Homeಮುಖಪುಟ‘ಒಂದು ರಾಷ್ಟ್ರ, ಒಂದು ಚುನಾವಣೆ‘; ಕೋವಿಂದ್‌ ಸಮಿತಿಗೆ ನಿಲುವನ್ನು ತಿಳಿಸಿದ ಪ್ರತಿಪಕ್ಷಗಳು

‘ಒಂದು ರಾಷ್ಟ್ರ, ಒಂದು ಚುನಾವಣೆ‘; ಕೋವಿಂದ್‌ ಸಮಿತಿಗೆ ನಿಲುವನ್ನು ತಿಳಿಸಿದ ಪ್ರತಿಪಕ್ಷಗಳು

- Advertisement -
- Advertisement -

ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ನೇತೃತ್ವದ ‘ಒಂದು ರಾಷ್ಟ್ರ ಒಂದು ಚುನಾವಣೆ‘ ಕುರಿತ ಉನ್ನತ ಮಟ್ಟದ ಸಮಿತಿ ಜೊತೆ ಪ್ರತಿಪಕ್ಷಗಳ ನಿಯೋಗ ಮಾತುಕತೆಯನ್ನು ನಡೆಸಿದ್ದು, ಪ್ರಸ್ತಾವನೆಗೆ ತಮ್ಮ ಬಲವಾದ ವಿರೋಧವನ್ನು ವ್ಯಕ್ತಪಡಿಸಿದೆ.

ತೃಣಮೂಲ ಕಾಂಗ್ರೆಸ್ (ಟಿಎಂಸಿ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಮತ್ತು ಸಮಾಜವಾದಿ (ಎಸ್‌ಪಿ) ಪಕ್ಷದ ಜೊತೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿದ್ದು, ಏಕಕಾಲಕ್ಕೆ ಚುನಾವಣೆಯನ್ನು ನಡೆಸುವ ಪ್ರಸ್ತಾವಣೆ ಬಗ್ಗೆ ಮಾತುಕತೆಯನ್ನು ನಡೆಸಿದ್ದಾರೆ.

ಇದಲ್ಲದೆ ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್(ಎಫ್‌ಐಸಿಸಿಐ) ನಿಯೋಗವು ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತ ಉನ್ನತ ಮಟ್ಟದ ಸಮಿತಿಯನ್ನು ಭೇಟಿ ಮಾಡಿದ್ದು, ಏಕಕಾಲಕ್ಕೆ ಚುನಾವಣೆಯ ಕುರಿತ ಕಲ್ಪನೆಯನ್ನು ಬೆಂಬಲಿಸಿದೆ.

ಟಿಎಂಸಿಯ ಹಿರಿಯ ನಾಯಕರಾದ ಸುದೀಪ್ ಬಂಡೋಪಾಧ್ಯಾಯ ಮತ್ತು ಕಲ್ಯಾಣ್ ಬ್ಯಾನರ್ಜಿ ಪ್ರಸ್ತಾವಣೆ ಬಗ್ಗೆ ಸಮಿತಿಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು, ಏಕಕಾಲದಲ್ಲಿ ಚುನಾವಣೆ ನಡೆಸುವ ಕಲ್ಪನೆಗೆ ತಮ್ಮ ಪಕ್ಷದ ಆಕ್ಷೇಪವನ್ನು ಪುನರುಚ್ಚರಿಸಿದ್ದಾರೆ, ಈ ಕ್ರಮವು ಭಾರತವನ್ನು ಸರ್ವಾಧಿಕಾರದೆಡೆಗೆ ಪರಿವರ್ತಿಸುವ ಗೌಪ್ಯ ಅಜೆಂಡಾವನ್ನು ಹೊಂದಿದೆ ಎಂದು ಹೇಳಿದ್ದಾರೆ.

ನಾವು ಮಾಜಿ ರಾಷ್ಟ್ರಪತಿಗಳ ನೇತೃತ್ವದ ಸಮಿತಿಯ ಮುಂದೆ ಹಾಜರಾಗಿದ್ದೇವೆ. ನಮ್ಮ ನಾಯಕಿ ಮಮತಾ ಬ್ಯಾನರ್ಜಿ ಬರೆದ ಪತ್ರವನ್ನು ನಾವು ಉಲ್ಲೇಖಿಸಿದ್ದೇವೆ. ನಾವು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆಯನ್ನು ವಿರೋಧಿಸುತ್ತಿದ್ದೇವೆ ಎಂದು ಖಡಕ್‌ ಆಗಿ ಹೇಳಿದ್ದೇವೆ ಎಂದು ಹೇಳಿದ್ದಾರೆ.

