Homeಚಳವಳಿರೈತ ಹೋರಾಟ ನೆಲದಲ್ಲಿ ಹತ್ಯೆ: ಬಿಜೆಪಿ ಸಚಿವರೊಂದಿಗೆ ಆರೋಪಿತ ನಿಹಾಂಗ್ ಗುಂಪಿನ ಮುಖ್ಯಸ್ಥ ಸಭೆ

ರೈತ ಹೋರಾಟ ನೆಲದಲ್ಲಿ ಹತ್ಯೆ: ಬಿಜೆಪಿ ಸಚಿವರೊಂದಿಗೆ ಆರೋಪಿತ ನಿಹಾಂಗ್ ಗುಂಪಿನ ಮುಖ್ಯಸ್ಥ ಸಭೆ

ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ನಿಹಾಂಗ್ ಮುಖ್ಯಸ್ಥ ಬಾಬಾ ಅಮನ್ ಸಿಂಗ್, ಬಿಜೆಪಿ ಕಿಸಾನ್ ಮೋರ್ಚಾದ ಸುಖ್ಮೀಂದರ್ ಪಾಲ್ ಸಿಂಗ್ ಗ್ರೇವಾಲ್ ಜುಲೈ ಅಂತ್ಯದಲ್ಲಿ ಸಭೆ ನಡೆಸಿದ್ದರು.

- Advertisement -
- Advertisement -

ಕಳೆದ ಒಂದು ವರ್ಷದಿಂದ ಶಾಂತಿಯುತವಾಗಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಅ.15 ರಂದು ಹೋರಾಟ ನಿರತ ಸಿಂಘು ಗಡಿಯಲ್ಲಿ ದಲಿತ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಇದು ಪ್ರತಿಭಟನೆಯನ್ನು ಹತ್ತಿಕ್ಕಲೂ ಸರ್ಕಾರ ನಡೆಸಿರುವ ಸಂಚು ಎಂದು ರೈತ ಮುಖಂಡರು ಆರೋಪಿಸಿದ್ದರು.

ರೈತ ಮುಖಂಡರ ಆರೋಪಕ್ಕೆ ನಿದರ್ಶನ ಎಂಬಂತೆ ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿರುವ ಆರೋಪಿಗಳ ನಿಹಾಂಗ್ ಗುಂಪಿನ ಮುಖ್ಯಸ್ಥ ಬಾಬಾ ಅಮನ್ ಸಿಂಗ್ ಬಿಜೆಪಿ ಸಚಿವರನ್ನು ಭೇಟಿಯಾಗಿ ಸಭೆ ನಡೆಸಿರುವ ಚಿತ್ರಗಳು ದೊರಕಿದ್ದು, ಎಸ್‌ಕೆಎಂ ಟ್ವೀಟ್ ಮಾಡಿದೆ.

ನಿಹಾಂಗ್ ಪಂಥಗಳಲ್ಲಿ ಒಂದರ ಮುಖ್ಯಸ್ಥ, ಕೆನಡಾದ ಒಂಟಾರಿಯೊದಲ್ಲಿ ನೆಲೆಸಿರುವ ಸಿಖ್ ಗುಂಪಿಂನ ಬಾಬಾ ಅಮನ್ ಸಿಂಗ್, ರೈತರ ಪ್ರತಿಭಟನೆಯನ್ನು ಕೊನೆಗೊಳಿಸಲು ಸರ್ಕಾರದ ಪ್ರಯತ್ನಗಳಲ್ಲಿ ತೆರೆಮರೆಯ  ಪಾತ್ರವನ್ನು ಹೊಂದಿರಬಹುದು ಎಂದು ಶಂಕಿಸಲಾಗಿದೆ ಎಂದು ದಿ ಟ್ರಿಬ್ಯೂನ್ ವರದಿ ಮಾಡಿದೆ.

