Homeಕರ್ನಾಟಕಸಿಂದಗಿ ಉಪಚುನಾವಣೆ: ಕಾಂಗ್ರೆಸ್, ಬಿಜೆಪಿ ನಡುವೆ ನೇರಾನೇರ ಪೈಪೋಟಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಜೆಡಿಎಸ್ ಚಿತ್ತ...

ಸಿಂದಗಿ ಉಪಚುನಾವಣೆ: ಕಾಂಗ್ರೆಸ್, ಬಿಜೆಪಿ ನಡುವೆ ನೇರಾನೇರ ಪೈಪೋಟಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಜೆಡಿಎಸ್ ಚಿತ್ತ ಏನು?

- Advertisement -
- Advertisement -

ಮಾಜಿ ಸಚಿವ, ಜೆಡಿಎಸ್ ಶಾಸಕ ದಿವಂಗತ ಎಂ.ಸಿ.ಮನಗೊಳಿಯವರ ನಿಧನದಿಂದ ತೆರವಾಗಿರುವ ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ಅ.30 ರಂದು ಉಪಚುನಾವಣೆ ನಡೆಯಲಿದೆ. ಚುನಾವಣಾ ಪ್ರಚಾರ ರಂಗೇರುತ್ತಿದ್ದು, ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಜೆಡಿಎಸ್, ಮತ ವಿಭಜನೆಗೆ ಮುನ್ನುಡಿ ಹಾಡಲು ಯತ್ನಿಸಿದೆ ಎಂಬ ಆರೋಪವನ್ನು ಎದುರಿಸುತ್ತಿದೆ.

ದೀರ್ಘಕಾಲದಿಂದಲೂ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಸಿಂದಗಿಯಲ್ಲಿ ಕಳೆದೆರಡು ದಶಕಗಳಿಂದ ಬಿಜೆಪಿ, ಜೆಡಿಎಸ್ ನಡುವೆ ಸ್ಫರ್ಧೆ ಏರ್ಪಟ್ಟು, ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ಇಳಿದಿತ್ತು. ಇಲ್ಲಿ ಜೆಡಿಎಸ್ ಕೂಡ ಪಕ್ಷದ ವರ್ಚಸ್ಸಿನಿಂದ ಗೆಲುವು ಸಾಧಿಸುವುದಕ್ಕಿಂತ ಎಂ.ಸಿ.ಮನಗೊಳಿಯವರ ವರ್ಚಸ್ಸಿನಿಂದ ಗೆಲುವು ಪಡೆದಿತ್ತು.

ಈ ಬಾರಿ ಕಾಂಗ್ರೆಸ್, ದಿವಂಗತ ಎಂ.ಸಿ.ಮನಗೊಳಿ ಅವರ ಪುತ್ರ ಅಶೋಕ್ ಮಲ್ಲಪ್ಪ ಮನಗೊಳಿ ಅವರಿಗೆ ಟಿಕೆಟ್ ನೀಡಿದ್ದು, ಅನುಕಂಪದ ಮತಗಳ ಮೇಲೆ ಕಣ್ಣಿಟ್ಟಿದೆ. ಬಿಜೆಪಿಯು ಈ ಹಿಂದೆ ಎರಡು ಬಾರಿ ಶಾಸಕರಾಗಿದ್ದ, ಕಳೆದ ಚುನಾವಣೆಯಲ್ಲಿ ಎಂ.ಸಿ.ಮನಗೊಳಿ ಎದುರು 9 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದ ರಮೇಶ್ ಭೂಸನೂರ್ ಅವರನ್ನು ಕಣಕ್ಕಿಳಿಸಿದೆ. ಜೆಡಿಎಸ್ ತಮ್ಮ ನಾಜಿಯಾ ಅಂಗಡಿಯವರನ್ನು ಕಣಕ್ಕಿಳಿಸಿದೆ.

ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೊಳಿ, ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಸೇರಿದವರು. ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ್ ಲಿಂಗಾಯತ ಗಾಣಿಗ ಸಮುದಾಯಕ್ಕೆ ಸೇರಿದ್ದಾರೆ. ಇನ್ನೂ ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಅಭ್ಯರ್ಥಿಯಾಗಿದ್ದಾರೆ.

