Homeಚಳವಳಿರೈತ ಹೋರಾಟ ನೆಲದಲ್ಲಿ ಹತ್ಯೆ: ಬಿಜೆಪಿ ಸಚಿವರೊಂದಿಗೆ ಆರೋಪಿತ ನಿಹಾಂಗ್ ಗುಂಪಿನ ಮುಖ್ಯಸ್ಥ ಸಭೆ

ರೈತ ಹೋರಾಟ ನೆಲದಲ್ಲಿ ಹತ್ಯೆ: ಬಿಜೆಪಿ ಸಚಿವರೊಂದಿಗೆ ಆರೋಪಿತ ನಿಹಾಂಗ್ ಗುಂಪಿನ ಮುಖ್ಯಸ್ಥ ಸಭೆ

ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ನಿಹಾಂಗ್ ಮುಖ್ಯಸ್ಥ ಬಾಬಾ ಅಮನ್ ಸಿಂಗ್, ಬಿಜೆಪಿ ಕಿಸಾನ್ ಮೋರ್ಚಾದ ಸುಖ್ಮೀಂದರ್ ಪಾಲ್ ಸಿಂಗ್ ಗ್ರೇವಾಲ್ ಜುಲೈ ಅಂತ್ಯದಲ್ಲಿ ಸಭೆ ನಡೆಸಿದ್ದರು.

- Advertisement -
- Advertisement -

ಕಳೆದ ಒಂದು ವರ್ಷದಿಂದ ಶಾಂತಿಯುತವಾಗಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಅ.15 ರಂದು ಹೋರಾಟ ನಿರತ ಸಿಂಘು ಗಡಿಯಲ್ಲಿ ದಲಿತ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಇದು ಪ್ರತಿಭಟನೆಯನ್ನು ಹತ್ತಿಕ್ಕಲೂ ಸರ್ಕಾರ ನಡೆಸಿರುವ ಸಂಚು ಎಂದು ರೈತ ಮುಖಂಡರು ಆರೋಪಿಸಿದ್ದರು.

ರೈತ ಮುಖಂಡರ ಆರೋಪಕ್ಕೆ ನಿದರ್ಶನ ಎಂಬಂತೆ ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿರುವ ಆರೋಪಿಗಳ ನಿಹಾಂಗ್ ಗುಂಪಿನ ಮುಖ್ಯಸ್ಥ ಬಾಬಾ ಅಮನ್ ಸಿಂಗ್ ಬಿಜೆಪಿ ಸಚಿವರನ್ನು ಭೇಟಿಯಾಗಿ ಸಭೆ ನಡೆಸಿರುವ ಚಿತ್ರಗಳು ದೊರಕಿದ್ದು, ಎಸ್‌ಕೆಎಂ ಟ್ವೀಟ್ ಮಾಡಿದೆ.

ನಿಹಾಂಗ್ ಪಂಥಗಳಲ್ಲಿ ಒಂದರ ಮುಖ್ಯಸ್ಥ, ಕೆನಡಾದ ಒಂಟಾರಿಯೊದಲ್ಲಿ ನೆಲೆಸಿರುವ ಸಿಖ್ ಗುಂಪಿಂನ ಬಾಬಾ ಅಮನ್ ಸಿಂಗ್, ರೈತರ ಪ್ರತಿಭಟನೆಯನ್ನು ಕೊನೆಗೊಳಿಸಲು ಸರ್ಕಾರದ ಪ್ರಯತ್ನಗಳಲ್ಲಿ ತೆರೆಮರೆಯ  ಪಾತ್ರವನ್ನು ಹೊಂದಿರಬಹುದು ಎಂದು ಶಂಕಿಸಲಾಗಿದೆ ಎಂದು ದಿ ಟ್ರಿಬ್ಯೂನ್ ವರದಿ ಮಾಡಿದೆ.

