Homeಚಳವಳಿರೈತ ಹೋರಾಟ ನೆಲದಲ್ಲಿ ಹತ್ಯೆ: ಬಿಜೆಪಿ ಸಚಿವರೊಂದಿಗೆ ಆರೋಪಿತ ನಿಹಾಂಗ್ ಗುಂಪಿನ ಮುಖ್ಯಸ್ಥ ಸಭೆ

ರೈತ ಹೋರಾಟ ನೆಲದಲ್ಲಿ ಹತ್ಯೆ: ಬಿಜೆಪಿ ಸಚಿವರೊಂದಿಗೆ ಆರೋಪಿತ ನಿಹಾಂಗ್ ಗುಂಪಿನ ಮುಖ್ಯಸ್ಥ ಸಭೆ

ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ನಿಹಾಂಗ್ ಮುಖ್ಯಸ್ಥ ಬಾಬಾ ಅಮನ್ ಸಿಂಗ್, ಬಿಜೆಪಿ ಕಿಸಾನ್ ಮೋರ್ಚಾದ ಸುಖ್ಮೀಂದರ್ ಪಾಲ್ ಸಿಂಗ್ ಗ್ರೇವಾಲ್ ಜುಲೈ ಅಂತ್ಯದಲ್ಲಿ ಸಭೆ ನಡೆಸಿದ್ದರು.

- Advertisement -
- Advertisement -

ಕಳೆದ ಒಂದು ವರ್ಷದಿಂದ ಶಾಂತಿಯುತವಾಗಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಅ.15 ರಂದು ಹೋರಾಟ ನಿರತ ಸಿಂಘು ಗಡಿಯಲ್ಲಿ ದಲಿತ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಇದು ಪ್ರತಿಭಟನೆಯನ್ನು ಹತ್ತಿಕ್ಕಲೂ ಸರ್ಕಾರ ನಡೆಸಿರುವ ಸಂಚು ಎಂದು ರೈತ ಮುಖಂಡರು ಆರೋಪಿಸಿದ್ದರು.

ರೈತ ಮುಖಂಡರ ಆರೋಪಕ್ಕೆ ನಿದರ್ಶನ ಎಂಬಂತೆ ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿರುವ ಆರೋಪಿಗಳ ನಿಹಾಂಗ್ ಗುಂಪಿನ ಮುಖ್ಯಸ್ಥ ಬಾಬಾ ಅಮನ್ ಸಿಂಗ್ ಬಿಜೆಪಿ ಸಚಿವರನ್ನು ಭೇಟಿಯಾಗಿ ಸಭೆ ನಡೆಸಿರುವ ಚಿತ್ರಗಳು ದೊರಕಿದ್ದು, ಎಸ್‌ಕೆಎಂ ಟ್ವೀಟ್ ಮಾಡಿದೆ.

ನಿಹಾಂಗ್ ಪಂಥಗಳಲ್ಲಿ ಒಂದರ ಮುಖ್ಯಸ್ಥ, ಕೆನಡಾದ ಒಂಟಾರಿಯೊದಲ್ಲಿ ನೆಲೆಸಿರುವ ಸಿಖ್ ಗುಂಪಿಂನ ಬಾಬಾ ಅಮನ್ ಸಿಂಗ್, ರೈತರ ಪ್ರತಿಭಟನೆಯನ್ನು ಕೊನೆಗೊಳಿಸಲು ಸರ್ಕಾರದ ಪ್ರಯತ್ನಗಳಲ್ಲಿ ತೆರೆಮರೆಯ  ಪಾತ್ರವನ್ನು ಹೊಂದಿರಬಹುದು ಎಂದು ಶಂಕಿಸಲಾಗಿದೆ ಎಂದು ದಿ ಟ್ರಿಬ್ಯೂನ್ ವರದಿ ಮಾಡಿದೆ.

ಇದನ್ನೂ ಓದಿ: ರೈತ ಹೋರಾಟ ನೆಲದಲ್ಲಿ ಕೊಲೆ: ನಿಹಾಂಗ್‌‌ ಬೆಂಬಲಿತ ವ್ಯಕ್ತಿ ಪೊಲೀಸರಿಗೆ ಶರಣು

ಮೂಲಗಳ ಪ್ರಕಾರ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸಿದ್ದ, ವಜಾಗೊಂಡಿರುವ ಪೊಲೀಸ್ ಅಧಿಕಾರಿ ಗುರ್ಮೀತ್ ‘ಪಿಂಕಿ‘ ಮತ್ತು ಬಿಜೆಪಿ ಕಿಸಾನ್ ಮೋರ್ಚಾದ ಸುಖ್ಮೀಂದರ್ ಪಾಲ್ ಸಿಂಗ್ ಗ್ರೇವಾಲ್ ಈ ವರ್ಷದ ಜುಲೈ ಅಂತ್ಯದಲ್ಲಿ ನವದೆಹಲಿಯ ಕೇಂದ್ರ ಕೃಷಿ ಸಚಿವಾಲಯದ ರಾಜ್ಯ ಸಚಿವ ಕೈಲಾಶ್ ಚೌಧರಿಯ ಬಂಗಲೆಯಲ್ಲಿ ಭೇಟಿಯಾಗಿ ಸಭೆ ನಡೆಸಿದ್ದರು ಎಂದು ತಿಳಿದು ಬಂದಿದೆ.

 

ದಿ ಟ್ರಿಬ್ಯೂನ್ ಈ ಬಗ್ಗೆ ವರದಿ ಮಾಡಿದ್ದು, ವರದಿಯ ತುಣುಕುಗಳನ್ನು ಸಂಯುಕ್ತ ಕಿಸಾನ್ ಮೋರ್ಚಾದ ಅಧಿಕೃತ ಟ್ವಿಟರ್‌ ಖಾತೆ ಕಿಸಾನ್ ಏಕ್ತಾ ಮೋರ್ಚಾ ಹಂಚಿಕೊಂಡಿದೆ. ಜೊತೆಗೆ ಯಾವ ನಿಹಾಂಗ್ ಗುