Homeಮುಖಪುಟಇಂಡಿಯಾ ಟುಡೇ, ನವ ಭಾರತ್ ಸೇರಿ 5 ಎಕ್ಸಿಟ್‌ ಪೋಲ್‌ಗಳಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ

ಇಂಡಿಯಾ ಟುಡೇ, ನವ ಭಾರತ್ ಸೇರಿ 5 ಎಕ್ಸಿಟ್‌ ಪೋಲ್‌ಗಳಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆ 2023 ರ ಮತದಾನ ಮುಗಿದಿದೆ. ಹಲವಾರು ಚಾನೆಲ್‌ಗಳು ಮತ್ತು ಸಂಸ್ಥೆಗಳು ಮತದಾನೋತ್ತರ ಸಮೀಕ್ಷೆ ನಡೆಸಿದ್ದು, ಅವುಗಳನ್ನು ಇಂದು ಪ್ರಕಟಿಸಿವೆ. ಅವುಗಳಲ್ಲಿ ಇಂಡಿಯಾ ಟುಡೇ, ನವ ಭಾರತ್, TimesNow-ETG, India TV-CNX ಮತ್ತು ಝೀ ಮ್ಯಾಟ್ರಿಕ್ ಎಕ್ಸಿಟ್‌ ಪೋಲ್‌ಗಳು ಕಾಂಗ್ರೆಸ್‌ ಸ್ಪಷ್ಟ ಬಹುಮತ ಸಾಧಿಸುತ್ತದೆ ಎಂದಿವೆ.

ಇಂಡಿಯಾ ಟುಡೇ – ಎಕ್ಸಿಸ್ ಮೈ ಇಂಡಿಯಾ

ಕಾಂಗ್ರೆಸ್:122-140
ಬಿಜೆಪಿ:62-80
ಜೆಡಿಎಸ್:20-25
ಇತರರು:00-03

ಮತ ಹಂಚಿಕೆ

ಕಾಂಗ್ರೆಸ್:43%
ಬಿಜೆಪಿ:35%
ಜೆಡಿಎಸ್:16%
ಇತರರು:06%

ಮುಂಬೈ ಕರ್ನಾಟಕದಲ್ಲಿ ಕಾಂಗ್ರೆಸ್ ಚೇತರಿಕೆ ಕಾಣಲಿದೆ ಎಂದು ಸಮೀಕ್ಷೆ ಹೇಳಿದೆ. ಕಾಂಗ್ರೆಸ್ ಪಕ್ಷ 28 ಸ್ಥಾನಗಳಲ್ಲಿ ಗೆಲುವು ಕಂಡರೆ, ಬಿಜೆಪಿ 21 ಸ್ಥಾನಗಳನ್ನು ಮತ್ತು ಜೆಡಿಎಸ್ ಒಂದು ಸ್ಥಾನ ಪಡೆದುಕೊಳ್ಳಲಿದೆ ಎಂದು ಎಕ್ಸಿಟ್ ಪೋಲ್ ಹೇಳಿದೆ.

ಕಳೆದ ಚುನಾವಣೆಯಲ್ಲಿ ಮಧ್ಯ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಮುಗ್ಗಿರಿಸಿತ್ತು. ಆದರೆ ಈ ಬಾರಿ ಅಲ್ಲಿ ಕಾಂಗ್ರೆಸ್ ಬೃಹತ್ ಚೇತರಿಕೆ ಕಾಣಲಿದೆ ಎಂದು ಇಂಡಿಯಾ ಟುಡೇ ಎಕ್ಸಿಸ್ ಮೈ ಇಂಡಿಯಾ ಸಮೀಕ್ಷೆಗಳು ಹೇಳಿವೆ. ಕಾಂಗ್ರೆಸ್ 12, ಬಿಜೆಪಿ 10, ಜೆಡಿಎಸ್ 01 ಸ್ಥಾನಗಳನ್ನು ಪಡೆಯಲಿವೆ ಎಂದು ಸಮೀಕ್ಷೆ ತಿಳಿಸಿದೆ.

