Homeಕರ್ನಾಟಕಭೂ ಕಬಳಿಕೆ ಆರೋಪ : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಗಾಯಕ ಲಕ್ಕಿ ಅಲಿ...

ಭೂ ಕಬಳಿಕೆ ಆರೋಪ : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಗಾಯಕ ಲಕ್ಕಿ ಅಲಿ ದೂರು

- Advertisement -
- Advertisement -

‘ಲಕ್ಕಿ ಅಲಿ’ ಎಂದೇ ಪ್ರಸಿದ್ದಿ ಪಡೆದಿರುವ ಖ್ಯಾತ ಗಾಯಕ ಮಕ್ಸೂದ್ ಮಹಮೂದ್ ಅಲಿ ಅವರು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಅವರ ಪತಿ ಸುಧೀರ್ ರೆಡ್ಡಿ, ಸಹಾಯಕ ಪೊಲೀಸ್ ಕಮಿಷನರ್ ಮಂಜುನಾಥ್ ಯಲಹಂಕ ಮತ್ತಿತರರ ವಿರುದ್ಧ ಭೂಕಬಳಿಕೆ ಆರೋಪದ ಮೇಲೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.

ಅಲಿ ಅವರು ಗುರುವಾರ ತಮ್ಮ ಎಕ್ಸ್ ಖಾತೆಯಲ್ಲಿ ದೂರಿನ ಪ್ರತಿಯನ್ನು ಹಂಚಿಕೊಂಡಿದ್ದಾರೆ.

“ಐಎಎಸ್ ಅಧಿಕಾರಿ, ಅವರ ಪತಿ ಮತ್ತು ಸೋದರ ಮಾವ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡು ಸಾಕಷ್ಟು ಹಣ ವಿನಿಮಯದ ಮೂಲಕ ಭೂ ಕಬಳಿಕೆ ಮಾಡಿದ್ದಾರೆ” ಎಂದು ಅಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ದೂರಿನಲ್ಲಿ ಸಿಂಧೂರಿ ಅವರ ಸೋದರ ಮಾವ ಮಧುಸೂಧನ್ ರೆಡ್ಡಿ ಮತ್ತು ಯಲಹಂಕ ತಾಲೂಕು ಸರ್ವೆ ಅಧಿಕಾರಿ ಮನೋಹರ್ ಅವರ ಹೆಸರೂ ಇದೆ. ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯ ಹೆಸರು ಹೇಳಲಿಚ್ಛಿಸದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಬಗ್ಗೆಯೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ವಿವಾದ 2022ರಲ್ಲಿ ಮೊದಲು ಪ್ರಾರಂಭಗೊಂಡಿತ್ತು. ಡಿಸೆಂಬರ್ 4,2022 ರಂದು ಲಕ್ಕಿ ಅಲಿ ಎಕ್ಸ್‌ನಲ್ಲಿ ವಿವಾದದ ಕುರಿತು ಪೋಸ್ಟ್ ಮಾಡಿದ್ದರು. ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಟ್ಯಾಗ್ ಮಾಡಿದ್ದರು.

“ಕೆಂಚೇನಹಳ್ಳಿ ಯಲಹಂಕದಲ್ಲಿರುವ ಟ್ರಸ್ಟ್ ಆಸ್ತಿಯಾಗಿರುವ ನನ್ನ ಜಮೀನನ್ನು ಬೆಂಗಳೂರು ಭೂ ಮಾಫಿಯಾದ ಸುಧೀರ್ ರೆಡ್ಡಿ, ಅವರ ಪತ್ನಿ ರೋಹಿಣಿ ಸಿಂಧೂರಿ ಎಂಬ ಐಎಎಸ್ ಅಧಿಕಾರಿಯ ಸಹಾಯದಿಂದ ಅತಿಕ್ರಮಿಸುತ್ತಿದ್ದಾರೆ. ಅವರು ತಮ್ಮ ವೈಯಕ್ತಿಕ ಲಾಭಕ್ಕಾಗಿ ರಾಜ್ಯದ ಸಂಪನ್ಮೂಲಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಬಲವಂತವಾಗಿ ಮತ್ತು ಕಾನೂನುಬಾಹಿರವಾಗಿ ನನ್ನ ಜಮೀನಿನೊಳಗೆ ಬರುತ್ತಿದ್ದಾರೆ. ಸಂಬಂಧಿತ ದಾಖಲೆಗಳನ್ನು ತೋರಿಸಲು ನಿರಾಕರಿಸುತ್ತಿದ್ದಾರೆ” ಎಂದು ಅಲಿ ಬರೆದುಕೊಂಡಿದ್ದರು.

