Homeಅಂತರಾಷ್ಟ್ರೀಯ'ಕಲಿಕೆ ಒಂದು ಸ್ಪರ್ಧೆಯಲ್ಲ’ :ಸಿಂಗಾಪುರದಲ್ಲಿ ಇನ್ಮುಂದೆ ವಿದ್ಯಾರ್ಥಿಗಳಿಗೆ ಪರೀಕ್ಷೆ, ರ್‍ಯಾಂಕ್‌ ಇಲ್ಲ..

‘ಕಲಿಕೆ ಒಂದು ಸ್ಪರ್ಧೆಯಲ್ಲ’ :ಸಿಂಗಾಪುರದಲ್ಲಿ ಇನ್ಮುಂದೆ ವಿದ್ಯಾರ್ಥಿಗಳಿಗೆ ಪರೀಕ್ಷೆ, ರ್‍ಯಾಂಕ್‌ ಇಲ್ಲ..

- Advertisement -
- Advertisement -

ಮಗು ಕಲಿಕೆಯಲ್ಲಿ ಕೊನೆಯಲ್ಲಿರಲಿ ಅಥವಾ ಮೊದಲಿರಲಿ ಇನ್ನು ಮುಂದೆ ರ್‍ಯಾಂಕ್‌ ನೀಡುವುದಿಲ್ಲ, ಉತ್ತೀರ್ಣ ಮತ್ತು ಅನುತ್ತೀರ್ಣ ಎಂದು ವಿಭಾಗ ಮಾಡುವುದಿಲ್ಲ ಎಂದು ಸಿಂಗಾಪುರ ಸರ್ಕಾರ ಘೋಷಿಸಿದೆ.

ಮಕ್ಕಳಿಗೆ ‘ಕಲಿಕೆಯೊಂದು ಸ್ಪರ್ಧೆಯಲ್ಲ’ ಎಂಬುದನ್ನು ಮನದಟ್ಟು ಮಾಡಿಕೊಡಲು ಸಿಂಗಾಪುರದಲ್ಲಿ ಮುಂದಿನ ವರ್ಷದಿಂದ ಹೊಸ ವಿಧಾನವನ್ನು ಜಾರಿ ಮಾಡಲು ಸರ್ಕಾರ ನಿರ್ಧರಿಸಿದೆ. ಪ್ರಾಥಮಿಕ ಮತ್ತು ಪ್ರೌಢಶಾಲೆ ಮಕ್ಕಳಿಗೆ ರ್‍ಯಾಂಕ್‌ ನೀಡದಿರಲು ಮತ್ತು ಮೊದಲು ಕೊನೆ ಎಂದು ಘೋಷಿಸದಿರಲು ಸಿಂಗಾಪುರ ಶಿಕ್ಷಣ ಮಂತ್ರಿ ಒಂಗ್ ಯೇ ಕುಂಗ್ ನಿರ್ಧರಿಸಿದ್ದಾರೆ.

ವರ್ಗ ಮತ್ತು ಮಟ್ಟದ ಸರಾಸರಿ, ಕನಿಷ್ಠ ಮತ್ತು ಗರಿಷ್ಠ ಅಂಕಗಳು, ನಿರ್ದಿಷ್ಟ ಅಂಕ ಪಡೆಯುವಲ್ಲಿ ವಿಫಲತೆ ಮತ್ತು ಅದನ್ನು ಬಣ್ಣದ ಪೆನ್ನುಗಳಿಂದ ಗುರುತಿಸಿರುವುದು, ವರ್ಷಾಂತ್ಯದ ಪರೀಕ್ಷೆಗಳಲ್ಲಿ ಪಾಸ್ ಆಗುವುದು ಅಥವಾ ಫೇಲ್ ಆಗುವುದು, ವಿಷಯದಲ್ಲಿ ಸರಾಸರಿ ಶ್ರೇಣಿ, ಒಟ್ಟು ಅಂಕಗಳು ವಿದ್ಯಾರ್ಥಿಯ ಸ್ಥಾನವನ್ನು ತೋರಿಸುವುದನ್ನು ನಿಲ್ಲಿಸಲು ಸರ್ಕಾರ ನಿರ್ಧರಿಸಿದೆ.

ಎಲ್1ಆರ್5 ( ಇಂಗ್ಲೀಷ್ ಜತೆಗೆ ಇತರೆ ಐದು ವಿಷಯ), ಎಲ್1ಆರ್4, ಇಎಂಬಿ3 (ಇಂಗ್ಲೀಷ್, ಗಣಿತ ಹಾಗೂ 3 ಉತ್ತಮ ವಿಷಯಗಳು) ಲೋವರ್ ಸೆಕೆಂಡರಿ ಹಂತದಲ್ಲಿ ಇಎಂಬಿ1 ವಿಷಯಗಳಿವೆ. ಶೈಕ್ಷಣಿಕ ಸಚಿವಾಲಯ ಸೆಪ್ಟಂಬರ್ 28ರಂದು ಪ್ರತಿ ವಿದ್ಯಾರ್ಥಿಗಳ ಓದುವ ಪ್ರಕ್ರಿಯೆಯತ್ತ ಗಮನಹರಿಸಬೇಕು. ವಿದ್ಯಾರ್ಥಿಗಳ ಕಲಿಕಾ ಮಟ್ಟ ಹೇಗಿದೆ..? ಅವರಿಗೆ ಕಲಿಕೆಯಲ್ಲಿ ಆಸಕ್ತಿ ಹೊಂದುವಂತೆ ಮಾಡಲು ಯಾವ ಕ್ರಮ ಕೈಗೊಳ್ಳಬೇಕು, ವಿದ್ಯಾರ್ಥಿಗಳ ನಡುವೆ ಹೋಲಿಕೆ ಮಾಡುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು.

