Homeಚಳವಳಿಸಿಂಘು ಗಡಿ: ದಲಿತ ಕಾರ್ಮಿಕ ಹೋರಾಟಗಾರ್ತಿ ನೊದೀಪ್ ಕೌರ್‌ ಬಂಧನ ಯಾಕಾಗಿದೆ?

ಸಿಂಘು ಗಡಿ: ದಲಿತ ಕಾರ್ಮಿಕ ಹೋರಾಟಗಾರ್ತಿ ನೊದೀಪ್ ಕೌರ್‌ ಬಂಧನ ಯಾಕಾಗಿದೆ?

ಜನವರಿ 12, 2021 ರಂದು ಹರಿಯಾಣ ಪೊಲೀಸರು ಸಿಂಘು ಗಡಿಯ ನೊದೀಪ್ ಇದ್ದ ಟೆಂಟ್‌ಗೆ ಬಂದು ಅವರನ್ನು ಬಂಧಿಸಿದ್ದರು.

- Advertisement -
- Advertisement -

ಜನವರಿ 12 ರಂದು ದೆಹಲಿಯ ರೈತ ಹೋರಾಟದಲ್ಲಿದ್ದ 24 ವರ್ಷದ ಪಂಜಾಬ್ ಮೂಲದ ದಲಿತ ಕಾರ್ಮಿಕ ಹೋರಾಟಗಾರ್ತಿ ನೊದೀಪ್ ಕೌರ್ ಅವರನ್ನು ಪೊಲೀಸರು ಬಂಧಿಸಿದ್ದರು. ಅವರಿಗೆ ಫೆಬ್ರವರಿ 2 ರಂದು ಹರಿಯಾಣದ ಸೋನೆಪತ್‌ನ ಸೆಷನ್ಸ್ ಕೋರ್ಟ್ ಜಾಮೀನು ನಿರಾಕರಿಸಿತ್ತು. ಪ್ರಸ್ತುತ ಹರಿಯಾಣದ ಕರ್ನಾಲ್ ಜೈಲಿನಲ್ಲಿರುವ ಅವರನ್ನು ಹಿಂಸಿಸಲಾಗುತ್ತಿದೆ ಮತ್ತು ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಅವರ ವಿರುದ್ದ ಗಲಭೆ, ಕಾನೂನುಬಾಹಿರ ಸಭೆ, ಸರ್ಕಾರಿ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸದಂತೆ ತೊಂದರೆ ನೀಡುವುದು, ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ, ಸುಲಿಗೆ, ಕೊಲೆ ಯತ್ನ ಸೇರಿದಂತೆ ಭಾರತೀಯ ದಂಡ ಸಂಹಿತೆ ಹಲವು ಪ್ರಕರಣಗಳನ್ನು ಪೊಲೀಸರು ದಾಖಲಿಸಿದ್ದಾರೆ. ಸೋನಿಪತ್‌ನ ಕುಂಡ್ಲಿ ಪೊಲೀಸ್ ಠಾಣೆಯ ಎಸ್‌ಎಚ್ಒ ಇನ್ಸ್‌ಪೆಕ್ಟರ್ ರವಿ ಕುಮಾರ್ ಹೇಳಿಕೆಯ ಆಧಾರದ ಮೇಲೆ ಈ ಪ್ರಕರಣವನ್ನು ದಾಖಲಿಸಲಾಗಿದೆ.

ಇದನ್ನೂ ಓದಿ: ‘ನನಗಿಂತಲೂ ನೊಂದವರಿದ್ದಾರೆ, ಜೈಲೊಳಗಿನ ರೈತರ ಕುರಿತು ವರದಿ ಮಾಡುವೆ’: ಮಂದೀಪ್ ಪುನಿಯಾ

