Homeಕರ್ನಾಟಕಸಿಂದಗಿ ಉಪಚುನಾವಣೆ: ಕಾಂಗ್ರೆಸ್, ಬಿಜೆಪಿ ನಡುವೆ ನೇರಾನೇರ ಪೈಪೋಟಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಜೆಡಿಎಸ್ ಚಿತ್ತ...

ಸಿಂದಗಿ ಉಪಚುನಾವಣೆ: ಕಾಂಗ್ರೆಸ್, ಬಿಜೆಪಿ ನಡುವೆ ನೇರಾನೇರ ಪೈಪೋಟಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಜೆಡಿಎಸ್ ಚಿತ್ತ ಏನು?

- Advertisement -
- Advertisement -

ಮಾಜಿ ಸಚಿವ, ಜೆಡಿಎಸ್ ಶಾಸಕ ದಿವಂಗತ ಎಂ.ಸಿ.ಮನಗೊಳಿಯವರ ನಿಧನದಿಂದ ತೆರವಾಗಿರುವ ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ಅ.30 ರಂದು ಉಪಚುನಾವಣೆ ನಡೆಯಲಿದೆ. ಚುನಾವಣಾ ಪ್ರಚಾರ ರಂಗೇರುತ್ತಿದ್ದು, ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಜೆಡಿಎಸ್, ಮತ ವಿಭಜನೆಗೆ ಮುನ್ನುಡಿ ಹಾಡಲು ಯತ್ನಿಸಿದೆ ಎಂಬ ಆರೋಪವನ್ನು ಎದುರಿಸುತ್ತಿದೆ.

ದೀರ್ಘಕಾಲದಿಂದಲೂ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಸಿಂದಗಿಯಲ್ಲಿ ಕಳೆದೆರಡು ದಶಕಗಳಿಂದ ಬಿಜೆಪಿ, ಜೆಡಿಎಸ್ ನಡುವೆ ಸ್ಫರ್ಧೆ ಏರ್ಪಟ್ಟು, ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ಇಳಿದಿತ್ತು. ಇಲ್ಲಿ ಜೆಡಿಎಸ್ ಕೂಡ ಪಕ್ಷದ ವರ್ಚಸ್ಸಿನಿಂದ ಗೆಲುವು ಸಾಧಿಸುವುದಕ್ಕಿಂತ ಎಂ.ಸಿ.ಮನಗೊಳಿಯವರ ವರ್ಚಸ್ಸಿನಿಂದ ಗೆಲುವು ಪಡೆದಿತ್ತು.

ಈ ಬಾರಿ ಕಾಂಗ್ರೆಸ್, ದಿವಂಗತ ಎಂ.ಸಿ.ಮನಗೊಳಿ ಅವರ ಪುತ್ರ ಅಶೋಕ್ ಮಲ್ಲಪ್ಪ ಮನಗೊಳಿ ಅವರಿಗೆ ಟಿಕೆಟ್ ನೀಡಿದ್ದು, ಅನುಕಂಪದ ಮತಗಳ ಮೇಲೆ ಕಣ್ಣಿಟ್ಟಿದೆ. ಬಿಜೆಪಿಯು ಈ ಹಿಂದೆ ಎರಡು ಬಾರಿ ಶಾಸಕರಾಗಿದ್ದ, ಕಳೆದ ಚುನಾವಣೆಯಲ್ಲಿ ಎಂ.ಸಿ.ಮನಗೊಳಿ ಎದುರು 9 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದ ರಮೇಶ್ ಭೂಸನೂರ್ ಅವರನ್ನು ಕಣಕ್ಕಿಳಿಸಿದೆ. ಜೆಡಿಎಸ್ ತಮ್ಮ ನಾಜಿಯಾ ಅಂಗಡಿಯವರನ್ನು ಕಣಕ್ಕಿಳಿಸಿದೆ.

ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೊಳಿ, ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಸೇರಿದವರು. ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ್ ಲಿಂಗಾಯತ ಗಾಣಿಗ ಸಮುದಾಯಕ್ಕೆ ಸೇರಿದ್ದಾರೆ. ಇನ್ನೂ ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಅಭ್ಯರ್ಥಿಯಾಗಿದ್ದಾರೆ.

ಸಿಂದಗಿ ಮತಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾರರು ಸಾಮಾನ್ಯ ವರ್ಗದವರು (ಮುಖ್ಯವಾಗಿ ಲಿಂಗಾಯತ ಮತ್ತು ಇತರ ಸಮುದಾಯದವರದ್ದು). ಎರಡನೇ ಸ್ಥಾನದಲ್ಲಿ ಹಿಂದುಳಿದ ವರ್ಗದವರಿದ್ದಾರೆ. ಮೂರನೇ ಸ್ಥಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿದ್ದಾರೆ. 30 ಸಾವಿರಕ್ಕಿಂತ ಅಧಿಕ ಮುಸ್ಲಿಂ ಸಮುದಾಯದ ಮತಗಳಿವೆ. ಹೀಗಾಗಿ ಮುಸ್ಲಿಂ ಮತಗಳು ಗೆಲುವು ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಯಿದೆ. ಜೆಡಿಎಸ್ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದು ಮತ ವಿಭಜನೆ ಮಾಡಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ಎಂದು ಕಾಂಗ್ರೆಸ್ ಬಹಿರಂಗವಾಗಿಯೇ ಆರೋಪಿಸಿದೆ. ಮತಗಳು ವಿಭಜನೆಯಾದರೆ ಬಿಜೆಪಿಗೆ ತಕ್ಕಮಟ್ಟಿನ ಲಾಭವಿದೆ ಎಂಬುದು ಗುಟ್ಟಾಗೇನೂ ಉಳಿದಿಲ್ಲ.

ಕಳೆದ ಬಾರಿಯ 2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ರಮೇಶ ಭೂಸನೂರ್ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದರು. ಆದರೆ ಜೆಡಿಎಸ್ ಅಭ್ಯರ್ಥಿಯಾಗಿದ್ದ ಎಂ.ಸಿ. ಮನಗೂಳಿ ಸುಮಾರು 9,305 ಮತಗಳ ಅಂತರದಿಂದ ಜಯ ಗಳಿಸಿದ್ದರು. ಈ ಬಾರಿಯ ಉಪಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿಯಾಗಿರುವ ರಮೇಶ್ ಭೂಸನೂರ್ ಮತ್ತೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ತಾವು ಶಾಸಕರಾಗಿದ್ದಾಗ ಮಾಡಿದ್ದ ಕೆಲಸಗಳು, ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಸರ್ಕಾರವಿದ್ದರೆ ಕ್ಷೇತ್ರದ ಅಭಿವೃದ್ಧಿಗೆ ಸಹಾಯವಾಗುತ್ತದೆ ಎಂಬ ಮಾತುಗಳನ್ನು ಮುಂದಿಟ್ಟುಕೊಂಡು ಮತ್ತೆ ರಮೇಶ್ ಭೂಸನೂರ್ ಜನರ ಮುಂದೆ ಹೋಗಿದ್ದಾರೆ.

ತಮ್ಮ ತಂದೆಯ ಹೆಸರು, ಅವರ ಅಕಾಲಿಕ ಸಾವಿನ ಅನುಕಂಪ, ಅವರ ವರ್ಚಸ್ಸು, ಅಭಿವೃದ್ಧಿ ಕಾರ್ಯಗಳು ಸೇರಿದಂತೆ ಕಾಂಗ್ರೆಸ್ ಜನಪರ ಯೋಜನೆಗಳನ್ನು ಜಾರಿಮಾಡಿದೆಯೆಂದು ಜನರಿಗೆ ತಿಳಿಸುತ್ತಾ ಪ್ರಚಾರ ನಡೆಸುತ್ತಿದ್ದಾರೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮಲ್ಲಪ್ಪ ಮನಗೊಳಿ.

