Homeಕರ್ನಾಟಕಸಿಂದಗಿ ಉಪಚುನಾವಣೆ: ಕಾಂಗ್ರೆಸ್, ಬಿಜೆಪಿ ನಡುವೆ ನೇರಾನೇರ ಪೈಪೋಟಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಜೆಡಿಎಸ್ ಚಿತ್ತ...

ಸಿಂದಗಿ ಉಪಚುನಾವಣೆ: ಕಾಂಗ್ರೆಸ್, ಬಿಜೆಪಿ ನಡುವೆ ನೇರಾನೇರ ಪೈಪೋಟಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಜೆಡಿಎಸ್ ಚಿತ್ತ ಏನು?

- Advertisement -
- Advertisement -

ಮಾಜಿ ಸಚಿವ, ಜೆಡಿಎಸ್ ಶಾಸಕ ದಿವಂಗತ ಎಂ.ಸಿ.ಮನಗೊಳಿಯವರ ನಿಧನದಿಂದ ತೆರವಾಗಿರುವ ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ಅ.30 ರಂದು ಉಪಚುನಾವಣೆ ನಡೆಯಲಿದೆ. ಚುನಾವಣಾ ಪ್ರಚಾರ ರಂಗೇರುತ್ತಿದ್ದು, ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಜೆಡಿಎಸ್, ಮತ ವಿಭಜನೆಗೆ ಮುನ್ನುಡಿ ಹಾಡಲು ಯತ್ನಿಸಿದೆ ಎಂಬ ಆರೋಪವನ್ನು ಎದುರಿಸುತ್ತಿದೆ.

ದೀರ್ಘಕಾಲದಿಂದಲೂ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಸಿಂದಗಿಯಲ್ಲಿ ಕಳೆದೆರಡು ದಶಕಗಳಿಂದ ಬಿಜೆಪಿ, ಜೆಡಿಎಸ್ ನಡುವೆ ಸ್ಫರ್ಧೆ ಏರ್ಪಟ್ಟು, ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ಇಳಿದಿತ್ತು. ಇಲ್ಲಿ ಜೆಡಿಎಸ್ ಕೂಡ ಪಕ್ಷದ ವರ್ಚಸ್ಸಿನಿಂದ ಗೆಲುವು ಸಾಧಿಸುವುದಕ್ಕಿಂತ ಎಂ.ಸಿ.ಮನಗೊಳಿಯವರ ವರ್ಚಸ್ಸಿನಿಂದ ಗೆಲುವು ಪಡೆದಿತ್ತು.

ಈ ಬಾರಿ ಕಾಂಗ್ರೆಸ್, ದಿವಂಗತ ಎಂ.ಸಿ.ಮನಗೊಳಿ ಅವರ ಪುತ್ರ ಅಶೋಕ್ ಮಲ್ಲಪ್ಪ ಮನಗೊಳಿ ಅವರಿಗೆ ಟಿಕೆಟ್ ನೀಡಿದ್ದು, ಅನುಕಂಪದ ಮತಗಳ ಮೇಲೆ ಕಣ್ಣಿಟ್ಟಿದೆ. ಬಿಜೆಪಿಯು ಈ ಹಿಂದೆ ಎರಡು ಬಾರಿ ಶಾಸಕರಾಗಿದ್ದ, ಕಳೆದ ಚುನಾವಣೆಯಲ್ಲಿ ಎಂ.ಸಿ.ಮನಗೊಳಿ ಎದುರು 9 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದ ರಮೇಶ್ ಭೂಸನೂರ್ ಅವರನ್ನು ಕಣಕ್ಕಿಳಿಸಿದೆ. ಜೆಡಿಎಸ್ ತಮ್ಮ ನಾಜಿಯಾ ಅಂಗಡಿಯವರನ್ನು ಕಣಕ್ಕಿಳಿಸಿದೆ.

ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೊಳಿ, ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಸೇರಿದವರು. ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ್ ಲಿಂಗಾಯತ ಗಾಣಿಗ ಸಮುದಾಯಕ್ಕೆ ಸೇರಿದ್ದಾರೆ. ಇನ್ನೂ ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಅಭ್ಯರ್ಥಿಯಾಗಿದ್ದಾರೆ.

ಸಿಂದಗಿ ಮತಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾರರು ಸಾಮಾನ್ಯ ವರ್ಗದವರು (ಮುಖ್ಯವಾಗಿ ಲಿಂಗಾಯತ ಮತ್ತು ಇತರ ಸಮುದಾಯದವರದ್ದು). ಎರಡನೇ ಸ್ಥಾನದಲ್ಲಿ ಹಿಂದುಳಿದ ವರ್ಗದವರಿದ್ದಾರೆ. ಮೂರನೇ ಸ್ಥಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿದ್ದಾರೆ. 30 ಸಾವಿರಕ್ಕಿಂತ ಅಧಿಕ ಮುಸ್ಲಿಂ ಸಮುದಾಯದ ಮತಗಳಿವೆ. ಹೀಗಾಗಿ ಮುಸ್ಲಿಂ ಮತಗಳು ಗೆಲುವು ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಯಿದೆ. ಜೆಡಿಎಸ್ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದು ಮತ ವಿಭಜನೆ ಮಾಡಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ಎಂದು ಕಾಂಗ್ರೆಸ್ ಬಹಿರಂಗವಾಗಿಯೇ ಆರೋಪಿಸಿದೆ. ಮತಗಳು ವಿಭಜನೆಯಾದರೆ ಬಿಜೆಪಿಗೆ ತಕ್ಕಮಟ್ಟಿನ ಲಾಭವಿದೆ ಎಂಬುದು ಗುಟ್ಟಾಗೇನೂ ಉಳಿದಿಲ್ಲ.

ಕಳೆದ ಬಾರಿಯ 2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ರಮೇಶ ಭೂಸನೂರ್ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದರು. ಆದರೆ ಜೆಡಿಎಸ್ ಅಭ್ಯರ್ಥಿಯಾಗಿದ್ದ ಎಂ.ಸಿ. ಮನಗೂಳಿ ಸುಮಾರು 9,305 ಮತಗಳ ಅಂತರದಿಂದ ಜಯ ಗಳಿಸಿದ್ದರು. ಈ ಬಾರಿಯ ಉಪಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿಯಾಗಿರುವ ರಮೇಶ್ ಭೂಸನೂರ್ ಮತ್ತೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ತಾವು ಶಾಸಕರಾಗಿದ್ದಾಗ ಮಾಡಿದ್ದ ಕೆಲಸಗಳು, ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಸರ್ಕಾರವಿದ್ದರೆ ಕ್ಷೇತ್ರದ ಅಭಿವೃದ್ಧಿಗೆ ಸಹಾಯವಾಗುತ್ತದೆ ಎಂಬ ಮಾತುಗಳನ್ನು ಮುಂದಿಟ್ಟುಕೊಂಡು ಮತ್ತೆ ರಮೇಶ್ ಭೂಸನೂರ್ ಜನರ ಮುಂದೆ ಹೋಗಿದ್ದಾರೆ.

ತಮ್ಮ ತಂದೆಯ ಹೆಸರು, ಅವರ ಅಕಾಲಿಕ ಸಾವಿನ ಅನುಕಂಪ, ಅವರ ವರ್ಚಸ್ಸು, ಅಭಿವೃದ್ಧಿ ಕಾರ್ಯಗಳು ಸೇರಿದಂತೆ ಕಾಂಗ್ರೆಸ್ ಜನಪರ ಯೋಜನೆಗಳನ್ನು ಜಾರಿಮಾಡಿದೆಯೆಂದು ಜನರಿಗೆ ತಿಳಿಸುತ್ತಾ ಪ್ರಚಾರ ನಡೆಸುತ್ತಿದ್ದಾರೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮಲ್ಲಪ್ಪ ಮನಗೊಳಿ.