ಇದನ್ನೂ ಓದಿ: ರೈತ ಹೋರಾಟ ನೆಲದಲ್ಲಿ ಕೊಲೆ: ನಿಹಾಂಗ್‌‌ ಬೆಂಬಲಿತ ವ್ಯಕ್ತಿ ಪೊಲೀಸರಿಗೆ ಶರಣು

ಮೂಲಗಳ ಪ್ರಕಾರ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸಿದ್ದ, ವಜಾಗೊಂಡಿರುವ ಪೊಲೀಸ್ ಅಧಿಕಾರಿ ಗುರ್ಮೀತ್ ‘ಪಿಂಕಿ‘ ಮತ್ತು ಬಿಜೆಪಿ ಕಿಸಾನ್ ಮೋರ್ಚಾದ ಸುಖ್ಮೀಂದರ್ ಪಾಲ್ ಸಿಂಗ್ ಗ್ರೇವಾಲ್ ಈ ವರ್ಷದ ಜುಲೈ ಅಂತ್ಯದಲ್ಲಿ ನವದೆಹಲಿಯ ಕೇಂದ್ರ ಕೃಷಿ ಸಚಿವಾಲಯದ ರಾಜ್ಯ ಸಚಿವ ಕೈಲಾಶ್ ಚೌಧರಿಯ ಬಂಗಲೆಯಲ್ಲಿ ಭೇಟಿಯಾಗಿ ಸಭೆ ನಡೆಸಿದ್ದರು ಎಂದು ತಿಳಿದು ಬಂದಿದೆ.

 

ದಿ ಟ್ರಿಬ್ಯೂನ್ ಈ ಬಗ್ಗೆ ವರದಿ ಮಾಡಿದ್ದು, ವರದಿಯ ತುಣುಕುಗಳನ್ನು ಸಂಯುಕ್ತ ಕಿಸಾನ್ ಮೋರ್ಚಾದ ಅಧಿಕೃತ ಟ್ವಿಟರ್‌ ಖಾತೆ ಕಿಸಾನ್ ಏಕ್ತಾ ಮೋರ್ಚಾ ಹಂಚಿಕೊಂಡಿದೆ. ಜೊತೆಗೆ ಯಾವ ನಿಹಾಂಗ್ ಗುಂಪಿನ ಸದಸ್ಯರು,  ಸಿಂಘು ಗಡಿಯಲ್ಲಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಕ್ಕಾಗಿ ಬಂಧಿಸಲ್ಪಟ್ಟಿದ್ದಾರೋ ಅವರ ಗುಂಪಿನ ಮುಖ್ಯಸ್ಥ ಬಿಜೆಪಿ ಸಚಿವರನ್ನು ಭೇಟಿಯಾಗಿದ್ದಾರೆ ಎಂದು ಹೇಳಿದೆ.

“ಸಿಂಘು ಗಡಿ ಪ್ರಕರಣದಲ್ಲಿ ಹೊಸ ವಿಷಯಗಳು ಕಾಣಿಸಿಕೊಳ್ಳತೊಡಗಿದ್ದು, ಸರ್ಕಾರದಿಂದ ದೊಡ್ಡ ಪಿತೂರಿ ನಡೆದಿದೆ ಎಂದು ತೋರುತ್ತದೆ. ಇದು ಮೂರು ರೈತ ವಿರೋಧಿ ಕಾನೂನುಗಳು ಮತ್ತು ಎಂಎಸ್‌ಪಿ ಬೇಡಿಕೆಯಿಂದ ನಮ್ಮ ಗಮನವನ್ನು ಬೇರೆಡೆಗೆ ಸೆಳೆಯಲು ನಡೆಸುತ್ತಿರುವ ಪಿತೂರಿ. ಆದರೆ ನಾವು ನಮ್ಮ ಬೇಡಿಕೆಗಳಿಗೆ ಬದ್ಧರಾಗಿದ್ದೇವೆ. ಕೃಷಿ ಕಾನೂನನ್ನು ರದ್ದುಗೊಳಿಸಬೇಕು, ಎಂಎಸ್‌ಪಿ ಕಾನೂನನ್ನು ಜಾರಿ ಮಾಡಬೇಕು” ಎಂದು ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಸಿಂಘು ಗಡಿಯಲ್ಲಿ ಲಖ್ಬೀರ್‌‌ ಹತ್ಯೆ ಪ್ರಕರಣ: ಹರಿಂದರ್‌‌‌ ಸಿಂಗ್‌‌ ಬರಹ