ಇನ್ನು ಜೆಡಿಎಸ್ ಅಭ್ಯರ್ಥಿಯಾಗಿರುವ ನಾಜಿಯಾ ಅಂಗಡಿ ಪದವೀಧರೆಯಾಗಿದ್ದು, ಜೆಡಿಎಸ್‌ನಿಂದ ಶಾಸಕರಾಗಿದ್ದ ಅವಧಿಯಲ್ಲಿ ಈ ಕ್ಷೇತ್ರದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳನ್ನು ಮುಂದಿಡುತ್ತಾ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹೆಸರಿನಲ್ಲಿ ಮತಯಾಚನೆ ಮಾಡುತ್ತಿದ್ದಾರೆ.

ಈ ಬಾರಿ ಸಿಂದಗಿಯನ್ನು ಬಿಟ್ಟುಕೊಡಬಾರದೆಂಬ ಹಠದಲ್ಲಿರುವ ಕಾಂಗ್ರೆಸ್ ಜಾತಿವಾರು ಸಮಾವೇಶಗಳ ಮೂಲಕ ಪ್ರಚಾರ ನಡೆಸುತ್ತಿದೆ. ಮುಸ್ಲಿಂ ಮತಗಳು ವಿಭಜನೆಯಾಗದಂತೆ ತಡೆಯಲು ಯು.ಟಿ.ಖಾದರ್, ಜಮೀರ್ ಅಹ್ಮದ್ ಅವರಿಂದ ಪ್ರಚಾರ ಮಾಡಿಸುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಸೇರಿ ಹಲವು ನಾಯಕರು ಸಹ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.

ಇತ್ತ ಬಿಜೆಪಿಗೆ ಈ ಚುನಾವಣೆ ಪ್ರತಿಷ್ಠೆಯ ಕಣವಾಗಿದ್ದು, ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಸರ್ಕಾರ ಎಂಬ ಧ್ಯೇಯ ಇಟ್ಟುಕೊಂಡು ಮತಯಾಚಿಸುತ್ತಿದೆ. ಕ್ಷೇತ್ರ ಅಭಿವೃದ್ಧಿಯಾಗಲು ಬಿಜೆಪಿಗೆ ಮತ ನೀಡಬೇಕು ಎಂದು ಹೇಳುತ್ತಿದೆ. ಕಾಂಗ್ರೆಸ್‌ಅನ್ನು ಗುರಿಯಾಗಿಸಿಕೊಂಡು ಬಿಜೆಪಿ ವಾಗ್ದಾಳಿ ನಡೆಸುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆದಿಯಾಗಿ ಬಿಜೆಪಿ ನಾಯಕರು ಕಣದಲ್ಲಿ ತೊಡಗಿಸಿಕೊಂಡಿದ್ದಾರೆ.

ಇನ್ನು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣ, ಎಚ್.ಡಿ.ಕುಮಾರಸ್ವಾಮಿ ಜೊತೆಗೆ ಸಿಂದಗಿಯಲ್ಲಿ ಠಿಕಾಣಿ ಹೂಡಿ ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದಾರೆ. ಚುನಾವಣೆ ಗೆಲ್ಲುವುದಕ್ಕಿಂತ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ ಅಶೋಕ್ ಮನಗೊಳಿಯವರನ್ನು ಸೋಲಿಸುವುದೇ ಮುಖ್ಯವಾಗಿಸಿಕೊಂಡಿದ್ದಾರೆ ಎನ್ನಲಾಗಿದೆ.

