Homeಕರ್ನಾಟಕಸರ್ಕಾರ ಜೋಳ ಖರೀದಿಸುವಂತೆ ಒತ್ತಾಯಿಸಿ 'ಸಿಂಧನೂರು ಬಂದ್'; ಬೃಹತ್ ಪ್ರತಿಭಟನಾ ಮೆರವಣಿಗೆ

ಸರ್ಕಾರ ಜೋಳ ಖರೀದಿಸುವಂತೆ ಒತ್ತಾಯಿಸಿ ‘ಸಿಂಧನೂರು ಬಂದ್’; ಬೃಹತ್ ಪ್ರತಿಭಟನಾ ಮೆರವಣಿಗೆ

- Advertisement -
- Advertisement -

ರೈತರು ಬೆಳೆದ ಜೋಳವನ್ನು ಸಂಪೂರ್ಣವಾಗಿ ಸರ್ಕಾರ ಖರೀದಿಸಬೇಕೆಂದು ಒತ್ತಾಯಿಸಿ ರೈತ ಸಂಘಟನೆಗಳು,  ಜೋಳ ಬೆಳೆಗಾರರ ಒಕ್ಕೂಟ ಹಾಗೂ ವಿವಿಧ ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ಸೋಮವಾರ ಸಿಂಧನೂರು ಬಂದ್‌ ಹಾಗೂ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.

ಕಳೆದ ಮೂರು ದಿನಗಳಿಂದ ಮಿನಿವಿಧಾನಸೌಧದ ಆವರಣದಲ್ಲಿ ನಡೆಯುತ್ತಿದ್ದ ಅನಿರ್ದಿಷ್ಠಾವಧಿ ಧರಣಿ ಸತ್ಯಾಗ್ರಹವು ಸೋಮವಾರ ‘ಸಿಂಧನೂರು ಬಂದ್’ ಚಳವಳಿಯಾಗಿ ಮಾರ್ಪಟ್ಟಿತು. ಬೆಳಿಗ್ಗೆ 9 ಗಂಟೆಗೆ ರೈತ ಹಾಗೂ ಕ್ರಾಂತಿ ಗೀತೆಗಳೊಂದಿಗೆ ಆರಂಭಗೊಂಡ ಪ್ರತಿಭಟನೆಗೆ ಪ್ರಗತಿಪರ, ದಲಿತಪರ, ಕನ್ನಡಪರ, ಮಹಿಳಾಪರ ಸಂಘಟನೆಗಳ ಒಕ್ಕೂಟ, ಎಪಿಎಂಸಿ ವರ್ತಕರು, ಕಮ್ಯುನಿಸ್ಟ್ ಪಕ್ಷಗಳ ಮುಖಂಡರು ಬೆಂಬಲ ವ್ಯಕ್ತಪಡಿಸಿದ್ದರು.

ವಕೀಲರ ಸಂಘದ ತಾಲೂಕು ಘಟಕದ ಅಧ್ಯಕ್ಷ ಎನ್.ರಾಮನಗೌಡ ಸೇರಿದಂತೆ ಪದಾಧಿಕಾರಿಗಳು ಮತ್ತು ಸದಸ್ಯರು ನ್ಯಾಯಾಲಯದ ಕಾರ್ಯಕಲಾಪಗಳನ್ನು ಸ್ಥಗಿತಗೊಳಿಸಿ ಕೋರ್ಟ್‌ನಿಂದಲೇ ಮೆರವಣಿಗೆ ಮೂಲಕ ಬಂದು ಧರಣಿಗೆ ಬೆಂಬಲ ಘೋಷಿಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಮಾತನಾಡಿ, ಹಿಂಗಾರು ಹಂಗಾಮಿನಲ್ಲಿ 13,175 ರೈತರಿಂದ ಸುಮಾರು 1.02 ಲಕ್ಷ ಟನ್ ಜೋಳ ಖರೀದಿಸಲು ಈಗಾಗಲೇ ನೊಂದಾಯಿಸಲಾಗಿದೆ. ಆದರೆ ಖರೀದಿ ಪ್ರಕ್ರಿಯೆ ಏಕಾಏಕಿ ನಿಲ್ಲಿಸಿರುವುದು ಖಂಡನೀಯ. ಜೋಳವನ್ನು ಬೆಳೆದು ನಾಲ್ಕು ತಿಂಗಳಾದರೂ ಸರ್ಕಾರ ಇನ್ನೂ ಖರೀದಿ ಮಾಡಿಲ್ಲ. ಈ ನಡುವೆ ಮುಂಗಾರು ಬಿತ್ತನೆ ಪ್ರಕ್ರಿಯೆ ಶುರುವಾಗಿದೆ. ಮತ್ತೊಂದೆಡೆ ಕೃಷಿ ಚಟುವಟಿಕೆಗೆ ಮಾಡಿದ ಸಾಲದ ಮರುಪಾವತಿಗೆ ಬ್ಯಾಂಕ್‌ಗಳು ರೈತರಿಗೆ ನೋಟಿಸ್ ಕೊಡುತ್ತಿದ್ದು, ಇದರಿಂದ ರೈತರಿಗೆ ಕಷ್ಟವಾಗಿದೆ. ಆದ್ದರಿಂದ ಜೂ.4ರ ಸಂಜೆಯೊಳಗೆ ಸರ್ಕಾರ ಜೋಳವನ್ನು ಖರೀದಿಸುವ ಆದೇಶ ಹೊರಡಿಸಬೇಕು. ಇಲ್ಲದಿದ್ದರೆ ರೈತರು ದಂಗೆ ಏಳುವುದು ಖಚಿತವಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಕೇಂದ್ರ ಉಗ್ರಾಣ ನಿಗಮದ ಅಧಿಕಾರಿಗಳ ಹಠಮಾರಿ ಧೋರಣೆ ಮತ್ತು ಅವೈಜ್ಞಾನಿಕ ಮಾನದಂಡಗಳಿಂದ ಸಿಂಧನೂರು, ಮಾನ್ವಿ ತಾಲೂಕು ಸೇರಿದಮತೆ ಜಿಲ್ಲೆಯ ಸಾವಿರಾರು ರೈತರು ಬೆಳೆದ ಜೋಳವನ್ನು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಲಾಗದೆ ಕಳೆದ ನಾಲ್ಕು ತಿಂಗಳಿನಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಖರೀದಿಯ ಮೂಲಕ 1.30 ಲಕ್ಷ ಟನ್ ಜೋಳ ಖರೀದಿಸಲು 18446 ರೈತರು ಖರೀದಿ ಕೇಂದ್ರಗಳಲ್ಲಿ ನೊಂದಾಯಿಸಿಕೊಂಡಿದ್ದಾರೆ. ಇದರಲ್ಲಿ 1 ಲಕ್ಷ ಟನ್ ಖರೀದಿಸಿ, ಉಳಿದಂತೆ ಎಕರೆಗೆ 10 ಕ್ವಿಂಟಲ್ ನಿಗದಿಗೊಳಿಸಿದ್ದರಿಂದ 4,100 ಸಣ್ಣ, ಅತಿಸಣ್ಣ ರೈತರಿಗೆ ಅನ್ಯಾಯವಾಗಿದೆ. ಹಾಗಾಗಿ ಎಕರೆಗೆ 20 ಕ್ವಿಂಟಲ್‌ನಂತೆ ಉಳಿದ ಎಲ್ಲ ಜೋಳವನ್ನು ತಕ್ಷಣ ಖರೀದಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಅಮೀನ್ ಪಾಷಾ ದಿದ್ದಿಗಿ ಆಗ್ರಹಿಸಿದರು.


