Homeಕರ್ನಾಟಕಭೂ ಕಬಳಿಕೆ ಆರೋಪ : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಗಾಯಕ ಲಕ್ಕಿ ಅಲಿ...

ಭೂ ಕಬಳಿಕೆ ಆರೋಪ : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಗಾಯಕ ಲಕ್ಕಿ ಅಲಿ ದೂರು

- Advertisement -
- Advertisement -

‘ಲಕ್ಕಿ ಅಲಿ’ ಎಂದೇ ಪ್ರಸಿದ್ದಿ ಪಡೆದಿರುವ ಖ್ಯಾತ ಗಾಯಕ ಮಕ್ಸೂದ್ ಮಹಮೂದ್ ಅಲಿ ಅವರು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಅವರ ಪತಿ ಸುಧೀರ್ ರೆಡ್ಡಿ, ಸಹಾಯಕ ಪೊಲೀಸ್ ಕಮಿಷನರ್ ಮಂಜುನಾಥ್ ಯಲಹಂಕ ಮತ್ತಿತರರ ವಿರುದ್ಧ ಭೂಕಬಳಿಕೆ ಆರೋಪದ ಮೇಲೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.

ಅಲಿ ಅವರು ಗುರುವಾರ ತಮ್ಮ ಎಕ್ಸ್ ಖಾತೆಯಲ್ಲಿ ದೂರಿನ ಪ್ರತಿಯನ್ನು ಹಂಚಿಕೊಂಡಿದ್ದಾರೆ.

“ಐಎಎಸ್ ಅಧಿಕಾರಿ, ಅವರ ಪತಿ ಮತ್ತು ಸೋದರ ಮಾವ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡು ಸಾಕಷ್ಟು ಹಣ ವಿನಿಮಯದ ಮೂಲಕ ಭೂ ಕಬಳಿಕೆ ಮಾಡಿದ್ದಾರೆ” ಎಂದು ಅಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ದೂರಿನಲ್ಲಿ ಸಿಂಧೂರಿ ಅವರ ಸೋದರ ಮಾವ ಮಧುಸೂಧನ್ ರೆಡ್ಡಿ ಮತ್ತು ಯಲಹಂಕ ತಾಲೂಕು ಸರ್ವೆ ಅಧಿಕಾರಿ ಮನೋಹರ್ ಅವರ ಹೆಸರೂ ಇದೆ. ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯ ಹೆಸರು ಹೇಳಲಿಚ್ಛಿಸದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಬಗ್ಗೆಯೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ವಿವಾದ 2022ರಲ್ಲಿ ಮೊದಲು ಪ್ರಾರಂಭಗೊಂಡಿತ್ತು. ಡಿಸೆಂಬರ್ 4,2022 ರಂದು ಲಕ್ಕಿ ಅಲಿ ಎಕ್ಸ್‌ನಲ್ಲಿ ವಿವಾದದ ಕುರಿತು ಪೋಸ್ಟ್ ಮಾಡಿದ್ದರು. ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಟ್ಯಾಗ್ ಮಾಡಿದ್ದರು.

“ಕೆಂಚೇನಹಳ್ಳಿ ಯಲಹಂಕದಲ್ಲಿರುವ ಟ್ರಸ್ಟ್ ಆಸ್ತಿಯಾಗಿರುವ ನನ್ನ ಜಮೀನನ್ನು ಬೆಂಗಳೂರು ಭೂ ಮಾಫಿಯಾದ ಸುಧೀರ್ ರೆಡ್ಡಿ, ಅವರ ಪತ್ನಿ ರೋಹಿಣಿ ಸಿಂಧೂರಿ ಎಂಬ ಐಎಎಸ್ ಅಧಿಕಾರಿಯ ಸಹಾಯದಿಂದ ಅತಿಕ್ರಮಿಸುತ್ತಿದ್ದಾರೆ. ಅವರು ತಮ್ಮ ವೈಯಕ್ತಿಕ ಲಾಭಕ್ಕಾಗಿ ರಾಜ್ಯದ ಸಂಪನ್ಮೂಲಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಬಲವಂತವಾಗಿ ಮತ್ತು ಕಾನೂನುಬಾಹಿರವಾಗಿ ನನ್ನ ಜಮೀನಿನೊಳಗೆ ಬರುತ್ತಿದ್ದಾರೆ. ಸಂಬಂಧಿತ ದಾಖಲೆಗಳನ್ನು ತೋರಿಸಲು ನಿರಾಕರಿಸುತ್ತಿದ್ದಾರೆ” ಎಂದು ಅಲಿ ಬರೆದುಕೊಂಡಿದ್ದರು.

