Homeಅಂತರಾಷ್ಟ್ರೀಯ'ಕಲಿಕೆ ಒಂದು ಸ್ಪರ್ಧೆಯಲ್ಲ’ :ಸಿಂಗಾಪುರದಲ್ಲಿ ಇನ್ಮುಂದೆ ವಿದ್ಯಾರ್ಥಿಗಳಿಗೆ ಪರೀಕ್ಷೆ, ರ್‍ಯಾಂಕ್‌ ಇಲ್ಲ..

‘ಕಲಿಕೆ ಒಂದು ಸ್ಪರ್ಧೆಯಲ್ಲ’ :ಸಿಂಗಾಪುರದಲ್ಲಿ ಇನ್ಮುಂದೆ ವಿದ್ಯಾರ್ಥಿಗಳಿಗೆ ಪರೀಕ್ಷೆ, ರ್‍ಯಾಂಕ್‌ ಇಲ್ಲ..

- Advertisement -
- Advertisement -

ಮಗು ಕಲಿಕೆಯಲ್ಲಿ ಕೊನೆಯಲ್ಲಿರಲಿ ಅಥವಾ ಮೊದಲಿರಲಿ ಇನ್ನು ಮುಂದೆ ರ್‍ಯಾಂಕ್‌ ನೀಡುವುದಿಲ್ಲ, ಉತ್ತೀರ್ಣ ಮತ್ತು ಅನುತ್ತೀರ್ಣ ಎಂದು ವಿಭಾಗ ಮಾಡುವುದಿಲ್ಲ ಎಂದು ಸಿಂಗಾಪುರ ಸರ್ಕಾರ ಘೋಷಿಸಿದೆ.

ಮಕ್ಕಳಿಗೆ ‘ಕಲಿಕೆಯೊಂದು ಸ್ಪರ್ಧೆಯಲ್ಲ’ ಎಂಬುದನ್ನು ಮನದಟ್ಟು ಮಾಡಿಕೊಡಲು ಸಿಂಗಾಪುರದಲ್ಲಿ ಮುಂದಿನ ವರ್ಷದಿಂದ ಹೊಸ ವಿಧಾನವನ್ನು ಜಾರಿ ಮಾಡಲು ಸರ್ಕಾರ ನಿರ್ಧರಿಸಿದೆ. ಪ್ರಾಥಮಿಕ ಮತ್ತು ಪ್ರೌಢಶಾಲೆ ಮಕ್ಕಳಿಗೆ ರ್‍ಯಾಂಕ್‌ ನೀಡದಿರಲು ಮತ್ತು ಮೊದಲು ಕೊನೆ ಎಂದು ಘೋಷಿಸದಿರಲು ಸಿಂಗಾಪುರ ಶಿಕ್ಷಣ ಮಂತ್ರಿ ಒಂಗ್ ಯೇ ಕುಂಗ್ ನಿರ್ಧರಿಸಿದ್ದಾರೆ.

ವರ್ಗ ಮತ್ತು ಮಟ್ಟದ ಸರಾಸರಿ, ಕನಿಷ್ಠ ಮತ್ತು ಗರಿಷ್ಠ ಅಂಕಗಳು, ನಿರ್ದಿಷ್ಟ ಅಂಕ ಪಡೆಯುವಲ್ಲಿ ವಿಫಲತೆ ಮತ್ತು ಅದನ್ನು ಬಣ್ಣದ ಪೆನ್ನುಗಳಿಂದ ಗುರುತಿಸಿರುವುದು, ವರ್ಷಾಂತ್ಯದ ಪರೀಕ್ಷೆಗಳಲ್ಲಿ ಪಾಸ್ ಆಗುವುದು ಅಥವಾ ಫೇಲ್ ಆಗುವುದು, ವಿಷಯದಲ್ಲಿ ಸರಾಸರಿ ಶ್ರೇಣಿ, ಒಟ್ಟು ಅಂಕಗಳು ವಿದ್ಯಾರ್ಥಿಯ ಸ್ಥಾನವನ್ನು ತೋರಿಸುವುದನ್ನು ನಿಲ್ಲಿಸಲು ಸರ್ಕಾರ ನಿರ್ಧರಿಸಿದೆ.

ಎಲ್1ಆರ್5 ( ಇಂಗ್ಲೀಷ್ ಜತೆಗೆ ಇತರೆ ಐದು ವಿಷಯ), ಎಲ್1ಆರ್4, ಇಎಂಬಿ3 (ಇಂಗ್ಲೀಷ್, ಗಣಿತ ಹಾಗೂ 3 ಉತ್ತಮ ವಿಷಯಗಳು) ಲೋವರ್ ಸೆಕೆಂಡರಿ ಹಂತದಲ್ಲಿ ಇಎಂಬಿ1 ವಿಷಯಗಳಿವೆ. ಶೈಕ್ಷಣಿಕ ಸಚಿವಾಲಯ ಸೆಪ್ಟಂಬರ್ 28ರಂದು ಪ್ರತಿ ವಿದ್ಯಾರ್ಥಿಗಳ ಓದುವ ಪ್ರಕ್ರಿಯೆಯತ್ತ ಗಮನಹರಿಸಬೇಕು. ವಿದ್ಯಾರ್ಥಿಗಳ ಕಲಿಕಾ ಮಟ್ಟ ಹೇಗಿದೆ..? ಅವರಿಗೆ ಕಲಿಕೆಯಲ್ಲಿ ಆಸಕ್ತಿ ಹೊಂದುವಂತೆ ಮಾಡಲು ಯಾವ ಕ್ರಮ ಕೈಗೊಳ್ಳಬೇಕು, ವಿದ್ಯಾರ್ಥಿಗಳ ನಡುವೆ ಹೋಲಿಕೆ ಮಾಡುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು.

