Homeಕರ್ನಾಟಕಸರ್ಕಾರ ಜೋಳ ಖರೀದಿಸುವಂತೆ ಒತ್ತಾಯಿಸಿ 'ಸಿಂಧನೂರು ಬಂದ್'; ಬೃಹತ್ ಪ್ರತಿಭಟನಾ ಮೆರವಣಿಗೆ

ಸರ್ಕಾರ ಜೋಳ ಖರೀದಿಸುವಂತೆ ಒತ್ತಾಯಿಸಿ ‘ಸಿಂಧನೂರು ಬಂದ್’; ಬೃಹತ್ ಪ್ರತಿಭಟನಾ ಮೆರವಣಿಗೆ

- Advertisement -
- Advertisement -

ರೈತರು ಬೆಳೆದ ಜೋಳವನ್ನು ಸಂಪೂರ್ಣವಾಗಿ ಸರ್ಕಾರ ಖರೀದಿಸಬೇಕೆಂದು ಒತ್ತಾಯಿಸಿ ರೈತ ಸಂಘಟನೆಗಳು,  ಜೋಳ ಬೆಳೆಗಾರರ ಒಕ್ಕೂಟ ಹಾಗೂ ವಿವಿಧ ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ಸೋಮವಾರ ಸಿಂಧನೂರು ಬಂದ್‌ ಹಾಗೂ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.

ಕಳೆದ ಮೂರು ದಿನಗಳಿಂದ ಮಿನಿವಿಧಾನಸೌಧದ ಆವರಣದಲ್ಲಿ ನಡೆಯುತ್ತಿದ್ದ ಅನಿರ್ದಿಷ್ಠಾವಧಿ ಧರಣಿ ಸತ್ಯಾಗ್ರಹವು ಸೋಮವಾರ ‘ಸಿಂಧನೂರು ಬಂದ್’ ಚಳವಳಿಯಾಗಿ ಮಾರ್ಪಟ್ಟಿತು. ಬೆಳಿಗ್ಗೆ 9 ಗಂಟೆಗೆ ರೈತ ಹಾಗೂ ಕ್ರಾಂತಿ ಗೀತೆಗಳೊಂದಿಗೆ ಆರಂಭಗೊಂಡ ಪ್ರತಿಭಟನೆಗೆ ಪ್ರಗತಿಪರ, ದಲಿತಪರ, ಕನ್ನಡಪರ, ಮಹಿಳಾಪರ ಸಂಘಟನೆಗಳ ಒಕ್ಕೂಟ, ಎಪಿಎಂಸಿ ವರ್ತಕರು, ಕಮ್ಯುನಿಸ್ಟ್ ಪಕ್ಷಗಳ ಮುಖಂಡರು ಬೆಂಬಲ ವ್ಯಕ್ತಪಡಿಸಿದ್ದರು.

