Homeಮುಖಪುಟ‘ಒಂದು ರಾಷ್ಟ್ರ, ಒಂದು ಚುನಾವಣೆ‘; ಕೋವಿಂದ್‌ ಸಮಿತಿಗೆ ನಿಲುವನ್ನು ತಿಳಿಸಿದ ಪ್ರತಿಪಕ್ಷಗಳು

‘ಒಂದು ರಾಷ್ಟ್ರ, ಒಂದು ಚುನಾವಣೆ‘; ಕೋವಿಂದ್‌ ಸಮಿತಿಗೆ ನಿಲುವನ್ನು ತಿಳಿಸಿದ ಪ್ರತಿಪಕ್ಷಗಳು

- Advertisement -
- Advertisement -

ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ನೇತೃತ್ವದ ‘ಒಂದು ರಾಷ್ಟ್ರ ಒಂದು ಚುನಾವಣೆ‘ ಕುರಿತ ಉನ್ನತ ಮಟ್ಟದ ಸಮಿತಿ ಜೊತೆ ಪ್ರತಿಪಕ್ಷಗಳ ನಿಯೋಗ ಮಾತುಕತೆಯನ್ನು ನಡೆಸಿದ್ದು, ಪ್ರಸ್ತಾವನೆಗೆ ತಮ್ಮ ಬಲವಾದ ವಿರೋಧವನ್ನು ವ್ಯಕ್ತಪಡಿಸಿದೆ.

ತೃಣಮೂಲ ಕಾಂಗ್ರೆಸ್ (ಟಿಎಂಸಿ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಮತ್ತು ಸಮಾಜವಾದಿ (ಎಸ್‌ಪಿ) ಪಕ್ಷದ ಜೊತೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿದ್ದು, ಏಕಕಾಲಕ್ಕೆ ಚುನಾವಣೆಯನ್ನು ನಡೆಸುವ ಪ್ರಸ್ತಾವಣೆ ಬಗ್ಗೆ ಮಾತುಕತೆಯನ್ನು ನಡೆಸಿದ್ದಾರೆ.

ಇದಲ್ಲದೆ ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್(ಎಫ್‌ಐಸಿಸಿಐ) ನಿಯೋಗವು ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತ ಉನ್ನತ ಮಟ್ಟದ ಸಮಿತಿಯನ್ನು ಭೇಟಿ ಮಾಡಿದ್ದು, ಏಕಕಾಲಕ್ಕೆ ಚುನಾವಣೆಯ ಕುರಿತ ಕಲ್ಪನೆಯನ್ನು ಬೆಂಬಲಿಸಿದೆ.

ಟಿಎಂಸಿಯ ಹಿರಿಯ ನಾಯಕರಾದ ಸುದೀಪ್ ಬಂಡೋಪಾಧ್ಯಾಯ ಮತ್ತು ಕಲ್ಯಾಣ್ ಬ್ಯಾನರ್ಜಿ ಪ್ರಸ್ತಾವಣೆ ಬಗ್ಗೆ ಸಮಿತಿಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು, ಏಕಕಾಲದಲ್ಲಿ ಚುನಾವಣೆ ನಡೆಸುವ ಕಲ್ಪನೆಗೆ ತಮ್ಮ ಪಕ್ಷದ ಆಕ್ಷೇಪವನ್ನು ಪುನರುಚ್ಚರಿಸಿದ್ದಾರೆ, ಈ ಕ್ರಮವು ಭಾರತವನ್ನು ಸರ್ವಾಧಿಕಾರದೆಡೆಗೆ ಪರಿವರ್ತಿಸುವ ಗೌಪ್ಯ ಅಜೆಂಡಾವನ್ನು ಹೊಂದಿದೆ ಎಂದು ಹೇಳಿದ್ದಾರೆ.

ನಾವು ಮಾಜಿ ರಾಷ್ಟ್ರಪತಿಗಳ ನೇತೃತ್ವದ ಸಮಿತಿಯ ಮುಂದೆ ಹಾಜರಾಗಿದ್ದೇವೆ. ನಮ್ಮ ನಾಯಕಿ ಮಮತಾ ಬ್ಯಾನರ್ಜಿ ಬರೆದ ಪತ್ರವನ್ನು ನಾವು ಉಲ್ಲೇಖಿಸಿದ್ದೇವೆ. ನಾವು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆಯನ್ನು ವಿರೋಧಿಸುತ್ತಿದ್ದೇವೆ ಎಂದು ಖಡಕ್‌ ಆಗಿ ಹೇಳಿದ್ದೇವೆ ಎಂದು ಹೇಳಿದ್ದಾರೆ.

