Homeಮುಖಪುಟಅನಾಥ ಮಕ್ಕಳ ಮಹಾತಾಯಿ ‘ಸಿಂಧೂತಾಯಿ ಸಪ್ಕಾಲ್‌’ ನಿಧನ

ಅನಾಥ ಮಕ್ಕಳ ಮಹಾತಾಯಿ ‘ಸಿಂಧೂತಾಯಿ ಸಪ್ಕಾಲ್‌’ ನಿಧನ

- Advertisement -
- Advertisement -

ಪುಣೆ: ‌ಅನಾಥ ಮಕ್ಕಳ ತಾಯಿ ಎಂದೇ ಗುರುತಿಸಲಾದ ಸಮಾಜ ಸೇವಕಿ ಸಿಂಧೂತಾಯಿ ಸಪ್ಕಾಲ್‌ ಅವರು ಹೃದಯಾಘಾತದಿಂದಾಗಿ ಪುಣೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಪದ್ಮಶ್ರೀ ಪುರಸ್ಕೃತರಾದ ಅವರಿಗೆ 73 ವರ್ಷ ವಯಸ್ಸಾಗಿತ್ತು. ಕಡು ಬಡತನದಲ್ಲಿ ಬೆಳೆದ ಅವರು ಚಿಕ್ಕ ವಯಸ್ಸಿನಿಂದಲೇ ಅಪಾರ ಕಷ್ಟಗಳನ್ನು ಸಹಿಸಿಕೊಂಡು ಬೆಳೆದರು. ಎಲ್ಲ ಕಷ್ಟಗಳನ್ನು ಎದುರಿಸುತ್ತಲೇ ಅನಾಥ ಮಕ್ಕಳಿಗಾಗಿ ಹಲವಾರು ಸಂಸ್ಥೆಗಳನ್ನು ಸ್ಥಾಪಿಸಿದರು.

ಸಿಂಧೂತಾಯಿ ಅವರನ್ನು ಮಹಾರಾಷ್ಟ್ರದ ಪುಣೆಯಲ್ಲಿರುವ ಗ್ಯಾಲಕ್ಸಿ ಕೇರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಒಂದೂವರೆ ತಿಂಗಳ ಹಿಂದೆ ಹರ್ನಿಯಾ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಅವರು, ಮತ್ತೆ ಚೇತರಿಸಿಕೊಳ್ಳಲಿಲ್ಲ. ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಶೈಲೇಶ್ ಪುಂಟಂಬೆಕರ್ ತಿಳಿಸಿದ್ದಾರೆ.

ನವೆಂಬರ್ 14, 1948ರಂದು ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿ ಜನಿಸಿದ ಸಪ್ಕಾಲ್ ಅವರು 4ನೇ ತರಗತಿಯಲ್ಲಿ ಉತ್ತೀರ್ಣರಾದ ನಂತರ ಶಾಲೆಯನ್ನು ಬಿಡಬೇಕಾಯಿತು. 12ನೇ ವಯಸ್ಸಿನಲ್ಲಿ ಅವರಿಗೆ 32 ವರ್ಷದ ವ್ಯಕ್ತಿಯೊಂದಿಗೆ ವಿವಾಹವಾಯಿತು. ಮೂರು ಮಕ್ಕಳಿಗೆ ಜನ್ಮ ನೀಡಿದ ನಂತರ, ಮತ್ತೆ ಗರ್ಭಿಣಿಯಾಗಿದ್ದಾಗ ಪತಿ ಅವರನ್ನು ತೊರೆದರು. ಒಂದು ಹಂತದಲ್ಲಿ, ಅವರ ಸ್ವಂತ ತಾಯಿ ಹಾಗೂ ಊರಿನವರೇ ಸಹಾಯ ಮಾಡಲು ನಿರಾಕರಿಸಿದ್ದರಿಂದ, ಸಪ್ಕಾಲ್ ತನ್ನ ಹೆಣ್ಣು ಮಕ್ಕಳನ್ನು ಬೆಳೆಸಲು ಭಿಕ್ಷಾಟನೆಯನ್ನು ಆಶ್ರಯಿಸಬೇಕಾಯಿತು.

ಆದಾಗ್ಯೂ, ಈ ಸಂದರ್ಭಗಳನ್ನು ನಿವಾರಿಸಿ ಅವರು ಶೀಘ್ರದಲ್ಲೇ ಅನಾಥರ ಕಲ್ಯಾಣಕ್ಕಾಗಿ ಕೆಲಸ ಮಾಡಲು ಪ್ರಾರಂಭಿಸಿದರು. 1,050ಕ್ಕೂ ಹೆಚ್ಚು ಅನಾಥ ಮಕ್ಕಳನ್ನು ಬೆಳೆಸಿರುವ ಅವರು 207 ಅಳಿಯಂದಿರು ಮತ್ತು 36 ಸೊಸೆಯರನ್ನು ಹೊಂದಿದ್ದಾರೆ.

