Homeಕರ್ನಾಟಕಸರ್ಕಾರ ಜೋಳ ಖರೀದಿಸುವಂತೆ ಒತ್ತಾಯಿಸಿ 'ಸಿಂಧನೂರು ಬಂದ್'; ಬೃಹತ್ ಪ್ರತಿಭಟನಾ ಮೆರವಣಿಗೆ

ಸರ್ಕಾರ ಜೋಳ ಖರೀದಿಸುವಂತೆ ಒತ್ತಾಯಿಸಿ ‘ಸಿಂಧನೂರು ಬಂದ್’; ಬೃಹತ್ ಪ್ರತಿಭಟನಾ ಮೆರವಣಿಗೆ

- Advertisement -
- Advertisement -

ರೈತರು ಬೆಳೆದ ಜೋಳವನ್ನು ಸಂಪೂರ್ಣವಾಗಿ ಸರ್ಕಾರ ಖರೀದಿಸಬೇಕೆಂದು ಒತ್ತಾಯಿಸಿ ರೈತ ಸಂಘಟನೆಗಳು,  ಜೋಳ ಬೆಳೆಗಾರರ ಒಕ್ಕೂಟ ಹಾಗೂ ವಿವಿಧ ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ಸೋಮವಾರ ಸಿಂಧನೂರು ಬಂದ್‌ ಹಾಗೂ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.

ಕಳೆದ ಮೂರು ದಿನಗಳಿಂದ ಮಿನಿವಿಧಾನಸೌಧದ ಆವರಣದಲ್ಲಿ ನಡೆಯುತ್ತಿದ್ದ ಅನಿರ್ದಿಷ್ಠಾವಧಿ ಧರಣಿ ಸತ್ಯಾಗ್ರಹವು ಸೋಮವಾರ ‘ಸಿಂಧನೂರು ಬಂದ್’ ಚಳವಳಿಯಾಗಿ ಮಾರ್ಪಟ್ಟಿತು. ಬೆಳಿಗ್ಗೆ 9 ಗಂಟೆಗೆ ರೈತ ಹಾಗೂ ಕ್ರಾಂತಿ ಗೀತೆಗಳೊಂದಿಗೆ ಆರಂಭಗೊಂಡ ಪ್ರತಿಭಟನೆಗೆ ಪ್ರಗತಿಪರ, ದಲಿತಪರ, ಕನ್ನಡಪರ, ಮಹಿಳಾಪರ ಸಂಘಟನೆಗಳ ಒಕ್ಕೂಟ, ಎಪಿಎಂಸಿ ವರ್ತಕರು, ಕಮ್ಯುನಿಸ್ಟ್ ಪಕ್ಷಗಳ ಮುಖಂಡರು ಬೆಂಬಲ ವ್ಯಕ್ತಪಡಿಸಿದ್ದರು.

ವಕೀಲರ ಸಂಘದ ತಾಲೂಕು ಘಟಕದ ಅಧ್ಯಕ್ಷ ಎನ್.ರಾಮನಗೌಡ ಸೇರಿದಂತೆ ಪದಾಧಿಕಾರಿಗಳು ಮತ್ತು ಸದಸ್ಯರು ನ್ಯಾಯಾಲಯದ ಕಾರ್ಯಕಲಾಪಗಳನ್ನು ಸ್ಥಗಿತಗೊಳಿಸಿ ಕೋರ್ಟ್‌ನಿಂದಲೇ ಮೆರವಣಿಗೆ ಮೂಲಕ ಬಂದು ಧರಣಿಗೆ ಬೆಂಬಲ ಘೋಷಿಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಮಾತನಾಡಿ, ಹಿಂಗಾರು ಹಂಗಾಮಿನಲ್ಲಿ 13,175 ರೈತರಿಂದ ಸುಮಾರು 1.02 ಲಕ್ಷ ಟನ್ ಜೋಳ ಖರೀದಿಸಲು ಈಗಾಗಲೇ ನೊಂದಾಯಿಸಲಾಗಿದೆ. ಆದರೆ ಖರೀದಿ ಪ್ರಕ್ರಿಯೆ ಏಕಾಏಕಿ ನಿಲ್ಲಿಸಿರುವುದು ಖಂಡನೀಯ. ಜೋಳವನ್ನು ಬೆಳೆದು ನಾಲ್ಕು ತಿಂಗಳಾದರೂ ಸರ್ಕಾರ ಇನ್ನೂ ಖರೀದಿ ಮಾಡಿಲ್ಲ. ಈ ನಡುವೆ ಮುಂಗಾರು ಬಿತ್ತನೆ ಪ್ರಕ್ರಿಯೆ ಶುರುವಾಗಿದೆ. ಮತ್ತೊಂದೆಡೆ ಕೃಷಿ ಚಟುವಟಿಕೆಗೆ ಮಾಡಿದ ಸಾಲದ ಮರುಪಾವತಿಗೆ ಬ್ಯಾಂಕ್‌ಗಳು ರೈತರಿಗೆ ನೋಟಿಸ್ ಕೊಡುತ್ತಿದ್ದು, ಇದರಿಂದ ರೈತರಿಗೆ ಕಷ್ಟವಾಗಿದೆ. ಆದ್ದರಿಂದ ಜೂ.4ರ ಸಂಜೆಯೊಳಗೆ ಸರ್ಕಾರ ಜೋಳವನ್ನು ಖರೀದಿಸುವ ಆದೇಶ ಹೊರಡಿಸಬೇಕು. ಇಲ್ಲದಿದ್ದರೆ ರೈತರು ದಂಗೆ ಏಳುವುದು ಖಚಿತವಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಕೇಂದ್ರ ಉಗ್ರಾಣ ನಿಗಮದ ಅಧಿಕಾರಿಗಳ ಹಠಮಾರಿ ಧೋರಣೆ ಮತ್ತು ಅವೈಜ್ಞಾನಿಕ ಮಾನದಂಡಗಳಿಂದ ಸಿಂಧನೂರು, ಮಾನ್ವಿ ತಾಲೂಕು ಸೇರಿದಮತೆ ಜಿಲ್ಲೆಯ ಸಾವಿರಾರು ರೈತರು ಬೆಳೆದ ಜೋಳವನ್ನು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಲಾಗದೆ ಕಳೆದ ನಾಲ್ಕು ತಿಂಗಳಿನಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಖರೀದಿಯ ಮೂಲಕ 1.30 ಲಕ್ಷ ಟನ್ ಜೋಳ ಖರೀದಿಸಲು 18446 ರೈತರು ಖರೀದಿ ಕೇಂದ್ರಗಳಲ್ಲಿ ನೊಂದಾಯಿಸಿಕೊಂಡಿದ್ದಾರೆ. ಇದರಲ್ಲಿ 1 ಲಕ್ಷ ಟನ್ ಖರೀದಿಸಿ, ಉಳಿದಂತೆ ಎಕರೆಗೆ 10 ಕ್ವಿಂಟಲ್ ನಿಗದಿಗೊಳಿಸಿದ್ದರಿಂದ 4,100 ಸಣ್ಣ, ಅತಿಸಣ್ಣ ರೈತರಿಗೆ ಅನ್ಯಾಯವಾಗಿದೆ. ಹಾಗಾಗಿ ಎಕರೆಗೆ 20 ಕ್ವಿಂಟಲ್‌ನಂತೆ ಉಳಿದ ಎಲ್ಲ ಜೋಳವನ್ನು ತಕ್ಷಣ ಖರೀದಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಅಮೀನ್ ಪಾಷಾ ದಿದ್ದಿಗಿ ಆಗ್ರಹಿಸಿದರು.


