Homeಚಳವಳಿರೈತ ಹೋರಾಟ ನೆಲದಲ್ಲಿ ಹತ್ಯೆ: ಬಿಜೆಪಿ ಸಚಿವರೊಂದಿಗೆ ಆರೋಪಿತ ನಿಹಾಂಗ್ ಗುಂಪಿನ ಮುಖ್ಯಸ್ಥ ಸಭೆ

ರೈತ ಹೋರಾಟ ನೆಲದಲ್ಲಿ ಹತ್ಯೆ: ಬಿಜೆಪಿ ಸಚಿವರೊಂದಿಗೆ ಆರೋಪಿತ ನಿಹಾಂಗ್ ಗುಂಪಿನ ಮುಖ್ಯಸ್ಥ ಸಭೆ

ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ನಿಹಾಂಗ್ ಮುಖ್ಯಸ್ಥ ಬಾಬಾ ಅಮನ್ ಸಿಂಗ್, ಬಿಜೆಪಿ ಕಿಸಾನ್ ಮೋರ್ಚಾದ ಸುಖ್ಮೀಂದರ್ ಪಾಲ್ ಸಿಂಗ್ ಗ್ರೇವಾಲ್ ಜುಲೈ ಅಂತ್ಯದಲ್ಲಿ ಸಭೆ ನಡೆಸಿದ್ದರು.

- Advertisement -
- Advertisement -

ಕಳೆದ ಒಂದು ವರ್ಷದಿಂದ ಶಾಂತಿಯುತವಾಗಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಅ.15 ರಂದು ಹೋರಾಟ ನಿರತ ಸಿಂಘು ಗಡಿಯಲ್ಲಿ ದಲಿತ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಇದು ಪ್ರತಿಭಟನೆಯನ್ನು ಹತ್ತಿಕ್ಕಲೂ ಸರ್ಕಾರ ನಡೆಸಿರುವ ಸಂಚು ಎಂದು ರೈತ ಮುಖಂಡರು ಆರೋಪಿಸಿದ್ದರು.

ರೈತ ಮುಖಂಡರ ಆರೋಪಕ್ಕೆ ನಿದರ್ಶನ ಎಂಬಂತೆ ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿರುವ ಆರೋಪಿಗಳ ನಿಹಾಂಗ್ ಗುಂಪಿನ ಮುಖ್ಯಸ್ಥ ಬಾಬಾ ಅಮನ್ ಸಿಂಗ್ ಬಿಜೆಪಿ ಸಚಿವರನ್ನು ಭೇಟಿಯಾಗಿ ಸಭೆ ನಡೆಸಿರುವ ಚಿತ್ರಗಳು ದೊರಕಿದ್ದು, ಎಸ್‌ಕೆಎಂ ಟ್ವೀಟ್ ಮಾಡಿದೆ.

ನಿಹಾಂಗ್ ಪಂಥಗಳಲ್ಲಿ ಒಂದರ ಮುಖ್ಯಸ್ಥ, ಕೆನಡಾದ ಒಂಟಾರಿಯೊದಲ್ಲಿ ನೆಲೆಸಿರುವ ಸಿಖ್ ಗುಂಪಿಂನ ಬಾಬಾ ಅಮನ್ ಸಿಂಗ್, ರೈತರ ಪ್ರತಿಭಟನೆಯನ್ನು ಕೊನೆಗೊಳಿಸಲು ಸರ್ಕಾರದ ಪ್ರಯತ್ನಗಳಲ್ಲಿ ತೆರೆಮರೆಯ  ಪಾತ್ರವನ್ನು ಹೊಂದಿರಬಹುದು ಎಂದು ಶಂಕಿಸಲಾಗಿದೆ ಎಂದು ದಿ ಟ್ರಿಬ್ಯೂನ್ ವರದಿ ಮಾಡಿದೆ.