ಇನ್ನು ಜೆಡಿಎಸ್ ಅಭ್ಯರ್ಥಿಯಾಗಿರುವ ನಾಜಿಯಾ ಅಂಗಡಿ ಪದವೀಧರೆಯಾಗಿದ್ದು, ಜೆಡಿಎಸ್‌ನಿಂದ ಶಾಸಕರಾಗಿದ್ದ ಅವಧಿಯಲ್ಲಿ ಈ ಕ್ಷೇತ್ರದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳನ್ನು ಮುಂದಿಡುತ್ತಾ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹೆಸರಿನಲ್ಲಿ ಮತಯಾಚನೆ ಮಾಡುತ್ತಿದ್ದಾರೆ.

ಈ ಬಾರಿ ಸಿಂದಗಿಯನ್ನು ಬಿಟ್ಟುಕೊಡಬಾರದೆಂಬ ಹಠದಲ್ಲಿರುವ ಕಾಂಗ್ರೆಸ್ ಜಾತಿವಾರು ಸಮಾವೇಶಗಳ ಮೂಲಕ ಪ್ರಚಾರ ನಡೆಸುತ್ತಿದೆ. ಮುಸ್ಲಿಂ ಮತಗಳು ವಿಭಜನೆಯಾಗದಂತೆ ತಡೆಯಲು ಯು.ಟಿ.ಖಾದರ್, ಜಮೀರ್ ಅಹ್ಮದ್ ಅವರಿಂದ ಪ್ರಚಾರ ಮಾಡಿಸುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಸೇರಿ ಹಲವು ನಾಯಕರು ಸಹ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.

ಇತ್ತ ಬಿಜೆಪಿಗೆ ಈ ಚುನಾವಣೆ ಪ್ರತಿಷ್ಠೆಯ ಕಣವಾಗಿದ್ದು, ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಸರ್ಕಾರ ಎಂಬ ಧ್ಯೇಯ ಇಟ್ಟುಕೊಂಡು ಮತಯಾಚಿಸುತ್ತಿದೆ. ಕ್ಷೇತ್ರ ಅಭಿವೃದ್ಧಿಯಾಗಲು ಬಿಜೆಪಿಗೆ ಮತ ನೀಡಬೇಕು ಎಂದು ಹೇಳುತ್ತಿದೆ. ಕಾಂಗ್ರೆಸ್‌ಅನ್ನು ಗುರಿಯಾಗಿಸಿಕೊಂಡು ಬಿಜೆಪಿ ವಾಗ್ದಾಳಿ ನಡೆಸುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆದಿಯಾಗಿ ಬಿಜೆಪಿ ನಾಯಕರು ಕಣದಲ್ಲಿ ತೊಡಗಿಸಿಕೊಂಡಿದ್ದಾರೆ.

ಇನ್ನು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣ, ಎಚ್.ಡಿ.ಕುಮಾರಸ್ವಾಮಿ ಜೊತೆಗೆ ಸಿಂದಗಿಯಲ್ಲಿ ಠಿಕಾಣಿ ಹೂಡಿ ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದಾರೆ. ಚುನಾವಣೆ ಗೆಲ್ಲುವುದಕ್ಕಿಂತ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ ಅಶೋಕ್ ಮನಗೊಳಿಯವರನ್ನು ಸೋಲಿಸುವುದೇ ಮುಖ್ಯವಾಗಿಸಿಕೊಂಡಿದ್ದಾರೆ ಎನ್ನಲಾಗಿದೆ.

ಸಿಂದಗಿಯ ಜಾತಿವಾರು ಮತಗಳ ಅಂದಾಜು ಹೀಗಿದೆ. ಕುರುಬ – 40,000; ಗಾಣಿಗ – 35,000; ಪಂಚಮಸಾಲಿ – 34,000; ಬಣಜಿಗ – 25,000; ಮುಸ್ಲಿಂ – 35,000; ಪ.ಜಾ/ಪ.ಪಂ – 32,000; ಗಂಗಾಮತಸ್ಥ- 19,000; ತಳವಾರ ಮತ್ತು ಇತರೆ- 27,000;

ಸಿಂದಗಿಯಲ್ಲಿ ಶೇ.30ರಷ್ಟು ಮುಸ್ಲಿಂ ಜನಸಂಖ್ಯೆ ಇದೆ. ಮೊದಲಿನಿಂದಲೂ ಮುಸ್ಲಿಂ ಸಮುದಾಯ ಕಾಂಗ್ರೆಸ್ ಪರವಾಗಿದೆ ಎನ್ನಲಾಗಿದೆ. ಇದರ ಜೊತೆಗೆ, ವಡ್ಡ, ಅಲೆಮಾರಿ, ಲಂಬಾಣಿ ಸಮುದಾಯಗಳು ಕಾಂಗ್ರೆಸ್‌ಗೆ ಬೆಂಬಲ ನೀಡಿವೆ ಎನ್ನಲಾಗುತ್ತಿದೆ. ಆದರೆ ಪ್ರಮುಖ ಭಾಗವಾಗಿರುವ ಲಿಂಗಾಯತ ಸಮುದಾಯ ಬಿಜೆಪಿಯತ್ತ ತನ್ನ ಒಲವು ತೋರಿದೆ ಎನ್ನಲಾಗುತ್ತಿದೆ.

2018ರ ವಿಧಾನಸಭಾ ಚುನಾವಣೆಯಲ್ಲಿ 11,54,55 ಪುರುಷರು, 10,76,04 ಮಹಿಳೆಯರು ಸೇರಿ ಒಟ್ಟು 2,23,059 ಮತದಾರರು ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿದ್ದರು. ಸದ್ಯ 2021ರ ಉಪಚುನಾವಣೆಗೆ 1,20,949 ಪುರುಷರು, 1,13,327 ಮಹಿಳೆಯರು ಮತ್ತು ಇತರೆ 33 ಮಂದಿ ಸೇರಿ ಒಟ್ಟು 2,34,309 ಮತದಾರರಿದ್ದಾರೆ.

2020-21ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದಂತೆ ವಿಜಯಪುರ ಜಿಲ್ಲೆಗೆ ಶಾಶ್ವತ ಕುಡಿಯುವ ನೀರಿನ ಯೋಜನೆ ಜಾರಿಯಾಗಿಲ್ಲ. ಸಿಂದಗಿ ಪಟ್ಟಣದಲ್ಲಿ ಅಭಿವೃದ್ಧಿ ಕೊರತೆ ಎದ್ದು ಕಾಣುವಂತಿದೆ. ಸಿಂದಗಿಯಲ್ಲಿ ಕುಡಿವ ನೀರಿನ ಸಮಸ್ಯೆ ತಲೆದೋರಿದೆ. ನೀರಾವರಿ ಯೋಜನೆಗಳಾದ ಗುತ್ತಿ ಬಸವಣ್ಣ, ಕೃಷ್ಣಾ ಯೋಜನೆಗಳನ್ನು ಮೇಲ್ದರ್ಜೆಗೇರಿಸಿ ಕುಡಿಯುವ ನೀರಿನ ಸೌಲಭ್ಯ ಮತ್ತು ಬೆಳೆಗೆ ನೀರು ದೊರೆಯುವಂತೆ ಮಾಡಬೇಕಿದೆ.

ಇನ್ನು ಉಪಚುನಾವಣೆಯ ಪ್ರಣಾಳಿಕೆಗಳ ಕಡೆಗೆ ಗಮನ ಹರಿಸಿದರೆ ಈ ಕ್ಷೇತ್ರ ಎಷ್ಟು ಅಭಿವೃದ್ಧಿಯಾಗಬೇಕಿದೆ ಎಂಬುದು ತಿಳಿಯುತ್ತದೆ.