ಇದನ್ನೂ ಓದಿ: ರೈತ ಹೋರಾಟ ನೆಲದಲ್ಲಿ ಕೊಲೆ: ನಿಹಾಂಗ್‌‌ ಬೆಂಬಲಿತ ವ್ಯಕ್ತಿ ಪೊಲೀಸರಿಗೆ ಶರಣು

ಮೂಲಗಳ ಪ್ರಕಾರ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸಿದ್ದ, ವಜಾಗೊಂಡಿರುವ ಪೊಲೀಸ್ ಅಧಿಕಾರಿ ಗುರ್ಮೀತ್ ‘ಪಿಂಕಿ‘ ಮತ್ತು ಬಿಜೆಪಿ ಕಿಸಾನ್ ಮೋರ್ಚಾದ ಸುಖ್ಮೀಂದರ್ ಪಾಲ್ ಸಿಂಗ್ ಗ್ರೇವಾಲ್ ಈ ವರ್ಷದ ಜುಲೈ ಅಂತ್ಯದಲ್ಲಿ ನವದೆಹಲಿಯ ಕೇಂದ್ರ ಕೃಷಿ ಸಚಿವಾಲಯದ ರಾಜ್ಯ ಸಚಿವ ಕೈಲಾಶ್ ಚೌಧರಿಯ ಬಂಗಲೆಯಲ್ಲಿ ಭೇಟಿಯಾಗಿ ಸಭೆ ನಡೆಸಿದ್ದರು ಎಂದು ತಿಳಿದು ಬಂದಿದೆ.

 

ದಿ ಟ್ರಿಬ್ಯೂನ್ ಈ ಬಗ್ಗೆ ವರದಿ ಮಾಡಿದ್ದು, ವರದಿಯ ತುಣುಕುಗಳನ್ನು ಸಂಯುಕ್ತ ಕಿಸಾನ್ ಮೋರ್ಚಾದ ಅಧಿಕೃತ ಟ್ವಿಟರ್‌ ಖಾತೆ ಕಿಸಾನ್ ಏಕ್ತಾ ಮೋರ್ಚಾ ಹಂಚಿಕೊಂಡಿದೆ. ಜೊತೆಗೆ ಯಾವ ನಿಹಾಂಗ್ ಗುಂಪಿನ ಸದಸ್ಯರು,  ಸಿಂಘು ಗಡಿಯಲ್ಲಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಕ್ಕಾಗಿ ಬಂಧಿಸಲ್ಪಟ್ಟಿದ್ದಾರೋ ಅವರ ಗುಂಪಿನ ಮುಖ್ಯಸ್ಥ ಬಿಜೆಪಿ ಸಚಿವರನ್ನು ಭೇಟಿಯಾಗಿದ್ದಾರೆ ಎಂದು ಹೇಳಿದೆ.

“ಸಿಂಘು ಗಡಿ ಪ್ರಕರಣದಲ್ಲಿ ಹೊಸ ವಿಷಯಗಳು ಕಾಣಿಸಿಕೊಳ್ಳತೊಡಗಿದ್ದು, ಸರ್ಕಾರದಿಂದ ದೊಡ್ಡ ಪಿತೂರಿ ನಡೆದಿದೆ ಎಂದು ತೋರುತ್ತದೆ. ಇದು ಮೂರು ರೈತ ವಿರೋಧಿ ಕಾನೂನುಗಳು ಮತ್ತು ಎಂಎಸ್‌ಪಿ ಬೇಡಿಕೆಯಿಂದ ನಮ್ಮ ಗಮನವನ್ನು ಬೇರೆಡೆಗೆ ಸೆಳೆಯಲು ನಡೆಸುತ್ತಿರುವ ಪಿತೂರಿ. ಆದರೆ ನಾವು ನಮ್ಮ ಬೇಡಿಕೆಗಳಿಗೆ ಬದ್ಧರಾಗಿದ್ದೇವೆ. ಕೃಷಿ ಕಾನೂನನ್ನು ರದ್ದುಗೊಳಿಸಬೇಕು, ಎಂಎಸ್‌ಪಿ ಕಾನೂನನ್ನು ಜಾರಿ ಮಾಡಬೇಕು” ಎಂದು ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಸಿಂಘು ಗಡಿಯಲ್ಲಿ ಲಖ್ಬೀರ್‌‌ ಹತ್ಯೆ ಪ್ರಕರಣ: ಹರಿಂದರ್‌‌‌ ಸಿಂಗ್‌‌ ಬರಹ