ಈ ಕಲ್ಪನೆಯನ್ನು ಕಾರ್ಯಗತಗೊಳಿಸಿದರೆ, ದೇಶದ ಸಂಯುಕ್ತ ರಚನೆಗೆ ಧಕ್ಕೆಯುಂಟುಮಾಡಲಿದೆ. ಉದಾಹರಣೆಗೆ ರಾಜ್ಯ ಸರ್ಕಾರ ಪತನವಾಗಿದೆ ಎಂದು ಭಾವಿಸೋಣ. ಅದು ಈಗ ಎಲ್ಲೆಡೆ ನಡೆಯುತ್ತಿದೆ. ಹಾಗಿದ್ದರೆ ಆ ರಾಜ್ಯ ಸರ್ಕಾರ ಮುಂದುವರಿಯುತ್ತದೆಯೇ ಅಥವಾ ಉಳಿದ ಅವಧಿಗೆ ರಾಷ್ಟ್ರಪತಿ ಆಳ್ವಿಕೆ ಹೇರಲಾಗುತ್ತದೆಯೇ? ಹೀಗಾದರೆ ಜನರ ಆಯ್ಕೆಯ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಲಿದೆ ಎಂದು ಬ್ಯಾನರ್ಜಿ ಹೇಳಿದ್ದಾರೆ.

ಸಿಪಿಐ(ಎಂ) ಪ್ರಧಾನ ಸೀತಾರಾಂ ಯೆಚೂರಿ, ಪಾಲಿಟ್‌ಬ್ಯೂರೋ ಸದಸ್ಯ ನೀಲೋತ್ಪಾಲ್ ಬಸು ಮತ್ತು ಕೇಂದ್ರ ಕಾರ್ಯದರ್ಶಿ ಮುರಳೀಧರನ್ ಅವರನ್ನೊಳಗೊಂಡ ಮೂವರು ಸದಸ್ಯರ ಸಿಪಿಐ(ಎಂ) ನಿಯೋಗವೂ ಸಮಿತಿಯನ್ನು ಭೇಟಿ ಮಾಡಿ ರಾಜ್ಯ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಪ್ರಸ್ತಾವನೆಗೆ ಆಕ್ಷೇಪಣೆಯನ್ನು ವ್ಯಕ್ತಪಡಿಸಿದೆ.

ಸಮಿತಿಯನ್ನು ತಾನು ಸಂಪೂರ್ಣವಾಗಿ ಒಪ್ಪುವುದಿಲ್ಲ ಎಂದು ಪ್ರತಿಪಾದಿಸಿದ ಯೆಚೂರಿ, ಒಂದು ರಾಷ್ಟ್ರ, ಒಂದು ಚುನಾವಣೆ ನಮ್ಮ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಇದು ಪ್ರಜಾಪ್ರಭುತ್ವ ವಿರೋಧಿ ಮತ್ತು ಸಂಯುಕ್ತ ವ್ಯವಸ್ಥೆಗೆ ವಿರೋಧಿಯಾಗಿದೆ. ಸದನದಲ್ಲಿ ಸರ್ಕಾರವು ತನ್ನ ಬಹುಮತವನ್ನು ಕಳೆದುಕೊಂಡಾಗ, ಅದರ ಮುಂದುವರಿಕೆ ಪ್ರಜಾಪ್ರಭುತ್ವದಲ್ಲಿ ಅವಕಾಶವಿಲ್ಲ. ರಾಜ್ಯ ಶಾಸಕಾಂಗದ ಅವಧಿಯನ್ನು ಮೊಟಕುಗೊಳಿಸುವುದು ಅಥವಾ ದೀರ್ಘಗೊಳಿಸುವುದು ಪ್ರಜಾಪ್ರಭುತ್ವ ವಿರೋಧಿ ಎಂದು ಹೇಳಿದ್ದಾರೆ.

ಕೆಕೆ ಶ್ರೀವಾಸ್ತವ ಮತ್ತು ಹರಿಶ್ಚಂದ್ರ ಸಿಂಗ್ ಯಾದವ್ ಅವರ ಸಮಾಜವಾದಿ ಪಕ್ಷದ ನಿಯೋಗ ಕೂಡ ಕೋವಿಂದ್ ನೇತೃತ್ವದ ಸಮಿತಿಯನ್ನು ಭೇಟಿ ಮಾಡಿ ಈ ವಿಷಯದ ಬಗ್ಗೆ ಪಕ್ಷದ ನಿಲುವನ್ನು ತಿಳಿಸಿದೆ. ಉತ್ತರ ಪ್ರದೇಶದ ಪ್ರಮುಖ ವಿರೋಧ ಪಕ್ಷವಾಗಿರುವ ಎಸ್‌ಪಿ ಈಗಾಗಲೇ ಸಮಿತಿಗೆ ಲಿಖಿತವಾಗಿ ತನ್ನ ಅಭಿಪ್ರಾಯವನ್ನು ಸಲ್ಲಿಸಿದೆ, ಈ ಕಲ್ಪನೆಯನ್ನು ಸಂವಿಧಾನ ವಿರೋಧಿ ಮತ್ತು ರಾಜಪ್ರಭುತ್ವವನ್ನು ಸ್ಥಾಪಿಸುವ ದುರುದ್ದೇಶಪೂರಿತ ಪ್ರಯತ್ನ ಎಂದು ಕರೆದಿದೆ.

ಈ ಮಧ್ಯೆ  FICCIಯ ನಿಯೋಗವು ಸಮಿತಿಯನ್ನು ಭೇಟಿ ಮಾಡಿದೆ ಮತ್ತು ಏಕಕಾಲಕ್ಕೆ ಮತದಾನದ ಕುರಿತ ಪ್ರಸ್ತಾವನೆಯನ್ನು ಬೆಂಬಲಿಸಿದೆ. ಏಕಕಾಲಕ್ಕೆ ಚುನಾವಣೆಯಿಂದ ಖರ್ಚಿನ ಉಳಿತಾಯವಾಗಲಿದೆ, ಆರ್ಥಿಕ ಬೆಳವಣಿಗೆ ಈ ಹಣವನ್ನು ಬಳಸಿಕೊಳ್ಳಬಹುದು ಎಂದು ಹೇಳಿದೆ.

‘ಒಂದು ರಾಷ್ಟ್ರ ಒಂದು ಚುನಾವಣೆ‘: ಸಮಿತಿ ರಚಿಸಿದ್ದ ಕೇಂದ್ರ

ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ಸಂವಿಧಾನದ ಅಡಿಯಲ್ಲಿ ಅಸ್ತಿತ್ವದಲ್ಲಿರುವ ಚೌಕಟ್ಟನ್ನು ಗಮನದಲ್ಲಿಟ್ಟುಕೊಂಡು ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವ ಕುರಿತು ಪರಿಶೀಲಿಸಿ ಶಿಫಾರಸ್ಸುಗಳನ್ನು ಮಾಡಲು ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿತ್ತು.

ಸಂವಿಧಾನ, ಜನಪ್ರತಿನಿಧಿ ಕಾಯಿದೆ-1950 ಮತ್ತು ಅದರ ಅಡಿಯಲ್ಲಿ ರಚಿಸಲಾದ ನಿಯಮಗಳು ಮತ್ತು ಇತರ ಕಾನೂನುಗಳಿಗೆ ನಿರ್ದಿಷ್ಟ ತಿದ್ದುಪಡಿಗಳನ್ನು ಪರಿಶೀಲಿಸಲು ಮತ್ತು ತಿದ್ದುಪಡಿ ಕುರಿತ ಶಿಫಾರಸ್ಸಿಗೆ ಸಮಿತಿ ರಚಿಸಲಾಗಿದೆ.

ಸೆ.1ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು  ಮಾಜಿ ರಾಷ್ಟ್ರಪತಿ ಕೋವಿಂದ್ ಅವರ ಜೊತೆ ನಡೆಸಿದ ಸಭೆಯ ಬಳಿಕ ಏಕಕಾಲದಲ್ಲಿ ಸಂಸತ್ತಿಗೆ ಮತ್ತು ವಿಧಾನಸಭೆ ಚುನಾವಣೆಗಳನ್ನು ನಡೆಸುವ ಬಗ್ಗೆ ಪರಿಶೀಲಿಸಲು ಕೋವಿಂದ್ ಅವರ ನೇತೃತ್ವದ ಸಮಿತಿ ರಚಿಸಿದ್ದರು.

ಸರ್ಕಾರದ ಸೆ.1ರ ಅಧಿಸೂಚನೆಯಲ್ಲಿ ಕೋವಿಂದ್ ಅವರನ್ನು ಹೊರತುಪಡಿಸಿ, ಸಮಿತಿಯಲ್ಲಿ ಅಮಿತ್‌ ಶಾ, ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಮತ್ತು ಮಾಜಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್, ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎನ್.ಕೆ. ಸಿಂಗ್, ಹಿರಿಯ ವಕೀಲ ಹರೀಶ್ ಸಾಳ್ವೆ, ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಸುಭಾಷ್ ಕಶ್ಯಪ್ ಮತ್ತು ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ ಇತರ ಸದಸ್ಯರಾಗಿದ್ದರು. ಅಧೀರ್ ರಂಜನ್ ಚೌದರಿ ಸಮಿತಿಯ ಭಾಗವಾಗಲು ನಿರಾಕರಿಸಿದ್ದರು.

ಇದನ್ನು ಓದಿ: ಎಸ್ಸಿ-ಎಸ್ಟಿ ಉಪ ವರ್ಗೀಕರಣ: ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...