ಸಿಂದಗಿಯಲ್ಲಿ ಹೈಟೆಕ್ ಶೌಚಾಲಯ, ಬಿ.ಆರ್. ಅಂಬೇಡ್ಕರ್ ವೃತ್ತ ಅಭಿವೃದ್ಧಿ, ಸಿಂದಗಿ ಪಟ್ಟಣದಲ್ಲಿ ಗ್ರಂಥಾಲಯ, ಪುರಸಭಾ ನೂತನ ಕಟ್ಟಡ ನಿರ್ಮಾಣ, ಪ.ಜಾತಿ ಮತ್ತು ಪ.ಪಂಗಡದ ಕಾಲೋನಿಗಳಲ್ಲಿ ಮೂಲಸೌಕರ್ಯ, ವಿದ್ಯಾರ್ಥಿಗಳಿಗೆ ಸಿಟಿ ಬಸ್ ಸೇವೆ ಆರಂಭ, ಹೈಟೆಕ್ ಬಸ್ ನಿಲ್ದಾಣ, ರೈತರು ತಮ್ಮ ಜಮೀನುಗಳಿಗೆ ತೆರಳಲು ರಸ್ತೆ ನಿರ್ಮಾಣ, ಮುರಾರ್ಜಿ ದೇಸಾಯಿ ಶಾಲೆಗಳ ನಿರ್ಮಾಣ, 110 ಕೆವಿ ವಿದ್ಯುತ್ ಕೇಂದ್ರವನ್ನು ನಿರ್ಮಾಣ, ಪಟ್ಟಣದಲ್ಲಿ ಪೂರ್ಣ ಪ್ರಮಾಣದ ತರಕಾರಿ ಮಾರುಕಟ್ಟೆ ನಿರ್ಮಾಣ ಮುಂತಾದವೂ
ಸೇರಿವೆ. ಇಷ್ಟೆಲ್ಲಾ ಸಮಸ್ಯೆಗಳಿರುವ ಕ್ಷೇತ್ರದಲ್ಲಿ ಯಾವ ಬಗೆಯ ರಾಜಕೀಯ ಮೇಲುಗೈ ಪಡೆಯಲಿದೆ ಎಂದು ನವೆಂಬರ್ 2ರಂದು ತಿಳಿಯಲಿದೆ.


ಇದನ್ನೂ ಓದಿ: ಟಿಕ್ರಿ ಗಡಿ ಬಳಿ ದುರ್ಘಟನೆ: ಲಾರಿ ಹರಿದು ಮೂವರು ರೈತ ಮಹಿಳೆಯರ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಪಟ್ಟಿಯಿಂದ ಹೊರಗುಳಿದಿರುವ 47.7 ಲಕ್ಷ ಮತದಾರರ ಹೆಸರುಗಳನ್ನು ಪ್ರಕಟಿಸಿ, ಕರಡು ಪಟ್ಟಿಗೆ ಮುನ್ನ ತಿದ್ದುಪಡಿಗೆ ಅವಕಾಶ ನೀಡಿ: ಮತದಾರರ ಅಧಿಕಾರ ಮಂಚ್ ಸೂಚನೆ

ದೆಹಲಿ: ದೆಹಲಿಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ "ಸಂಗ್ರಹಿಸಲು ಸಾಧ್ಯವಾಗದವರು" ಎಂದು ಗುರುತಿಸಿ ಹೊರಗಿಡಲಾಗಿರುವ ಬರೋಬ್ಬರಿ 47.7 ಲಕ್ಷ ಮತದಾರರ ಮತಗಟ್ಟೆವಾರಿನ ಪಟ್ಟಿಯನ್ನು ತಕ್ಷಣವೇ...

ದ್ವೇಷ ಭಾಷಣ: TMC ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಜಾಮೀನು ರಹಿತ ವಾರಂಟ್

ದ್ವೇಷ ಭಾಷಣಕ್ಕೆ (Hate Speech) ಸಂಬಂಧಿಸಿದ ಪ್ರಕರಣದಲ್ಲಿ ಪದೇ ಪದೆ ಸಮನ್ಸ್ ನೀಡಿದ್ದರೂ ನ್ಯಾಯಾಲಯಕ್ಕೆ ಗೈರುಹಾಜರಾದ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಪಶ್ಚಿಮ ಬಂಗಾಳದ ಕೃಷ್ಣನಗರ ನ್ಯಾಯಾಲಯವು...