ವಕೀಲರ ಸಂಘದ ತಾಲೂಕು ಘಟಕದ ಅಧ್ಯಕ್ಷ ಎನ್.ರಾಮನಗೌಡ ಸೇರಿದಂತೆ ಪದಾಧಿಕಾರಿಗಳು ಮತ್ತು ಸದಸ್ಯರು ನ್ಯಾಯಾಲಯದ ಕಾರ್ಯಕಲಾಪಗಳನ್ನು ಸ್ಥಗಿತಗೊಳಿಸಿ ಕೋರ್ಟ್‌ನಿಂದಲೇ ಮೆರವಣಿಗೆ ಮೂಲಕ ಬಂದು ಧರಣಿಗೆ ಬೆಂಬಲ ಘೋಷಿಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಮಾತನಾಡಿ, ಹಿಂಗಾರು ಹಂಗಾಮಿನಲ್ಲಿ 13,175 ರೈತರಿಂದ ಸುಮಾರು 1.02 ಲಕ್ಷ ಟನ್ ಜೋಳ ಖರೀದಿಸಲು ಈಗಾಗಲೇ ನೊಂದಾಯಿಸಲಾಗಿದೆ. ಆದರೆ ಖರೀದಿ ಪ್ರಕ್ರಿಯೆ ಏಕಾಏಕಿ ನಿಲ್ಲಿಸಿರುವುದು ಖಂಡನೀಯ. ಜೋಳವನ್ನು ಬೆಳೆದು ನಾಲ್ಕು ತಿಂಗಳಾದರೂ ಸರ್ಕಾರ ಇನ್ನೂ ಖರೀದಿ ಮಾಡಿಲ್ಲ. ಈ ನಡುವೆ ಮುಂಗಾರು ಬಿತ್ತನೆ ಪ್ರಕ್ರಿಯೆ ಶುರುವಾಗಿದೆ. ಮತ್ತೊಂದೆಡೆ ಕೃಷಿ ಚಟುವಟಿಕೆಗೆ ಮಾಡಿದ ಸಾಲದ ಮರುಪಾವತಿಗೆ ಬ್ಯಾಂಕ್‌ಗಳು ರೈತರಿಗೆ ನೋಟಿಸ್ ಕೊಡುತ್ತಿದ್ದು, ಇದರಿಂದ ರೈತರಿಗೆ ಕಷ್ಟವಾಗಿದೆ. ಆದ್ದರಿಂದ ಜೂ.4ರ ಸಂಜೆಯೊಳಗೆ ಸರ್ಕಾರ ಜೋಳವನ್ನು ಖರೀದಿಸುವ ಆದೇಶ ಹೊರಡಿಸಬೇಕು. ಇಲ್ಲದಿದ್ದರೆ ರೈತರು ದಂಗೆ ಏಳುವುದು ಖಚಿತವಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಕೇಂದ್ರ ಉಗ್ರಾಣ ನಿಗಮದ ಅಧಿಕಾರಿಗಳ ಹಠಮಾರಿ ಧೋರಣೆ ಮತ್ತು ಅವೈಜ್ಞಾನಿಕ ಮಾನದಂಡಗಳಿಂದ ಸಿಂಧನೂರು, ಮಾನ್ವಿ ತಾಲೂಕು ಸೇರಿದಮತೆ ಜಿಲ್ಲೆಯ ಸಾವಿರಾರು ರೈತರು ಬೆಳೆದ ಜೋಳವನ್ನು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಲಾಗದೆ ಕಳೆದ ನಾಲ್ಕು ತಿಂಗಳಿನಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಖರೀದಿಯ ಮೂಲಕ 1.30 ಲಕ್ಷ ಟನ್ ಜೋಳ ಖರೀದಿಸಲು 18446 ರೈತರು ಖರೀದಿ ಕೇಂದ್ರಗಳಲ್ಲಿ ನೊಂದಾಯಿಸಿಕೊಂಡಿದ್ದಾರೆ. ಇದರಲ್ಲಿ 1 ಲಕ್ಷ ಟನ್ ಖರೀದಿಸಿ, ಉಳಿದಂತೆ ಎಕರೆಗೆ 10 ಕ್ವಿಂಟಲ್ ನಿಗದಿಗೊಳಿಸಿದ್ದರಿಂದ 4,100 ಸಣ್ಣ, ಅತಿಸಣ್ಣ ರೈತರಿಗೆ ಅನ್ಯಾಯವಾಗಿದೆ. ಹಾಗಾಗಿ ಎಕರೆಗೆ 20 ಕ್ವಿಂಟಲ್‌ನಂತೆ ಉಳಿದ ಎಲ್ಲ ಜೋಳವನ್ನು ತಕ್ಷಣ ಖರೀದಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಅಮೀನ್ ಪಾಷಾ ದಿದ್ದಿಗಿ ಆಗ್ರಹಿಸಿದರು.