ಈ ಕಲ್ಪನೆಯನ್ನು ಕಾರ್ಯಗತಗೊಳಿಸಿದರೆ, ದೇಶದ ಸಂಯುಕ್ತ ರಚನೆಗೆ ಧಕ್ಕೆಯುಂಟುಮಾಡಲಿದೆ. ಉದಾಹರಣೆಗೆ ರಾಜ್ಯ ಸರ್ಕಾರ ಪತನವಾಗಿದೆ ಎಂದು ಭಾವಿಸೋಣ. ಅದು ಈಗ ಎಲ್ಲೆಡೆ ನಡೆಯುತ್ತಿದೆ. ಹಾಗಿದ್ದರೆ ಆ ರಾಜ್ಯ ಸರ್ಕಾರ ಮುಂದುವರಿಯುತ್ತದೆಯೇ ಅಥವಾ ಉಳಿದ ಅವಧಿಗೆ ರಾಷ್ಟ್ರಪತಿ ಆಳ್ವಿಕೆ ಹೇರಲಾಗುತ್ತದೆಯೇ? ಹೀಗಾದರೆ ಜನರ ಆಯ್ಕೆಯ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಲಿದೆ ಎಂದು ಬ್ಯಾನರ್ಜಿ ಹೇಳಿದ್ದಾರೆ.

ಸಿಪಿಐ(ಎಂ) ಪ್ರಧಾನ ಸೀತಾರಾಂ ಯೆಚೂರಿ, ಪಾಲಿಟ್‌ಬ್ಯೂರೋ ಸದಸ್ಯ ನೀಲೋತ್ಪಾಲ್ ಬಸು ಮತ್ತು ಕೇಂದ್ರ ಕಾರ್ಯದರ್ಶಿ ಮುರಳೀಧರನ್ ಅವರನ್ನೊಳಗೊಂಡ ಮೂವರು ಸದಸ್ಯರ ಸಿಪಿಐ(ಎಂ) ನಿಯೋಗವೂ ಸಮಿತಿಯನ್ನು ಭೇಟಿ ಮಾಡಿ ರಾಜ್ಯ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಪ್ರಸ್ತಾವನೆಗೆ ಆಕ್ಷೇಪಣೆಯನ್ನು ವ್ಯಕ್ತಪಡಿಸಿದೆ.

ಸಮಿತಿಯನ್ನು ತಾನು ಸಂಪೂರ್ಣವಾಗಿ ಒಪ್ಪುವುದಿಲ್ಲ ಎಂದು ಪ್ರತಿಪಾದಿಸಿದ ಯೆಚೂರಿ, ಒಂದು ರಾಷ್ಟ್ರ, ಒಂದು ಚುನಾವಣೆ ನಮ್ಮ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಇದು ಪ್ರಜಾಪ್ರಭುತ್ವ ವಿರೋಧಿ ಮತ್ತು ಸಂಯುಕ್ತ ವ್ಯವಸ್ಥೆಗೆ ವಿರೋಧಿಯಾಗಿದೆ. ಸದನದಲ್ಲಿ ಸರ್ಕಾರವು ತನ್ನ ಬಹುಮತವನ್ನು ಕಳೆದುಕೊಂಡಾಗ, ಅದರ ಮುಂದುವರಿಕೆ ಪ್ರಜಾಪ್ರಭುತ್ವದಲ್ಲಿ ಅವಕಾಶವಿಲ್ಲ. ರಾಜ್ಯ ಶಾಸಕಾಂಗದ ಅವಧಿಯನ್ನು ಮೊಟಕುಗೊಳಿಸುವುದು ಅಥವಾ ದೀರ್ಘಗೊಳಿಸುವುದು ಪ್ರಜಾಪ್ರಭುತ್ವ ವಿರೋಧಿ ಎಂದು ಹೇಳಿದ್ದಾರೆ.

ಕೆಕೆ ಶ್ರೀವಾಸ್ತವ ಮತ್ತು ಹರಿಶ್ಚಂದ್ರ ಸಿಂಗ್ ಯಾದವ್ ಅವರ ಸಮಾಜವಾದಿ ಪಕ್ಷದ ನಿಯೋಗ ಕೂಡ ಕೋವಿಂದ್ ನೇತೃತ್ವದ ಸಮಿತಿಯನ್ನು ಭೇಟಿ ಮಾಡಿ ಈ ವಿಷಯದ ಬಗ್ಗೆ ಪಕ್ಷದ ನಿಲುವನ್ನು ತಿಳಿಸಿದೆ. ಉತ್ತರ ಪ್ರದೇಶದ ಪ್ರಮುಖ ವಿರೋಧ ಪಕ್ಷವಾಗಿರುವ ಎಸ್‌ಪಿ ಈಗಾಗಲೇ ಸಮಿತಿಗೆ ಲಿಖಿತವಾಗಿ ತನ್ನ ಅಭಿಪ್ರಾಯವನ್ನು ಸಲ್ಲಿಸಿದೆ, ಈ ಕಲ್ಪನೆಯನ್ನು ಸಂವಿಧಾನ ವಿರೋಧಿ ಮತ್ತು ರಾಜಪ್ರಭುತ್ವವನ್ನು ಸ್ಥಾಪಿಸುವ ದುರುದ್ದೇಶಪೂರಿತ ಪ್ರಯತ್ನ ಎಂದು ಕರೆದಿದೆ.

