Homeಕರ್ನಾಟಕಸಿಂಧನೂರು: ಒಕ್ಕೂಟ ಸರ್ಕಾರದ ವಿರುದ್ದ ‘ರೈತಪರ ಹೋರಾಟ ಸಮಿತಿ’ಯಿಂದ ಪ್ರತಿಭಟನೆ

ಸಿಂಧನೂರು: ಒಕ್ಕೂಟ ಸರ್ಕಾರದ ವಿರುದ್ದ ‘ರೈತಪರ ಹೋರಾಟ ಸಮಿತಿ’ಯಿಂದ ಪ್ರತಿಭಟನೆ

- Advertisement -
- Advertisement -

ಸಂಯುಕ್ತ ಕಿಸಾನ್ ಮೋರ್ಚಾ ಶನಿವಾರ ದೇಶದಾದ್ಯಂತ “ಕೃಷಿ ಉಳಿಸಿ, ಪ್ರಜಾಪ್ರಭುತ್ವ ರಕ್ಷಿಸಿ” ಆಂದೋಲನಕ್ಕೆ ಕರೆ ನೀಡಿತ್ತು. ಈ ಕರೆಯನ್ನು ಬೆಂಬಲಿಸಿ “ರೈತ ವಿರೋಧಿ ಕೃಷಿ ಕಾನೂನು ರದ್ದತಿ ಹೋರಾಟ ಸಮಿತಿ, ಸಿಂಧನೂರು” ವತಿಯಿಂದ ಸಿಂಧನೂರು ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಯನ್ನು ವಿರೋಧಿಸಿ ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ರೈತ ಹೋರಾಟ ಇಂದಿಗೆ 7 ತಿಂಗಳು ಪೂರೈಸಿದೆ. ದೆಹಲಿಯ ಗಡಿಯ ಸುತ್ತಲು ರೈತರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ರೈತರ ಹೋರಾಟ ಎಂಟನೆ ತಿಂಗಳಿಗೆ ಕಾಲಿಡುತ್ತಿದ್ದರೂ ಒಕ್ಕೂಟ ಸರ್ಕಾರ ವಿವಾದಾತ್ಮಕ ಕಾಯ್ದೆಯ ಕುರಿತು ಯಾವುದೆ ಸಮರ್ಪಕವಾದ ನಿರ್ಧಾರವನ್ನು ಪ್ರಕಟಿಸಿಲ್ಲ. ಇದನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಇಂದು ದೇಶದಾದ್ಯಂತ “ಕೃಷಿ ಉಳಿಸಿ, ಪ್ರಜಾಪ್ರಭುತ್ವ ರಕ್ಷಿಸಿ” ಆಂದೋಲನಕ್ಕೆ ಕರೆ ನೀಡಿತ್ತು.

ಇದನ್ನೂ ಓದಿ: 8ನೇ ತಿಂಗಳಿಗೆ ಕಾಲಿಟ್ಟ ರೈತ ಹೋರಾಟ: ಪ್ರತಿಭಟನೆ ಕೈಬಿಡುವಂತೆ ಕೇಂದ್ರ ಕೃಷಿ ಮಂತ್ರಿ ಮನವಿ

ಕಿಸಾನ್ ಮೋರ್ಚಾದ ಕರೆಯನ್ನು ಬೆಂಬಲಿಸಿರುವ ಸಿಂಧನೂರು ಹೋರಾಟ ಸಮಿತಿಯು ಒಕ್ಕೂಟ ಸರ್ಕಾರದ ವಿರುದ್ದ ಪ್ರತಿಭಟನೆಯನ್ನು ನಡೆಸಿ ಸಿಂಧನೂರು ತಹಸೀಲಲ್ದಾರ್‌ ಮೂಲಕ, ಕೃಷಿ ಕಾನೂನಿನ ಕುರಿತು ರೈತರ ಆಕ್ರೋಶ ಮತ್ತು ಅಸಮಾಧಾನ ಬಗ್ಗೆ ಮನವಿ ನೀಡಲಾಯಿತು.

