Homeಕರ್ನಾಟಕಸರ್ಕಾರ ಜೋಳ ಖರೀದಿಸುವಂತೆ ಒತ್ತಾಯಿಸಿ 'ಸಿಂಧನೂರು ಬಂದ್'; ಬೃಹತ್ ಪ್ರತಿಭಟನಾ ಮೆರವಣಿಗೆ

ಸರ್ಕಾರ ಜೋಳ ಖರೀದಿಸುವಂತೆ ಒತ್ತಾಯಿಸಿ ‘ಸಿಂಧನೂರು ಬಂದ್’; ಬೃಹತ್ ಪ್ರತಿಭಟನಾ ಮೆರವಣಿಗೆ

- Advertisement -
- Advertisement -

ರೈತರು ಬೆಳೆದ ಜೋಳವನ್ನು ಸಂಪೂರ್ಣವಾಗಿ ಸರ್ಕಾರ ಖರೀದಿಸಬೇಕೆಂದು ಒತ್ತಾಯಿಸಿ ರೈತ ಸಂಘಟನೆಗಳು,  ಜೋಳ ಬೆಳೆಗಾರರ ಒಕ್ಕೂಟ ಹಾಗೂ ವಿವಿಧ ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ಸೋಮವಾರ ಸಿಂಧನೂರು ಬಂದ್‌ ಹಾಗೂ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.

ಕಳೆದ ಮೂರು ದಿನಗಳಿಂದ ಮಿನಿವಿಧಾನಸೌಧದ ಆವರಣದಲ್ಲಿ ನಡೆಯುತ್ತಿದ್ದ ಅನಿರ್ದಿಷ್ಠಾವಧಿ ಧರಣಿ ಸತ್ಯಾಗ್ರಹವು ಸೋಮವಾರ ‘ಸಿಂಧನೂರು ಬಂದ್’ ಚಳವಳಿಯಾಗಿ ಮಾರ್ಪಟ್ಟಿತು. ಬೆಳಿಗ್ಗೆ 9 ಗಂಟೆಗೆ ರೈತ ಹಾಗೂ ಕ್ರಾಂತಿ ಗೀತೆಗಳೊಂದಿಗೆ ಆರಂಭಗೊಂಡ ಪ್ರತಿಭಟನೆಗೆ ಪ್ರಗತಿಪರ, ದಲಿತಪರ, ಕನ್ನಡಪರ, ಮಹಿಳಾಪರ ಸಂಘಟನೆಗಳ ಒಕ್ಕೂಟ, ಎಪಿಎಂಸಿ ವರ್ತಕರು, ಕಮ್ಯುನಿಸ್ಟ್ ಪಕ್ಷಗಳ ಮುಖಂಡರು ಬೆಂಬಲ ವ್ಯಕ್ತಪಡಿಸಿದ್ದರು.

ವಕೀಲರ ಸಂಘದ ತಾಲೂಕು ಘಟಕದ ಅಧ್ಯಕ್ಷ ಎನ್.ರಾಮನಗೌಡ ಸೇರಿದಂತೆ ಪದಾಧಿಕಾರಿಗಳು ಮತ್ತು ಸದಸ್ಯರು ನ್ಯಾಯಾಲಯದ ಕಾರ್ಯಕಲಾಪಗಳನ್ನು ಸ್ಥಗಿತಗೊಳಿಸಿ ಕೋರ್ಟ್‌ನಿಂದಲೇ ಮೆರವಣಿಗೆ ಮೂಲಕ ಬಂದು ಧರಣಿಗೆ ಬೆಂಬಲ ಘೋಷಿಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಮಾತನಾಡಿ, ಹಿಂಗಾರು ಹಂಗಾಮಿನಲ್ಲಿ 13,175 ರೈತರಿಂದ ಸುಮಾರು 1.02 ಲಕ್ಷ ಟನ್ ಜೋಳ ಖರೀದಿಸಲು ಈಗಾಗಲೇ ನೊಂದಾಯಿಸಲಾಗಿದೆ. ಆದರೆ ಖರೀದಿ ಪ್ರಕ್ರಿಯೆ ಏಕಾಏಕಿ ನಿಲ್ಲಿಸಿರುವುದು ಖಂಡನೀಯ. ಜೋಳವನ್ನು ಬೆಳೆದು ನಾಲ್ಕು ತಿಂಗಳಾದರೂ ಸರ್ಕಾರ ಇನ್ನೂ ಖರೀದಿ ಮಾಡಿಲ್ಲ. ಈ ನಡುವೆ ಮುಂಗಾರು ಬಿತ್ತನೆ ಪ್ರಕ್ರಿಯೆ ಶುರುವಾಗಿದೆ. ಮತ್ತೊಂದೆಡೆ ಕೃಷಿ ಚಟುವಟಿಕೆಗೆ ಮಾಡಿದ ಸಾಲದ ಮರುಪಾವತಿಗೆ ಬ್ಯಾಂಕ್‌ಗಳು ರೈತರಿಗೆ ನೋಟಿಸ್ ಕೊಡುತ್ತಿದ್ದು, ಇದರಿಂದ ರೈತರಿಗೆ ಕಷ್ಟವಾಗಿದೆ. ಆದ್ದರಿಂದ ಜೂ.4ರ ಸಂಜೆಯೊಳಗೆ ಸರ್ಕಾರ ಜೋಳವನ್ನು ಖರೀದಿಸುವ ಆದೇಶ ಹೊರಡಿಸಬೇಕು. ಇಲ್ಲದಿದ್ದರೆ ರೈತರು ದಂಗೆ ಏಳುವುದು ಖಚಿತವಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಕೇಂದ್ರ ಉಗ್ರಾಣ ನಿಗಮದ ಅಧಿಕಾರಿಗಳ ಹಠಮಾರಿ ಧೋರಣೆ ಮತ್ತು ಅವೈಜ್ಞಾನಿಕ ಮಾನದಂಡಗಳಿಂದ ಸಿಂಧನೂರು, ಮಾನ್ವಿ ತಾಲೂಕು ಸೇರಿದಮತೆ ಜಿಲ್ಲೆಯ ಸಾವಿರಾರು ರೈತರು ಬೆಳೆದ ಜೋಳವನ್ನು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಲಾಗದೆ ಕಳೆದ ನಾಲ್ಕು ತಿಂಗಳಿನಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಖರೀದಿಯ ಮೂಲಕ 1.30 ಲಕ್ಷ ಟನ್ ಜೋಳ ಖರೀದಿಸಲು 18446 ರೈತರು ಖರೀದಿ ಕೇಂದ್ರಗಳಲ್ಲಿ ನೊಂದಾಯಿಸಿಕೊಂಡಿದ್ದಾರೆ. ಇದರಲ್ಲಿ 1 ಲಕ್ಷ ಟನ್ ಖರೀದಿಸಿ, ಉಳಿದಂತೆ ಎಕರೆಗೆ 10 ಕ್ವಿಂಟಲ್ ನಿಗದಿಗೊಳಿಸಿದ್ದರಿಂದ 4,100 ಸಣ್ಣ, ಅತಿಸಣ್ಣ ರೈತರಿಗೆ ಅನ್ಯಾಯವಾಗಿದೆ. ಹಾಗಾಗಿ ಎಕರೆಗೆ 20 ಕ್ವಿಂಟಲ್‌ನಂತೆ ಉಳಿದ ಎಲ್ಲ ಜೋಳವನ್ನು ತಕ್ಷಣ ಖರೀದಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಅಮೀನ್ ಪಾಷಾ ದಿದ್ದಿಗಿ ಆಗ್ರಹಿಸಿದರು.


