Homeಅಂತರಾಷ್ಟ್ರೀಯ'ಕಲಿಕೆ ಒಂದು ಸ್ಪರ್ಧೆಯಲ್ಲ’ :ಸಿಂಗಾಪುರದಲ್ಲಿ ಇನ್ಮುಂದೆ ವಿದ್ಯಾರ್ಥಿಗಳಿಗೆ ಪರೀಕ್ಷೆ, ರ್‍ಯಾಂಕ್‌ ಇಲ್ಲ..

‘ಕಲಿಕೆ ಒಂದು ಸ್ಪರ್ಧೆಯಲ್ಲ’ :ಸಿಂಗಾಪುರದಲ್ಲಿ ಇನ್ಮುಂದೆ ವಿದ್ಯಾರ್ಥಿಗಳಿಗೆ ಪರೀಕ್ಷೆ, ರ್‍ಯಾಂಕ್‌ ಇಲ್ಲ..

- Advertisement -
- Advertisement -

ಮಗು ಕಲಿಕೆಯಲ್ಲಿ ಕೊನೆಯಲ್ಲಿರಲಿ ಅಥವಾ ಮೊದಲಿರಲಿ ಇನ್ನು ಮುಂದೆ ರ್‍ಯಾಂಕ್‌ ನೀಡುವುದಿಲ್ಲ, ಉತ್ತೀರ್ಣ ಮತ್ತು ಅನುತ್ತೀರ್ಣ ಎಂದು ವಿಭಾಗ ಮಾಡುವುದಿಲ್ಲ ಎಂದು ಸಿಂಗಾಪುರ ಸರ್ಕಾರ ಘೋಷಿಸಿದೆ.

ಮಕ್ಕಳಿಗೆ ‘ಕಲಿಕೆಯೊಂದು ಸ್ಪರ್ಧೆಯಲ್ಲ’ ಎಂಬುದನ್ನು ಮನದಟ್ಟು ಮಾಡಿಕೊಡಲು ಸಿಂಗಾಪುರದಲ್ಲಿ ಮುಂದಿನ ವರ್ಷದಿಂದ ಹೊಸ ವಿಧಾನವನ್ನು ಜಾರಿ ಮಾಡಲು ಸರ್ಕಾರ ನಿರ್ಧರಿಸಿದೆ. ಪ್ರಾಥಮಿಕ ಮತ್ತು ಪ್ರೌಢಶಾಲೆ ಮಕ್ಕಳಿಗೆ ರ್‍ಯಾಂಕ್‌ ನೀಡದಿರಲು ಮತ್ತು ಮೊದಲು ಕೊನೆ ಎಂದು ಘೋಷಿಸದಿರಲು ಸಿಂಗಾಪುರ ಶಿಕ್ಷಣ ಮಂತ್ರಿ ಒಂಗ್ ಯೇ ಕುಂಗ್ ನಿರ್ಧರಿಸಿದ್ದಾರೆ.

ವರ್ಗ ಮತ್ತು ಮಟ್ಟದ ಸರಾಸರಿ, ಕನಿಷ್ಠ ಮತ್ತು ಗರಿಷ್ಠ ಅಂಕಗಳು, ನಿರ್ದಿಷ್ಟ ಅಂಕ ಪಡೆಯುವಲ್ಲಿ ವಿಫಲತೆ ಮತ್ತು ಅದನ್ನು ಬಣ್ಣದ ಪೆನ್ನುಗಳಿಂದ ಗುರುತಿಸಿರುವುದು, ವರ್ಷಾಂತ್ಯದ ಪರೀಕ್ಷೆಗಳಲ್ಲಿ ಪಾಸ್ ಆಗುವುದು ಅಥವಾ ಫೇಲ್ ಆಗುವುದು, ವಿಷಯದಲ್ಲಿ ಸರಾಸರಿ ಶ್ರೇಣಿ, ಒಟ್ಟು ಅಂಕಗಳು ವಿದ್ಯಾರ್ಥಿಯ ಸ್ಥಾನವನ್ನು ತೋರಿಸುವುದನ್ನು ನಿಲ್ಲಿಸಲು ಸರ್ಕಾರ ನಿರ್ಧರಿಸಿದೆ.

ಎಲ್1ಆರ್5 ( ಇಂಗ್ಲೀಷ್ ಜತೆಗೆ ಇತರೆ ಐದು ವಿಷಯ), ಎಲ್1ಆರ್4, ಇಎಂಬಿ3 (ಇಂಗ್ಲೀಷ್, ಗಣಿತ ಹಾಗೂ 3 ಉತ್ತಮ ವಿಷಯಗಳು) ಲೋವರ್ ಸೆಕೆಂಡರಿ ಹಂತದಲ್ಲಿ ಇಎಂಬಿ1 ವಿಷಯಗಳಿವೆ. ಶೈಕ್ಷಣಿಕ ಸಚಿವಾಲಯ ಸೆಪ್ಟಂಬರ್ 28ರಂದು ಪ್ರತಿ ವಿದ್ಯಾರ್ಥಿಗಳ ಓದುವ ಪ್ರಕ್ರಿಯೆಯತ್ತ ಗಮನಹರಿಸಬೇಕು. ವಿದ್ಯಾರ್ಥಿಗಳ ಕಲಿಕಾ ಮಟ್ಟ ಹೇಗಿದೆ..? ಅವರಿಗೆ ಕಲಿಕೆಯಲ್ಲಿ ಆಸಕ್ತಿ ಹೊಂದುವಂತೆ ಮಾಡಲು ಯಾವ ಕ್ರಮ ಕೈಗೊಳ್ಳಬೇಕು, ವಿದ್ಯಾರ್ಥಿಗಳ ನಡುವೆ ಹೋಲಿಕೆ ಮಾಡುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು.