ಸಮಿತಿಯು ರಾಷ್ಟ್ರಪತ್ರಿಗೆ ಸಲ್ಲಿಸಿದ ಹಕ್ಕೊತ್ತಾಯಗಳು:

  • ಕೇಂದ್ರ ಸರಕಾರ ಜಾರಿಗೆ ತಂದಿರುವ, ರೈತರಿಗೆ ಮರಣಶಾಸನವಾಗಿರುವ ಮೂರು ಕೃಷಿ ಕಾನೂನುಗಳು ಹಾಗೂ ವಿದ್ಯುತ್ ತಿದ್ದುಪಡಿ ಮಸೂದೆ-2020 ವಾಪಸ್ ಪಡೆಯಬೇಕು.
  • ರೈತ ಹೋರಾಟಗಾರರ ಮೇಲೆ ಹಾಕಿರುವ ಕೇಸ್‌ಗಳನ್ನು ಹಿಂಪಡೆಯಬೇಕು.
  • ಜೋಳಕ್ಕೆ ಬೆಂಬಲ ಬೆಲೆ ಘೋಷಿಸಬೇಕು.
  • ಕಳೆದ ವರ್ಷ ಜಿಲ್ಲೆಯ ಖರೀದಿ ಕೇಂದ್ರಗಳಲ್ಲಿ ಜೋಳ ಮಾರಾಟ ಮಾಡಿರುವ ರೈತರ ಖಾತೆಗಳಿಗೆ ಶೀಘ್ರವಾಗಿ ಹಣ ಜಮಾ ಮಾಡಬೇಕು.

ಪ್ರತಿಭಟನೆಯಲ್ಲಿ ಹೋರಾಟಗಾರರಾದ ಎಸ್. ದೇವೇಂದ್ರ ಗೌಡ, ಡಿಎಸ್‌‌ಎಸ್‌‌ ರಮೇಶ್ ಪಾಟೀಲ್, ‘ಸಮುದಾಯ’ ಕಾರ್ಯದರ್ಶಿ ಡಿಎಚ್ ಕಂಬಳಿ, ಮನುಜಮತ ಬಳಗದ ಬಸವರಾಜ ಬಾದರ್ಲಿ, ಚಿಂತಕರಾದ ಚಂದ್ರಶೇಖರ ಗೊರೆಬಾಳ,‌ ರೈತ ಸಂಘಟನೆಯ ರಾಮಯ್ಯ ಜವಳಗೇರಾ, ಆರ್‌‌ವೈಎಫ್‌‌‌‌ನ ನಾಗರಾಜ್ ಪೂಜಾರ್‌, ಸಿಪಿಐ ಪಕ್ಷದ ಬಾಷುಮೀಯಾ, ಸಿಪಿಐಎಂನ ಶೇಖ್‌‌ಷಾ ಖಾದ್ರಿ, ಶಂಕರ್ ವಾಲೇಕಾರ್, ಹುಲಿಗೇಶ್ ಬಾದರ್ಲಿ, ಉಪನ್ಯಾಸಕರಾದ ನಾರಾಯಣ ಬೆಳಗರ್ಕಿ, ಚಾಂದ್ ಪಾಷ ಜಾಗಿರದಾರ್, ಚಿಟ್ಟಿಬಾಬು, ಚಾಂದ್ ಕೆಜೆಎಸ್‌‌ ಭಾಗವಹಿಸಿದ್ದರು.

ಇದನ್ನೂ ಓದಿ: ‘ಯುದ್ಧವಿಲ್ಲದೆ ವಿಜಯವಿಲ್ಲ!’ – 8 ನೇ ತಿಂಗಳಿಗೆ ಕಾಲಿಟ್ಟ ರೈತ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...