ನಿಹಾಂಗ್ ಮುಖ್ಯಸ್ಥ ಬಾಬಾ ಅಮನ್ ಸಿಂಗ್‌ ಬಿಜೆಪಿ ಸಚಿವರ ಜೊತೆಗೆ ಸಭೆ ಮಾಡಿರುವ ಬಗ್ಗೆ ಅಧಿಕೃತ ಹೇಳಿಕೆ ನೀಡಿರುವ ಬಿಜೆಪಿ ಕಿಸಾನ್ ಮೋರ್ಚಾದ ಸುಖ್ಮೀಂದರ್ ಪಾಲ್ ಸಿಂಗ್ ಗ್ರೇವಾಲ್, “ಪಂಜಾಬ್‌ನಲ್ಲಿ  ಕೃಷಿ ಚಳವಳಿಗೆ ಕೋಮು ಸೌಹಾರ್ದತೆಯನ್ನು ಹಾಳುಗೆಡವದಂತಹ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳಲು ಸಭೆಗಳನ್ನು ನಡೆಸಿದ್ದೇವೆ. ಬಾಬಾ ಅಮನ್ ಸಿಂಗ್ ಅಂತಹ ಒಂದು ಸಭೆಯಲ್ಲಿ ಭಾಗವಹಿಸಿದ್ದರು. ಅವರು ಕೂಡ ಸಮಸ್ಯೆಯನ್ನು ಪರಿಹರಿಸಬೇಕೆಂದು ಬಯಸಿದ್ದರು. ಕೆನಡಾದ ಒಂಟಾರಿಯೊ ಸಿಖ್ಖರು ಮತ್ತು ಗುರುದ್ವಾರ ಕೌನ್ಸಿಲ್ ಈ ಪ್ರಯತ್ನದಲ್ಲಿ ನಮಗೆ ಸಹಾಯ ಮಾಡುತ್ತಿದೆ” ಎಂದಿದ್ದಾರೆ ಎಂದು ದಿ ಟ್ರಿಬ್ಯೂನ್‌ ವರದಿ ಮಾಡಿದೆ.

ಇದೇ ಸಭೆಯಲ್ಲಿದ್ದ ವಜಾಗೊಂಡಿರುವ ಪೊಲೀಸ್ ಅಧಿಕಾರಿ ಗುರ್ಮೀತ್ ‘ಪಿಂಕಿ’, ನಿಹಾಂಗ್ ಮುಖ್ಯಸ್ಥ ಅಮನ್ ಸಿಂಗ್ ಬಾಬಾ ಪಟಿಯಾಲಾದ ಸೆಂಟ್ರಲ್ ಜೈಲಿನಲ್ಲಿರುವ ದಿನಗಳಿಂದಲೂ ಪರಿಚರವಿದ್ದರು ಎಂದು ಹೇಳಿದ್ದಾರೆ.

ಒಕ್ಕೂಟ ಸರ್ಕಾರ ಜಾರಿಗೊಳಿಸಿರುವ ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ಹಲವು ಪ್ರಯತ್ನಗಳು ಮಡುತ್ತಿದ್ದು, ಇದು ಕೂಡ ಸರ್ಕಾರದ ಪ್ರಯತ್ನವೇ ಆಗಿದೆ ಎಂದು ರೈತ ನಾಯಕರು ಆರೋಪಿಸಿದ್ದಾರೆ. ಘಟನೆಯ ಸಂಪೂರ್ಣ ತನಿಖೆಗೆ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಲಖಿಂಪುರ್‌ ಹತ್ಯಾಕಾಂಡ: ಅಜಯ್ ಮಿಶ್ರಾ ಬಂಧನ, ವಜಾಗೆ ಆಗ್ರಹಿಸಿ ರೈತರ ರೈಲ್ ರೋಕೋ ಚಳವಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...