ಅವರ ಜಾಮೀನು ಅರ್ಜಿಯನ್ನು ಸೆಷನ್ಸ್ ನ್ಯಾಯಾಧೀಶ ಯಶ್ವೀರ್ ಸಿಂಗ್ ರಾಥೋರ್ ವಿಚಾರಣೆ ನಡೆಸಿದ್ದರು. ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ರವಿ ಕುಮಾರ್ ಹೇಳಿಕೆಯಂತೆ, “ಜನವರಿ 12 ರಂದು ತನಗೆ ದೂರವಾಣಿ ಕರೆ ಬಂದಿದ್ದು, ಕೈಗಾರಿಕಾ ಪ್ರದೇಶವಾದ ಕುಂಡ್ಲಿಯಲ್ಲಿನ ಕಾರ್ಖಾನೆ ಸಂಖ್ಯೆ 349 ರಲ್ಲಿ ಲಾಠಿಗಳು ಮತ್ತು ದೊಣ್ಣೆಗಳಂತಹ ಆಯುಧದಾರಿ ಜನರು ಬಲವಂತವಾಗಿ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆ ಕರೆಯಲ್ಲಿ ದೂರಲಾಗಿತ್ತು. ಅಲ್ಲಿಗೆ ತಲುಪಿದಾಗ, 2-3 ಹುಡುಗಿಯರು ಸೇರಿದಂತೆ 50-60 ವ್ಯಕ್ತಿಗಳು ಲಾಠಿಗಳು ಮತ್ತು ದೊಣ್ಣೆಗಳಿಂದ ಶಸ್ತ್ರಸಜ್ಜಿತರಾಗಿರುವ ಗುಂಪೊಂದು ಇತ್ತು. ಈ ಸಶಸ್ತ್ರ ಗುಂಪು ಪೊಲೀಸ್ ಅಧಿಕಾರಿಗಳ ಮೇಲೆ ಲಾಠಿಗಳಿಂದ ಹಲ್ಲೆ ನಡೆಸಿದೆ ಮತ್ತು ಅವರಲ್ಲಿ ಒಬ್ಬರು ಪೊಲೀಸರ ಬಂದೂಕನ್ನು ಮತ್ತು ಕೇಸ್ ಫೈಲ್‌ಗಳನ್ನು ಕಸಿದುಕೊಳ್ಳಲು ಪ್ರಯತ್ನಿಸಿದ್ದಾರೆ. ಈ ಗುಂಪನ್ನು ನೊದೀಪ್ ಕೌರ್ ಮುನ್ನಡೆಸುತ್ತಿದ್ದರು” ಎಂದು ಹೇಳಿದ್ದಾರೆ.

ಆದರೆ ನೊದೀಪ್ ಅವರ ವಕೀಲರು, ಯಾವುದೇ ಪ್ರಚೋದನೆ ಇಲ್ಲದೆ ಕಾರ್ಖಾನೆಯ ಬಳಿ ನಿಂತಿರುವಾಗ ಪೊಲೀಸರು, ನೊದೀಪ್ ಸೇರಿದಂತೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಲಾಗಿತ್ತು ಎಂದು ವಾದಿಸಿದ್ದಾರೆ. ನೊದೀಪ್ ಜನಸಮೂಹವನ್ನು ಮುನ್ನಡೆಸುತ್ತಿದ್ದು ಮತ್ತು ಕುಂಡ್ಲಿಯಲ್ಲಿ ರೈತ ಆಂದೋಲನವನ್ನು ನಡೆಸಲು ಕಾರ್ಖಾನೆಯ ಮಾಲಿಕರಿಂದ ಹಣವನ್ನು ಸುಲಿಗೆ ಮಾಡುತ್ತಿದ್ದರು ಎಂದು ಆರೋಪಿಸಿ ಅವರಿಗೆ ಜಾಮೀನು ನೀಡಲು ನ್ಯಾಯಾಲಯವು ನಿರಾಕರಿಸಿದೆ.

ಇದನ್ನೂ ಓದಿ: ಪೊಲೀಸರು ಮುಳ್ಳು ನೆಟ್ಟ ಜಾಗದಲ್ಲಿಯೇ ಹೂವಿನ ಗಿಡ ನೆಟ್ಟ ರೈತನಾಯಕ ರಾಕೇಶ್ ಟಿಕಾಯತ್!

ನೊದೀಪ್ ವಿರುದ್ಧದ ಆರೋಪಗಳು ಗಂಭೀರ ಸ್ವರೂಪದ್ದಾಗಿವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದ್ದು,  ಹಣ ಮತ್ತು ಬೆದರಿಕೆಗಳಿಗೆ ಸಂಬಂಧಿಸಿದಂತೆ ಅವರ ವಿರುದ್ಧ ಮತ್ತೊಂದು ಎಫ್‌ಐಆರ್ ಬಾಕಿ ಇದೆ ಎಂದು ನ್ಯಾಯಾಲಯ ಹೇಳಿದೆ. ತನಿಖೆ ಇನ್ನೂ ಆರಂಭಿಕ ಹಂತದಲ್ಲಿದೆ ಮತ್ತು ಉಳಿದ ಆರೋಪಿಗಳನ್ನು ಇನ್ನೂ ಬಂಧಿಸಲಾಗಿಲ್ಲ ಮತ್ತು ಅಪರಾಧದ ದೃಷ್ಟಿಯಿಂದ, “ಅರ್ಜಿದಾರಳು ಜಾಮೀನಿಗೆ ಅರ್ಹಳಲ್ಲ ಮತ್ತು ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ” ಎಂದು ನ್ಯಾಯಾಲಯವು ಹೇಳಿದೆ.

