Homeಕರ್ನಾಟಕಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ ಗಾಯಕ ಸೋನು ನಿಗಮ್; ಬಂಧನಕ್ಕೆ ಆಗ್ರಹಿಸಿದ ಕರವೇ

ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ ಗಾಯಕ ಸೋನು ನಿಗಮ್; ಬಂಧನಕ್ಕೆ ಆಗ್ರಹಿಸಿದ ಕರವೇ

- Advertisement -
- Advertisement -

ವಿವಾದಿತ ಗಾಯಕ ಸೋನು ನಿಗಮ್ ಅವರು ಬೆಂಗಳೂರಿನ ಸಂಗೀತ ಕಾರ್ಯಕ್ರಮದಲ್ಲಿ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಕೆ ಮಾಡಿರುವ ಘಟನೆ ಗುರುವಾರ ನಡೆದಿದೆ. ಕನ್ನಡದಲ್ಲಿ ಹಾಡು ಹೇಳಿ ಎಂದು ಕೇಳಿದ್ದಕ್ಕೆ ಸೋನು ನಿಗಮ್‌ ʻʻಇದಕ್ಕೇನೇ, ಪಹಲ್ಗಾಮ್‌ ನಲ್ಲಿ ನಡೆದ ಭಯೋತ್ಪಾದಕ ದಾಳಿ ನಡೆದಿದ್ದುʼʼ ಎಂದು ಹೇಳಿದ್ದಾರೆ. ಈ ಬಗ್ಗೆ ರಾಜ್ಯದಾದ್ಯಂತ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ. ಕನ್ನಡಿಗರನ್ನು ಭಯೋತ್ಪಾದಕರಿಗೆ

ಘಟನೆ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ. ನಾರಾಯಣ ಗೌಡ ಅವರು ಪ್ರತಿಕ್ರಿಯಿಸಿದ್ದು, ಕರ್ನಾಟಕ ಪೊಲೀಸರು ಈ ಕೂಡಲೇ ಇವನ ಮೇಲೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಪ್ರತಿಕ್ರಿಯಿಸಿರುವ ಅವರು, “ಕನ್ನಡದಲ್ಲಿ ಹಾಡು ಹೇಳಿ ಎಂದು ಕೇಳಿದ್ದಕ್ಕೆ ಗಾಯಕ ಸೋನು ನಿಗಮ್‌ ʻಇದಕ್ಕೇನೇ, ಪಹಲ್ಗಾಮ್‌ ನಲ್ಲಿ ನಡೆದ ಭಯೋತ್ಪಾದಕ ದಾಳಿ ನಡೆದಿದ್ದುʼ ಎಂದು ಹೇಳಿದ್ದಾನೆ. ಕರ್ನಾಟಕ ಪೊಲೀಸರು ಈ ಕೂಡಲೇ ಇವನ ಮೇಲೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಬಂಧಿಸಬೇಕು. ಕನ್ನಡದಲ್ಲಿ ಹಾಡು ಹೇಳಿ ಎಂದು ಕೇಳಿದರೆ ಅದು ಹೇಗೆ ಭಯೋತ್ಪಾದಕ ದಾಳಿಗೆ ಕಾರಣವಾಗಲು ಸಾಧ್ಯ?” ಎಂದು ಅವರು ಕೇಳಿದ್ದಾರೆ.

ಕನ್ನಡದ ಅನ್ನ ತಿಂದು ಕೊಬ್ಬಿರುವ ಈತ ಅದು ಹೇಗೆ ಕರ್ನಾಟಕದಲ್ಲಿ ಇನ್ನು ಮೇಲೆ ಶೋಗಳನ್ನು ನಡೆಸುತ್ತಾನೆ ನೋಡೋಣ ಎಂದು ನಾರಾಯಣ ಗೌಡ ಅವರು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಯಾವ ನಿರ್ಮಾಪಕರೂ ಈತನಿಂದ ಹಾಡು ಹಾಡಿಸಬಾರದು ಎಂದು ಒತ್ತಾಯಿಸಿರುವ ಅವರು, ಯಾವುದೇ ಸಂಸ್ಥೆಗಳು ಇವನ ಶೋ ನಡೆಸಲು ಮುಂದಾಗಬಾರದು. ಒಂದು ವೇಳೆ ಯಾರಾದರೂ ಈ ದುಸ್ಸಾಹಸ ಮಾಡಿದರೆ ಅವರೇ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

“ಸೋನು ನಿಗಮ್‌ ನೀಡಿರುವ ಹೇಳಿಕೆ ಕನ್ನಡಿಗರನ್ನು ಕೀಳಾಗಿ ಕಂಡಿರುವುದು ಮಾತ್ರವಲ್ಲ, ಕನ್ನಡಿಗರನ್ನು ದೇಶದ್ರೋಹಿಗಳೆಂದು ಬಿಂಬಿಸಿ ಅವರನ್ನು ಖಳನಾಯಕರನ್ನಾಗಿ ಮಾಡುವ ಹುನ್ನಾರ ಹೊಂದಿದೆ. ಹೀಗಾಗಿ ಅವನ ಮೇಲೆ ಈ ಕೂಡಲೇ ದೂರು ದಾಖಲಾಗಬೇಕು.” ಎಂದು ಆಗ್ರಹಿಸಿದ್ದಾರೆ.

ಇಲ್ಲವಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಸ್ವರೂಪದ ಹೋರಾಟಕ್ಕೆ ಕೈ ಹಾಕಬೇಕಾಗುತ್ತದೆ ಎಂದು ಎಚ್ಚರಿಸುತ್ತೇನೆ ಎಂದು ಹೇಳಿರುವ ಅವರು, ಇಂಥ ಕೃತಘ್ನರನ್ನು ಕರ್ನಾಟಕದ ನೆಲದಲ್ಲಿ ಅನ್ನ ಹಾಕಿ ಸಾಕುವುದನ್ನು ಇನ್ನು ಮುಂದಾದರೂ ನಾವು ಕೈಬಿಡಬೇಕು ಎಂದು ಹೇಳಿದ್ದಾರೆ. ಕನ್ನಡಿಗರನ್ನು ಭಯೋತ್ಪಾದಕರಿಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  Karnataka SSLC Result 2025 | ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ

Karnataka SSLC Result 2025 | ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...