Homeಮುಖಪುಟಕೀಟನಾಶಕ ರಾಸಾಯನಿಕ ಬಳಕೆ ಆರೋಪ: 'ಎವರೆಸ್ಟ್ ಫಿಶ್ ಕರಿ ಮಸಾಲಾ'ವನ್ನು ನಿಷೇಧಿಸಿದ ಸಿಂಗಾಪುರ

ಕೀಟನಾಶಕ ರಾಸಾಯನಿಕ ಬಳಕೆ ಆರೋಪ: ‘ಎವರೆಸ್ಟ್ ಫಿಶ್ ಕರಿ ಮಸಾಲಾ’ವನ್ನು ನಿಷೇಧಿಸಿದ ಸಿಂಗಾಪುರ

- Advertisement -
- Advertisement -

ಭಾರತದಿಂದ ಆಮದು ಆಗುತ್ತಿದ್ದ ‘ಎವರೆಸ್ಟ್ ಫಿಶ್ ಕರಿ ಮಸಾಲಾ’ವನ್ನು ಸಿಂಗಾಪುರ ಹಿಂಪಡೆದಿದ್ದು, ಕೀಟನಾಶಕವಾಗಿ ಕೃಷಿಗಳಿಗೆ ಬಳಸುವ ಎಥಿಲೀನ್ ಆಕ್ಸೈಡ್ ಪ್ರಮಾಣ ‘ಎವರೆಸ್ಟ್ ಫಿಶ್ ಕರಿ ಮಸಾಲಾ’ದಲ್ಲಿ ನಿಗದಿತ ದರಕ್ಕಿಂತ ಹೆಚ್ಚಿದೆ ಎಂದು ಆರೋಪಿಸಿದೆ.

ಎಥಿಲೀನ್ ಆಕ್ಸೈಡ್ ಮಾನವ ಬಳಕೆಗೆ ಸೂಕ್ತವಲ್ಲ.  ಈ ರಾಸಾಯನಿಕವು ‘ಎವರೆಸ್ಟ್ ಫಿಶ್ ಕರಿ ಮಸಾಲಾ’ದಲ್ಲಿ ಹೆಚ್ಚಾಗಿ ಕಂಡು ಬಂದಿದೆ. ‘ಎವರೆಸ್ಟ್ ಫಿಶ್ ಕರಿ ಮಸಾಲಾ’ ಉತ್ಪನ್ನವನ್ನು ಭಾರತದಿಂದ ಆಮದು ಮಾಡಿಕೊಳ್ಳಲಾಗುತ್ತದೆ. ಹಾಂಗ್ ಕಾಂಗ್‌ನ ಆಹಾರ ಸುರಕ್ಷತಾ ಕೇಂದ್ರವು ಹೊರಡಿಸಿದ ಅಧಿಸೂಚನೆ ಬಳಿಕ ಸಿಂಗಾಪುರ ಈ ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಎಥಿಲೀನ್ ಆಕ್ಸೈಡ್ ಇರುವಿಕೆಯನ್ನು ಪತ್ತೆ ಹಚ್ಚಿದ ಬಳಿಕ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

ಸಿಂಗಾಪುರ್ ಫುಡ್ ಏಜೆನ್ಸಿ ಈ ಕುರಿತು ಹೇಳಿಕೆಯನ್ನು ಹೊರಡಿಸಿದ್ದು, ಅನುಮತಿಸಿದ ಮಿತಿಗಳನ್ನು ಮೀರಿದ ಮಟ್ಟದಲ್ಲಿ ಇಥಿಲೀನ್ ಆಕ್ಸೈಡ್ ಇರುವ ಕಾರಣದಿಂದ ಹಾಂಗ್ ಕಾಂಗ್‌ನ ಆಹಾರ ಸುರಕ್ಷತೆ ಕೇಂದ್ರವು ಭಾರತದಿಂದ ಎವರೆಸ್ಟ್ ಫಿಶ್ ಕರಿ ಮಸಾಲಾವನ್ನು ಹಿಂಪಡೆಯುವ ಕುರಿತು ಅಧಿಸೂಚನೆಯನ್ನು ಹೊರಡಿಸಿದೆ ಎಂದು ಹೇಳಿದೆ.

ಇದಲ್ಲದೆ ಸಿಂಗಾಪುರ್ ಫುಡ್ ಏಜೆನ್ಸಿ, ಆಮದುದಾರರಾದ ಎಸ್ಪಿ ಮುತ್ತಯ್ಯ ಮತ್ತು ಸನ್ಸ್ ಪಿಟಿಇ Ltd.ಗೆ  ‘ಎವರೆಸ್ಟ್ ಫಿಶ್ ಕರಿ ಮಸಾಲಾ’ವನ್ನು ಅಮದು ಮಾಡಿಕೊಳ್ಳದಂತೆ ನಿರ್ದೇಶಿಸಿದೆ. ಎಥಿಲೀನ್ ಆಕ್ಸೈಡ್‌ನ್ನು   ಸಾಮಾನ್ಯವಾಗಿ ಸೂಕ್ಷ್ಮಜೀವಿಗಳನ್ನು ತಡೆಗಟ್ಟಲು ಕೃಷಿ ಉತ್ಪನ್ನಗಳಲ್ಲಿ ಬಳಸಲಾಗುತ್ತದೆ.

ಸಿಂಗಾಪುರದ ನಿಯಮಗಳ ಪ್ರಕಾರ, ಮಸಾಲೆಗಳಲ್ಲಿ ರಾಸಾಯನಿಕವನ್ನು ಅಲ್ಪ ಪ್ರಮಾಣದಲ್ಲಿ ಮಾತ್ರ ಅನುಮತಿಸಲಾಗಿದೆ ಆದರೆ ಎವರೆಸ್ಟ್ ಫಿಶ್ ಕರಿ ಮಸಾಲಾದಲ್ಲಿನ ರಾಸಾಯನಿಕದ ಮಟ್ಟವು ಗ್ರಾಹಕರಿಗೆ ಸಂಭಾವ್ಯ ಆರೋಗ್ಯ ಅಪಾಯವನ್ನುಂಟುಮಾಡುತ್ತದೆ. ಈ ಉತ್ಪನ್ನವನ್ನು ಖರೀದಿಸಿದವರು ವೈದ್ಯರ ಸಲಹೆಯನ್ನು ಪಡೆಯಬೇಕು. ಗ್ರಾಹಕರು ಈ ಕುರಿತು ವಿಚಾರಣೆಗಾಗಿ ತಮ್ಮ ಖರೀದಿ ಕೇಂದ್ರವನ್ನು ಸಂಪರ್ಕಿಸಬೇಕು ಎಂದು ಸಿಂಗಾಪುರ ಫುಡ್ ಏಜೆನ್ಸಿ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನು ಓದಿ: ಲೋಕಸಭೆ ಚುನಾವಣೆ: ಎಕ್ಸಿಟ್ ಪೋಲ್ ಪ್ರಸಾರ ಮಾಡದಂತೆ ನಿಷೇಧ ವಿಧಿಸಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...