ನ್ಯಾಯಾಲಯದ ಆದೇಶವನ್ನು ಇಲ್ಲಿ ಓದಬಹುದು.ಕೃಪೆ: ಸಬ್‌‌ರಂಗ್‌

ಘಟನೆಯ ಹಿನ್ನಲೆಯೇನು?

24 ವರ್ಷದ ನೊದೀಪ್ ಕೌರ್ ಸುಮಾರು ಒಂದು ತಿಂಗಳಿನಿಂದ ಕರ್ನಾಲ್ ಜೈಲಿನಲ್ಲಿದ್ದು, ಅದೇ ಜೈಲಿನಲ್ಲಿ ಅವರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಅವರ ಕುಟುಂಬ ಆರೋಪಿಸಿದೆ. ಪಂಜಾಬ್‌ ಮೂಲದ ಕಾರ್ಮಿಕ ಸಂಘದ ಕಾರ್ಯಕರ್ತೆಯಾಗಿರುವ ದಲಿತೆ ನೊದೀಪ್ ಕೌರ್ ಮಜ್ದೂರ್ ಅಧಿಕಾರ ಸಂಘಟನ್ (ಎಂಎಎಸ್) ನಲ್ಲಿ ಸಕ್ರಿಯವಾಗಿದ್ದಾರೆ. ಅವರು ಡಿಸೆಂಬರ್ 2020 ರಿಂದ ಸಿಂಘು ಗಡಿಯಲ್ಲಿ ರೈತರ ಆಂದೋಲನದಲ್ಲಿ ಭಾಗವಹಿಸುತ್ತಿದ್ದರು.

ರೈತ ಪ್ರತಿಭಟನೆಯನ್ನು ಬೆಂಬಲಿಸಿ ಕುಂಡ್ಲಿ ಕೈಗಾರಿಕಾ ಪ್ರದೇಶದ ಕಾರ್ಖಾನೆಯ ಕಾರ್ಮಿಕರ ಗುಂಪಿನೊಂದಿಗೆ ನೊದೀಪ್ ಕೌರ್ ಸಿಂಘುವಿನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರು. ಅವರು, ಕಾರ್ಮಿಕರು ಸಹ ರೈತರಂತೆ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ಕಾರ್ಮಿಕರು ಕಾರ್ಖಾನೆಯ ಮಾಲಿಕರಿಂದ ಶೋಷಣೆಗೆ ಒಳಗಾಗಿದ್ದಾರೆ, ಅವರ ವೇತನವನ್ನು ತಡೆಹಿಡಿಯಲಾಗಿದೆ ಮತ್ತು ಅವರನ್ನು ಉದ್ಯೋಗಗಳಿಂದ ಕಿತ್ತು ಎಸೆಯಲಾಗಿದೆ ಎಂದು ಆರೋಪಿಸಿದ್ದರು. ಕಾರ್ಮಿಕರ ಮೇಲಿನ ದೌರ್ಜನ್ಯವು ಕಾರ್ಮಿಕರು ರೈತ ಆಂದೋಲನವನ್ನು ಬೆಂಬಲಿಸಲು ಪ್ರಾರಂಭಿಸಿದಾಗಿನಿಂದ ಹೆಚ್ಚಾಗಿದೆ ಎಂದು ಆರೋಪಿಸಿದ್ದಾರೆ. ಕುಂಡ್ಲಿ ಕೈಗಾರಿಕಾ ಸಂಘ ಮತ್ತು ಹರಿಯಾಣ ಪೊಲೀಸರ ಸಶಸ್ತ್ರ ಕಾವಲುಗಾರರು ಅವರನ್ನು ಗುರಿಯಾಗಿಸಿ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಗಡಿಯಲ್ಲಿ 50,000 ಪೊಲೀಸರ ನಿಯೋಜನೆ – ಸಂಯಮ ಕಾಪಾಡಿ ಎಂದ ವಿಶ್ವಸಂಸ್ಥೆ

ಜನವರಿ 12, 2021 ರಂದು ಹರಿಯಾಣ ಪೊಲೀಸರು ಸಿಂಘು ಗಡಿಯ ನೊದೀಪ್ ಇದ್ದ ಟೆಂಟ್‌ಗೆ ಬಂದು ಅವರನ್ನು ಬಂಧಿಸಿದ್ದರು. ಹರಿಯಾಣ ಪೊಲೀಸರು ನೊದೀಪ್‌ಳನ್ನು ಗುರಿಯಾಗಿಸಿಕೊಂಡು ತನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ನೊದೀಪ್ ಸಹೋದರಿ ರಾಜ್‌ವೀರ್ ಕೌರ್ ಆರೋಪಿಸಿದ್ದಾರೆ.