“ಇದು ಸಂಪೂರ್ಣವಾಗಿ ಕಾನೂನುಬಾಹಿರ ಎಂದು ನನ್ನ ಕಾನೂನು ಸಲಹೆಗಾರರು ತಿಳಿಸಿದ್ದಾರೆ. ನಮ್ಮ ಜಮೀನಿಗೆ ಪ್ರವೇಶಿಸಲು ಅವರು ನ್ಯಾಯಾಲಯದ ಅನುಮತಿ ಹೊಂದಿಲ್ಲ. ಕಳೆದ 50 ವರ್ಷಗಳಿಂದ ಜಮೀನು ನಮ್ಮ ಸ್ವಾಧೀನದಲ್ಲಿದೆ, ನಾವು ಅಲ್ಲಿ ವಾಸಿಸುತ್ತಿದ್ದೇವೆ. ಈ ಕುರಿತು ಎಸಿಪಿಗೆ ದೂರು ನೀಡಿದ್ದರೂ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ” ಎಂದಿದ್ದರು.

“ನಮಗೆ ಸ್ಥಳೀಯ ಪೊಲೀಸರಿಂದ ಯಾವುದೇ ಸಹಾಯ ಸಿಗುತ್ತಿಲ್ಲ. ಅವರು ಅತಿಕ್ರಮಣ ಮಾಡಿದವರನ್ನು ಬೆಂಬಲಿಸುತ್ತಿದ್ದಾರೆ. ನಮ್ಮ ಪರಿಸ್ಥಿತಿ ಮತ್ತು ನಮ್ಮ ಭೂಮಿಯ ಕಾನೂನು ಸ್ಥಿತಿಯ ಬಗ್ಗೆ ಅಸಡ್ಡೆ ಹೊಂದಿದ್ದಾರೆ. ಆತ್ಮೀಯ ಸರ್, ಡಿಸೆಂಬರ್ 7 ರಂದು ನ್ಯಾಯಾಲಯದ ಅಂತಿಮ ವಿಚಾರಣೆಗೂ ಮುನ್ನ ಸುಳ್ಳು ಆಸ್ತಿಯನ್ನು ಸಾಬೀತುಪಡಿಸಲು ಪ್ರಯತ್ನಿಸುತ್ತಿರುವ ಅವರ ಈ ಕಾನೂನುಬಾಹಿರ ಚಟುವಟಿಕೆಯನ್ನು ನಿಲ್ಲಿಸಲು ನಾನು ನಿಮ್ಮ ಸಹಾಯವನ್ನು ಕೋರುತ್ತೇನೆ” ಎಂದು ಹೇಳಿದ್ದರು.

ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, “ಈ ಪ್ರಕರಣದಲ್ಲಿ ನನ್ನದೇನು ಪಾತ್ರವಿಲ್ಲ. ದುರುದ್ದೇಶದಿಂದ ನನ್ನನ್ನು ಇದಕ್ಕೆ ಎಳೆದು ತರಲಾಗಿದೆ. ನನಗೆ ತಿಳಿದಿರುವ ಹಾಗೆ OSNO5592/2016ರಲ್ಲಿ ಲಕ್ಕಿ ಅಲಿ ವಿರುದ್ಧ ತಾತ್ಕಾಲಿಕ ತಡೆಯಾಜ್ಞೆ ಇದೆ ಎಂದು ಗೊತ್ತಾಗಿದೆ” ಎಂದಿದ್ದರು.

“ಅಲಿ ಅವರ ಪ್ರತಿಭೆಯನ್ನು ನಾನು ಗೌರವಿಸುತ್ತೇನೆ. ಈ ಪ್ರಕರಣ ನ್ಯಾಯಾಲಯದಲ್ಲಿರುವಾಗ ಈ ಚರ್ಚೆ ಅನಗತ್ಯ ಎಂದು ತೋರುತ್ತದೆ. ನನಗೆ ಅಪಖ್ಯಾತಿ ತರಲು ಮತ್ತು ಸಾರ್ವಜನಿಕ ಸಹಾನುಭೂತಿ ಗಳಿಸುವ ಉದ್ದೇಶದಿಂದ ಇದನ್ನು ಮಾಡಲಾಗಿದೆ. ನಾನು ಕಾನೂನು ಕ್ರಮದ ಮೊರೆ ಹೋಗಲು ಯೋಚಿಸುತ್ತಿದ್ದೇನೆ” ಎಂದು ಹೇಳಿದ್ದರು.

ಮೂಲತಃ ಬೆಂಗಳೂರಿನವರಾದ ಲಕ್ಕಿ ಅಲಿ ಅವರು ಭಾರತದ ಪ್ರಸಿದ್ಧ ಗಾಯಕರಲ್ಲಿ ಒಬ್ಬರು. ಹಿಂದಿ ಸಿನಿಮಾ ಸೇರಿದಂತೆ ಹಲವು ಭಾಷೆಯ ಸಿನಿಮಾಗಳಲ್ಲಿ ಅವರು ಹಾಡಿದ್ದಾರೆ. ಸಿನಿಮಾಕ್ಕಿಂತ ಹೆಚ್ಚಾಗಿ ಅವರು ತಮ್ಮದೇ ಸಂಗೀತ ಸಂಯೋಜನೆಯ ಪ್ರೈವೇಟ್ ಆಲ್ಬಂಗಳಿಂದ ಹೆಚ್ಚು ಜನಪ್ರಿಯರಾದವರು.

ಇದನ್ನೂ ಓದಿ : ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪ: ಸಂತ್ರಸ್ತನ ವಿರುದ್ದವೇ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...