Homeಕರ್ನಾಟಕಭೂ ಕಬಳಿಕೆ ಆರೋಪ : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಗಾಯಕ ಲಕ್ಕಿ ಅಲಿ...

ಭೂ ಕಬಳಿಕೆ ಆರೋಪ : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಗಾಯಕ ಲಕ್ಕಿ ಅಲಿ ದೂರು

- Advertisement -
- Advertisement -

‘ಲಕ್ಕಿ ಅಲಿ’ ಎಂದೇ ಪ್ರಸಿದ್ದಿ ಪಡೆದಿರುವ ಖ್ಯಾತ ಗಾಯಕ ಮಕ್ಸೂದ್ ಮಹಮೂದ್ ಅಲಿ ಅವರು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಅವರ ಪತಿ ಸುಧೀರ್ ರೆಡ್ಡಿ, ಸಹಾಯಕ ಪೊಲೀಸ್ ಕಮಿಷನರ್ ಮಂಜುನಾಥ್ ಯಲಹಂಕ ಮತ್ತಿತರರ ವಿರುದ್ಧ ಭೂಕಬಳಿಕೆ ಆರೋಪದ ಮೇಲೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.

ಅಲಿ ಅವರು ಗುರುವಾರ ತಮ್ಮ ಎಕ್ಸ್ ಖಾತೆಯಲ್ಲಿ ದೂರಿನ ಪ್ರತಿಯನ್ನು ಹಂಚಿಕೊಂಡಿದ್ದಾರೆ.

“ಐಎಎಸ್ ಅಧಿಕಾರಿ, ಅವರ ಪತಿ ಮತ್ತು ಸೋದರ ಮಾವ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡು ಸಾಕಷ್ಟು ಹಣ ವಿನಿಮಯದ ಮೂಲಕ ಭೂ ಕಬಳಿಕೆ ಮಾಡಿದ್ದಾರೆ” ಎಂದು ಅಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ದೂರಿನಲ್ಲಿ ಸಿಂಧೂರಿ ಅವರ ಸೋದರ ಮಾವ ಮಧುಸೂಧನ್ ರೆಡ್ಡಿ ಮತ್ತು ಯಲಹಂಕ ತಾಲೂಕು ಸರ್ವೆ ಅಧಿಕಾರಿ ಮನೋಹರ್ ಅವರ ಹೆಸರೂ ಇದೆ. ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯ ಹೆಸರು ಹೇಳಲಿಚ್ಛಿಸದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಬಗ್ಗೆಯೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ವಿವಾದ 2022ರಲ್ಲಿ ಮೊದಲು ಪ್ರಾರಂಭಗೊಂಡಿತ್ತು. ಡಿಸೆಂಬರ್ 4,2022 ರಂದು ಲಕ್ಕಿ ಅಲಿ ಎಕ್ಸ್‌ನಲ್ಲಿ ವಿವಾದದ ಕುರಿತು ಪೋಸ್ಟ್ ಮಾಡಿದ್ದರು. ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಟ್ಯಾಗ್ ಮಾಡಿದ್ದರು.

“ಕೆಂಚೇನಹಳ್ಳಿ ಯಲಹಂಕದಲ್ಲಿರುವ ಟ್ರಸ್ಟ್ ಆಸ್ತಿಯಾಗಿರುವ ನನ್ನ ಜಮೀನನ್ನು ಬೆಂಗಳೂರು ಭೂ ಮಾಫಿಯಾದ ಸುಧೀರ್ ರೆಡ್ಡಿ, ಅವರ ಪತ್ನಿ ರೋಹಿಣಿ ಸಿಂಧೂರಿ ಎಂಬ ಐಎಎಸ್ ಅಧಿಕಾರಿಯ ಸಹಾಯದಿಂದ ಅತಿಕ್ರಮಿಸುತ್ತಿದ್ದಾರೆ. ಅವರು ತಮ್ಮ ವೈಯಕ್ತಿಕ ಲಾಭಕ್ಕಾಗಿ ರಾಜ್ಯದ ಸಂಪನ್ಮೂಲಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಬಲವಂತವಾಗಿ ಮತ್ತು ಕಾನೂನುಬಾಹಿರವಾಗಿ ನನ್ನ ಜಮೀನಿನೊಳಗೆ ಬರುತ್ತಿದ್ದಾರೆ. ಸಂಬಂಧಿತ ದಾಖಲೆಗಳನ್ನು ತೋರಿಸಲು ನಿರಾಕರಿಸುತ್ತಿದ್ದಾರೆ” ಎಂದು ಅಲಿ ಬರೆದುಕೊಂಡಿದ್ದರು.