ಸಿಂದಗಿಯ ಜಾತಿವಾರು ಮತಗಳ ಅಂದಾಜು ಹೀಗಿದೆ. ಕುರುಬ – 40,000; ಗಾಣಿಗ – 35,000; ಪಂಚಮಸಾಲಿ – 34,000; ಬಣಜಿಗ – 25,000; ಮುಸ್ಲಿಂ – 35,000; ಪ.ಜಾ/ಪ.ಪಂ – 32,000; ಗಂಗಾಮತಸ್ಥ- 19,000; ತಳವಾರ ಮತ್ತು ಇತರೆ- 27,000;

ಸಿಂದಗಿಯಲ್ಲಿ ಶೇ.30ರಷ್ಟು ಮುಸ್ಲಿಂ ಜನಸಂಖ್ಯೆ ಇದೆ. ಮೊದಲಿನಿಂದಲೂ ಮುಸ್ಲಿಂ ಸಮುದಾಯ ಕಾಂಗ್ರೆಸ್ ಪರವಾಗಿದೆ ಎನ್ನಲಾಗಿದೆ. ಇದರ ಜೊತೆಗೆ, ವಡ್ಡ, ಅಲೆಮಾರಿ, ಲಂಬಾಣಿ ಸಮುದಾಯಗಳು ಕಾಂಗ್ರೆಸ್‌ಗೆ ಬೆಂಬಲ ನೀಡಿವೆ ಎನ್ನಲಾಗುತ್ತಿದೆ. ಆದರೆ ಪ್ರಮುಖ ಭಾಗವಾಗಿರುವ ಲಿಂಗಾಯತ ಸಮುದಾಯ ಬಿಜೆಪಿಯತ್ತ ತನ್ನ ಒಲವು ತೋರಿದೆ ಎನ್ನಲಾಗುತ್ತಿದೆ.

2018ರ ವಿಧಾನಸಭಾ ಚುನಾವಣೆಯಲ್ಲಿ 11,54,55 ಪುರುಷರು, 10,76,04 ಮಹಿಳೆಯರು ಸೇರಿ ಒಟ್ಟು 2,23,059 ಮತದಾರರು ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿದ್ದರು. ಸದ್ಯ 2021ರ ಉಪಚುನಾವಣೆಗೆ 1,20,949 ಪುರುಷರು, 1,13,327 ಮಹಿಳೆಯರು ಮತ್ತು ಇತರೆ 33 ಮಂದಿ ಸೇರಿ ಒಟ್ಟು 2,34,309 ಮತದಾರರಿದ್ದಾರೆ.

2020-21ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದಂತೆ ವಿಜಯಪುರ ಜಿಲ್ಲೆಗೆ ಶಾಶ್ವತ ಕುಡಿಯುವ ನೀರಿನ ಯೋಜನೆ ಜಾರಿಯಾಗಿಲ್ಲ. ಸಿಂದಗಿ ಪಟ್ಟಣದಲ್ಲಿ ಅಭಿವೃದ್ಧಿ ಕೊರತೆ ಎದ್ದು ಕಾಣುವಂತಿದೆ. ಸಿಂದಗಿಯಲ್ಲಿ ಕುಡಿವ ನೀರಿನ ಸಮಸ್ಯೆ ತಲೆದೋರಿದೆ. ನೀರಾವರಿ ಯೋಜನೆಗಳಾದ ಗುತ್ತಿ ಬಸವಣ್ಣ, ಕೃಷ್ಣಾ ಯೋಜನೆಗಳನ್ನು ಮೇಲ್ದರ್ಜೆಗೇರಿಸಿ ಕುಡಿಯುವ ನೀರಿನ ಸೌಲಭ್ಯ ಮತ್ತು ಬೆಳೆಗೆ ನೀರು ದೊರೆಯುವಂತೆ ಮಾಡಬೇಕಿದೆ.

ಇನ್ನು ಉಪಚುನಾವಣೆಯ ಪ್ರಣಾಳಿಕೆಗಳ ಕಡೆಗೆ ಗಮನ ಹರಿಸಿದರೆ ಈ ಕ್ಷೇತ್ರ ಎಷ್ಟು ಅಭಿವೃದ್ಧಿಯಾಗಬೇಕಿದೆ ಎಂಬುದು ತಿಳಿಯುತ್ತದೆ.

