Homeಮುಖಪುಟಅನಾಥ ಮಕ್ಕಳ ಮಹಾತಾಯಿ ‘ಸಿಂಧೂತಾಯಿ ಸಪ್ಕಾಲ್‌’ ನಿಧನ

ಅನಾಥ ಮಕ್ಕಳ ಮಹಾತಾಯಿ ‘ಸಿಂಧೂತಾಯಿ ಸಪ್ಕಾಲ್‌’ ನಿಧನ

- Advertisement -
- Advertisement -

ಪುಣೆ: ‌ಅನಾಥ ಮಕ್ಕಳ ತಾಯಿ ಎಂದೇ ಗುರುತಿಸಲಾದ ಸಮಾಜ ಸೇವಕಿ ಸಿಂಧೂತಾಯಿ ಸಪ್ಕಾಲ್‌ ಅವರು ಹೃದಯಾಘಾತದಿಂದಾಗಿ ಪುಣೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಪದ್ಮಶ್ರೀ ಪುರಸ್ಕೃತರಾದ ಅವರಿಗೆ 73 ವರ್ಷ ವಯಸ್ಸಾಗಿತ್ತು. ಕಡು ಬಡತನದಲ್ಲಿ ಬೆಳೆದ ಅವರು ಚಿಕ್ಕ ವಯಸ್ಸಿನಿಂದಲೇ ಅಪಾರ ಕಷ್ಟಗಳನ್ನು ಸಹಿಸಿಕೊಂಡು ಬೆಳೆದರು. ಎಲ್ಲ ಕಷ್ಟಗಳನ್ನು ಎದುರಿಸುತ್ತಲೇ ಅನಾಥ ಮಕ್ಕಳಿಗಾಗಿ ಹಲವಾರು ಸಂಸ್ಥೆಗಳನ್ನು ಸ್ಥಾಪಿಸಿದರು.

ಸಿಂಧೂತಾಯಿ ಅವರನ್ನು ಮಹಾರಾಷ್ಟ್ರದ ಪುಣೆಯಲ್ಲಿರುವ ಗ್ಯಾಲಕ್ಸಿ ಕೇರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಒಂದೂವರೆ ತಿಂಗಳ ಹಿಂದೆ ಹರ್ನಿಯಾ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಅವರು, ಮತ್ತೆ ಚೇತರಿಸಿಕೊಳ್ಳಲಿಲ್ಲ. ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಶೈಲೇಶ್ ಪುಂಟಂಬೆಕರ್ ತಿಳಿಸಿದ್ದಾರೆ.

ನವೆಂಬರ್ 14, 1948ರಂದು ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿ ಜನಿಸಿದ ಸಪ್ಕಾಲ್ ಅವರು 4ನೇ ತರಗತಿಯಲ್ಲಿ ಉತ್ತೀರ್ಣರಾದ ನಂತರ ಶಾಲೆಯನ್ನು ಬಿಡಬೇಕಾಯಿತು. 12ನೇ ವಯಸ್ಸಿನಲ್ಲಿ ಅವರಿಗೆ 32 ವರ್ಷದ ವ್ಯಕ್ತಿಯೊಂದಿಗೆ ವಿವಾಹವಾಯಿತು. ಮೂರು ಮಕ್ಕಳಿಗೆ ಜನ್ಮ ನೀಡಿದ ನಂತರ, ಮತ್ತೆ ಗರ್ಭಿಣಿಯಾಗಿದ್ದಾಗ ಪತಿ ಅವರನ್ನು ತೊರೆದರು. ಒಂದು ಹಂತದಲ್ಲಿ, ಅವರ ಸ್ವಂತ ತಾಯಿ ಹಾಗೂ ಊರಿನವರೇ ಸಹಾಯ ಮಾಡಲು ನಿರಾಕರಿಸಿದ್ದರಿಂದ, ಸಪ್ಕಾಲ್ ತನ್ನ ಹೆಣ್ಣು ಮಕ್ಕಳನ್ನು ಬೆಳೆಸಲು ಭಿಕ್ಷಾಟನೆಯನ್ನು ಆಶ್ರಯಿಸಬೇಕಾಯಿತು.