ಪದ್ಮಶ್ರೀ ಪ್ರಶಸ್ತಿಯ ಜೊತೆಗೆ, ಸಪ್ಕಾಲ್‌ ಅವರು ತಮ್ಮ ಜೀವಿತಾವಧಿಯಲ್ಲಿ 750ಕ್ಕೂ ಹೆಚ್ಚು ಪ್ರಶಸ್ತಿಗಳು ಮತ್ತು ಗೌರವಗಳನ್ನು ಪಡೆದಿದ್ದಾರೆ. ಪ್ರಶಸ್ತಿಯ ಹಣವನ್ನು ಅನಾಥ ಮಕ್ಕಳಿಗಾಗಿ ಆಶ್ರಯ ಮನೆಗಳನ್ನು ನಿರ್ಮಿಸಲು ಬಳಸಿದ್ದಾರೆ.

ಅವರ ಜೀವನ ಅನೇಕರಿಗೆ ಸ್ಫೂರ್ತಿಯಾಗಿದೆ. 2010ರಲ್ಲಿ, ಅವರ ಜೀವನದ ಕುರಿತು ಮರಾಠಿ ಭಾಷೆಯಲ್ಲಿ ‘ಮೀ ಸಿಂಧುತೈ ಸಪ್ಕಾಲ್’ ಚಲನಚಿತ್ರ ಬಿಡುಗಡೆಯಾಯಿತು. 54ನೇ ಲಂಡನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಈ ಸಿನಿಮಾ ಪ್ರದರ್ಶನವಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರು ಸಪ್ಕಾಲ್‌ ತಾಯಿಯವರಿಗೆ ಸಂತಾಪ ಸೂಚಿಸಿದ್ದು, “ಡಾ.ಸಿಂಧುತಾಯಿ ಸಪ್ಕಾಲ್ ಅವರು ಸಮಾಜಕ್ಕೆ ನೀಡಿರುವ ಉದಾತ್ತ ಸೇವೆಯಿಂದಾಗಿ ಸ್ಮರಣೀಯರಾಗುತ್ತಾರೆ. ಅವರ ಪ್ರಯತ್ನದಿಂದಾಗಿ ಅನೇಕ ಮಕ್ಕಳು ಉತ್ತಮ ಗುಣಮಟ್ಟದ ಜೀವನವನ್ನು ನಡೆಸುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

“ಅಳಿವಿನ ಅಂಚಿನಲ್ಲಿರುವ ಸಮುದಾಯಗಳ ನಡುವೆಯೂ ಅವರು ಸಾಕಷ್ಟು ಕೆಲಸ ಮಾಡಿದ್ದಾರೆ. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ” ಎಂದು ಪ್ರಧಾನಿ ತಿಳಿಸಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಅನಾಥ ಮಕ್ಕಳ ತಾಯಿಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. “ಸಾವಿರಾರು ಮಕ್ಕಳನ್ನು ಸಾಕಿದ ಸಪ್ಕಾಲ್ ತಾಯಿಯವರು ಸಾಕ್ಷಾತ್‌ ದೇವರ ರೂಪವಾಗಿದ್ದಾರೆ” ಎಂದಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ಬುಧವಾರ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಮಾತನಾಡಿ, “ಸಪ್ಕಾಲ್ ಅವರು ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸುತ್ತಾ ಬೆಳೆದರು. ಸಮಾಜದಿಂದ ತಿರಸ್ಕರಿಸಲ್ಪಟ್ಟವರಿಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಅವರ ಸಾವಿನಿಂದಾಗಿ ಮಹಾರಾಷ್ಟ್ರವು ತಾಯಿಯನ್ನು ಕಳೆದುಕೊಂಡಿದೆ” ಎಂದು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.


ಇದನ್ನೂ ಓದಿರಿ: ದ್ವೇಷ ಭಾಷಣ: ವಿವಾದಿತ ಕಾಳಿಚರಣ್ ಸ್ವಾಮಿಯನ್ನು ವಶಕ್ಕೆ ಪಡೆದ ಮಹಾರಾಷ್ಟ್ರ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹರಿಯಾಣದ ಮೋಸ್ಟ್ ವಾಂಟೆಡ್ ‘ಗ್ಯಾಂಗ್‌ಸ್ಟರ್’ ಸಾಹಿಲ್ ಚೌಹಾಣ್ ಥೈಲ್ಯಾಂಡ್ ನಿಂದ ಗಡೀಪಾರು; ದೆಹಲಿಯಲ್ಲಿ ವಶಕ್ಕೆ ಪಡೆಯಲಿರುವ ಎಸ್‌ಟಿಎಫ್