‘ಮುಂದಿನ ವರ್ಷದಿಂದ ಪ್ರಾಥಮಿಕ ಹಂತದಿಂದ ಸೆಕೆಂಡರಿ ಹಂತದವರೆಗಿನ ಎಲ್ಲಾ ಪರೀಕ್ಷೆಗಳನ್ನೂ ತೆಗೆದು ಹಾಕಲಾಗುವುದು. ವಿದ್ಯಾರ್ಥಿಗಳಿಗೆ ಬರೆಯುವ ಪರೀಕ್ಷೆ ಹಾಗೂ ಮೌಲ್ಯಮಾಪನದ ದರ್ಜೆಯನ್ನು ನೀಡುವುದಿಲ್ಲ’ ಎಂದು ಹೇಳಿದೆ. ‘ಮಕ್ಕಳಿಗೆ, ಶಿಕ್ಷಕರು ಪ್ರಶ್ನೋತ್ತರ ಮಾಲಿಕೆ, ಮನೆಗೆಲಸ, ಕಲಿತ ಪಾಠ ಅಥವಾ ವಿಷಯದ ಬಗ್ಗೆ ಚರ್ಚೆ ನಡೆಸಬೇಕು. ವಿದ್ಯಾರ್ಥಿಗಳಲ್ಲಿ ಈ ಮೂಲಕ ಆತ್ಮವಿಶ್ವಾಸ ಮತ್ತು ಕಲಿಕೆಯ ಬಗ್ಗೆ ಜ್ಞಾನ ಒದಗಿಸಬೇಕು. ಅಂಕಗಳು ಮತ್ತು ಶ್ರೇಣಿಯ ಬದಲು ಈ ಹಂತಗಳನ್ನು ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಬಳಕೆ ಮಾಡಿಕೊಳ್ಳಬೇಕು’ ಎಂದು ಹೇಳಿದೆ. ಆಗಾಗ ಪಾಲಕರ ಭೇಟಿ ಕಾರ್ಯಕ್ರಮ ಏರ್ಪಡಿಸಬೇಕು. ಮಕ್ಕಳ ಶೈಕ್ಷಣಿಕ ಪ್ರಗತಿ ಬಗ್ಗೆ ಪಾಲಕರು ನಿರಂತರವಾಗಿ ವರದಿ ಪಡೆಯಬೇಕು ಎಂದು ಹೇಳಿದೆ.

ಕಳೆದ ವಾರ 1700 ಶಾಲಾ ಮುಖ್ಯಸ್ಥರನ್ನು ಉದ್ದೇಶಿಸಿ ಮಾತನಾಡಿದ ಒಂಗ್ ಯೇ ಕುಂಗ್, ಮಕ್ಕಳ ಪ್ರಗತಿ, ಉತ್ತಮ ಕಾರ್ಯಗಳನ್ನು ಶಿಕ್ಷಕರು ಶ್ಲಾಘಿಸಬೇಕು ಮತ್ತು ಮೆಚ್ಚುಗೆ ವ್ಯಕ್ತಪಡಿಸಿ, ಹೊಸ ಹೊಸ ಅನ್ವೇಷಣೆಗಳಿಗೆ ಪ್ರೋತ್ಸಾಹ ನೀಡಬೇಕು. ಮಕ್ಕಳ ಸಾಧನೆ ಬಗ್ಗೆ ಮುಕ್ತವಾಗಿ, ಭೇದಭಾವವಿಲ್ಲದೇ ಶ್ಲಾಘಿಸಬೇಕು. ಹೀಗಾದಾಗ ಮಾತ್ರ ಕಲಿಕೆ ಒಂದು ಸ್ಪರ್ಧೆಯಲ್ಲ ಎಂಬ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಲು ಸಾಧ್ಯ ಎಂದು ಹೇಳಿದ್ದಾರೆ. ಈ ಮೂಲಕ ಕಲಿಕೆ ಎಂದರೆ ಸ್ಪರ್ಧೆ ಎಂದು ಭಾವಿಸಿರುವ ಮಕ್ಕಳ ಮನಸ್ಥಿತಿಯಲ್ಲಿ ಬದಲಾವಣೆ ತರಲು ಸಿಂಗಾಪುರ ಸರ್ಕಾರ ಮುಂದಡಿಯಿಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...