Homeಅಂತರಾಷ್ಟ್ರೀಯ'ಕಲಿಕೆ ಒಂದು ಸ್ಪರ್ಧೆಯಲ್ಲ’ :ಸಿಂಗಾಪುರದಲ್ಲಿ ಇನ್ಮುಂದೆ ವಿದ್ಯಾರ್ಥಿಗಳಿಗೆ ಪರೀಕ್ಷೆ, ರ್‍ಯಾಂಕ್‌ ಇಲ್ಲ..

‘ಕಲಿಕೆ ಒಂದು ಸ್ಪರ್ಧೆಯಲ್ಲ’ :ಸಿಂಗಾಪುರದಲ್ಲಿ ಇನ್ಮುಂದೆ ವಿದ್ಯಾರ್ಥಿಗಳಿಗೆ ಪರೀಕ್ಷೆ, ರ್‍ಯಾಂಕ್‌ ಇಲ್ಲ..

- Advertisement -
- Advertisement -

ಮಗು ಕಲಿಕೆಯಲ್ಲಿ ಕೊನೆಯಲ್ಲಿರಲಿ ಅಥವಾ ಮೊದಲಿರಲಿ ಇನ್ನು ಮುಂದೆ ರ್‍ಯಾಂಕ್‌ ನೀಡುವುದಿಲ್ಲ, ಉತ್ತೀರ್ಣ ಮತ್ತು ಅನುತ್ತೀರ್ಣ ಎಂದು ವಿಭಾಗ ಮಾಡುವುದಿಲ್ಲ ಎಂದು ಸಿಂಗಾಪುರ ಸರ್ಕಾರ ಘೋಷಿಸಿದೆ.

ಮಕ್ಕಳಿಗೆ ‘ಕಲಿಕೆಯೊಂದು ಸ್ಪರ್ಧೆಯಲ್ಲ’ ಎಂಬುದನ್ನು ಮನದಟ್ಟು ಮಾಡಿಕೊಡಲು ಸಿಂಗಾಪುರದಲ್ಲಿ ಮುಂದಿನ ವರ್ಷದಿಂದ ಹೊಸ ವಿಧಾನವನ್ನು ಜಾರಿ ಮಾಡಲು ಸರ್ಕಾರ ನಿರ್ಧರಿಸಿದೆ. ಪ್ರಾಥಮಿಕ ಮತ್ತು ಪ್ರೌಢಶಾಲೆ ಮಕ್ಕಳಿಗೆ ರ್‍ಯಾಂಕ್‌ ನೀಡದಿರಲು ಮತ್ತು ಮೊದಲು ಕೊನೆ ಎಂದು ಘೋಷಿಸದಿರಲು ಸಿಂಗಾಪುರ ಶಿಕ್ಷಣ ಮಂತ್ರಿ ಒಂಗ್ ಯೇ ಕುಂಗ್ ನಿರ್ಧರಿಸಿದ್ದಾರೆ.

ವರ್ಗ ಮತ್ತು ಮಟ್ಟದ ಸರಾಸರಿ, ಕನಿಷ್ಠ ಮತ್ತು ಗರಿಷ್ಠ ಅಂಕಗಳು, ನಿರ್ದಿಷ್ಟ ಅಂಕ ಪಡೆಯುವಲ್ಲಿ ವಿಫಲತೆ ಮತ್ತು ಅದನ್ನು ಬಣ್ಣದ ಪೆನ್ನುಗಳಿಂದ ಗುರುತಿಸಿರುವುದು, ವರ್ಷಾಂತ್ಯದ ಪರೀಕ್ಷೆಗಳಲ್ಲಿ ಪಾಸ್ ಆಗುವುದು ಅಥವಾ ಫೇಲ್ ಆಗುವುದು, ವಿಷಯದಲ್ಲಿ ಸರಾಸರಿ ಶ್ರೇಣಿ, ಒಟ್ಟು ಅಂಕಗಳು ವಿದ್ಯಾರ್ಥಿಯ ಸ್ಥಾನವನ್ನು ತೋರಿಸುವುದನ್ನು ನಿಲ್ಲಿಸಲು ಸರ್ಕಾರ ನಿರ್ಧರಿಸಿದೆ.

ಎಲ್1ಆರ್5 ( ಇಂಗ್ಲೀಷ್ ಜತೆಗೆ ಇತರೆ ಐದು ವಿಷಯ), ಎಲ್1ಆರ್4, ಇಎಂಬಿ3 (ಇಂಗ್ಲೀಷ್, ಗಣಿತ ಹಾಗೂ 3 ಉತ್ತಮ ವಿಷಯಗಳು) ಲೋವರ್ ಸೆಕೆಂಡರಿ ಹಂತದಲ್ಲಿ ಇಎಂಬಿ1 ವಿಷಯಗಳಿವೆ. ಶೈಕ್ಷಣಿಕ ಸಚಿವಾಲಯ ಸೆಪ್ಟಂಬರ್ 28ರಂದು ಪ್ರತಿ ವಿದ್ಯಾರ್ಥಿಗಳ ಓದುವ ಪ್ರಕ್ರಿಯೆಯತ್ತ ಗಮನಹರಿಸಬೇಕು. ವಿದ್ಯಾರ್ಥಿಗಳ ಕಲಿಕಾ ಮಟ್ಟ ಹೇಗಿದೆ..? ಅವರಿಗೆ ಕಲಿಕೆಯಲ್ಲಿ ಆಸಕ್ತಿ ಹೊಂದುವಂತೆ ಮಾಡಲು ಯಾವ ಕ್ರಮ ಕೈಗೊಳ್ಳಬೇಕು, ವಿದ್ಯಾರ್ಥಿಗಳ ನಡುವೆ ಹೋಲಿಕೆ ಮಾಡುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು.

