Homeಕರ್ನಾಟಕಭೂ ಕಬಳಿಕೆ ಆರೋಪ : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಗಾಯಕ ಲಕ್ಕಿ ಅಲಿ...

ಭೂ ಕಬಳಿಕೆ ಆರೋಪ : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಗಾಯಕ ಲಕ್ಕಿ ಅಲಿ ದೂರು

- Advertisement -
- Advertisement -

‘ಲಕ್ಕಿ ಅಲಿ’ ಎಂದೇ ಪ್ರಸಿದ್ದಿ ಪಡೆದಿರುವ ಖ್ಯಾತ ಗಾಯಕ ಮಕ್ಸೂದ್ ಮಹಮೂದ್ ಅಲಿ ಅವರು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಅವರ ಪತಿ ಸುಧೀರ್ ರೆಡ್ಡಿ, ಸಹಾಯಕ ಪೊಲೀಸ್ ಕಮಿಷನರ್ ಮಂಜುನಾಥ್ ಯಲಹಂಕ ಮತ್ತಿತರರ ವಿರುದ್ಧ ಭೂಕಬಳಿಕೆ ಆರೋಪದ ಮೇಲೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.

ಅಲಿ ಅವರು ಗುರುವಾರ ತಮ್ಮ ಎಕ್ಸ್ ಖಾತೆಯಲ್ಲಿ ದೂರಿನ ಪ್ರತಿಯನ್ನು ಹಂಚಿಕೊಂಡಿದ್ದಾರೆ.

“ಐಎಎಸ್ ಅಧಿಕಾರಿ, ಅವರ ಪತಿ ಮತ್ತು ಸೋದರ ಮಾವ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡು ಸಾಕಷ್ಟು ಹಣ ವಿನಿಮಯದ ಮೂಲಕ ಭೂ ಕಬಳಿಕೆ ಮಾಡಿದ್ದಾರೆ” ಎಂದು ಅಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ದೂರಿನಲ್ಲಿ ಸಿಂಧೂರಿ ಅವರ ಸೋದರ ಮಾವ ಮಧುಸೂಧನ್ ರೆಡ್ಡಿ ಮತ್ತು ಯಲಹಂಕ ತಾಲೂಕು ಸರ್ವೆ ಅಧಿಕಾರಿ ಮನೋಹರ್ ಅವರ ಹೆಸರೂ ಇದೆ. ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯ ಹೆಸರು ಹೇಳಲಿಚ್ಛಿಸದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಬಗ್ಗೆಯೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ವಿವಾದ 2022ರಲ್ಲಿ ಮೊದಲು ಪ್ರಾರಂಭಗೊಂಡಿತ್ತು. ಡಿಸೆಂಬರ್ 4,2022 ರಂದು ಲಕ್ಕಿ ಅಲಿ ಎಕ್ಸ್‌ನಲ್ಲಿ ವಿವಾದದ ಕುರಿತು ಪೋಸ್ಟ್ ಮಾಡಿದ್ದರು. ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಟ್ಯಾಗ್ ಮಾಡಿದ್ದರು.

“ಕೆಂಚೇನಹಳ್ಳಿ ಯಲಹಂಕದಲ್ಲಿರುವ ಟ್ರಸ್ಟ್ ಆಸ್ತಿಯಾಗಿರುವ ನನ್ನ ಜಮೀನನ್ನು ಬೆಂಗಳೂರು ಭೂ ಮಾಫಿಯಾದ ಸುಧೀರ್ ರೆಡ್ಡಿ, ಅವರ ಪತ್ನಿ ರೋಹಿಣಿ ಸಿಂಧೂರಿ ಎಂಬ ಐಎಎಸ್ ಅಧಿಕಾರಿಯ ಸಹಾಯದಿಂದ ಅತಿಕ್ರಮಿಸುತ್ತಿದ್ದಾರೆ. ಅವರು ತಮ್ಮ ವೈಯಕ್ತಿಕ ಲಾಭಕ್ಕಾಗಿ ರಾಜ್ಯದ ಸಂಪನ್ಮೂಲಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಬಲವಂತವಾಗಿ ಮತ್ತು ಕಾನೂನುಬಾಹಿರವಾಗಿ ನನ್ನ ಜಮೀನಿನೊಳಗೆ ಬರುತ್ತಿದ್ದಾರೆ. ಸಂಬಂಧಿತ ದಾಖಲೆಗಳನ್ನು ತೋರಿಸಲು ನಿರಾಕರಿಸುತ್ತಿದ್ದಾರೆ” ಎಂದು ಅಲಿ ಬರೆದುಕೊಂಡಿದ್ದರು.