ಭಾರತೀಯ ಭದ್ರತಾ ಸಂಸ್ಥೆಗಳಿಗೆ ಒಂದು ಪ್ರಮುಖ ಪ್ರಗತಿಯಲ್ಲಿ, ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಸಾಹಿಲ್ ಚೌಹಾಣ್‌ನನ್ನು ಥೈಲ್ಯಾಂಡ್‌ನಿಂದ ಗಡೀಪಾರು ಮಾಡಿದ ನಂತರ ಭಾರತಕ್ಕೆ ಕರೆತರಲಾಗುತ್ತಿದೆ. ಅಧಿಕಾರಿಗಳ ಪ್ರಕಾರ, ಚೌಹಾಣ್ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ...

ಛತ್ತೀಸ್‌ಗಢ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ತುಂಬಿ ಬಾವಿ ಬಳಿ ಎಸೆದಿದ್ದ ಆರೋಪಿ ಬಂಧನ

ಛತ್ತೀಸ್‌ಗಢದ ದುರ್ಗ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿ, ನಂತರ ಮಗು ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ಹಾಕಿ ಬಾವಿಯ ಬಳಿ ಎಸೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಉತೈ...

ಉತ್ತರಪ್ರದೇಶ: ಪ್ರೇಮ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಪ್ರತೀಕಾರ: ಮನೆಗೆ ನುಗ್ಗಿ 23ವರ್ಷದ ಯುವತಿ ಮತ್ತು ತಾಯಿಯ ಮೇಲೆ ಆಸಿಡ್ ದಾಳಿ; ಯುವತಿ ಸಾವು

ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ 23 ವರ್ಷದ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡು ಆಕೆಯ ತಾಯಿ ಗಂಭೀರವಾಗಿ ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ...

ಬೆಂಗಳೂರಿನ ಪ್ರವಾಹ ಕಾಮಗಾರಿ ಮೇ 30ರೊಳಗೆ ಪೂರ್ಣಗೊಳಿಸಿ, ಇಲ್ಲದಿದ್ದರೆ ಅಮಾನತು ಎದುರಿಸಿ; ಅಧಿಕಾರಿಗಳಿಗೆ ಎಸಿಎಸ್ ತುಷಾರ್ ಗಿರಿನಾಥ್ ಎಚ್ಚರಿಕೆ

ಬೆಂಗಳೂರು: ಮೇ 30 ರೊಳಗೆ ಬಾಕಿ ಇರುವ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿ, ಇಲ್ಲದಿದ್ದರೆ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಲಹಂಕದ ಕೇಂದ್ರೀಯ ವಿಹಾರ, ಟಾಟಾ...

ಮರ್ಯಾದೆಗೇಡು ಹತ್ಯೆ ತಡೆಯುವ ʼಇವ ನಮ್ಮವ ಇವ ನಮ್ಮವʼ ವಿಧೇಯಕಕ್ಕೆ ರಾಜ್ಯಪಾಲರಿಂದ ಸಹಿ

ರಾಜ್ಯ ವಿಧಾನಮಂಡಲ ಅಂಗೀಕರಿಸಿದ ವಿಧೇಯಕಗಳ ಪೈಕಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಬದಲಿಗೆ ಮತಪತ್ರ ಬಳಕೆ ಕಡ್ಡಾಯಗೊಳಿಸುವ ‘2026ರ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ’ ಹೊರತುಪಡಿಸಿ ಉಳಿದವುಗಳಿಗೆ...

ಶಾತವಾಹನ ವಿವಿ ವಿವಾದ: ಬಲಪಂಥೀಯರಿಂದ ದಲಿತ ಪ್ರಾಧ್ಯಾಪಕಿ ಮತ್ತು ವಿದ್ಯಾರ್ಥಿಗೆ ‘ನಗರ ನಕ್ಸಲರು’ ಎಂಬ ಹಣೆಪಟ್ಟಿಯಲ್ಲಿ ನಿರಂತರ ಕಿರುಕುಳ

ತೆಲಂಗಾಣದ ಶಾತವಾಹನ ವಿಶ್ವವಿದ್ಯಾಲಯದಲ್ಲಿ ದಲಿತ ಮಹಿಳಾ ಪ್ರಾಧ್ಯಾಪಕಿ ಮತ್ತು ದಲಿತ ವಿದ್ಯಾರ್ಥಿನಿಯನ್ನು "ನಗರ ನಕ್ಸಲರು" ಎಂದು ಹಣೆಪಟ್ಟಿ ಕಟ್ಟಿ ನಿರಂತರ ಕಿರುಕುಳ ನೀಡಿದ ನಂತರ ವಿವಾದ ಭುಗಿಲೆದ್ದಿದ್ದು, ಇದಕ್ಕೆ ಶಿಕ್ಷಣ ತಜ್ಞರು ಮತ್ತು...