“ಇದು ಸಂಪೂರ್ಣವಾಗಿ ಕಾನೂನುಬಾಹಿರ ಎಂದು ನನ್ನ ಕಾನೂನು ಸಲಹೆಗಾರರು ತಿಳಿಸಿದ್ದಾರೆ. ನಮ್ಮ ಜಮೀನಿಗೆ ಪ್ರವೇಶಿಸಲು ಅವರು ನ್ಯಾಯಾಲಯದ ಅನುಮತಿ ಹೊಂದಿಲ್ಲ. ಕಳೆದ 50 ವರ್ಷಗಳಿಂದ ಜಮೀನು ನಮ್ಮ ಸ್ವಾಧೀನದಲ್ಲಿದೆ, ನಾವು ಅಲ್ಲಿ ವಾಸಿಸುತ್ತಿದ್ದೇವೆ. ಈ ಕುರಿತು ಎಸಿಪಿಗೆ ದೂರು ನೀಡಿದ್ದರೂ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ” ಎಂದಿದ್ದರು.

“ನಮಗೆ ಸ್ಥಳೀಯ ಪೊಲೀಸರಿಂದ ಯಾವುದೇ ಸಹಾಯ ಸಿಗುತ್ತಿಲ್ಲ. ಅವರು ಅತಿಕ್ರಮಣ ಮಾಡಿದವರನ್ನು ಬೆಂಬಲಿಸುತ್ತಿದ್ದಾರೆ. ನಮ್ಮ ಪರಿಸ್ಥಿತಿ ಮತ್ತು ನಮ್ಮ ಭೂಮಿಯ ಕಾನೂನು ಸ್ಥಿತಿಯ ಬಗ್ಗೆ ಅಸಡ್ಡೆ ಹೊಂದಿದ್ದಾರೆ. ಆತ್ಮೀಯ ಸರ್, ಡಿಸೆಂಬರ್ 7 ರಂದು ನ್ಯಾಯಾಲಯದ ಅಂತಿಮ ವಿಚಾರಣೆಗೂ ಮುನ್ನ ಸುಳ್ಳು ಆಸ್ತಿಯನ್ನು ಸಾಬೀತುಪಡಿಸಲು ಪ್ರಯತ್ನಿಸುತ್ತಿರುವ ಅವರ ಈ ಕಾನೂನುಬಾಹಿರ ಚಟುವಟಿಕೆಯನ್ನು ನಿಲ್ಲಿಸಲು ನಾನು ನಿಮ್ಮ ಸಹಾಯವನ್ನು ಕೋರುತ್ತೇನೆ” ಎಂದು ಹೇಳಿದ್ದರು.

ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, “ಈ ಪ್ರಕರಣದಲ್ಲಿ ನನ್ನದೇನು ಪಾತ್ರವಿಲ್ಲ. ದುರುದ್ದೇಶದಿಂದ ನನ್ನನ್ನು ಇದಕ್ಕೆ ಎಳೆದು ತರಲಾಗಿದೆ. ನನಗೆ ತಿಳಿದಿರುವ ಹಾಗೆ OSNO5592/2016ರಲ್ಲಿ ಲಕ್ಕಿ ಅಲಿ ವಿರುದ್ಧ ತಾತ್ಕಾಲಿಕ ತಡೆಯಾಜ್ಞೆ ಇದೆ ಎಂದು ಗೊತ್ತಾಗಿದೆ” ಎಂದಿದ್ದರು.

“ಅಲಿ ಅವರ ಪ್ರತಿಭೆಯನ್ನು ನಾನು ಗೌರವಿಸುತ್ತೇನೆ. ಈ ಪ್ರಕರಣ ನ್ಯಾಯಾಲಯದಲ್ಲಿರುವಾಗ ಈ ಚರ್ಚೆ ಅನಗತ್ಯ ಎಂದು ತೋರುತ್ತದೆ. ನನಗೆ ಅಪಖ್ಯಾತಿ ತರಲು ಮತ್ತು ಸಾರ್ವಜನಿಕ ಸಹಾನುಭೂತಿ ಗಳಿಸುವ ಉದ್ದೇಶದಿಂದ ಇದನ್ನು ಮಾಡಲಾಗಿದೆ. ನಾನು ಕಾನೂನು ಕ್ರಮದ ಮೊರೆ ಹೋಗಲು ಯೋಚಿಸುತ್ತಿದ್ದೇನೆ” ಎಂದು ಹೇಳಿದ್ದರು.

ಮೂಲತಃ ಬೆಂಗಳೂರಿನವರಾದ ಲಕ್ಕಿ ಅಲಿ ಅವರು ಭಾರತದ ಪ್ರಸಿದ್ಧ ಗಾಯಕರಲ್ಲಿ ಒಬ್ಬರು. ಹಿಂದಿ ಸಿನಿಮಾ ಸೇರಿದಂತೆ ಹಲವು ಭಾಷೆಯ ಸಿನಿಮಾಗಳಲ್ಲಿ ಅವರು ಹಾಡಿದ್ದಾರೆ. ಸಿನಿಮಾಕ್ಕಿಂತ ಹೆಚ್ಚಾಗಿ ಅವರು ತಮ್ಮದೇ ಸಂಗೀತ ಸಂಯೋಜನೆಯ ಪ್ರೈವೇಟ್ ಆಲ್ಬಂಗಳಿಂದ ಹೆಚ್ಚು ಜನಪ್ರಿಯರಾದವರು.

ಇದನ್ನೂ ಓದಿ : ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪ: ಸಂತ್ರಸ್ತನ ವಿರುದ್ದವೇ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...