“ಇದು ಸಂಪೂರ್ಣವಾಗಿ ಕಾನೂನುಬಾಹಿರ ಎಂದು ನನ್ನ ಕಾನೂನು ಸಲಹೆಗಾರರು ತಿಳಿಸಿದ್ದಾರೆ. ನಮ್ಮ ಜಮೀನಿಗೆ ಪ್ರವೇಶಿಸಲು ಅವರು ನ್ಯಾಯಾಲಯದ ಅನುಮತಿ ಹೊಂದಿಲ್ಲ. ಕಳೆದ 50 ವರ್ಷಗಳಿಂದ ಜಮೀನು ನಮ್ಮ ಸ್ವಾಧೀನದಲ್ಲಿದೆ, ನಾವು ಅಲ್ಲಿ ವಾಸಿಸುತ್ತಿದ್ದೇವೆ. ಈ ಕುರಿತು ಎಸಿಪಿಗೆ ದೂರು ನೀಡಿದ್ದರೂ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ” ಎಂದಿದ್ದರು.

“ನಮಗೆ ಸ್ಥಳೀಯ ಪೊಲೀಸರಿಂದ ಯಾವುದೇ ಸಹಾಯ ಸಿಗುತ್ತಿಲ್ಲ. ಅವರು ಅತಿಕ್ರಮಣ ಮಾಡಿದವರನ್ನು ಬೆಂಬಲಿಸುತ್ತಿದ್ದಾರೆ. ನಮ್ಮ ಪರಿಸ್ಥಿತಿ ಮತ್ತು ನಮ್ಮ ಭೂಮಿಯ ಕಾನೂನು ಸ್ಥಿತಿಯ ಬಗ್ಗೆ ಅಸಡ್ಡೆ ಹೊಂದಿದ್ದಾರೆ. ಆತ್ಮೀಯ ಸರ್, ಡಿಸೆಂಬರ್ 7 ರಂದು ನ್ಯಾಯಾಲಯದ ಅಂತಿಮ ವಿಚಾರಣೆಗೂ ಮುನ್ನ ಸುಳ್ಳು ಆಸ್ತಿಯನ್ನು ಸಾಬೀತುಪಡಿಸಲು ಪ್ರಯತ್ನಿಸುತ್ತಿರುವ ಅವರ ಈ ಕಾನೂನುಬಾಹಿರ ಚಟುವಟಿಕೆಯನ್ನು ನಿಲ್ಲಿಸಲು ನಾನು ನಿಮ್ಮ ಸಹಾಯವನ್ನು ಕೋರುತ್ತೇನೆ” ಎಂದು ಹೇಳಿದ್ದರು.

ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, “ಈ ಪ್ರಕರಣದಲ್ಲಿ ನನ್ನದೇನು ಪಾತ್ರವಿಲ್ಲ. ದುರುದ್ದೇಶದಿಂದ ನನ್ನನ್ನು ಇದಕ್ಕೆ ಎಳೆದು ತರಲಾಗಿದೆ. ನನಗೆ ತಿಳಿದಿರುವ ಹಾಗೆ OSNO5592/2016ರಲ್ಲಿ ಲಕ್ಕಿ ಅಲಿ ವಿರುದ್ಧ ತಾತ್ಕಾಲಿಕ ತಡೆಯಾಜ್ಞೆ ಇದೆ ಎಂದು ಗೊತ್ತಾಗಿದೆ” ಎಂದಿದ್ದರು.

“ಅಲಿ ಅವರ ಪ್ರತಿಭೆಯನ್ನು ನಾನು ಗೌರವಿಸುತ್ತೇನೆ. ಈ ಪ್ರಕರಣ ನ್ಯಾಯಾಲಯದಲ್ಲಿರುವಾಗ ಈ ಚರ್ಚೆ ಅನಗತ್ಯ ಎಂದು ತೋರುತ್ತದೆ. ನನಗೆ ಅಪಖ್ಯಾತಿ ತರಲು ಮತ್ತು ಸಾರ್ವಜನಿಕ ಸಹಾನುಭೂತಿ ಗಳಿಸುವ ಉದ್ದೇಶದಿಂದ ಇದನ್ನು ಮಾಡಲಾಗಿದೆ. ನಾನು ಕಾನೂನು ಕ್ರಮದ ಮೊರೆ ಹೋಗಲು ಯೋಚಿಸುತ್ತಿದ್ದೇನೆ” ಎಂದು ಹೇಳಿದ್ದರು.

ಮೂಲತಃ ಬೆಂಗಳೂರಿನವರಾದ ಲಕ್ಕಿ ಅಲಿ ಅವರು ಭಾರತದ ಪ್ರಸಿದ್ಧ ಗಾಯಕರಲ್ಲಿ ಒಬ್ಬರು. ಹಿಂದಿ ಸಿನಿಮಾ ಸೇರಿದಂತೆ ಹಲವು ಭಾಷೆಯ ಸಿನಿಮಾಗಳಲ್ಲಿ ಅವರು ಹಾಡಿದ್ದಾರೆ. ಸಿನಿಮಾಕ್ಕಿಂತ ಹೆಚ್ಚಾಗಿ ಅವರು ತಮ್ಮದೇ ಸಂಗೀತ ಸಂಯೋಜನೆಯ ಪ್ರೈವೇಟ್ ಆಲ್ಬಂಗಳಿಂದ ಹೆಚ್ಚು ಜನಪ್ರಿಯರಾದವರು.

ಇದನ್ನೂ ಓದಿ : ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪ: ಸಂತ್ರಸ್ತನ ವಿರುದ್ದವೇ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...