‘ಮುಂದಿನ ವರ್ಷದಿಂದ ಪ್ರಾಥಮಿಕ ಹಂತದಿಂದ ಸೆಕೆಂಡರಿ ಹಂತದವರೆಗಿನ ಎಲ್ಲಾ ಪರೀಕ್ಷೆಗಳನ್ನೂ ತೆಗೆದು ಹಾಕಲಾಗುವುದು. ವಿದ್ಯಾರ್ಥಿಗಳಿಗೆ ಬರೆಯುವ ಪರೀಕ್ಷೆ ಹಾಗೂ ಮೌಲ್ಯಮಾಪನದ ದರ್ಜೆಯನ್ನು ನೀಡುವುದಿಲ್ಲ’ ಎಂದು ಹೇಳಿದೆ. ‘ಮಕ್ಕಳಿಗೆ, ಶಿಕ್ಷಕರು ಪ್ರಶ್ನೋತ್ತರ ಮಾಲಿಕೆ, ಮನೆಗೆಲಸ, ಕಲಿತ ಪಾಠ ಅಥವಾ ವಿಷಯದ ಬಗ್ಗೆ ಚರ್ಚೆ ನಡೆಸಬೇಕು. ವಿದ್ಯಾರ್ಥಿಗಳಲ್ಲಿ ಈ ಮೂಲಕ ಆತ್ಮವಿಶ್ವಾಸ ಮತ್ತು ಕಲಿಕೆಯ ಬಗ್ಗೆ ಜ್ಞಾನ ಒದಗಿಸಬೇಕು. ಅಂಕಗಳು ಮತ್ತು ಶ್ರೇಣಿಯ ಬದಲು ಈ ಹಂತಗಳನ್ನು ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಬಳಕೆ ಮಾಡಿಕೊಳ್ಳಬೇಕು’ ಎಂದು ಹೇಳಿದೆ. ಆಗಾಗ ಪಾಲಕರ ಭೇಟಿ ಕಾರ್ಯಕ್ರಮ ಏರ್ಪಡಿಸಬೇಕು. ಮಕ್ಕಳ ಶೈಕ್ಷಣಿಕ ಪ್ರಗತಿ ಬಗ್ಗೆ ಪಾಲಕರು ನಿರಂತರವಾಗಿ ವರದಿ ಪಡೆಯಬೇಕು ಎಂದು ಹೇಳಿದೆ.

ಕಳೆದ ವಾರ 1700 ಶಾಲಾ ಮುಖ್ಯಸ್ಥರನ್ನು ಉದ್ದೇಶಿಸಿ ಮಾತನಾಡಿದ ಒಂಗ್ ಯೇ ಕುಂಗ್, ಮಕ್ಕಳ ಪ್ರಗತಿ, ಉತ್ತಮ ಕಾರ್ಯಗಳನ್ನು ಶಿಕ್ಷಕರು ಶ್ಲಾಘಿಸಬೇಕು ಮತ್ತು ಮೆಚ್ಚುಗೆ ವ್ಯಕ್ತಪಡಿಸಿ, ಹೊಸ ಹೊಸ ಅನ್ವೇಷಣೆಗಳಿಗೆ ಪ್ರೋತ್ಸಾಹ ನೀಡಬೇಕು. ಮಕ್ಕಳ ಸಾಧನೆ ಬಗ್ಗೆ ಮುಕ್ತವಾಗಿ, ಭೇದಭಾವವಿಲ್ಲದೇ ಶ್ಲಾಘಿಸಬೇಕು. ಹೀಗಾದಾಗ ಮಾತ್ರ ಕಲಿಕೆ ಒಂದು ಸ್ಪರ್ಧೆಯಲ್ಲ ಎಂಬ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಲು ಸಾಧ್ಯ ಎಂದು ಹೇಳಿದ್ದಾರೆ. ಈ ಮೂಲಕ ಕಲಿಕೆ ಎಂದರೆ ಸ್ಪರ್ಧೆ ಎಂದು ಭಾವಿಸಿರುವ ಮಕ್ಕಳ ಮನಸ್ಥಿತಿಯಲ್ಲಿ ಬದಲಾವಣೆ ತರಲು ಸಿಂಗಾಪುರ ಸರ್ಕಾರ ಮುಂದಡಿಯಿಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...