ಕರ್ನಾಟಕ ರೈತ ಸಂಘದ ರಾಜ್ಯ ಅಧ್ಯಕ್ಷ ಡಿ.ಎಚ್.ಪೂಜಾರ್ ಮಾತನಾಡಿ, ಜೋಳ ಖರೀದಿಸಿದ ವಾರದ ಒಳಗಾಗಿ ರೈತರ ಖಾತೆಗಳಿಗೆ ಹಣ ಜಮಾ ಮಾಡಬೇಕು. ಪ್ರತಿವರ್ಷ ಬೆಂಬಲ ಬೆಲೆಯಲ್ಲಿ ರೈತರ ಕೃಷಿ ಉತ್ಪನ್ನಗಳನ್ನು ಖರೀದಿಸಲು ರಾಶಿ ಮಾಡುವ ಮುಂಚಿತವಾಗಿಯೇ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು. ಜೋಳ ಮಾರಾಟ ವಿಳಂಬ ಆಗಿರುವುದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಸಾಲದ ವಸೂಲಾತಿಗೆ ನೋಟಿಸ್ ಕಳುಹಿಸದಂತೆ ಬ್ಯಾಂಕ್‌ಗಳಿಗೆ ನಿರ್ದೇಶನ ನೀಡಬೇಕು. ರೈತರು ಬೆಳೆದ ಎಲ್ಲ ಕೃಷಿ ಉತ್ಪನ್ನಗಳಿಗೆ ಡಾ.ಎಂ.ಎಸ್.ಸ್ವಾಮಿನಾಥನ್ ವರದಿ ಆಧಾರದಲ್ಲಿ ವೈಜ್ಞಾನಿಕ ಬೆಂಬಲ ಬೆಲೆಯನ್ನು ನಿಗದಿಗೊಳಿಸಬೇಕು. ಕನಿಷ್ಠ ಬೆಂಬಲ ಬೆಲೆಯ ನಿಗದಿಯನ್ನು ಕಾನೂನುಬದ್ಧಗೊಳಿಸಬೇಕು ಎಂದು ಒತ್ತಾಯಿಸಿದರು.

ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಸವಂತರಾಯಗೌಡ ಕಲ್ಲೂರು, ಕರ್ನಾಟಕ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಿ.ಎಚ್.ಪೂಜಾರ್, ಗ್ರಾಮೀಣ ಕೃಷಿಕೂಲಿಕಾರರ ಸಂಘದ ಸಂಚಾಲಕಿ ವಿರುಪಮ್ಮ ಉದ್ಬಾಳ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಸವರಾಜ ಹಿರೇಗೌಡರ್, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸಂಚಾಲಕ ಚಂದ್ರಶೇಖರ ಗೊರಬಾಳ, ರೈತ ಮುಖಂಡರಾದ ಬಸವರಾಜ ಹಂಚಿನಾಳ, ನಾಗನಗೌಡ ಪೋತ್ನಾಳ ಮಾತನಾಡಿದರು.

ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ರೈತರು ಮತ್ತು ಇತರರು ಭಾಗವಹಿಸಿದ್ದರು.

ಹಾವೇರಿ | ಹೆಚ್ಚುವರಿ ಶಾಲಾ ಕೊಠಡಿ ಕೇಳಿದ್ದ ಶಿಕ್ಷಕನ ಅಮಾನತು ವಿರೋಧಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...