ಬಿಹಾರ| ಉಪ್ಪಿನ ಬದಲು ಡಿಟರ್ಜೆಂಟ್ ಬಳಸಿ ಅಡುಗೆ; ಊಟ ಸೇವಿಸಿದ 34 ಶಾಲಾ ಮಕ್ಕಳು ಅಸ್ವಸ್ಥ

ಬಿಹಾರದ ನಳಂದ ಜಿಲ್ಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿದ ನಂತರ 34 ಮಕ್ಕಳು ಅಸ್ವಸ್ಥರಾಗಿದ್ದಾರೆ. ಅಡುಗೆಯವರು ಉಪ್ಪಿನ ಬದಲಿಗೆ ಕಣ್ತಪ್ಪಿನಿಂದ ಡಿಟರ್ಜೆಂಟ್ ಪುಡಿಯನ್ನು ಬೆರೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆಗಸ್ಟ್ 18 ರ ಮಂಗಳವಾರ ಪಾರ್ಸಾ ಪ್ರಾಥಮಿಕ...

ಬೆಳಗಾವಿಯಲ್ಲಿ ನೇಕಾರ ಕಾರ್ಮಿಕ ಆತ್ಮಹತ್ಯೆ: ಅನಾಥವಾಯಿತು ಕುಟುಂಬ, ನೆರವಿಗೆ ಹೆಣ್ಣುಮಕ್ಕಳ ಅಳಲು

ಸಾಲದ ಸುಳಿಗೆ ಸಿಲುಕಿ ಜೀವನ ನಡೆಸಲಾಗದೆ ನೇಕಾರ ಕೂಲಿ ಕಾರ್ಮಿಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಕರುಣಾಜನಕ ಘಟನೆ ಬೆಳಗಾವಿ ನಗರದ ಮಂಗಾಯಿ ನಗರದ 4ನೇ ಕ್ರಾಸ್‌ನಲ್ಲಿ ಸಂಭವಿಸಿದೆ. ಮೃತರನ್ನು ವಿಠ್ಠಲ ಲಿಂಗಪ್ಪ ಲೋಕರಿ ಎಂದು...

ಶಿವಮೊಗ್ಗ| ಅಂಗನವಾಡಿ ಸಹಾಯಕಿಯಾಗಿ ದಲಿತ ಮಹಿಳೆಯ ನೇಮಕ; ಗ್ರಾಮಸ್ಥರ ವಿರೋಧ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಗುಡ್ತಿ ಗ್ರಾಮದಲ್ಲಿ ದಲಿತ ಮಹಿಳೆಯೊಬ್ಬರನ್ನು ಅಂಗನವಾಡಿ ಸಹಾಯಕಿಯಾಗಿ ನೇಮಕ ಮಾಡಿರುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿರುವ ಸುದ್ದಿ ಬೆಳಕಿಗೆ ಬಂದಿದ್ದು,...

ಉಮರ್ ಖಾಲಿದ್- ಶಾರ್ಜೀಲ್ ದೀರ್ಘಕಾಲದ ಬಂಧನದ ಬಗ್ಗೆ ಕಳವಳ; 100 ಕ್ಕೂ ಹೆಚ್ಚು ಪ್ರಮುಖರಿಂದ ಸಿಜೆಐಗೆ ಬಹಿರಂಗ ಪತ್ರ

2020 ರ ದೆಹಲಿ ಗಲಭೆ ಪಿತೂರಿ ಪ್ರಕರಣದಲ್ಲಿ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ದೀರ್ಘಕಾಲದ ಬಂಧನದ ಬಗ್ಗೆ ಕಳವಳ ವ್ಯಕ್ತಪಡಿಸಿ 100 ಕ್ಕೂ ಹೆಚ್ಚು ಬರಹಗಾರರು, ನಟರು,...

