Homeಅಂತರಾಷ್ಟ್ರೀಯ'ಕಲಿಕೆ ಒಂದು ಸ್ಪರ್ಧೆಯಲ್ಲ’ :ಸಿಂಗಾಪುರದಲ್ಲಿ ಇನ್ಮುಂದೆ ವಿದ್ಯಾರ್ಥಿಗಳಿಗೆ ಪರೀಕ್ಷೆ, ರ್‍ಯಾಂಕ್‌ ಇಲ್ಲ..

‘ಕಲಿಕೆ ಒಂದು ಸ್ಪರ್ಧೆಯಲ್ಲ’ :ಸಿಂಗಾಪುರದಲ್ಲಿ ಇನ್ಮುಂದೆ ವಿದ್ಯಾರ್ಥಿಗಳಿಗೆ ಪರೀಕ್ಷೆ, ರ್‍ಯಾಂಕ್‌ ಇಲ್ಲ..

- Advertisement -
- Advertisement -

ಮಗು ಕಲಿಕೆಯಲ್ಲಿ ಕೊನೆಯಲ್ಲಿರಲಿ ಅಥವಾ ಮೊದಲಿರಲಿ ಇನ್ನು ಮುಂದೆ ರ್‍ಯಾಂಕ್‌ ನೀಡುವುದಿಲ್ಲ, ಉತ್ತೀರ್ಣ ಮತ್ತು ಅನುತ್ತೀರ್ಣ ಎಂದು ವಿಭಾಗ ಮಾಡುವುದಿಲ್ಲ ಎಂದು ಸಿಂಗಾಪುರ ಸರ್ಕಾರ ಘೋಷಿಸಿದೆ.

ಮಕ್ಕಳಿಗೆ ‘ಕಲಿಕೆಯೊಂದು ಸ್ಪರ್ಧೆಯಲ್ಲ’ ಎಂಬುದನ್ನು ಮನದಟ್ಟು ಮಾಡಿಕೊಡಲು ಸಿಂಗಾಪುರದಲ್ಲಿ ಮುಂದಿನ ವರ್ಷದಿಂದ ಹೊಸ ವಿಧಾನವನ್ನು ಜಾರಿ ಮಾಡಲು ಸರ್ಕಾರ ನಿರ್ಧರಿಸಿದೆ. ಪ್ರಾಥಮಿಕ ಮತ್ತು ಪ್ರೌಢಶಾಲೆ ಮಕ್ಕಳಿಗೆ ರ್‍ಯಾಂಕ್‌ ನೀಡದಿರಲು ಮತ್ತು ಮೊದಲು ಕೊನೆ ಎಂದು ಘೋಷಿಸದಿರಲು ಸಿಂಗಾಪುರ ಶಿಕ್ಷಣ ಮಂತ್ರಿ ಒಂಗ್ ಯೇ ಕುಂಗ್ ನಿರ್ಧರಿಸಿದ್ದಾರೆ.

ವರ್ಗ ಮತ್ತು ಮಟ್ಟದ ಸರಾಸರಿ, ಕನಿಷ್ಠ ಮತ್ತು ಗರಿಷ್ಠ ಅಂಕಗಳು, ನಿರ್ದಿಷ್ಟ ಅಂಕ ಪಡೆಯುವಲ್ಲಿ ವಿಫಲತೆ ಮತ್ತು ಅದನ್ನು ಬಣ್ಣದ ಪೆನ್ನುಗಳಿಂದ ಗುರುತಿಸಿರುವುದು, ವರ್ಷಾಂತ್ಯದ ಪರೀಕ್ಷೆಗಳಲ್ಲಿ ಪಾಸ್ ಆಗುವುದು ಅಥವಾ ಫೇಲ್ ಆಗುವುದು, ವಿಷಯದಲ್ಲಿ ಸರಾಸರಿ ಶ್ರೇಣಿ, ಒಟ್ಟು ಅಂಕಗಳು ವಿದ್ಯಾರ್ಥಿಯ ಸ್ಥಾನವನ್ನು ತೋರಿಸುವುದನ್ನು ನಿಲ್ಲಿಸಲು ಸರ್ಕಾರ ನಿರ್ಧರಿಸಿದೆ.

ಎಲ್1ಆರ್5 ( ಇಂಗ್ಲೀಷ್ ಜತೆಗೆ ಇತರೆ ಐದು ವಿಷಯ), ಎಲ್1ಆರ್4, ಇಎಂಬಿ3 (ಇಂಗ್ಲೀಷ್, ಗಣಿತ ಹಾಗೂ 3 ಉತ್ತಮ ವಿಷಯಗಳು) ಲೋವರ್ ಸೆಕೆಂಡರಿ ಹಂತದಲ್ಲಿ ಇಎಂಬಿ1 ವಿಷಯಗಳಿವೆ. ಶೈಕ್ಷಣಿಕ ಸಚಿವಾಲಯ ಸೆಪ್ಟಂಬರ್ 28ರಂದು ಪ್ರತಿ ವಿದ್ಯಾರ್ಥಿಗಳ ಓದುವ ಪ್ರಕ್ರಿಯೆಯತ್ತ ಗಮನಹರಿಸಬೇಕು. ವಿದ್ಯಾರ್ಥಿಗಳ ಕಲಿಕಾ ಮಟ್ಟ ಹೇಗಿದೆ..? ಅವರಿಗೆ ಕಲಿಕೆಯಲ್ಲಿ ಆಸಕ್ತಿ ಹೊಂದುವಂತೆ ಮಾಡಲು ಯಾವ ಕ್ರಮ ಕೈಗೊಳ್ಳಬೇಕು, ವಿದ್ಯಾರ್ಥಿಗಳ ನಡುವೆ ಹೋಲಿಕೆ ಮಾಡುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು.

