Homeಮುಖಪುಟಮಧ್ಯಪ್ರದೇಶಕ್ಕೆ ಭರ್ಜರಿ ಕೊಡುಗೆ ನೀಡಿದ ನಾಗರಿಕ ವಿಮಾನಯಾನ ಸಚಿವ ಸಿಂಧಿಯಾ

ಮಧ್ಯಪ್ರದೇಶಕ್ಕೆ ಭರ್ಜರಿ ಕೊಡುಗೆ ನೀಡಿದ ನಾಗರಿಕ ವಿಮಾನಯಾನ ಸಚಿವ ಸಿಂಧಿಯಾ

- Advertisement -
- Advertisement -

ಮಧ್ಯಪ್ರದೇಶದ ಮಾಜಿ ಕಾಂಗ್ರೆಸ್ ನಾಯಕ, ಪ್ರಸ್ತುತ ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರದಲ್ಲಿ ನಾಗರಿಕ ವಿಮಾನಯಾನ ಸಚಿವರಾಗಿರುವ ಜ್ಯೋತಿರಾಧಿತ್ಯ ಸಿಂಧಿಯಾ ಅವರು ತಮ್ಮ ರಾಜ್ಯಕ್ಕೆ ಭರ್ಜರಿ ಕೊಡುಗೆಯನ್ನೇ ನೀಡಿದ್ದಾರೆ. ಕಳೆದ 35 ದಿನಗಳಲ್ಲಿ 44 ಹೊಸ ವಿಮಾನಗಳನ್ನು ಮಧ್ಯಪ್ರದೇಶದಿಂದ ಆರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಾಂಗ್ರೆಸ್‌ನೊಂದಿಗೆ ಮುನಿಸಿಕೊಂಡು ಬಿಜೆಪಿ ಸೇರಿದ್ದ ಜ್ಯೋತಿರಾಧಿತ್ಯ ಸಿಂಧಿಯಾ ಅವರು, “ಇಂದು ವಿಮಾನಗಳು ಮಧ್ಯಪ್ರದೇಶದ ಜಬಲ್ಪುರದಿಂದ ಮುಂಬೈ, ಪುಣೆ, ಸೂರತ್, ಹೈದರಾಬಾದ್ ಮತ್ತು ಕೋಲ್ಕತ್ತಾಗೆ ಹೊರಡುತ್ತಿವೆ. ಆಗಸ್ಟ್ 20 ರಿಂದ ಜಬಲ್ಪುರದಿಂದ ದೆಹಲಿ ಮತ್ತು ಇಂದೋರ್‌ಗೆ ವಿಮಾನಗಳು ಆರಂಭವಾಗಲಿವೆ” ಎಂದು ಅವರು ಹೇಳಿದ್ದಾರೆಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಇದನ್ನೂ ಓದಿ: ‘ಕೈ’ಗೆ ಮತ ನೀಡಿ ಎಂದು ಬಿಜೆಪಿ ರ್‍ಯಾಲಿಯಲ್ಲಿ ಸಿಂಧಿಯಾ ಮತ ಯಾಚನೆ!

ಸುಮಾರು 19 ವರ್ಷಗಳು ಕಾಂಗ್ರೆಸ್‌ನಲ್ಲಿದ್ದ ಸಿಂಧಿಯಾ ಕಳೆದ ವರ್ಷ ಮಾರ್ಚ್‌ನಲ್ಲಿ ಬಿಜೆಪಿ ಸೇರಿದ್ದರು. ಇದರ ನಂತರ ಬಿಜೆಪಿ ಅವರನ್ನು ರಾಜ್ಯಸಭಾ ಸದಸ್ಯರಾಗಿ ಆಯ್ಕೆ ಮಾಡಿತ್ತು. ಇದಾದ ನಂತರ, ಕಳೆದ ತಿಂಗಳಷ್ಟೇ ವಿಸ್ತರಣೆಯಾದ ಮೋದಿಯವರ ಮಂತ್ರಿ ಮಂಡಲದಲ್ಲಿ ನಾಗರಿಕ ವಿಮಾನಯಾನ ಖಾತೆಯನ್ನು ಅವರಿಗೆ ನೀಡಲಾಗಿದೆ.

ಇಂಧೋರ್‌ನಲ್ಲಿ ಮಾತನಾಡಿದ ಸಿಂಧಿಯಾ, “ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ನಾನು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ, ನಾನು ಜನರ ಸೇವೆ ಮಾಡಲು ಸಧಾ ಸಿದ್ಧನಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಮೊದಲ ಅಲೆಯಲ್ಲಿ ಜ್ಯೋತಿರಾಧಿತ್ಯ, ಎರಡನೆ ಅಲೆಯಲ್ಲಿ ಜಿತಿನ್‍: ಕಾಂಗ್ರೆಸ್‌ ತೊರೆದ ರಾಹುಲ್‍ ಗಾಂಧಿ ಆಪ್ತರು!

2009 ಮತ್ತು 2012 ರ ನಡುವೆ ಯುಪಿಎ- II ಸರ್ಕಾರದಲ್ಲಿ ಸಿಂಧಿಯಾ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾಗಿ ಖಾತೆ ನಿರ್ವಹಿಸಿದ್ದರು. 2012 ಮತ್ತು 2014ರ ನಡುವೆ ಅವರು ವಿದ್ಯುತ್ ಸಚಿವಾಲಯದ ಉಸ್ತುವಾರಿ ವಹಿಸಿದ್ದರು.

2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ನಂತರ ಪ್ರತಿರೋಧ ವ್ಯಕ್ತಪಡಿಸಿದ್ದ ಸಿಂಧ್ಯಾ, ಮಾರ್ಚ್ 2020 ರಲ್ಲಿ ತಮ್ಮ 22 ಬೆಂಬಲಿಗರೊಂದಿಗೆ ಆಪರೇಷನ್‌ ಕಮಲ ಮೂಲಕ ಬಿಜೆಪಿ ಸೇರಿದರು. ಈ ವಲಸೆಯೊಂದಿಗೆ ಮಧ್ಯಪ್ರದೇಶದಲ್ಲಿ ಅಸ್ಥಿತ್ವದಲ್ಲಿದ್ದ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್‌ ಸರ್ಕಾರವನ್ನು ಉರುಳಿಸಿದ್ದರು.

ಇದನ್ನೂ ಓದಿ: ಜ್ಯೋತಿರಾಧಿತ್ಯ ಸಿಂಧಿಯಾರನ್ನು ಮರಳಿ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವುದು ಶ್ರೇಯವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...