ಇದನ್ನೂ ಓದಿ: ರೈತ ಹೋರಾಟ ನೆಲದಲ್ಲಿ ಕೊಲೆ: ನಿಹಾಂಗ್‌‌ ಬೆಂಬಲಿತ ವ್ಯಕ್ತಿ ಪೊಲೀಸರಿಗೆ ಶರಣು

ಮೂಲಗಳ ಪ್ರಕಾರ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸಿದ್ದ, ವಜಾಗೊಂಡಿರುವ ಪೊಲೀಸ್ ಅಧಿಕಾರಿ ಗುರ್ಮೀತ್ ‘ಪಿಂಕಿ‘ ಮತ್ತು ಬಿಜೆಪಿ ಕಿಸಾನ್ ಮೋರ್ಚಾದ ಸುಖ್ಮೀಂದರ್ ಪಾಲ್ ಸಿಂಗ್ ಗ್ರೇವಾಲ್ ಈ ವರ್ಷದ ಜುಲೈ ಅಂತ್ಯದಲ್ಲಿ ನವದೆಹಲಿಯ ಕೇಂದ್ರ ಕೃಷಿ ಸಚಿವಾಲಯದ ರಾಜ್ಯ ಸಚಿವ ಕೈಲಾಶ್ ಚೌಧರಿಯ ಬಂಗಲೆಯಲ್ಲಿ ಭೇಟಿಯಾಗಿ ಸಭೆ ನಡೆಸಿದ್ದರು ಎಂದು ತಿಳಿದು ಬಂದಿದೆ.

 

ದಿ ಟ್ರಿಬ್ಯೂನ್ ಈ ಬಗ್ಗೆ ವರದಿ ಮಾಡಿದ್ದು, ವರದಿಯ ತುಣುಕುಗಳನ್ನು ಸಂಯುಕ್ತ ಕಿಸಾನ್ ಮೋರ್ಚಾದ ಅಧಿಕೃತ ಟ್ವಿಟರ್‌ ಖಾತೆ ಕಿಸಾನ್ ಏಕ್ತಾ ಮೋರ್ಚಾ ಹಂಚಿಕೊಂಡಿದೆ. ಜೊತೆಗೆ ಯಾವ ನಿಹಾಂಗ್ ಗುಂಪಿನ ಸದಸ್ಯರು,  ಸಿಂಘು ಗಡಿಯಲ್ಲಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಕ್ಕಾಗಿ ಬಂಧಿಸಲ್ಪಟ್ಟಿದ್ದಾರೋ ಅವರ ಗುಂಪಿನ ಮುಖ್ಯಸ್ಥ ಬಿಜೆಪಿ ಸಚಿವರನ್ನು ಭೇಟಿಯಾಗಿದ್ದಾರೆ ಎಂದು ಹೇಳಿದೆ.

“ಸಿಂಘು ಗಡಿ ಪ್ರಕರಣದಲ್ಲಿ ಹೊಸ ವಿಷಯಗಳು ಕಾಣಿಸಿಕೊಳ್ಳತೊಡಗಿದ್ದು, ಸರ್ಕಾರದಿಂದ ದೊಡ್ಡ ಪಿತೂರಿ ನಡೆದಿದೆ ಎಂದು ತೋರುತ್ತದೆ. ಇದು ಮೂರು ರೈತ ವಿರೋಧಿ ಕಾನೂನುಗಳು ಮತ್ತು ಎಂಎಸ್‌ಪಿ ಬೇಡಿಕೆಯಿಂದ ನಮ್ಮ ಗಮನವನ್ನು ಬೇರೆಡೆಗೆ ಸೆಳೆಯಲು ನಡೆಸುತ್ತಿರುವ ಪಿತೂರಿ. ಆದರೆ ನಾವು ನಮ್ಮ ಬೇಡಿಕೆಗಳಿಗೆ ಬದ್ಧರಾಗಿದ್ದೇವೆ. ಕೃಷಿ ಕಾನೂನನ್ನು ರದ್ದುಗೊಳಿಸಬೇಕು, ಎಂಎಸ್‌ಪಿ ಕಾನೂನನ್ನು ಜಾರಿ ಮಾಡಬೇಕು” ಎಂದು ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಸಿಂಘು ಗಡಿಯಲ್ಲಿ ಲಖ್ಬೀರ್‌‌ ಹತ್ಯೆ ಪ್ರಕರಣ: ಹರಿಂದರ್‌‌‌ ಸಿಂಗ್‌‌ ಬರಹ