“ಇದು ಸಂಪೂರ್ಣವಾಗಿ ಕಾನೂನುಬಾಹಿರ ಎಂದು ನನ್ನ ಕಾನೂನು ಸಲಹೆಗಾರರು ತಿಳಿಸಿದ್ದಾರೆ. ನಮ್ಮ ಜಮೀನಿಗೆ ಪ್ರವೇಶಿಸಲು ಅವರು ನ್ಯಾಯಾಲಯದ ಅನುಮತಿ ಹೊಂದಿಲ್ಲ. ಕಳೆದ 50 ವರ್ಷಗಳಿಂದ ಜಮೀನು ನಮ್ಮ ಸ್ವಾಧೀನದಲ್ಲಿದೆ, ನಾವು ಅಲ್ಲಿ ವಾಸಿಸುತ್ತಿದ್ದೇವೆ. ಈ ಕುರಿತು ಎಸಿಪಿಗೆ ದೂರು ನೀಡಿದ್ದರೂ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ” ಎಂದಿದ್ದರು.

“ನಮಗೆ ಸ್ಥಳೀಯ ಪೊಲೀಸರಿಂದ ಯಾವುದೇ ಸಹಾಯ ಸಿಗುತ್ತಿಲ್ಲ. ಅವರು ಅತಿಕ್ರಮಣ ಮಾಡಿದವರನ್ನು ಬೆಂಬಲಿಸುತ್ತಿದ್ದಾರೆ. ನಮ್ಮ ಪರಿಸ್ಥಿತಿ ಮತ್ತು ನಮ್ಮ ಭೂಮಿಯ ಕಾನೂನು ಸ್ಥಿತಿಯ ಬಗ್ಗೆ ಅಸಡ್ಡೆ ಹೊಂದಿದ್ದಾರೆ. ಆತ್ಮೀಯ ಸರ್, ಡಿಸೆಂಬರ್ 7 ರಂದು ನ್ಯಾಯಾಲಯದ ಅಂತಿಮ ವಿಚಾರಣೆಗೂ ಮುನ್ನ ಸುಳ್ಳು ಆಸ್ತಿಯನ್ನು ಸಾಬೀತುಪಡಿಸಲು ಪ್ರಯತ್ನಿಸುತ್ತಿರುವ ಅವರ ಈ ಕಾನೂನುಬಾಹಿರ ಚಟುವಟಿಕೆಯನ್ನು ನಿಲ್ಲಿಸಲು ನಾನು ನಿಮ್ಮ ಸಹಾಯವನ್ನು ಕೋರುತ್ತೇನೆ” ಎಂದು ಹೇಳಿದ್ದರು.

ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, “ಈ ಪ್ರಕರಣದಲ್ಲಿ ನನ್ನದೇನು ಪಾತ್ರವಿಲ್ಲ. ದುರುದ್ದೇಶದಿಂದ ನನ್ನನ್ನು ಇದಕ್ಕೆ ಎಳೆದು ತರಲಾಗಿದೆ. ನನಗೆ ತಿಳಿದಿರುವ ಹಾಗೆ OSNO5592/2016ರಲ್ಲಿ ಲಕ್ಕಿ ಅಲಿ ವಿರುದ್ಧ ತಾತ್ಕಾಲಿಕ ತಡೆಯಾಜ್ಞೆ ಇದೆ ಎಂದು ಗೊತ್ತಾಗಿದೆ” ಎಂದಿದ್ದರು.

“ಅಲಿ ಅವರ ಪ್ರತಿಭೆಯನ್ನು ನಾನು ಗೌರವಿಸುತ್ತೇನೆ. ಈ ಪ್ರಕರಣ ನ್ಯಾಯಾಲಯದಲ್ಲಿರುವಾಗ ಈ ಚರ್ಚೆ ಅನಗತ್ಯ ಎಂದು ತೋರುತ್ತದೆ. ನನಗೆ ಅಪಖ್ಯಾತಿ ತರಲು ಮತ್ತು ಸಾರ್ವಜನಿಕ ಸಹಾನುಭೂತಿ ಗಳಿಸುವ ಉದ್ದೇಶದಿಂದ ಇದನ್ನು ಮಾಡಲಾಗಿದೆ. ನಾನು ಕಾನೂನು ಕ್ರಮದ ಮೊರೆ ಹೋಗಲು ಯೋಚಿಸುತ್ತಿದ್ದೇನೆ” ಎಂದು ಹೇಳಿದ್ದರು.

ಮೂಲತಃ ಬೆಂಗಳೂರಿನವರಾದ ಲಕ್ಕಿ ಅಲಿ ಅವರು ಭಾರತದ ಪ್ರಸಿದ್ಧ ಗಾಯಕರಲ್ಲಿ ಒಬ್ಬರು. ಹಿಂದಿ ಸಿನಿಮಾ ಸೇರಿದಂತೆ ಹಲವು ಭಾಷೆಯ ಸಿನಿಮಾಗಳಲ್ಲಿ ಅವರು ಹಾಡಿದ್ದಾರೆ. ಸಿನಿಮಾಕ್ಕಿಂತ ಹೆಚ್ಚಾಗಿ ಅವರು ತಮ್ಮದೇ ಸಂಗೀತ ಸಂಯೋಜನೆಯ ಪ್ರೈವೇಟ್ ಆಲ್ಬಂಗಳಿಂದ ಹೆಚ್ಚು ಜನಪ್ರಿಯರಾದವರು.

ಇದನ್ನೂ ಓದಿ : ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪ: ಸಂತ್ರಸ್ತನ ವಿರುದ್ದವೇ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...