ಸಿಂದಗಿಯಲ್ಲಿ ಹೈಟೆಕ್ ಶೌಚಾಲಯ, ಬಿ.ಆರ್. ಅಂಬೇಡ್ಕರ್ ವೃತ್ತ ಅಭಿವೃದ್ಧಿ, ಸಿಂದಗಿ ಪಟ್ಟಣದಲ್ಲಿ ಗ್ರಂಥಾಲಯ, ಪುರಸಭಾ ನೂತನ ಕಟ್ಟಡ ನಿರ್ಮಾಣ, ಪ.ಜಾತಿ ಮತ್ತು ಪ.ಪಂಗಡದ ಕಾಲೋನಿಗಳಲ್ಲಿ ಮೂಲಸೌಕರ್ಯ, ವಿದ್ಯಾರ್ಥಿಗಳಿಗೆ ಸಿಟಿ ಬಸ್ ಸೇವೆ ಆರಂಭ, ಹೈಟೆಕ್ ಬಸ್ ನಿಲ್ದಾಣ, ರೈತರು ತಮ್ಮ ಜಮೀನುಗಳಿಗೆ ತೆರಳಲು ರಸ್ತೆ ನಿರ್ಮಾಣ, ಮುರಾರ್ಜಿ ದೇಸಾಯಿ ಶಾಲೆಗಳ ನಿರ್ಮಾಣ, 110 ಕೆವಿ ವಿದ್ಯುತ್ ಕೇಂದ್ರವನ್ನು ನಿರ್ಮಾಣ, ಪಟ್ಟಣದಲ್ಲಿ ಪೂರ್ಣ ಪ್ರಮಾಣದ ತರಕಾರಿ ಮಾರುಕಟ್ಟೆ ನಿರ್ಮಾಣ ಮುಂತಾದವೂ
ಸೇರಿವೆ. ಇಷ್ಟೆಲ್ಲಾ ಸಮಸ್ಯೆಗಳಿರುವ ಕ್ಷೇತ್ರದಲ್ಲಿ ಯಾವ ಬಗೆಯ ರಾಜಕೀಯ ಮೇಲುಗೈ ಪಡೆಯಲಿದೆ ಎಂದು ನವೆಂಬರ್ 2ರಂದು ತಿಳಿಯಲಿದೆ.


ಇದನ್ನೂ ಓದಿ: ಟಿಕ್ರಿ ಗಡಿ ಬಳಿ ದುರ್ಘಟನೆ: ಲಾರಿ ಹರಿದು ಮೂವರು ರೈತ ಮಹಿಳೆಯರ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೇ.56 ರ ಮೀಸಲಾತಿ ಅನುಸಾರ ನೇಮಕಾತಿ ಅಧಿಸೂಚನೆ ಹೊರಡಿಸಬಾರದು..’; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

"ಚಾಲ್ತಿಯಲ್ಲಿರುವ ಶೇ.50ರ ಮೀಸಲಾತಿಯ ಅನ್ವಯ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ನಡೆಸುವ ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ. ಆದರೆ, ಶೇ.56 ಕ್ಕೆ ಮೀಸಲಾತಿ ಹೆಚ್ಚಿಸಿರುವುದರ ಅನುಸಾರ ಹೊಸದಾಗಿ ಅಧಿಸೂಚನೆ ಹೊರಡಿಸಬಾರದು" ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌...

ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ 40 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾದ ಸರ್ಕಾರ : ವಿದ್ಯಾರ್ಥಿ ಸಂಘಟನೆಗಳಿಂದ ಆಕ್ರೋಶ

ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ 40 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಎಡ ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿವೆ. ಬುಧವಾರ (ಜ.21) ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಎಐಎಸ್ಎಫ್,...

ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ನಿರಾಕರಿಸಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ಜನವರಿ 22 ರಿಂದ ನಡೆಯಲಿರುವ ವಿಧಾನಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಲು ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಬುಧವಾರ ನಿರಾಕರಿಸಿದ್ದಾರೆ. ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ನೇತೃತ್ವದ ಉನ್ನತ ಮಟ್ಟದ ನಿಯೋಗವು ಗೆಹ್ಲೋಟ್ ಅವರೊಂದಿಗೆ...

ಒಡಿಶಾ| ಪಾದ್ರಿ ಮೇಲೆ ಗುಂಪು ಹಲ್ಲೆ ನಡೆಸಿ ಅವಮಾನ; ಎರಡು ವಾರವಾದರೂ ಆರೋಪಿಗಳನ್ನು ಬಂಧಿಸದ ಪೊಲೀಸರು

ಒಡಿಶಾದ ಧೆಂಕನಲ್ ಜಿಲ್ಲೆಯಲ್ಲಿ ಬಜರಂಗದಳ ಸದಸ್ಯರಿಂದ ಕ್ರೂರವಾಗಿ ಹಲ್ಲೆಗೊಳಗಾಗಿ ಸಾರ್ವಜನಿಕವಾಗಿ ಅವಮಾನಕ್ಕೆ ಒಳಗಾದ ಕ್ರಿಶ್ಚಿಯನ್ ಪಾದ್ರಿಯೊಬ್ಬರು, ತನ್ನ ಮೇಲೆ ದಾಳಿ ಮಾಡಿದವರನ್ನು ಕ್ಷಮಿಸಲು ನಿರ್ಧರಿಸಿದ್ದಾರೆ. ಘಟನೆ ನಡೆದು ಎರಡು ವಾರಗಳಿಗಿಂತ ಹೆಚ್ಚು ಕಾಲ...

ಕೆನಡಾ: ಸುಲಿಗೆ ಪ್ರಕರಣಗಳಲ್ಲಿ 111 ವಿದೇಶಿ ಪ್ರಜೆಗಳ ಪಾತ್ರದ ಬಗ್ಗೆ ತನಿಖೆ: ಹೆಚ್ಚಿನವರು ಪಂಜಾಬ್ ನಿಂದ ಬಂದ ಭಾರತೀಯರೆಂದು ವರದಿ  

ಚಂಡಿಗ್ರಾ: ಬ್ರಿಟಿಷ್ ಕೊಲಂಬಿಯಾ ಸುಲಿಗೆ ಕಾರ್ಯಪಡೆಯು ಕೆಳ ಮೇನ್‌ಲ್ಯಾಂಡ್‌ನಲ್ಲಿನ ಸಮುದಾಯಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಂಕಿಸಲಾಗಿರುವ 111 ವಿದೇಶಿ ಪ್ರಜೆಗಳ ತನಿಖೆ ನಡೆಸುತ್ತಿದೆ. ಇದರಲ್ಲಿ ಹೆಚ್ಚಿನವರು ಪಂಜಾಬ್‌ನಿಂದ ಬಂದಿರುವ ಭಾರತೀಯ...

ವಿಡಿಯೋ ವೈರಲ್ ಬಳಿಕ ವ್ಯಕ್ತಿ ಆತ್ಮಹತ್ಯೆ ಪ್ರಕರಣ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

ಬಸ್‌ ಪ್ರಯಾಣದ ವೇಳೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆದ ಬಳಿಕ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಹಿಳೆಯನ್ನು ಕೇರಳದ ಕೋಝಿಕ್ಕೋಡ್ ಪೊಲೀಸರು ಬಂಧಿಸಿದ್ದಾರೆ. 42 ವರ್ಷದ ಸೇಲ್ಸ್...

