Homeಕರ್ನಾಟಕಕೇರಳ ಹಾಗೂ ಕರ್ನಾಟಕದ ಕರಾವಳಿಯಾದ್ಯಂತ ಸರಳ ‘ಬಕ್ರೀದ್’ ಆಚರಣೆ

ಕೇರಳ ಹಾಗೂ ಕರ್ನಾಟಕದ ಕರಾವಳಿಯಾದ್ಯಂತ ಸರಳ ‘ಬಕ್ರೀದ್’ ಆಚರಣೆ

ಪ್ರವಾದಿ ಇಬ್ರಾಹಿಂ ಹಾಗೂ ಅವರ ಮಗ ಇಸ್ಮಾಯಿಲ್ ಅವರ ತ್ಯಾಗ-ಬಲಿದಾನದ ನೆನೆಪಿನಲ್ಲಿ ವಿಶ್ವದಾದ್ಯಂತ ಮುಸಲ್ಮಾನರು ಬಕ್ರೀದ್ ಹಬ್ಬ ಆಚರಿಸುತ್ತಾರೆ.

- Advertisement -
- Advertisement -

ತ್ಯಾಗ ಮತ್ತು ಬಲಿದಾನದ ಸಂಕೇಂತವಾದ ಬಕ್ರೀದ್ ಹಬ್ಬವನ್ನು ಕೇರಳ ಸೇರಿದಂತೆ ಕರ್ನಾಟದ ಕರಾವಳಿಯಾದ್ಯಂತ ಅತ್ಯಂತ ಸರಳವಾಗಿ ಆಚರಿಸಲಾಗುತ್ತಿದೆ. ಪ್ರವಾದಿ ಇಬ್ರಾಹಿಂ ಮತ್ತು ಅವರ ಪುತ್ರ ಇಸ್ಮಾಯಿಲ್ ಅವರ ತ್ಯಾಗ ಮತ್ತು ಬಲಿದಾದನ ನೆನಪಿಗೆ ಮುಸಲ್ಮಾನರು ಈ ಹಬ್ಬವನ್ನು ಆಚರಿಸುತ್ತಾರೆ.

ಹಬ್ಬವನ್ನು ಅತ್ಯಂತ ಸರಳವಾಗಿ ಆಚರಿಸಲು ಸರಕಾರ ಹೊರಡಿಸಿದ ಮಾರ್ಗಸೂಚಿಯಂತೆ ಸುರಕ್ಷಿತ ಅಂತರ ಕಾಪಾಡಿ ಮಸೀದಿಗಳಲ್ಲಿ ಸಾಮೂಹಿಕವಾಗಿ ಈದ್ ಪ್ರಾರ್ಥನೆಯನ್ನು ಮಾಡಲಾಯಿತು. ದಕ್ಷಿಣ ಕನ್ನಡ, ಉಡುಪಿ ಹಾಗು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಾದ್ಯಂತ ತಮ್ಮ ವ್ಯಾಪ್ತಿಯಲ್ಲಿರುವ ಮಸೀದಿಗಳಲ್ಲಿ ಮುಸ್ಲಿಮರು ಬಕ್ರೀದ್ ನಮಾಝ್ ಮಾಡಿದರು.

ದ.ಕ ಜಿಲ್ಲೆಯಲ್ಲಿ ಕೊರೊನಾ ಪ್ರಯುಕ್ತ ಈದ್ಗಾದಲ್ಲಿ ಸಾಮೂಹಿಕ ನಮಾಝ್‌ಗೆ ನಿರ್ಬಂಧ ವಿಧಿಸಲಾಗಿದ್ದರಿಂದ ಅಲ್ಲಿ ನಮಾಝ್ ಇರಲಿಲ್ಲ. ಅಲ್ಲದೆ 60 ವರ್ಷಕ್ಕಿಂದ ಮೇಲ್ಪಟ್ಟ ಹಾಗೂ 10 ವರ್ಷಕ್ಕಿಂತ ಕೆಳಗಿನ ಪ್ರಾಯದವರು ಮಸೀದಿ ಪ್ರವೇಶಿಸಲು ಅವಕಾಶ ಇರಲಿಲ್ಲ.