ಸಿಂದಗಿ ಮತಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾರರು ಸಾಮಾನ್ಯ ವರ್ಗದವರು (ಮುಖ್ಯವಾಗಿ ಲಿಂಗಾಯತ ಮತ್ತು ಇತರ ಸಮುದಾಯದವರದ್ದು). ಎರಡನೇ ಸ್ಥಾನದಲ್ಲಿ ಹಿಂದುಳಿದ ವರ್ಗದವರಿದ್ದಾರೆ. ಮೂರನೇ ಸ್ಥಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿದ್ದಾರೆ. 30 ಸಾವಿರಕ್ಕಿಂತ ಅಧಿಕ ಮುಸ್ಲಿಂ ಸಮುದಾಯದ ಮತಗಳಿವೆ. ಹೀಗಾಗಿ ಮುಸ್ಲಿಂ ಮತಗಳು ಗೆಲುವು ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಯಿದೆ. ಜೆಡಿಎಸ್ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದು ಮತ ವಿಭಜನೆ ಮಾಡಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ಎಂದು ಕಾಂಗ್ರೆಸ್ ಬಹಿರಂಗವಾಗಿಯೇ ಆರೋಪಿಸಿದೆ. ಮತಗಳು ವಿಭಜನೆಯಾದರೆ ಬಿಜೆಪಿಗೆ ತಕ್ಕಮಟ್ಟಿನ ಲಾಭವಿದೆ ಎಂಬುದು ಗುಟ್ಟಾಗೇನೂ ಉಳಿದಿಲ್ಲ.

ಕಳೆದ ಬಾರಿಯ 2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ರಮೇಶ ಭೂಸನೂರ್ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದರು. ಆದರೆ ಜೆಡಿಎಸ್ ಅಭ್ಯರ್ಥಿಯಾಗಿದ್ದ ಎಂ.ಸಿ. ಮನಗೂಳಿ ಸುಮಾರು 9,305 ಮತಗಳ ಅಂತರದಿಂದ ಜಯ ಗಳಿಸಿದ್ದರು. ಈ ಬಾರಿಯ ಉಪಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿಯಾಗಿರುವ ರಮೇಶ್ ಭೂಸನೂರ್ ಮತ್ತೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ತಾವು ಶಾಸಕರಾಗಿದ್ದಾಗ ಮಾಡಿದ್ದ ಕೆಲಸಗಳು, ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಸರ್ಕಾರವಿದ್ದರೆ ಕ್ಷೇತ್ರದ ಅಭಿವೃದ್ಧಿಗೆ ಸಹಾಯವಾಗುತ್ತದೆ ಎಂಬ ಮಾತುಗಳನ್ನು ಮುಂದಿಟ್ಟುಕೊಂಡು ಮತ್ತೆ ರಮೇಶ್ ಭೂಸನೂರ್ ಜನರ ಮುಂದೆ ಹೋಗಿದ್ದಾರೆ.

ತಮ್ಮ ತಂದೆಯ ಹೆಸರು, ಅವರ ಅಕಾಲಿಕ ಸಾವಿನ ಅನುಕಂಪ, ಅವರ ವರ್ಚಸ್ಸು, ಅಭಿವೃದ್ಧಿ ಕಾರ್ಯಗಳು ಸೇರಿದಂತೆ ಕಾಂಗ್ರೆಸ್ ಜನಪರ ಯೋಜನೆಗಳನ್ನು ಜಾರಿಮಾಡಿದೆಯೆಂದು ಜನರಿಗೆ ತಿಳಿಸುತ್ತಾ ಪ್ರಚಾರ ನಡೆಸುತ್ತಿದ್ದಾರೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮಲ್ಲಪ್ಪ ಮನಗೊಳಿ.

ಇನ್ನು ಜೆಡಿಎಸ್ ಅಭ್ಯರ್ಥಿಯಾಗಿರುವ ನಾಜಿಯಾ ಅಂಗಡಿ ಪದವೀಧರೆಯಾಗಿದ್ದು, ಜೆಡಿಎಸ್‌ನಿಂದ ಶಾಸಕರಾಗಿದ್ದ ಅವಧಿಯಲ್ಲಿ ಈ ಕ್ಷೇತ್ರದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳನ್ನು ಮುಂದಿಡುತ್ತಾ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹೆಸರಿನಲ್ಲಿ ಮತಯಾಚನೆ ಮಾಡುತ್ತಿದ್ದಾರೆ.

ಈ ಬಾರಿ ಸಿಂದಗಿಯನ್ನು ಬಿಟ್ಟುಕೊಡಬಾರದೆಂಬ ಹಠದಲ್ಲಿರುವ ಕಾಂಗ್ರೆಸ್ ಜಾತಿವಾರು ಸಮಾವೇಶಗಳ ಮೂಲಕ ಪ್ರಚಾರ ನಡೆಸುತ್ತಿದೆ. ಮುಸ್ಲಿಂ ಮತಗಳು ವಿಭಜನೆಯಾಗದಂತೆ ತಡೆಯಲು ಯು.ಟಿ.ಖಾದರ್, ಜಮೀರ್ ಅಹ್ಮದ್ ಅವರಿಂದ ಪ್ರಚಾರ ಮಾಡಿಸುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಸೇರಿ ಹಲವು ನಾಯಕರು ಸಹ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.

