಿದ್ದರು. ಆಚರಣೆ ಮತ್ತು ಪ್ರಾರ್ಥನಾ ಸಭೆಗಳು ಯಾವುದೇ ರೀತಿಯಲ್ಲಿ ಸಾಮಾಜಿಕ ಕೂಟಗಳು ಮತ್ತು ಸಾರ್ವಜನಿಕ ಸಭೆಗಳಿಗೆ ನಿಗದಿಪಡಿಸಿದ ಮಾನದಂಡಗಳಿಗೆ ವಿರುದ್ಧವಾಗಿರಬಾರದು ಎಂದು ಅವರು ಕೇಳಿದ್ದರು.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ “ಈದ್-ಉಲ್-ಅಝ್ಹಾ ನಮಗೆ ತ್ಯಾಗ, ಭಕ್ತಿ ಮತ್ತು ಮಾನವೀಯತೆ, ಪ್ರೀತಿಯ ದೊಡ್ಡ ಸಂದೇಶವನ್ನು ನೀಡುತ್ತದೆ. ಈ ವರ್ಷದ ಈದ್ ಆಚರಣೆಯು ಜೀವನದಲ್ಲಿ ಈ ಮಹಾನ್ ಮೌಲ್ಯಗಳನ್ನು ಸಾಕಾರಗೊಳಿಸುವ ಪ್ರತಿಜ್ಞೆಯನ್ನು ನವೀಕರಿಸಲು ಬಂದ ಒಂದು ಅವಕಾಶವಾಗಿದೆ. ಪ್ರಪಂಚದಾದ್ಯಂತವಿರುವ ಮಲಯಾಳಿಗಳಿಗೆ ಈದ್ ಶುಭ ಹಾರೈಸುತ್ತೇನೆ.” ಎಂದು ಟ್ಟಿಟ್ಟರ್‌ ಮೂಲಕ ಶುಭಾಶಯ ಕೋರಿದ್ದಾರೆ.

ನಾಳೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಹಾಗೂ ಭಾರತದಾದ್ಯಂತ ಬಕ್ರೀದ್ ಆಚರಿಸಲಾಗುತ್ತದೆ.


ಓದಿ: ಹುಲಿ ಜಾನಪದ; ಕನ್ನಡ ಜಾನಪದ ಪರಂಪರೆಯಲ್ಲಿ ಹುಲಿಯ ಜತೆಗಿನ ಮುಖಾಮುಖಿ- ಅರುಣ್ ಜೋಳದಕೂಡ್ಲಿಗಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...