ಗೋಡ್ಸೆ ಆರ್‌ಎಸ್‌ಎಸ್‌ ಕಾರ್ಯಕರ್ತನಾಗಿದ್ದ ಎಂದು ಸಾವರ್ಕರ್ ಅವರ ಸೋದರಳಿಯ ಕೋರ್ಟ್‌ನಲ್ಲಿ ಹೇಳಿಕೆ: ಸಂಘದಿಂದ ಸ್ಪಷ್ಟನೆ ಕೇಳಿದ ಕಾಂಗ್ರೆಸ್

ಮುಂಬೈ: ಮಹಾತ್ಮ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆ ಆರ್‌ಎಸ್‌ಎಸ್‌ನ ಸಕ್ರಿಯ ಸದಸ್ಯರಾಗಿದ್ದರು ಎಂದು ವಿನಾಯಕ್ ದಾಮೋದರ್ ಸಾವರ್ಕರ್ ಅವರ ಸೋದರಳಿಯ ಸತ್ಯಕಿ ಸಾವರ್ಕರ್ ನ್ಯಾಯಾಲಯದ ವಿಚಾರಣೆ ವೇಳೆ ನೀಡಿರುವ ಹೇಳಿಕೆ ಈಗ ದೇಶಾದ್ಯಂತ...

SIR ಅವಾಂತರ : ಆ.20ರಂದು ಮತ ಕಾವಲು ಸಮಿತಿಯಿಂದ ‘ಸಾಂಸ್ಕೃತಿಕ ಪ್ರತಿರೋಧ’

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ರಾಜ್ಯದಲ್ಲಿ ಸೃಷ್ಟಿಸಿರುವ ಅವಾಂತರಗಳ ವಿರುದ್ಧ ಗುರುವಾರ (ಆ.20) ಬೆಂಗಳೂರಿನ ಗಾಂಧಿ ಭವನದಲ್ಲಿ 'ಸಾಂಸ್ಕೃತಿಕ ಪ್ರತಿರೋಧ' ಹಮ್ಮಿಕೊಳ್ಳಲಾಗಿದೆ. ನಾಗರಿಕ ಮತ ಕಾವಲು ಸಮಿತಿ ಆಯೋಜಿಸಿರುವ ಕಾರ್ಯಕ್ರಮವನ್ನು ನಟ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಮತದಾರರಲ್ಲಿ ಬಹಿಷ್ಕಾರ ಬೆದರಿಕೆ ಎದುರಿಸುತ್ತಿರುವವರಲ್ಲಿ ಶೇ. 59 ರಷ್ಟು ಜನ ಬಿಜೆಪಿ ಹಿಡಿತದಲ್ಲಿರುವ ಕ್ಷೇತ್ರಗಳವರು: ವರದಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಹಾಗೂ ಶುದ್ಧೀಕರಣದ ಹೆಸರಿನಲ್ಲಿ ನಡೆಯುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯು ಭಾರೀ ಚರ್ಚೆಗೆ ಕಾರಣವಾಗಿದೆ. ಚುನಾವಣಾ ಆಯೋಗವು ಪ್ರಕಟಿಸಿರುವ ಅಧಿಕೃತ ದತ್ತಾಂಶಗಳನ್ನು ಆಧರಿಸಿ...

ವಿದ್ಯಾರ್ಥಿ ಪ್ರತಿಭಟನೆ ತಡೆಯುವ ಆದೇಶ ವಾಪಸ್: ತೀವ್ರ ವಿರೋಧದ ಹಿನ್ನೆಲೆ ಹಿಂದೆ ಸರಿದ ತಮಿಳುನಾಡು ಸರ್ಕಾರ

ಎಡಪಕ್ಷಗಳು ಹಾಗೂ ತಮಿಳುನಾಡು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಘಟಿಸಿದ ಪ್ರತಿಭಟನೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದನ್ನು ತಡೆಯುವ ವಿವಾದಾತ್ಮಕ ಆದೇಶವನ್ನು ತೀವ್ರ ವಿರೋಧದ ಬೆನ್ನಲ್ಲೇ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರ ಹಿಂಪಡೆದಿದೆ. ಶಾಲಾ ಶಿಕ್ಷಣ...