ಇತ್ತ ಬಿಜೆಪಿಗೆ ಈ ಚುನಾವಣೆ ಪ್ರತಿಷ್ಠೆಯ ಕಣವಾಗಿದ್ದು, ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಸರ್ಕಾರ ಎಂಬ ಧ್ಯೇಯ ಇಟ್ಟುಕೊಂಡು ಮತಯಾಚಿಸುತ್ತಿದೆ. ಕ್ಷೇತ್ರ ಅಭಿವೃದ್ಧಿಯಾಗಲು ಬಿಜೆಪಿಗೆ ಮತ ನೀಡಬೇಕು ಎಂದು ಹೇಳುತ್ತಿದೆ. ಕಾಂಗ್ರೆಸ್‌ಅನ್ನು ಗುರಿಯಾಗಿಸಿಕೊಂಡು ಬಿಜೆಪಿ ವಾಗ್ದಾಳಿ ನಡೆಸುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆದಿಯಾಗಿ ಬಿಜೆಪಿ ನಾಯಕರು ಕಣದಲ್ಲಿ ತೊಡಗಿಸಿಕೊಂಡಿದ್ದಾರೆ.

ಇನ್ನು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣ, ಎಚ್.ಡಿ.ಕುಮಾರಸ್ವಾಮಿ ಜೊತೆಗೆ ಸಿಂದಗಿಯಲ್ಲಿ ಠಿಕಾಣಿ ಹೂಡಿ ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದಾರೆ. ಚುನಾವಣೆ ಗೆಲ್ಲುವುದಕ್ಕಿಂತ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ ಅಶೋಕ್ ಮನಗೊಳಿಯವರನ್ನು ಸೋಲಿಸುವುದೇ ಮುಖ್ಯವಾಗಿಸಿಕೊಂಡಿದ್ದಾರೆ ಎನ್ನಲಾಗಿದೆ.

ಸಿಂದಗಿಯ ಜಾತಿವಾರು ಮತಗಳ ಅಂದಾಜು ಹೀಗಿದೆ. ಕುರುಬ – 40,000; ಗಾಣಿಗ – 35,000; ಪಂಚಮಸಾಲಿ – 34,000; ಬಣಜಿಗ – 25,000; ಮುಸ್ಲಿಂ – 35,000; ಪ.ಜಾ/ಪ.ಪಂ – 32,000; ಗಂಗಾಮತಸ್ಥ- 19,000; ತಳವಾರ ಮತ್ತು ಇತರೆ- 27,000;

ಸಿಂದಗಿಯಲ್ಲಿ ಶೇ.30ರಷ್ಟು ಮುಸ್ಲಿಂ ಜನಸಂಖ್ಯೆ ಇದೆ. ಮೊದಲಿನಿಂದಲೂ ಮುಸ್ಲಿಂ ಸಮುದಾಯ ಕಾಂಗ್ರೆಸ್ ಪರವಾಗಿದೆ ಎನ್ನಲಾಗಿದೆ. ಇದರ ಜೊತೆಗೆ, ವಡ್ಡ, ಅಲೆಮಾರಿ, ಲಂಬಾಣಿ ಸಮುದಾಯಗಳು ಕಾಂಗ್ರೆಸ್‌ಗೆ ಬೆಂಬಲ ನೀಡಿವೆ ಎನ್ನಲಾಗುತ್ತಿದೆ. ಆದರೆ ಪ್ರಮುಖ ಭಾಗವಾಗಿರುವ ಲಿಂಗಾಯತ ಸಮುದಾಯ ಬಿಜೆಪಿಯತ್ತ ತನ್ನ ಒಲವು ತೋರಿದೆ ಎನ್ನಲಾಗುತ್ತಿದೆ.

2018ರ ವಿಧಾನಸಭಾ ಚುನಾವಣೆಯಲ್ಲಿ 11,54,55 ಪುರುಷರು, 10,76,04 ಮಹಿಳೆಯರು ಸೇರಿ ಒಟ್ಟು 2,23,059 ಮತದಾರರು ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿದ್ದರು. ಸದ್ಯ 2021ರ ಉಪಚುನಾವಣೆಗೆ 1,20,949 ಪುರುಷರು, 1,13,327 ಮಹಿಳೆಯರು ಮತ್ತು ಇತರೆ 33 ಮಂದಿ ಸೇರಿ ಒಟ್ಟು 2,34,309 ಮತದಾರರಿದ್ದಾರೆ.