“ನಾನು ಆಕೆಯನ್ನು ಬಂಧನವಾದ ಮಾರನೇ‌ ದಿನವೇ ಕರ್ನಲ್ ಜೈಲಿನಲ್ಲಿ ಭೇಟಿಯಾದೆ. ಆಕೆ ತನ್ನ ಮೇಲೆ ನಡೆದ ದೌರ್ಜನ್ಯದ ಕುರಿತು ಹೇಳಿದಳು. ಪುರುಷ ಪೊಲೀಸರು ಭೀಕರವಾಗಿ ಥಳಿಸಿದ್ದರು. ಆಕೆಯ ಗುಪ್ತಾಂಗಗಳ ಮೇಲೂ ಗಾಯದ ಗುರುತುಗಳಿವೆ. ಅವಳಿಗೆ ನಾವು ನೀಡಿರುವ ಔಷಧಿಗಳನ್ನು ಸಹ ಪೊಲೀಸರು ನೀಡಲಿಲ್ಲ. ಠಾಣೆಯ ಎಸ್‌ಎಚ್‌ಒ ಅವಳನ್ನು ಗ್ಯಾಂಗ್ ಲೀಡರ್ ಆಗಿ ತೋರಿಸಲು ಬಯಸಿದ್ದಾರೆ” ಎಂದು ರಾಜ್‌ವೀರ್‌ ಅವರ ಹೇಳಿಕೆಯನ್ನು ಉಲ್ಲೇಖಿಸಿ ಸಬ್‌ರಂಗ್ ವರದಿ ಮಾಡಿದೆ.

“ಆಕೆಗೆ ಕೇವಲ 23 ವರ್ಷ, 12 ನೇ ತರಗತಿ ಪೂರ್ಣಗೊಂಡಿದೆ ಮತ್ತು ದೆಹಲಿ ವಿಶ್ವವಿದ್ಯಾಲಯಕ್ಕೆ ಪದವಿಪೂರ್ವ ವಿದ್ಯಾರ್ಥಿಯಾಗಿ ಅರ್ಜಿ ಸಲ್ಲಿಸಲು ಯೋಜಿಸುತ್ತಿದ್ದಳು. ಅವಳನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಇದರ ವಿರುದ್ದ ಹೋರಾಡುತ್ತೇವೆ” ಎಂದು ರಾಜ್‌ವೀರ್ ಕೌರ್ ಹೇಳಿದ್ದಾರೆ.

ಇದನ್ನೂ ಓದಿ: ‘ಕಾಣೆಯಾದವರ’ ಪರ ಹೋದವರನ್ನೂ ಸಿಲುಕಿಸುತ್ತಿರುವ ದೆಹಲಿ ಪೊಲೀಸರು: ವಕೀಲರಿಂದ ಫೆ. 8ಕ್ಕೆ ಪ್ರತಿಭಟನೆ

ನೋದೀಪ್ ಕೌರ್ ಬಿಡುಗಡೆಗೆ ಆಗ್ರಹ

ನೋದೀಪ್ ಕೌರ್ ಬಿಡುಗಡೆಗೆ ಆಗ್ರಹಿಸಿ ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ (ಸಿಜೆಪಿ) ಆನ್‌ಲೈನ್ ಅರ್ಜಿಯನ್ನು ಪ್ರಾರಂಭಿಸಿದೆ. ಸಿಜೆಪಿಯು ತನ್ನ ಅರ್ಜಿಯಲ್ಲಿ ನೊದೀಪ್ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸುವುದಲ್ಲದೆ, ಅವರ ವಿರುದ್ಧದ ಎಲ್ಲಾ ಆರೋಪಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿದೆ.

ಅರ್ಜಿಗೆ ಸಹಿ ಹಾಕುವವರು, ಕರ್ನಾಲ್ ಜೈಲು ಅಧಿಕಾರಿಗಳಿಗೆ ಪತ್ರ ಬರೆದು ನೊದೀಪ್ ವಿರುದ್ಧದ ದೌರ್ಜನ್ಯವನ್ನು ಪ್ರತಿಭಟಿಸುವಂತೆ ಸಿಜೆಪಿ ಒತ್ತಾಯಿಸಿದೆ. ಚೇಂಜ್.ಆರ್ಗ್‌ನಲ್ಲಿರುವ ಅರ್ಜಿಯನ್ನು ಇಲ್ಲಿ ಸಹಿ ಮಾಡಬಹುದು.

ಇದನ್ನೂ ಓದಿ: ಬಾಲಿವುಡ್‌ನಲ್ಲಿರುವವರಿಗಿಂತ ಗಟ್ಟಿಯಾದ ಬೆನ್ನುಮೂಳೆಯಿದೆ – ಗ್ರೇಟಾ ಬಗ್ಗೆ ನಟಿ ರಮ್ಯಾ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...