ಅದೇ ರೀತಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಕಳೆದ ಬಾರಿಗಿಂತ ಉತ್ತಮ ಪ್ರದರ್ಶನ ನೀಡಲಿದೆ ಎಂದು ಸಮೀಕ್ಷೆ ಹೇಳಿದೆ. ಅಲ್ಲಿ ಕಾಂಗ್ರೆಸ್ 17, ಬಿಜೆಪಿ 10, ಜೆಡಿಎಸ್ 01 ಸ್ಥಾನಗಳನ್ನು ಪಡೆಯಲಿವೆ ಎನ್ನಲಾಗಿವೆ.

ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ಬಂಪರ್ ಬೆಳೆ ತೆಗೆಯಲಿದೆ ಎಂದು ಸಮೀಕ್ಷೆ ಹೇಳಿದೆ. ಅದು 32 ಸೀಟುಗಳನ್ನು ಪಡೆದರೆ, ಬಿಜೆಪಿ ಕೇವಲ 07 ಸೀಟುಗಳಿಗೆ ತೃಪ್ತಿಪಡಲಿದೆ. ಜೆಡಿಎಸ್ ಕೇವಲ 01 ಸ್ಥಾನ ಪಡೆಯಲಿದೆ ಎಂದಿದೆ.

ಕರಾವಳಿ ಕರ್ನಾಟಕದಲ್ಲಿ ಬಿಜೆಪಿ ಪ್ರಾಬಲ್ಯ ಮೆರೆಯಲಿದೆ. ಒಟ್ಟು ಸ್ಥಾನಗಳಲ್ಲಿ 19 ಬಿಜೆಪಿ 16 ಪಡೆಯಲಿದೆ. ಕಾಂಗ್ರೆಸ್ 03 ಪಡೆದರೆ, ಜೆಡಿಎಸ್ ಖಾತೆ ತೆರೆಯುವಲ್ಲಿ ವಿಫಲವಾಗಲಿದೆ ಎಂದು ಸಮೀಕ್ಷೆ ಹೇಳಿದೆ.

TimesNow-ETG 

Congress: 113
BJP: 85
JDS: 23
Others: 3

India TV-CNX 

Congress: 115
BJP: 85
JD(S): 22
Others: 2

ಝೀ ಮ್ಯಾಟ್ರಿಜ್

ಕಾಂಗ್ರೆಸ್:103-118
ಬಿಜೆಪಿ:79-89
ಜೆಡಿಎಸ್:25-33
ಇತರರು:02-05

ನವಭಾರತ್

ಕಾಂಗ್ರೆಸ್:106-120
ಬಿಜೆಪಿ:78-92
ಜೆಡಿಎಸ್:20-26
ಇತರರು:02-04

ಬಿಜೆಪಿಗೆ ಬಹುಮತ ಎಂದ ಎರಡು ಸಮೀಕ್ಷೆಗಳು

News Nation-CGS

BJP: 114
Congress: 86
JD(S): 21

ಸುವರ್ಣ ನ್ಯೂಸ್-ಜನ್ ಕಿ ಬಾತ್

BJP: 94 – 117
Congress: 91 – 106
JD(S): 14 – 24
Other: 02

ಉಳಿದ ಸಮೀಕ್ಷೆಗಳು ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಸಹ ಕರ್ನಾಟಕದಲ್ಲಿ ಅತಂತ್ರ ಫಲಿತಾಂಶ ಬರಲಿದೆ ಎಂದಿವೆ.

ಇದನ್ನೂ ಓದಿ: 2018ರಲ್ಲಿ ನಿಜವಾಗಿದ್ದ ಎಕ್ಸಿಟ್ ಪೋಲ್; 8 ಸಮೀಕ್ಷೆಗಳು ಏನು ಹೇಳಿದ್ದವು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...