‘ಮುಂದಿನ ವರ್ಷದಿಂದ ಪ್ರಾಥಮಿಕ ಹಂತದಿಂದ ಸೆಕೆಂಡರಿ ಹಂತದವರೆಗಿನ ಎಲ್ಲಾ ಪರೀಕ್ಷೆಗಳನ್ನೂ ತೆಗೆದು ಹಾಕಲಾಗುವುದು. ವಿದ್ಯಾರ್ಥಿಗಳಿಗೆ ಬರೆಯುವ ಪರೀಕ್ಷೆ ಹಾಗೂ ಮೌಲ್ಯಮಾಪನದ ದರ್ಜೆಯನ್ನು ನೀಡುವುದಿಲ್ಲ’ ಎಂದು ಹೇಳಿದೆ. ‘ಮಕ್ಕಳಿಗೆ, ಶಿಕ್ಷಕರು ಪ್ರಶ್ನೋತ್ತರ ಮಾಲಿಕೆ, ಮನೆಗೆಲಸ, ಕಲಿತ ಪಾಠ ಅಥವಾ ವಿಷಯದ ಬಗ್ಗೆ ಚರ್ಚೆ ನಡೆಸಬೇಕು. ವಿದ್ಯಾರ್ಥಿಗಳಲ್ಲಿ ಈ ಮೂಲಕ ಆತ್ಮವಿಶ್ವಾಸ ಮತ್ತು ಕಲಿಕೆಯ ಬಗ್ಗೆ ಜ್ಞಾನ ಒದಗಿಸಬೇಕು. ಅಂಕಗಳು ಮತ್ತು ಶ್ರೇಣಿಯ ಬದಲು ಈ ಹಂತಗಳನ್ನು ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಬಳಕೆ ಮಾಡಿಕೊಳ್ಳಬೇಕು’ ಎಂದು ಹೇಳಿದೆ. ಆಗಾಗ ಪಾಲಕರ ಭೇಟಿ ಕಾರ್ಯಕ್ರಮ ಏರ್ಪಡಿಸಬೇಕು. ಮಕ್ಕಳ ಶೈಕ್ಷಣಿಕ ಪ್ರಗತಿ ಬಗ್ಗೆ ಪಾಲಕರು ನಿರಂತರವಾಗಿ ವರದಿ ಪಡೆಯಬೇಕು ಎಂದು ಹೇಳಿದೆ.

ಕಳೆದ ವಾರ 1700 ಶಾಲಾ ಮುಖ್ಯಸ್ಥರನ್ನು ಉದ್ದೇಶಿಸಿ ಮಾತನಾಡಿದ ಒಂಗ್ ಯೇ ಕುಂಗ್, ಮಕ್ಕಳ ಪ್ರಗತಿ, ಉತ್ತಮ ಕಾರ್ಯಗಳನ್ನು ಶಿಕ್ಷಕರು ಶ್ಲಾಘಿಸಬೇಕು ಮತ್ತು ಮೆಚ್ಚುಗೆ ವ್ಯಕ್ತಪಡಿಸಿ, ಹೊಸ ಹೊಸ ಅನ್ವೇಷಣೆಗಳಿಗೆ ಪ್ರೋತ್ಸಾಹ ನೀಡಬೇಕು. ಮಕ್ಕಳ ಸಾಧನೆ ಬಗ್ಗೆ ಮುಕ್ತವಾಗಿ, ಭೇದಭಾವವಿಲ್ಲದೇ ಶ್ಲಾಘಿಸಬೇಕು. ಹೀಗಾದಾಗ ಮಾತ್ರ ಕಲಿಕೆ ಒಂದು ಸ್ಪರ್ಧೆಯಲ್ಲ ಎಂಬ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಲು ಸಾಧ್ಯ ಎಂದು ಹೇಳಿದ್ದಾರೆ. ಈ ಮೂಲಕ ಕಲಿಕೆ ಎಂದರೆ ಸ್ಪರ್ಧೆ ಎಂದು ಭಾವಿಸಿರುವ ಮಕ್ಕಳ ಮನಸ್ಥಿತಿಯಲ್ಲಿ ಬದಲಾವಣೆ ತರಲು ಸಿಂಗಾಪುರ ಸರ್ಕಾರ ಮುಂದಡಿಯಿಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...