2020-21ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದಂತೆ ವಿಜಯಪುರ ಜಿಲ್ಲೆಗೆ ಶಾಶ್ವತ ಕುಡಿಯುವ ನೀರಿನ ಯೋಜನೆ ಜಾರಿಯಾಗಿಲ್ಲ. ಸಿಂದಗಿ ಪಟ್ಟಣದಲ್ಲಿ ಅಭಿವೃದ್ಧಿ ಕೊರತೆ ಎದ್ದು ಕಾಣುವಂತಿದೆ. ಸಿಂದಗಿಯಲ್ಲಿ ಕುಡಿವ ನೀರಿನ ಸಮಸ್ಯೆ ತಲೆದೋರಿದೆ. ನೀರಾವರಿ ಯೋಜನೆಗಳಾದ ಗುತ್ತಿ ಬಸವಣ್ಣ, ಕೃಷ್ಣಾ ಯೋಜನೆಗಳನ್ನು ಮೇಲ್ದರ್ಜೆಗೇರಿಸಿ ಕುಡಿಯುವ ನೀರಿನ ಸೌಲಭ್ಯ ಮತ್ತು ಬೆಳೆಗೆ ನೀರು ದೊರೆಯುವಂತೆ ಮಾಡಬೇಕಿದೆ.

ಇನ್ನು ಉಪಚುನಾವಣೆಯ ಪ್ರಣಾಳಿಕೆಗಳ ಕಡೆಗೆ ಗಮನ ಹರಿಸಿದರೆ ಈ ಕ್ಷೇತ್ರ ಎಷ್ಟು ಅಭಿವೃದ್ಧಿಯಾಗಬೇಕಿದೆ ಎಂಬುದು ತಿಳಿಯುತ್ತದೆ.

ಸಿಂದಗಿಯಲ್ಲಿ ಹೈಟೆಕ್ ಶೌಚಾಲಯ, ಬಿ.ಆರ್. ಅಂಬೇಡ್ಕರ್ ವೃತ್ತ ಅಭಿವೃದ್ಧಿ, ಸಿಂದಗಿ ಪಟ್ಟಣದಲ್ಲಿ ಗ್ರಂಥಾಲಯ, ಪುರಸಭಾ ನೂತನ ಕಟ್ಟಡ ನಿರ್ಮಾಣ, ಪ.ಜಾತಿ ಮತ್ತು ಪ.ಪಂಗಡದ ಕಾಲೋನಿಗಳಲ್ಲಿ ಮೂಲಸೌಕರ್ಯ, ವಿದ್ಯಾರ್ಥಿಗಳಿಗೆ ಸಿಟಿ ಬಸ್ ಸೇವೆ ಆರಂಭ, ಹೈಟೆಕ್ ಬಸ್ ನಿಲ್ದಾಣ, ರೈತರು ತಮ್ಮ ಜಮೀನುಗಳಿಗೆ ತೆರಳಲು ರಸ್ತೆ ನಿರ್ಮಾಣ, ಮುರಾರ್ಜಿ ದೇಸಾಯಿ ಶಾಲೆಗಳ ನಿರ್ಮಾಣ, 110 ಕೆವಿ ವಿದ್ಯುತ್ ಕೇಂದ್ರವನ್ನು ನಿರ್ಮಾಣ, ಪಟ್ಟಣದಲ್ಲಿ ಪೂರ್ಣ ಪ್ರಮಾಣದ ತರಕಾರಿ ಮಾರುಕಟ್ಟೆ ನಿರ್ಮಾಣ ಮುಂತಾದವೂ
ಸೇರಿವೆ. ಇಷ್ಟೆಲ್ಲಾ ಸಮಸ್ಯೆಗಳಿರುವ ಕ್ಷೇತ್ರದಲ್ಲಿ ಯಾವ ಬಗೆಯ ರಾಜಕೀಯ ಮೇಲುಗೈ ಪಡೆಯಲಿದೆ ಎಂದು ನವೆಂಬರ್ 2ರಂದು ತಿಳಿಯಲಿದೆ.


ಇದನ್ನೂ ಓದಿ: ಟಿಕ್ರಿ ಗಡಿ ಬಳಿ ದುರ್ಘಟನೆ: ಲಾರಿ ಹರಿದು ಮೂವರು ರೈತ ಮಹಿಳೆಯರ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...