ನಿಹಾಂಗ್ ಮುಖ್ಯಸ್ಥ ಬಾಬಾ ಅಮನ್ ಸಿಂಗ್‌ ಬಿಜೆಪಿ ಸಚಿವರ ಜೊತೆಗೆ ಸಭೆ ಮಾಡಿರುವ ಬಗ್ಗೆ ಅಧಿಕೃತ ಹೇಳಿಕೆ ನೀಡಿರುವ ಬಿಜೆಪಿ ಕಿಸಾನ್ ಮೋರ್ಚಾದ ಸುಖ್ಮೀಂದರ್ ಪಾಲ್ ಸಿಂಗ್ ಗ್ರೇವಾಲ್, “ಪಂಜಾಬ್‌ನಲ್ಲಿ  ಕೃಷಿ ಚಳವಳಿಗೆ ಕೋಮು ಸೌಹಾರ್ದತೆಯನ್ನು ಹಾಳುಗೆಡವದಂತಹ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳಲು ಸಭೆಗಳನ್ನು ನಡೆಸಿದ್ದೇವೆ. ಬಾಬಾ ಅಮನ್ ಸಿಂಗ್ ಅಂತಹ ಒಂದು ಸಭೆಯಲ್ಲಿ ಭಾಗವಹಿಸಿದ್ದರು. ಅವರು ಕೂಡ ಸಮಸ್ಯೆಯನ್ನು ಪರಿಹರಿಸಬೇಕೆಂದು ಬಯಸಿದ್ದರು. ಕೆನಡಾದ ಒಂಟಾರಿಯೊ ಸಿಖ್ಖರು ಮತ್ತು ಗುರುದ್ವಾರ ಕೌನ್ಸಿಲ್ ಈ ಪ್ರಯತ್ನದಲ್ಲಿ ನಮಗೆ ಸಹಾಯ ಮಾಡುತ್ತಿದೆ” ಎಂದಿದ್ದಾರೆ ಎಂದು ದಿ ಟ್ರಿಬ್ಯೂನ್‌ ವರದಿ ಮಾಡಿದೆ.

ಇದೇ ಸಭೆಯಲ್ಲಿದ್ದ ವಜಾಗೊಂಡಿರುವ ಪೊಲೀಸ್ ಅಧಿಕಾರಿ ಗುರ್ಮೀತ್ ‘ಪಿಂಕಿ’, ನಿಹಾಂಗ್ ಮುಖ್ಯಸ್ಥ ಅಮನ್ ಸಿಂಗ್ ಬಾಬಾ ಪಟಿಯಾಲಾದ ಸೆಂಟ್ರಲ್ ಜೈಲಿನಲ್ಲಿರುವ ದಿನಗಳಿಂದಲೂ ಪರಿಚರವಿದ್ದರು ಎಂದು ಹೇಳಿದ್ದಾರೆ.

ಒಕ್ಕೂಟ ಸರ್ಕಾರ ಜಾರಿಗೊಳಿಸಿರುವ ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ಹಲವು ಪ್ರಯತ್ನಗಳು ಮಡುತ್ತಿದ್ದು, ಇದು ಕೂಡ ಸರ್ಕಾರದ ಪ್ರಯತ್ನವೇ ಆಗಿದೆ ಎಂದು ರೈತ ನಾಯಕರು ಆರೋಪಿಸಿದ್ದಾರೆ. ಘಟನೆಯ ಸಂಪೂರ್ಣ ತನಿಖೆಗೆ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಲಖಿಂಪುರ್‌ ಹತ್ಯಾಕಾಂಡ: ಅಜಯ್ ಮಿಶ್ರಾ ಬಂಧನ, ವಜಾಗೆ ಆಗ್ರಹಿಸಿ ರೈತರ ರೈಲ್ ರೋಕೋ ಚಳವಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...