ತ್ಯಾಗ ಬಲಿದಾನದ ಹಬ್ಬಕ್ಕೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಶುಭಾಶಯ ಹೇಳಿದ್ದಾರೆ. ತಮ್ಮ ಟ್ವೀಟ್‌ನಲ್ಲಿ “ತ್ಯಾಗ ಮತ್ತು ಬಲಿದಾನದ ಮಹತ್ವವನ್ನು ಸಾರುವ ಬಕ್ರೀದ್ ಹಬ್ಬದ ಆಶಯಗಳು ನಮ್ಮೆಲ್ಲರ ಬದುಕಿನ ಮೌಲ್ಯಗಳಾಗಲಿ.‌ ಸುಖ-ಕಷ್ಟಗಳೆರಡರ ಕಾಲದಲ್ಲಿಯೂ ಸೌಹಾರ್ದತೆಯ ಬಂಧ ನಮ್ಮೆಲ್ಲರನ್ನು ಬೆಸೆದಿರಲಿ” ಎಂದು ಶುಭಾಶಯ ಹೇಳಿದ್ದಾರೆ.

ಕೇರಳದಲ್ಲೂ ಇಂದು ಬಕ್ರೀದನ್ನು ಆಚರಿಸಲಾಗುತ್ತಿದೆ. ಕೇರಳದ ಮಲಪ್ಪುರಂ ಹಾಗೂ ಇತರ ಜಿಲ್ಲೆಗಳಲ್ಲಿ ಸರಳವಾಗಿ ಹಾಗೂ ಅಂತರ ಕಾಪಾಡಿಕೊಂಡು ಹಬ್ಬದ ನಮಾಝ್ ನಡೆಸಲಾಯಿತು.

ಕೇರಳ ಮುಸ್ಲಿಮರ ಧಾರ್ಮಿಕ ಮತ್ತು ಆಧ್ಯಾತ್ಮಿಕ ನಾಯಕರಾದ ಕಾಂತಪುರಂ ಎ ಪಿ ಅಬೂಬಕರ್ ಮುಸ್ಲಿಯಾರ್ ಮತ್ತು ಸೆಯ್ಯದ್ ಹೈದರಾಲಿ ಶಿಹಾಬ್ ತಂಙಲ್ ಸೇರಿದಂತೆ ಸಾಮಾಜಿಕ ಮುಖಂಡರು, ತಮ್ಮ ಸಹೋದರರನ್ನು ಕೊರೊನಾ ಕಾರ್ಯಸೂಚಿಯ ಮಿತಿಯಲ್ಲಿ ಈದ್ ಆಚರಿಸಲು ಒತ್ತಾಯಿಸಿದ್ದರು. ಆಚರಣೆ ಮತ್ತು ಪ್ರಾರ್ಥನಾ ಸಭೆಗಳು ಯಾವುದೇ ರೀತಿಯಲ್ಲಿ ಸಾಮಾಜಿಕ ಕೂಟಗಳು ಮತ್ತು ಸಾರ್ವಜನಿಕ ಸಭೆಗಳಿಗೆ ನಿಗದಿಪಡಿಸಿದ ಮಾನದಂಡಗಳಿಗೆ ವಿರುದ್ಧವಾಗಿರಬಾರದು ಎಂದು ಅವರು ಕೇಳಿದ್ದರು.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ “ಈದ್-ಉಲ್-ಅಝ್ಹಾ ನಮಗೆ ತ್ಯಾಗ, ಭಕ್ತಿ ಮತ್ತು ಮಾನವೀಯತೆ, ಪ್ರೀತಿಯ ದೊಡ್ಡ ಸಂದೇಶವನ್ನು ನೀಡುತ್ತದೆ. ಈ ವರ್ಷದ ಈದ್ ಆಚರಣೆಯು ಜೀವನದಲ್ಲಿ ಈ ಮಹಾನ್ ಮೌಲ್ಯಗಳನ್ನು ಸಾಕಾರಗೊಳಿಸುವ ಪ್ರತಿಜ್ಞೆಯನ್ನು ನವೀಕರಿಸಲು ಬಂದ ಒಂದು ಅವಕಾಶವಾಗಿದೆ. ಪ್ರಪಂಚದಾದ್ಯಂತವಿರುವ ಮಲಯಾಳಿಗಳಿಗೆ ಈದ್ ಶುಭ ಹಾರೈಸುತ್ತೇನೆ.” ಎಂದು ಟ್ಟಿಟ್ಟರ್‌ ಮೂಲಕ ಶುಭಾಶಯ ಕೋರಿದ್ದಾರೆ.

ನಾಳೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಹಾಗೂ ಭಾರತದಾದ್ಯಂತ ಬಕ್ರೀದ್ ಆಚರಿಸಲಾಗುತ್ತದೆ.


ಓದಿ: ಹುಲಿ ಜಾನಪದ; ಕನ್ನಡ ಜಾನಪದ ಪರಂಪರೆಯಲ್ಲಿ ಹುಲಿಯ ಜತೆಗಿನ ಮುಖಾಮುಖಿ- ಅರುಣ್ ಜೋಳದಕೂಡ್ಲಿಗಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...