‘ಮುಂದಿನ ವರ್ಷದಿಂದ ಪ್ರಾಥಮಿಕ ಹಂತದಿಂದ ಸೆಕೆಂಡರಿ ಹಂತದವರೆಗಿನ ಎಲ್ಲಾ ಪರೀಕ್ಷೆಗಳನ್ನೂ ತೆಗೆದು ಹಾಕಲಾಗುವುದು. ವಿದ್ಯಾರ್ಥಿಗಳಿಗೆ ಬರೆಯುವ ಪರೀಕ್ಷೆ ಹಾಗೂ ಮೌಲ್ಯಮಾಪನದ ದರ್ಜೆಯನ್ನು ನೀಡುವುದಿಲ್ಲ’ ಎಂದು ಹೇಳಿದೆ. ‘ಮಕ್ಕಳಿಗೆ, ಶಿಕ್ಷಕರು ಪ್ರಶ್ನೋತ್ತರ ಮಾಲಿಕೆ, ಮನೆಗೆಲಸ, ಕಲಿತ ಪಾಠ ಅಥವಾ ವಿಷಯದ ಬಗ್ಗೆ ಚರ್ಚೆ ನಡೆಸಬೇಕು. ವಿದ್ಯಾರ್ಥಿಗಳಲ್ಲಿ ಈ ಮೂಲಕ ಆತ್ಮವಿಶ್ವಾಸ ಮತ್ತು ಕಲಿಕೆಯ ಬಗ್ಗೆ ಜ್ಞಾನ ಒದಗಿಸಬೇಕು. ಅಂಕಗಳು ಮತ್ತು ಶ್ರೇಣಿಯ ಬದಲು ಈ ಹಂತಗಳನ್ನು ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಬಳಕೆ ಮಾಡಿಕೊಳ್ಳಬೇಕು’ ಎಂದು ಹೇಳಿದೆ. ಆಗಾಗ ಪಾಲಕರ ಭೇಟಿ ಕಾರ್ಯಕ್ರಮ ಏರ್ಪಡಿಸಬೇಕು. ಮಕ್ಕಳ ಶೈಕ್ಷಣಿಕ ಪ್ರಗತಿ ಬಗ್ಗೆ ಪಾಲಕರು ನಿರಂತರವಾಗಿ ವರದಿ ಪಡೆಯಬೇಕು ಎಂದು ಹೇಳಿದೆ.

ಕಳೆದ ವಾರ 1700 ಶಾಲಾ ಮುಖ್ಯಸ್ಥರನ್ನು ಉದ್ದೇಶಿಸಿ ಮಾತನಾಡಿದ ಒಂಗ್ ಯೇ ಕುಂಗ್, ಮಕ್ಕಳ ಪ್ರಗತಿ, ಉತ್ತಮ ಕಾರ್ಯಗಳನ್ನು ಶಿಕ್ಷಕರು ಶ್ಲಾಘಿಸಬೇಕು ಮತ್ತು ಮೆಚ್ಚುಗೆ ವ್ಯಕ್ತಪಡಿಸಿ, ಹೊಸ ಹೊಸ ಅನ್ವೇಷಣೆಗಳಿಗೆ ಪ್ರೋತ್ಸಾಹ ನೀಡಬೇಕು. ಮಕ್ಕಳ ಸಾಧನೆ ಬಗ್ಗೆ ಮುಕ್ತವಾಗಿ, ಭೇದಭಾವವಿಲ್ಲದೇ ಶ್ಲಾಘಿಸಬೇಕು. ಹೀಗಾದಾಗ ಮಾತ್ರ ಕಲಿಕೆ ಒಂದು ಸ್ಪರ್ಧೆಯಲ್ಲ ಎಂಬ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಲು ಸಾಧ್ಯ ಎಂದು ಹೇಳಿದ್ದಾರೆ. ಈ ಮೂಲಕ ಕಲಿಕೆ ಎಂದರೆ ಸ್ಪರ್ಧೆ ಎಂದು ಭಾವಿಸಿರುವ ಮಕ್ಕಳ ಮನಸ್ಥಿತಿಯಲ್ಲಿ ಬದಲಾವಣೆ ತರಲು ಸಿಂಗಾಪುರ ಸರ್ಕಾರ ಮುಂದಡಿಯಿಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...