Homeಮುಖಪುಟಅನಾಥ ಮಕ್ಕಳ ಮಹಾತಾಯಿ ‘ಸಿಂಧೂತಾಯಿ ಸಪ್ಕಾಲ್‌’ ನಿಧನ

ಅನಾಥ ಮಕ್ಕಳ ಮಹಾತಾಯಿ ‘ಸಿಂಧೂತಾಯಿ ಸಪ್ಕಾಲ್‌’ ನಿಧನ

- Advertisement -
- Advertisement -

ಪುಣೆ: ‌ಅನಾಥ ಮಕ್ಕಳ ತಾಯಿ ಎಂದೇ ಗುರುತಿಸಲಾದ ಸಮಾಜ ಸೇವಕಿ ಸಿಂಧೂತಾಯಿ ಸಪ್ಕಾಲ್‌ ಅವರು ಹೃದಯಾಘಾತದಿಂದಾಗಿ ಪುಣೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಪದ್ಮಶ್ರೀ ಪುರಸ್ಕೃತರಾದ ಅವರಿಗೆ 73 ವರ್ಷ ವಯಸ್ಸಾಗಿತ್ತು. ಕಡು ಬಡತನದಲ್ಲಿ ಬೆಳೆದ ಅವರು ಚಿಕ್ಕ ವಯಸ್ಸಿನಿಂದಲೇ ಅಪಾರ ಕಷ್ಟಗಳನ್ನು ಸಹಿಸಿಕೊಂಡು ಬೆಳೆದರು. ಎಲ್ಲ ಕಷ್ಟಗಳನ್ನು ಎದುರಿಸುತ್ತಲೇ ಅನಾಥ ಮಕ್ಕಳಿಗಾಗಿ ಹಲವಾರು ಸಂಸ್ಥೆಗಳನ್ನು ಸ್ಥಾಪಿಸಿದರು.

ಸಿಂಧೂತಾಯಿ ಅವರನ್ನು ಮಹಾರಾಷ್ಟ್ರದ ಪುಣೆಯಲ್ಲಿರುವ ಗ್ಯಾಲಕ್ಸಿ ಕೇರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಒಂದೂವರೆ ತಿಂಗಳ ಹಿಂದೆ ಹರ್ನಿಯಾ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಅವರು, ಮತ್ತೆ ಚೇತರಿಸಿಕೊಳ್ಳಲಿಲ್ಲ. ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಶೈಲೇಶ್ ಪುಂಟಂಬೆಕರ್ ತಿಳಿಸಿದ್ದಾರೆ.

ನವೆಂಬರ್ 14, 1948ರಂದು ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿ ಜನಿಸಿದ ಸಪ್ಕಾಲ್ ಅವರು 4ನೇ ತರಗತಿಯಲ್ಲಿ ಉತ್ತೀರ್ಣರಾದ ನಂತರ ಶಾಲೆಯನ್ನು ಬಿಡಬೇಕಾಯಿತು. 12ನೇ ವಯಸ್ಸಿನಲ್ಲಿ ಅವರಿಗೆ 32 ವರ್ಷದ ವ್ಯಕ್ತಿಯೊಂದಿಗೆ ವಿವಾಹವಾಯಿತು. ಮೂರು ಮಕ್ಕಳಿಗೆ ಜನ್ಮ ನೀಡಿದ ನಂತರ, ಮತ್ತೆ ಗರ್ಭಿಣಿಯಾಗಿದ್ದಾಗ ಪತಿ ಅವರನ್ನು ತೊರೆದರು. ಒಂದು ಹಂತದಲ್ಲಿ, ಅವರ ಸ್ವಂತ ತಾಯಿ ಹಾಗೂ ಊರಿನವರೇ ಸಹಾಯ ಮಾಡಲು ನಿರಾಕರಿಸಿದ್ದರಿಂದ, ಸಪ್ಕಾಲ್ ತನ್ನ ಹೆಣ್ಣು ಮಕ್ಕಳನ್ನು ಬೆಳೆಸಲು ಭಿಕ್ಷಾಟನೆಯನ್ನು ಆಶ್ರಯಿಸಬೇಕಾಯಿತು.