ನಿಹಾಂಗ್ ಮುಖ್ಯಸ್ಥ ಬಾಬಾ ಅಮನ್ ಸಿಂಗ್‌ ಬಿಜೆಪಿ ಸಚಿವರ ಜೊತೆಗೆ ಸಭೆ ಮಾಡಿರುವ ಬಗ್ಗೆ ಅಧಿಕೃತ ಹೇಳಿಕೆ ನೀಡಿರುವ ಬಿಜೆಪಿ ಕಿಸಾನ್ ಮೋರ್ಚಾದ ಸುಖ್ಮೀಂದರ್ ಪಾಲ್ ಸಿಂಗ್ ಗ್ರೇವಾಲ್, “ಪಂಜಾಬ್‌ನಲ್ಲಿ  ಕೃಷಿ ಚಳವಳಿಗೆ ಕೋಮು ಸೌಹಾರ್ದತೆಯನ್ನು ಹಾಳುಗೆಡವದಂತಹ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳಲು ಸಭೆಗಳನ್ನು ನಡೆಸಿದ್ದೇವೆ. ಬಾಬಾ ಅಮನ್ ಸಿಂಗ್ ಅಂತಹ ಒಂದು ಸಭೆಯಲ್ಲಿ ಭಾಗವಹಿಸಿದ್ದರು. ಅವರು ಕೂಡ ಸಮಸ್ಯೆಯನ್ನು ಪರಿಹರಿಸಬೇಕೆಂದು ಬಯಸಿದ್ದರು. ಕೆನಡಾದ ಒಂಟಾರಿಯೊ ಸಿಖ್ಖರು ಮತ್ತು ಗುರುದ್ವಾರ ಕೌನ್ಸಿಲ್ ಈ ಪ್ರಯತ್ನದಲ್ಲಿ ನಮಗೆ ಸಹಾಯ ಮಾಡುತ್ತಿದೆ” ಎಂದಿದ್ದಾರೆ ಎಂದು ದಿ ಟ್ರಿಬ್ಯೂನ್‌ ವರದಿ ಮಾಡಿದೆ.

ಇದೇ ಸಭೆಯಲ್ಲಿದ್ದ ವಜಾಗೊಂಡಿರುವ ಪೊಲೀಸ್ ಅಧಿಕಾರಿ ಗುರ್ಮೀತ್ ‘ಪಿಂಕಿ’, ನಿಹಾಂಗ್ ಮುಖ್ಯಸ್ಥ ಅಮನ್ ಸಿಂಗ್ ಬಾಬಾ ಪಟಿಯಾಲಾದ ಸೆಂಟ್ರಲ್ ಜೈಲಿನಲ್ಲಿರುವ ದಿನಗಳಿಂದಲೂ ಪರಿಚರವಿದ್ದರು ಎಂದು ಹೇಳಿದ್ದಾರೆ.

ಒಕ್ಕೂಟ ಸರ್ಕಾರ ಜಾರಿಗೊಳಿಸಿರುವ ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ಹಲವು ಪ್ರಯತ್ನಗಳು ಮಡುತ್ತಿದ್ದು, ಇದು ಕೂಡ ಸರ್ಕಾರದ ಪ್ರಯತ್ನವೇ ಆಗಿದೆ ಎಂದು ರೈತ ನಾಯಕರು ಆರೋಪಿಸಿದ್ದಾರೆ. ಘಟನೆಯ ಸಂಪೂರ್ಣ ತನಿಖೆಗೆ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಲಖಿಂಪುರ್‌ ಹತ್ಯಾಕಾಂಡ: ಅಜಯ್ ಮಿಶ್ರಾ ಬಂಧನ, ವಜಾಗೆ ಆಗ್ರಹಿಸಿ ರೈತರ ರೈಲ್ ರೋಕೋ ಚಳವಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...