ಈ ಮಧ್ಯೆ  FICCIಯ ನಿಯೋಗವು ಸಮಿತಿಯನ್ನು ಭೇಟಿ ಮಾಡಿದೆ ಮತ್ತು ಏಕಕಾಲಕ್ಕೆ ಮತದಾನದ ಕುರಿತ ಪ್ರಸ್ತಾವನೆಯನ್ನು ಬೆಂಬಲಿಸಿದೆ. ಏಕಕಾಲಕ್ಕೆ ಚುನಾವಣೆಯಿಂದ ಖರ್ಚಿನ ಉಳಿತಾಯವಾಗಲಿದೆ, ಆರ್ಥಿಕ ಬೆಳವಣಿಗೆ ಈ ಹಣವನ್ನು ಬಳಸಿಕೊಳ್ಳಬಹುದು ಎಂದು ಹೇಳಿದೆ.

‘ಒಂದು ರಾಷ್ಟ್ರ ಒಂದು ಚುನಾವಣೆ‘: ಸಮಿತಿ ರಚಿಸಿದ್ದ ಕೇಂದ್ರ

ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ಸಂವಿಧಾನದ ಅಡಿಯಲ್ಲಿ ಅಸ್ತಿತ್ವದಲ್ಲಿರುವ ಚೌಕಟ್ಟನ್ನು ಗಮನದಲ್ಲಿಟ್ಟುಕೊಂಡು ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವ ಕುರಿತು ಪರಿಶೀಲಿಸಿ ಶಿಫಾರಸ್ಸುಗಳನ್ನು ಮಾಡಲು ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿತ್ತು.

ಸಂವಿಧಾನ, ಜನಪ್ರತಿನಿಧಿ ಕಾಯಿದೆ-1950 ಮತ್ತು ಅದರ ಅಡಿಯಲ್ಲಿ ರಚಿಸಲಾದ ನಿಯಮಗಳು ಮತ್ತು ಇತರ ಕಾನೂನುಗಳಿಗೆ ನಿರ್ದಿಷ್ಟ ತಿದ್ದುಪಡಿಗಳನ್ನು ಪರಿಶೀಲಿಸಲು ಮತ್ತು ತಿದ್ದುಪಡಿ ಕುರಿತ ಶಿಫಾರಸ್ಸಿಗೆ ಸಮಿತಿ ರಚಿಸಲಾಗಿದೆ.

ಸೆ.1ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು  ಮಾಜಿ ರಾಷ್ಟ್ರಪತಿ ಕೋವಿಂದ್ ಅವರ ಜೊತೆ ನಡೆಸಿದ ಸಭೆಯ ಬಳಿಕ ಏಕಕಾಲದಲ್ಲಿ ಸಂಸತ್ತಿಗೆ ಮತ್ತು ವಿಧಾನಸಭೆ ಚುನಾವಣೆಗಳನ್ನು ನಡೆಸುವ ಬಗ್ಗೆ ಪರಿಶೀಲಿಸಲು ಕೋವಿಂದ್ ಅವರ ನೇತೃತ್ವದ ಸಮಿತಿ ರಚಿಸಿದ್ದರು.

ಸರ್ಕಾರದ ಸೆ.1ರ ಅಧಿಸೂಚನೆಯಲ್ಲಿ ಕೋವಿಂದ್ ಅವರನ್ನು ಹೊರತುಪಡಿಸಿ, ಸಮಿತಿಯಲ್ಲಿ ಅಮಿತ್‌ ಶಾ, ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಮತ್ತು ಮಾಜಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್, ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎನ್.ಕೆ. ಸಿಂಗ್, ಹಿರಿಯ ವಕೀಲ ಹರೀಶ್ ಸಾಳ್ವೆ, ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಸುಭಾಷ್ ಕಶ್ಯಪ್ ಮತ್ತು ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ ಇತರ ಸದಸ್ಯರಾಗಿದ್ದರು. ಅಧೀರ್ ರಂಜನ್ ಚೌದರಿ ಸಮಿತಿಯ ಭಾಗವಾಗಲು ನಿರಾಕರಿಸಿದ್ದರು.

ಇದನ್ನು ಓದಿ: ಎಸ್ಸಿ-ಎಸ್ಟಿ ಉಪ ವರ್ಗೀಕರಣ: ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...