ಆದಾಗ್ಯೂ, ಈ ಸಂದರ್ಭಗಳನ್ನು ನಿವಾರಿಸಿ ಅವರು ಶೀಘ್ರದಲ್ಲೇ ಅನಾಥರ ಕಲ್ಯಾಣಕ್ಕಾಗಿ ಕೆಲಸ ಮಾಡಲು ಪ್ರಾರಂಭಿಸಿದರು. 1,050ಕ್ಕೂ ಹೆಚ್ಚು ಅನಾಥ ಮಕ್ಕಳನ್ನು ಬೆಳೆಸಿರುವ ಅವರು 207 ಅಳಿಯಂದಿರು ಮತ್ತು 36 ಸೊಸೆಯರನ್ನು ಹೊಂದಿದ್ದಾರೆ.

ಪದ್ಮಶ್ರೀ ಪ್ರಶಸ್ತಿಯ ಜೊತೆಗೆ, ಸಪ್ಕಾಲ್‌ ಅವರು ತಮ್ಮ ಜೀವಿತಾವಧಿಯಲ್ಲಿ 750ಕ್ಕೂ ಹೆಚ್ಚು ಪ್ರಶಸ್ತಿಗಳು ಮತ್ತು ಗೌರವಗಳನ್ನು ಪಡೆದಿದ್ದಾರೆ. ಪ್ರಶಸ್ತಿಯ ಹಣವನ್ನು ಅನಾಥ ಮಕ್ಕಳಿಗಾಗಿ ಆಶ್ರಯ ಮನೆಗಳನ್ನು ನಿರ್ಮಿಸಲು ಬಳಸಿದ್ದಾರೆ.

ಅವರ ಜೀವನ ಅನೇಕರಿಗೆ ಸ್ಫೂರ್ತಿಯಾಗಿದೆ. 2010ರಲ್ಲಿ, ಅವರ ಜೀವನದ ಕುರಿತು ಮರಾಠಿ ಭಾಷೆಯಲ್ಲಿ ‘ಮೀ ಸಿಂಧುತೈ ಸಪ್ಕಾಲ್’ ಚಲನಚಿತ್ರ ಬಿಡುಗಡೆಯಾಯಿತು. 54ನೇ ಲಂಡನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಈ ಸಿನಿಮಾ ಪ್ರದರ್ಶನವಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರು ಸಪ್ಕಾಲ್‌ ತಾಯಿಯವರಿಗೆ ಸಂತಾಪ ಸೂಚಿಸಿದ್ದು, “ಡಾ.ಸಿಂಧುತಾಯಿ ಸಪ್ಕಾಲ್ ಅವರು ಸಮಾಜಕ್ಕೆ ನೀಡಿರುವ ಉದಾತ್ತ ಸೇವೆಯಿಂದಾಗಿ ಸ್ಮರಣೀಯರಾಗುತ್ತಾರೆ. ಅವರ ಪ್ರಯತ್ನದಿಂದಾಗಿ ಅನೇಕ ಮಕ್ಕಳು ಉತ್ತಮ ಗುಣಮಟ್ಟದ ಜೀವನವನ್ನು ನಡೆಸುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

“ಅಳಿವಿನ ಅಂಚಿನಲ್ಲಿರುವ ಸಮುದಾಯಗಳ ನಡುವೆಯೂ ಅವರು ಸಾಕಷ್ಟು ಕೆಲಸ ಮಾಡಿದ್ದಾರೆ. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ” ಎಂದು ಪ್ರಧಾನಿ ತಿಳಿಸಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಅನಾಥ ಮಕ್ಕಳ ತಾಯಿಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. “ಸಾವಿರಾರು ಮಕ್ಕಳನ್ನು ಸಾಕಿದ ಸಪ್ಕಾಲ್ ತಾಯಿಯವರು ಸಾಕ್ಷಾತ್‌ ದೇವರ ರೂಪವಾಗಿದ್ದಾರೆ” ಎಂದಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ಬುಧವಾರ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಮಾತನಾಡಿ, “ಸಪ್ಕಾಲ್ ಅವರು ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸುತ್ತಾ ಬೆಳೆದರು. ಸಮಾಜದಿಂದ ತಿರಸ್ಕರಿಸಲ್ಪಟ್ಟವರಿಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಅವರ ಸಾವಿನಿಂದಾಗಿ ಮಹಾರಾಷ್ಟ್ರವು ತಾಯಿಯನ್ನು ಕಳೆದುಕೊಂಡಿದೆ” ಎಂದು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.


ಇದನ್ನೂ ಓದಿರಿ: ದ್ವೇಷ ಭಾಷಣ: ವಿವಾದಿತ ಕಾಳಿಚರಣ್ ಸ್ವಾಮಿಯನ್ನು ವಶಕ್ಕೆ ಪಡೆದ ಮಹಾರಾಷ್ಟ್ರ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...