ಕೇಂದ್ರದ ಹೊಸ ಕಾಯ್ದೆಯಿಂದ ಸಂಕಷ್ಟ : ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಹಾರ್ಮೋನ್ ಚಿಕಿತ್ಸೆ ಮುಂದುವರಿಸಲು ಕೇರಳ ಹೈಕೋರ್ಟ್ ಅನುಮತಿ

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026 ಅಂಗೀಕಾರಗೊಂಡ ನಂತರ ಆಸ್ಪತ್ರೆಗಳು ತಮ್ಮ ಚಿಕಿತ್ಸೆಯನ್ನು ಸ್ಥಗಿತಗೊಳಿಸಿವೆ ಎಂದು ಆರೋಪಿಸಿದ್ದ ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಹಾರ್ಮೋನ್ ಬದಲಿ ಚಿಕಿತ್ಸೆಯನ್ನು ಮುಂದುವರಿಸಲು ಕೇರಳ ಹೈಕೋರ್ಟ್...

ಮಾದಕವಸ್ತು ತನಿಖೆಗೆ ಸಹಾಯಕವಾಗಿ AI ಆಧಾರಿತ ಅಪ್ಲಿಕೇಶನ್ ಆರಂಭಿಸಿದ ಗುಜರಾತ್ ಪೊಲೀಸರು

ಅಹಮದಾಬಾದ್: ಮಾದಕವಸ್ತು ಪ್ರಕರಣಗಳ ತನಿಖೆಯನ್ನು ಸುಲಭವಾಗಿಸಲು ಮತ್ತು ವಿಚಾರಣೆಯ ಸಮಯದಲ್ಲಿ ಅವುಗಳನ್ನು ಬಲಪಡಿಸಲು, ಇದರಿಂದಾಗಿ ಶಿಕ್ಷೆಯ ಪ್ರಮಾಣ ಸುಧಾರಿಸಲು ಗುಜರಾತ್ ಪೊಲೀಸರು ಶುಕ್ರವಾರ ಕೃತಕ ಬುದ್ಧಿಮತ್ತೆ (AI) ಆಧಾರಿತ ಅಪ್ಲಿಕೇಶನ್ "NARIT AI"...

ಇಸ್ಲಾಮಾಬಾದ್‌ ಶಾಂತಿ ಮಾತುಕತೆ | ಅಮೆರಿಕ–ಇಸ್ರೇಲ್ ಹತ್ಯೆಗೈದ ಮಕ್ಕಳ ರಕ್ತಸಿಕ್ತ ಬ್ಯಾಗ್‌, ಶೂ ಹೊತ್ತು ತಂದ ಇರಾನ್

ಶಾಂತಿ ಮಾತುಕತೆಯಲ್ಲಿ ಭಾಗವಹಿಸಲು ಪಾಕಿಸ್ತಾನದ ಇಸ್ಲಾಮಾಬಾದ್‌ಗೆ ಆಗಮಿಸುವಾಗ, ಅಮೆರಿಕ-ಇಸ್ರೇಲ್‌ನ ಬಾಂಬ್‌ ದಾಳಿ ನಡೆಸಿ ಹತ್ಯೆಗೈದ ಮಕ್ಕಳ ಫೋಟೋ, ರಕ್ತಸಿಕ್ತ ಬ್ಯಾಗ್ ಮತ್ತು ಶೂಗಳನ್ನು ವಿಮಾನದಲ್ಲಿ ಹೊತ್ತು ತರುವ ಮೂಲಕ ಇರಾನ್‌ ಜಗತ್ತಿನ ಗಮನಸೆಳೆದಿದೆ. ಸಾಮಾಜಿಕ ಜಾಲತಾಣ...

ಮಣಿಪುರ: ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳೊಂದಿಗೆ ಇಬ್ಬರನ್ನು ಬಂಧಿಸಿದ ಭದ್ರತಾ ಪಡೆ

ಇಂಫಾಲ: ಮಣಿಪುರದ ಚುರಚಂದಪುರ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳಿಂದ ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳನ್ನು(ಪಾಪಿ ಸೀಡ್ಸ್) ವಶಪಡಿಸಿಕೊಂಡ ನಂತರ ಭದ್ರತಾ ಪಡೆಗಳು ಅವರನ್ನು ಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಚುರಾಚಂದ್‌ಪುರ ಪೊಲೀಸ್ ಠಾಣೆ...