ಪ್ರಿಯಕರನೊಂದಿಗೆ ವಾಸಿಸಲು ‘ಸುಳ್ಳು ಗೋಹತ್ಯೆ ಪ್ರಕರಣ’ದಲ್ಲಿ ಗಂಡನನ್ನು ಸಿಲುಕಿಸಿದ ಪತ್ನಿ

ತನ್ನ ಪ್ರಿಯಕರನೊಂದಿಗೆ ವಾಸಿಸಲು ವಿವಾಹಿತ ಮಹಿಳೆಯೊಬ್ಬಳು ಮಾಡಿದ ದುಷ್ಕೃತ್ಯವೊಂದರಲ್ಲಿ ಆಕೆಯ ಪತಿ ಸುಳ್ಳು ಗೋಹತ್ಯೆ ಪ್ರಕರಣಗಳಲ್ಲಿ ಎರಡು ಬಾರಿ ಪೊಲೀಸರಿಂದ ಬಂಧನಕ್ಕೆ ಒಳಗಾಗಬೇಕಾದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಇದೇ ಪ್ರಕರಣದ...

ಎಲ್‌ಐಸಿ ಕಚೇರಿ ಬೆಂಕಿ ಪ್ರಕರಣಕ್ಕೆ ತಿರುವು : ಅಕ್ರಮ ಮುಚ್ಚಿ ಹಾಕಲು ಸಹೋದ್ಯೋಗಿಯಿಂದ ವ್ಯವಸ್ಥಾಪಕಿಯ ಕೊಲೆ ಎಂದ ತನಿಖೆ

ಡಿಸೆಂಬರ್‌ನಲ್ಲಿ ಮಧುರೈನ ಜೀವ ವಿಮಾ ನಿಗಮ (ಎಲ್‌ಐಸಿ) ಕಚೇರಿಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಹಿರಿಯ ಮಹಿಳಾ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದು, ಆರಂಭದಲ್ಲಿ ನಂಬಿದಂತೆ ಅದು ಆಕಸ್ಮಿಕ ಸಾವಲ್ಲ, ಕೊಲೆ ಎಂದು ತಮಿಳುನಾಡು ಪೊಲೀಸರು ತೀರ್ಮಾನಿಸಿದ್ದಾರೆ....

‘ಅಕ್ರಮ ಗಣಿಗಾರಿಕೆ ಸರಿಪಡಿಸಲಾಗದ ಹಾನಿಗೆ ಕಾರಣವಾಗಬಹುದು’: ಅರಾವಳಿ ಸಮಗ್ರ ಪರೀಕ್ಷೆಗೆ ತಜ್ಞರ ಸಮಿತಿ ರಚಿಸಲು ಸುಪ್ರೀಂ ಸೂಚನೆ

ನವದೆಹಲಿ: ಅಕ್ರಮ ಗಣಿಗಾರಿಕೆಯಿಂದ ಸರಿಪಡಿಸಲಾಗದ ಹಾನಿ ಉಂಟಾಗಬಹುದು ಎಂದು ಗಮನಿಸಿದ ಸುಪ್ರೀಂ ಕೋರ್ಟ್, ಅರಾವಳಿಯಲ್ಲಿ ಗಣಿಗಾರಿಕೆ ಮತ್ತು ಸಂಬಂಧಿತ ಸಮಸ್ಯೆಗಳ ಸಮಗ್ರ ಪರೀಕ್ಷೆಯನ್ನು ಕೈಗೊಳ್ಳಲು ಡೊಮೇನ್ ತಜ್ಞರನ್ನು ಒಳಗೊಂಡ ತಜ್ಞರ ಸಮಿತಿಯನ್ನು ರಚಿಸುವುದಾಗಿ...

ಮೋದಿ ಕಾರ್ಯಕ್ರಮದಲ್ಲಿ ಸಮೋಸ ವಿತರಣೆಗೆ 2 ಕೋಟಿ ರೂ. ಖರ್ಚು : ಬಿಜೆಪಿ ವಿರುದ್ಧ ಕೇಜ್ರಿವಾಲ್ ಆರೋಪ

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ಗುಜರಾತ್‌ನ ಬುಡಕಟ್ಟು ಪ್ರದೇಶಕ್ಕೆ ಭೇಟಿ ನೀಡಿದ ಕಾರ್ಯಕ್ರಮಕ್ಕೆ 50 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್...