ಕರ್ನಾಟಕ ರೈತ ಸಂಘದ ರಾಜ್ಯ ಅಧ್ಯಕ್ಷ ಡಿ.ಎಚ್.ಪೂಜಾರ್ ಮಾತನಾಡಿ, ಜೋಳ ಖರೀದಿಸಿದ ವಾರದ ಒಳಗಾಗಿ ರೈತರ ಖಾತೆಗಳಿಗೆ ಹಣ ಜಮಾ ಮಾಡಬೇಕು. ಪ್ರತಿವರ್ಷ ಬೆಂಬಲ ಬೆಲೆಯಲ್ಲಿ ರೈತರ ಕೃಷಿ ಉತ್ಪನ್ನಗಳನ್ನು ಖರೀದಿಸಲು ರಾಶಿ ಮಾಡುವ ಮುಂಚಿತವಾಗಿಯೇ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು. ಜೋಳ ಮಾರಾಟ ವಿಳಂಬ ಆಗಿರುವುದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಸಾಲದ ವಸೂಲಾತಿಗೆ ನೋಟಿಸ್ ಕಳುಹಿಸದಂತೆ ಬ್ಯಾಂಕ್‌ಗಳಿಗೆ ನಿರ್ದೇಶನ ನೀಡಬೇಕು. ರೈತರು ಬೆಳೆದ ಎಲ್ಲ ಕೃಷಿ ಉತ್ಪನ್ನಗಳಿಗೆ ಡಾ.ಎಂ.ಎಸ್.ಸ್ವಾಮಿನಾಥನ್ ವರದಿ ಆಧಾರದಲ್ಲಿ ವೈಜ್ಞಾನಿಕ ಬೆಂಬಲ ಬೆಲೆಯನ್ನು ನಿಗದಿಗೊಳಿಸಬೇಕು. ಕನಿಷ್ಠ ಬೆಂಬಲ ಬೆಲೆಯ ನಿಗದಿಯನ್ನು ಕಾನೂನುಬದ್ಧಗೊಳಿಸಬೇಕು ಎಂದು ಒತ್ತಾಯಿಸಿದರು.

ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಸವಂತರಾಯಗೌಡ ಕಲ್ಲೂರು, ಕರ್ನಾಟಕ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಿ.ಎಚ್.ಪೂಜಾರ್, ಗ್ರಾಮೀಣ ಕೃಷಿಕೂಲಿಕಾರರ ಸಂಘದ ಸಂಚಾಲಕಿ ವಿರುಪಮ್ಮ ಉದ್ಬಾಳ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಸವರಾಜ ಹಿರೇಗೌಡರ್, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸಂಚಾಲಕ ಚಂದ್ರಶೇಖರ ಗೊರಬಾಳ, ರೈತ ಮುಖಂಡರಾದ ಬಸವರಾಜ ಹಂಚಿನಾಳ, ನಾಗನಗೌಡ ಪೋತ್ನಾಳ ಮಾತನಾಡಿದರು.

ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ರೈತರು ಮತ್ತು ಇತರರು ಭಾಗವಹಿಸಿದ್ದರು.

ಹಾವೇರಿ | ಹೆಚ್ಚುವರಿ ಶಾಲಾ ಕೊಠಡಿ ಕೇಳಿದ್ದ ಶಿಕ್ಷಕನ ಅಮಾನತು ವಿರೋಧಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...