‘ಮುಂದಿನ ವರ್ಷದಿಂದ ಪ್ರಾಥಮಿಕ ಹಂತದಿಂದ ಸೆಕೆಂಡರಿ ಹಂತದವರೆಗಿನ ಎಲ್ಲಾ ಪರೀಕ್ಷೆಗಳನ್ನೂ ತೆಗೆದು ಹಾಕಲಾಗುವುದು. ವಿದ್ಯಾರ್ಥಿಗಳಿಗೆ ಬರೆಯುವ ಪರೀಕ್ಷೆ ಹಾಗೂ ಮೌಲ್ಯಮಾಪನದ ದರ್ಜೆಯನ್ನು ನೀಡುವುದಿಲ್ಲ’ ಎಂದು ಹೇಳಿದೆ. ‘ಮಕ್ಕಳಿಗೆ, ಶಿಕ್ಷಕರು ಪ್ರಶ್ನೋತ್ತರ ಮಾಲಿಕೆ, ಮನೆಗೆಲಸ, ಕಲಿತ ಪಾಠ ಅಥವಾ ವಿಷಯದ ಬಗ್ಗೆ ಚರ್ಚೆ ನಡೆಸಬೇಕು. ವಿದ್ಯಾರ್ಥಿಗಳಲ್ಲಿ ಈ ಮೂಲಕ ಆತ್ಮವಿಶ್ವಾಸ ಮತ್ತು ಕಲಿಕೆಯ ಬಗ್ಗೆ ಜ್ಞಾನ ಒದಗಿಸಬೇಕು. ಅಂಕಗಳು ಮತ್ತು ಶ್ರೇಣಿಯ ಬದಲು ಈ ಹಂತಗಳನ್ನು ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಬಳಕೆ ಮಾಡಿಕೊಳ್ಳಬೇಕು’ ಎಂದು ಹೇಳಿದೆ. ಆಗಾಗ ಪಾಲಕರ ಭೇಟಿ ಕಾರ್ಯಕ್ರಮ ಏರ್ಪಡಿಸಬೇಕು. ಮಕ್ಕಳ ಶೈಕ್ಷಣಿಕ ಪ್ರಗತಿ ಬಗ್ಗೆ ಪಾಲಕರು ನಿರಂತರವಾಗಿ ವರದಿ ಪಡೆಯಬೇಕು ಎಂದು ಹೇಳಿದೆ.

ಕಳೆದ ವಾರ 1700 ಶಾಲಾ ಮುಖ್ಯಸ್ಥರನ್ನು ಉದ್ದೇಶಿಸಿ ಮಾತನಾಡಿದ ಒಂಗ್ ಯೇ ಕುಂಗ್, ಮಕ್ಕಳ ಪ್ರಗತಿ, ಉತ್ತಮ ಕಾರ್ಯಗಳನ್ನು ಶಿಕ್ಷಕರು ಶ್ಲಾಘಿಸಬೇಕು ಮತ್ತು ಮೆಚ್ಚುಗೆ ವ್ಯಕ್ತಪಡಿಸಿ, ಹೊಸ ಹೊಸ ಅನ್ವೇಷಣೆಗಳಿಗೆ ಪ್ರೋತ್ಸಾಹ ನೀಡಬೇಕು. ಮಕ್ಕಳ ಸಾಧನೆ ಬಗ್ಗೆ ಮುಕ್ತವಾಗಿ, ಭೇದಭಾವವಿಲ್ಲದೇ ಶ್ಲಾಘಿಸಬೇಕು. ಹೀಗಾದಾಗ ಮಾತ್ರ ಕಲಿಕೆ ಒಂದು ಸ್ಪರ್ಧೆಯಲ್ಲ ಎಂಬ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಲು ಸಾಧ್ಯ ಎಂದು ಹೇಳಿದ್ದಾರೆ. ಈ ಮೂಲಕ ಕಲಿಕೆ ಎಂದರೆ ಸ್ಪರ್ಧೆ ಎಂದು ಭಾವಿಸಿರುವ ಮಕ್ಕಳ ಮನಸ್ಥಿತಿಯಲ್ಲಿ ಬದಲಾವಣೆ ತರಲು ಸಿಂಗಾಪುರ ಸರ್ಕಾರ ಮುಂದಡಿಯಿಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...