ಆದಾಗ್ಯೂ, ಈ ಸಂದರ್ಭಗಳನ್ನು ನಿವಾರಿಸಿ ಅವರು ಶೀಘ್ರದಲ್ಲೇ ಅನಾಥರ ಕಲ್ಯಾಣಕ್ಕಾಗಿ ಕೆಲಸ ಮಾಡಲು ಪ್ರಾರಂಭಿಸಿದರು. 1,050ಕ್ಕೂ ಹೆಚ್ಚು ಅನಾಥ ಮಕ್ಕಳನ್ನು ಬೆಳೆಸಿರುವ ಅವರು 207 ಅಳಿಯಂದಿರು ಮತ್ತು 36 ಸೊಸೆಯರನ್ನು ಹೊಂದಿದ್ದಾರೆ.

ಪದ್ಮಶ್ರೀ ಪ್ರಶಸ್ತಿಯ ಜೊತೆಗೆ, ಸಪ್ಕಾಲ್‌ ಅವರು ತಮ್ಮ ಜೀವಿತಾವಧಿಯಲ್ಲಿ 750ಕ್ಕೂ ಹೆಚ್ಚು ಪ್ರಶಸ್ತಿಗಳು ಮತ್ತು ಗೌರವಗಳನ್ನು ಪಡೆದಿದ್ದಾರೆ. ಪ್ರಶಸ್ತಿಯ ಹಣವನ್ನು ಅನಾಥ ಮಕ್ಕಳಿಗಾಗಿ ಆಶ್ರಯ ಮನೆಗಳನ್ನು ನಿರ್ಮಿಸಲು ಬಳಸಿದ್ದಾರೆ.

ಅವರ ಜೀವನ ಅನೇಕರಿಗೆ ಸ್ಫೂರ್ತಿಯಾಗಿದೆ. 2010ರಲ್ಲಿ, ಅವರ ಜೀವನದ ಕುರಿತು ಮರಾಠಿ ಭಾಷೆಯಲ್ಲಿ ‘ಮೀ ಸಿಂಧುತೈ ಸಪ್ಕಾಲ್’ ಚಲನಚಿತ್ರ ಬಿಡುಗಡೆಯಾಯಿತು. 54ನೇ ಲಂಡನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಈ ಸಿನಿಮಾ ಪ್ರದರ್ಶನವಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರು ಸಪ್ಕಾಲ್‌ ತಾಯಿಯವರಿಗೆ ಸಂತಾಪ ಸೂಚಿಸಿದ್ದು, “ಡಾ.ಸಿಂಧುತಾಯಿ ಸಪ್ಕಾಲ್ ಅವರು ಸಮಾಜಕ್ಕೆ ನೀಡಿರುವ ಉದಾತ್ತ ಸೇವೆಯಿಂದಾಗಿ ಸ್ಮರಣೀಯರಾಗುತ್ತಾರೆ. ಅವರ ಪ್ರಯತ್ನದಿಂದಾಗಿ ಅನೇಕ ಮಕ್ಕಳು ಉತ್ತಮ ಗುಣಮಟ್ಟದ ಜೀವನವನ್ನು ನಡೆಸುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

“ಅಳಿವಿನ ಅಂಚಿನಲ್ಲಿರುವ ಸಮುದಾಯಗಳ ನಡುವೆಯೂ ಅವರು ಸಾಕಷ್ಟು ಕೆಲಸ ಮಾಡಿದ್ದಾರೆ. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ” ಎಂದು ಪ್ರಧಾನಿ ತಿಳಿಸಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಅನಾಥ ಮಕ್ಕಳ ತಾಯಿಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. “ಸಾವಿರಾರು ಮಕ್ಕಳನ್ನು ಸಾಕಿದ ಸಪ್ಕಾಲ್ ತಾಯಿಯವರು ಸಾಕ್ಷಾತ್‌ ದೇವರ ರೂಪವಾಗಿದ್ದಾರೆ” ಎಂದಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ಬುಧವಾರ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಮಾತನಾಡಿ, “ಸಪ್ಕಾಲ್ ಅವರು ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸುತ್ತಾ ಬೆಳೆದರು. ಸಮಾಜದಿಂದ ತಿರಸ್ಕರಿಸಲ್ಪಟ್ಟವರಿಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಅವರ ಸಾವಿನಿಂದಾಗಿ ಮಹಾರಾಷ್ಟ್ರವು ತಾಯಿಯನ್ನು ಕಳೆದುಕೊಂಡಿದೆ” ಎಂದು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.


ಇದನ್ನೂ ಓದಿರಿ: ದ್ವೇಷ ಭಾಷಣ: ವಿವಾದಿತ ಕಾಳಿಚರಣ್ ಸ್ವಾಮಿಯನ್ನು ವಶಕ್ಕೆ ಪಡೆದ ಮಹಾರಾಷ್ಟ್ರ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...