ಕರ್ನಾಟಕ ರೈತ ಸಂಘದ ರಾಜ್ಯ ಅಧ್ಯಕ್ಷ ಡಿ.ಎಚ್.ಪೂಜಾರ್ ಮಾತನಾಡಿ, ಜೋಳ ಖರೀದಿಸಿದ ವಾರದ ಒಳಗಾಗಿ ರೈತರ ಖಾತೆಗಳಿಗೆ ಹಣ ಜಮಾ ಮಾಡಬೇಕು. ಪ್ರತಿವರ್ಷ ಬೆಂಬಲ ಬೆಲೆಯಲ್ಲಿ ರೈತರ ಕೃಷಿ ಉತ್ಪನ್ನಗಳನ್ನು ಖರೀದಿಸಲು ರಾಶಿ ಮಾಡುವ ಮುಂಚಿತವಾಗಿಯೇ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು. ಜೋಳ ಮಾರಾಟ ವಿಳಂಬ ಆಗಿರುವುದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಸಾಲದ ವಸೂಲಾತಿಗೆ ನೋಟಿಸ್ ಕಳುಹಿಸದಂತೆ ಬ್ಯಾಂಕ್‌ಗಳಿಗೆ ನಿರ್ದೇಶನ ನೀಡಬೇಕು. ರೈತರು ಬೆಳೆದ ಎಲ್ಲ ಕೃಷಿ ಉತ್ಪನ್ನಗಳಿಗೆ ಡಾ.ಎಂ.ಎಸ್.ಸ್ವಾಮಿನಾಥನ್ ವರದಿ ಆಧಾರದಲ್ಲಿ ವೈಜ್ಞಾನಿಕ ಬೆಂಬಲ ಬೆಲೆಯನ್ನು ನಿಗದಿಗೊಳಿಸಬೇಕು. ಕನಿಷ್ಠ ಬೆಂಬಲ ಬೆಲೆಯ ನಿಗದಿಯನ್ನು ಕಾನೂನುಬದ್ಧಗೊಳಿಸಬೇಕು ಎಂದು ಒತ್ತಾಯಿಸಿದರು.

ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಸವಂತರಾಯಗೌಡ ಕಲ್ಲೂರು, ಕರ್ನಾಟಕ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಿ.ಎಚ್.ಪೂಜಾರ್, ಗ್ರಾಮೀಣ ಕೃಷಿಕೂಲಿಕಾರರ ಸಂಘದ ಸಂಚಾಲಕಿ ವಿರುಪಮ್ಮ ಉದ್ಬಾಳ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಸವರಾಜ ಹಿರೇಗೌಡರ್, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸಂಚಾಲಕ ಚಂದ್ರಶೇಖರ ಗೊರಬಾಳ, ರೈತ ಮುಖಂಡರಾದ ಬಸವರಾಜ ಹಂಚಿನಾಳ, ನಾಗನಗೌಡ ಪೋತ್ನಾಳ ಮಾತನಾಡಿದರು.

ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ರೈತರು ಮತ್ತು ಇತರರು ಭಾಗವಹಿಸಿದ್ದರು.

ಹಾವೇರಿ | ಹೆಚ್ಚುವರಿ ಶಾಲಾ ಕೊಠಡಿ ಕೇಳಿದ್ದ ಶಿಕ್ಷಕನ ಅಮಾನತು ವಿರೋಧಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...

ಬುರ್ಖಾ ಧರಿಸದ ಕಾರಣಕ್ಕೆ ಪತ್ನಿ-ಮಕ್ಕಳ ಕೊಲೆ; ಮನೆಯೊಳಗೆ ಹೂತುಹಾಕಿದ ವ್ಯಕ್ತಿ

ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಘೋರ ಘಟನೆಯಿಂದು ವರದಿಯಾಗಿದೆ, ತನ್ನ ಪತ್ನಿ ಮತ್ತು ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ತ್ರಿವಳಿ ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿ ಫಾರೂಕ್ ಎಂದು...

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ವಿಶೇಷ ಕಾರ್ಯಾಚರಣೆ: ಮೊಬೈಲ್ ಫೋನ್, ಗಾಂಜಾ ವಶ: ಡಿಜಿಪಿ ಅಲೋಕ್ ಕುಮಾರ್

ಕರ್ನಾಟಕದ ಕಾರಾಗೃಹಗಳಲ್ಲಿ 36 ಗಂಟೆಗಳ ಕಾಲ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮೊಬೈಲ್ ಫೋನ್‌ಗಳು, ಸಿಮ್ ಕಾರ್ಡ್‌ಗಳು, ಚಾಕುಗಳು ಮತ್ತು ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಿದ್ದುಪಡಿ ಸೌಲಭ್ಯಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯಲು...