Homeಅಂತರಾಷ್ಟ್ರೀಯ'ಕಲಿಕೆ ಒಂದು ಸ್ಪರ್ಧೆಯಲ್ಲ’ :ಸಿಂಗಾಪುರದಲ್ಲಿ ಇನ್ಮುಂದೆ ವಿದ್ಯಾರ್ಥಿಗಳಿಗೆ ಪರೀಕ್ಷೆ, ರ್‍ಯಾಂಕ್‌ ಇಲ್ಲ..

‘ಕಲಿಕೆ ಒಂದು ಸ್ಪರ್ಧೆಯಲ್ಲ’ :ಸಿಂಗಾಪುರದಲ್ಲಿ ಇನ್ಮುಂದೆ ವಿದ್ಯಾರ್ಥಿಗಳಿಗೆ ಪರೀಕ್ಷೆ, ರ್‍ಯಾಂಕ್‌ ಇಲ್ಲ..

- Advertisement -
- Advertisement -

ಮಗು ಕಲಿಕೆಯಲ್ಲಿ ಕೊನೆಯಲ್ಲಿರಲಿ ಅಥವಾ ಮೊದಲಿರಲಿ ಇನ್ನು ಮುಂದೆ ರ್‍ಯಾಂಕ್‌ ನೀಡುವುದಿಲ್ಲ, ಉತ್ತೀರ್ಣ ಮತ್ತು ಅನುತ್ತೀರ್ಣ ಎಂದು ವಿಭಾಗ ಮಾಡುವುದಿಲ್ಲ ಎಂದು ಸಿಂಗಾಪುರ ಸರ್ಕಾರ ಘೋಷಿಸಿದೆ.

ಮಕ್ಕಳಿಗೆ ‘ಕಲಿಕೆಯೊಂದು ಸ್ಪರ್ಧೆಯಲ್ಲ’ ಎಂಬುದನ್ನು ಮನದಟ್ಟು ಮಾಡಿಕೊಡಲು ಸಿಂಗಾಪುರದಲ್ಲಿ ಮುಂದಿನ ವರ್ಷದಿಂದ ಹೊಸ ವಿಧಾನವನ್ನು ಜಾರಿ ಮಾಡಲು ಸರ್ಕಾರ ನಿರ್ಧರಿಸಿದೆ. ಪ್ರಾಥಮಿಕ ಮತ್ತು ಪ್ರೌಢಶಾಲೆ ಮಕ್ಕಳಿಗೆ ರ್‍ಯಾಂಕ್‌ ನೀಡದಿರಲು ಮತ್ತು ಮೊದಲು ಕೊನೆ ಎಂದು ಘೋಷಿಸದಿರಲು ಸಿಂಗಾಪುರ ಶಿಕ್ಷಣ ಮಂತ್ರಿ ಒಂಗ್ ಯೇ ಕುಂಗ್ ನಿರ್ಧರಿಸಿದ್ದಾರೆ.

ವರ್ಗ ಮತ್ತು ಮಟ್ಟದ ಸರಾಸರಿ, ಕನಿಷ್ಠ ಮತ್ತು ಗರಿಷ್ಠ ಅಂಕಗಳು, ನಿರ್ದಿಷ್ಟ ಅಂಕ ಪಡೆಯುವಲ್ಲಿ ವಿಫಲತೆ ಮತ್ತು ಅದನ್ನು ಬಣ್ಣದ ಪೆನ್ನುಗಳಿಂದ ಗುರುತಿಸಿರುವುದು, ವರ್ಷಾಂತ್ಯದ ಪರೀಕ್ಷೆಗಳಲ್ಲಿ ಪಾಸ್ ಆಗುವುದು ಅಥವಾ ಫೇಲ್ ಆಗುವುದು, ವಿಷಯದಲ್ಲಿ ಸರಾಸರಿ ಶ್ರೇಣಿ, ಒಟ್ಟು ಅಂಕಗಳು ವಿದ್ಯಾರ್ಥಿಯ ಸ್ಥಾನವನ್ನು ತೋರಿಸುವುದನ್ನು ನಿಲ್ಲಿಸಲು ಸರ್ಕಾರ ನಿರ್ಧರಿಸಿದೆ.

ಎಲ್1ಆರ್5 ( ಇಂಗ್ಲೀಷ್ ಜತೆಗೆ ಇತರೆ ಐದು ವಿಷಯ), ಎಲ್1ಆರ್4, ಇಎಂಬಿ3 (ಇಂಗ್ಲೀಷ್, ಗಣಿತ ಹಾಗೂ 3 ಉತ್ತಮ ವಿಷಯಗಳು) ಲೋವರ್ ಸೆಕೆಂಡರಿ ಹಂತದಲ್ಲಿ ಇಎಂಬಿ1 ವಿಷಯಗಳಿವೆ. ಶೈಕ್ಷಣಿಕ ಸಚಿವಾಲಯ ಸೆಪ್ಟಂಬರ್ 28ರಂದು ಪ್ರತಿ ವಿದ್ಯಾರ್ಥಿಗಳ ಓದುವ ಪ್ರಕ್ರಿಯೆಯತ್ತ ಗಮನಹರಿಸಬೇಕು. ವಿದ್ಯಾರ್ಥಿಗಳ ಕಲಿಕಾ ಮಟ್ಟ ಹೇಗಿದೆ..? ಅವರಿಗೆ ಕಲಿಕೆಯಲ್ಲಿ ಆಸಕ್ತಿ ಹೊಂದುವಂತೆ ಮಾಡಲು ಯಾವ ಕ್ರಮ ಕೈಗೊಳ್ಳಬೇಕು, ವಿದ್ಯಾರ್ಥಿಗಳ ನಡುವೆ ಹೋಲಿಕೆ ಮಾಡುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು.

‘ಮುಂದಿನ ವರ್ಷದಿಂದ ಪ್ರಾಥಮಿಕ ಹಂತದಿಂದ ಸೆಕೆಂಡರಿ ಹಂತದವರೆಗಿನ ಎಲ್ಲಾ ಪರೀಕ್ಷೆಗಳನ್ನೂ ತೆಗೆದು ಹಾಕಲಾಗುವುದು. ವಿದ್ಯಾರ್ಥಿಗಳಿಗೆ ಬರೆಯುವ ಪರೀಕ್ಷೆ ಹಾಗೂ ಮೌಲ್ಯಮಾಪನದ ದರ್ಜೆಯನ್ನು ನೀಡುವುದಿಲ್ಲ’ ಎಂದು ಹೇಳಿದೆ. ‘ಮಕ್ಕಳಿಗೆ, ಶಿಕ್ಷಕರು ಪ್ರಶ್ನೋತ್ತರ ಮಾಲಿಕೆ, ಮನೆಗೆಲಸ, ಕಲಿತ ಪಾಠ ಅಥವಾ ವಿಷಯದ ಬಗ್ಗೆ ಚರ್ಚೆ ನಡೆಸಬೇಕು. ವಿದ್ಯಾರ್ಥಿಗಳಲ್ಲಿ ಈ ಮೂಲಕ ಆತ್ಮವಿಶ್ವಾಸ ಮತ್ತು ಕಲಿಕೆಯ ಬಗ್ಗೆ ಜ್ಞಾನ ಒದಗಿಸಬೇಕು. ಅಂಕಗಳು ಮತ್ತು ಶ್ರೇಣಿಯ ಬದಲು ಈ ಹಂತಗಳನ್ನು ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಬಳಕೆ ಮಾಡಿಕೊಳ್ಳಬೇಕು’ ಎಂದು ಹೇಳಿದೆ. ಆಗಾಗ ಪಾಲಕರ ಭೇಟಿ ಕಾರ್ಯಕ್ರಮ ಏರ್ಪಡಿಸಬೇಕು. ಮಕ್ಕಳ ಶೈಕ್ಷಣಿಕ ಪ್ರಗತಿ ಬಗ್ಗೆ ಪಾಲಕರು ನಿರಂತರವಾಗಿ ವರದಿ ಪಡೆಯಬೇಕು ಎಂದು ಹೇಳಿದೆ.

ಕಳೆದ ವಾರ 1700 ಶಾಲಾ ಮುಖ್ಯಸ್ಥರನ್ನು ಉದ್ದೇಶಿಸಿ ಮಾತನಾಡಿದ ಒಂಗ್ ಯೇ ಕುಂಗ್, ಮಕ್ಕಳ ಪ್ರಗತಿ, ಉತ್ತಮ ಕಾರ್ಯಗಳನ್ನು ಶಿಕ್ಷಕರು ಶ್ಲಾಘಿಸಬೇಕು ಮತ್ತು ಮೆಚ್ಚುಗೆ ವ್ಯಕ್ತಪಡಿಸಿ, ಹೊಸ ಹೊಸ ಅನ್ವೇಷಣೆಗಳಿಗೆ ಪ್ರೋತ್ಸಾಹ ನೀಡಬೇಕು. ಮಕ್ಕಳ ಸಾಧನೆ ಬಗ್ಗೆ ಮುಕ್ತವಾಗಿ, ಭೇದಭಾವವಿಲ್ಲದೇ ಶ್ಲಾಘಿಸಬೇಕು. ಹೀಗಾದಾಗ ಮಾತ್ರ ಕಲಿಕೆ ಒಂದು ಸ್ಪರ್ಧೆಯಲ್ಲ ಎಂಬ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಲು ಸಾಧ್ಯ ಎಂದು ಹೇಳಿದ್ದಾರೆ. ಈ ಮೂಲಕ ಕಲಿಕೆ ಎಂದರೆ ಸ್ಪರ್ಧೆ ಎಂದು ಭಾವಿಸಿರುವ ಮಕ್ಕಳ ಮನಸ್ಥಿತಿಯಲ್ಲಿ ಬದಲಾವಣೆ ತರಲು ಸಿಂಗಾಪುರ ಸರ್ಕಾರ ಮುಂದಡಿಯಿಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...