ಕರ್ನಾಟಕ ರೈತ ಸಂಘದ ರಾಜ್ಯ ಅಧ್ಯಕ್ಷ ಡಿ.ಎಚ್.ಪೂಜಾರ್ ಮಾತನಾಡಿ, ಜೋಳ ಖರೀದಿಸಿದ ವಾರದ ಒಳಗಾಗಿ ರೈತರ ಖಾತೆಗಳಿಗೆ ಹಣ ಜಮಾ ಮಾಡಬೇಕು. ಪ್ರತಿವರ್ಷ ಬೆಂಬಲ ಬೆಲೆಯಲ್ಲಿ ರೈತರ ಕೃಷಿ ಉತ್ಪನ್ನಗಳನ್ನು ಖರೀದಿಸಲು ರಾಶಿ ಮಾಡುವ ಮುಂಚಿತವಾಗಿಯೇ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು. ಜೋಳ ಮಾರಾಟ ವಿಳಂಬ ಆಗಿರುವುದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಸಾಲದ ವಸೂಲಾತಿಗೆ ನೋಟಿಸ್ ಕಳುಹಿಸದಂತೆ ಬ್ಯಾಂಕ್‌ಗಳಿಗೆ ನಿರ್ದೇಶನ ನೀಡಬೇಕು. ರೈತರು ಬೆಳೆದ ಎಲ್ಲ ಕೃಷಿ ಉತ್ಪನ್ನಗಳಿಗೆ ಡಾ.ಎಂ.ಎಸ್.ಸ್ವಾಮಿನಾಥನ್ ವರದಿ ಆಧಾರದಲ್ಲಿ ವೈಜ್ಞಾನಿಕ ಬೆಂಬಲ ಬೆಲೆಯನ್ನು ನಿಗದಿಗೊಳಿಸಬೇಕು. ಕನಿಷ್ಠ ಬೆಂಬಲ ಬೆಲೆಯ ನಿಗದಿಯನ್ನು ಕಾನೂನುಬದ್ಧಗೊಳಿಸಬೇಕು ಎಂದು ಒತ್ತಾಯಿಸಿದರು.

ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಸವಂತರಾಯಗೌಡ ಕಲ್ಲೂರು, ಕರ್ನಾಟಕ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಿ.ಎಚ್.ಪೂಜಾರ್, ಗ್ರಾಮೀಣ ಕೃಷಿಕೂಲಿಕಾರರ ಸಂಘದ ಸಂಚಾಲಕಿ ವಿರುಪಮ್ಮ ಉದ್ಬಾಳ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಸವರಾಜ ಹಿರೇಗೌಡರ್, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸಂಚಾಲಕ ಚಂದ್ರಶೇಖರ ಗೊರಬಾಳ, ರೈತ ಮುಖಂಡರಾದ ಬಸವರಾಜ ಹಂಚಿನಾಳ, ನಾಗನಗೌಡ ಪೋತ್ನಾಳ ಮಾತನಾಡಿದರು.

ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ರೈತರು ಮತ್ತು ಇತರರು ಭಾಗವಹಿಸಿದ್ದರು.

ಹಾವೇರಿ | ಹೆಚ್ಚುವರಿ ಶಾಲಾ ಕೊಠಡಿ ಕೇಳಿದ್ದ ಶಿಕ್ಷಕನ ಅಮಾನತು ವಿರೋಧಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...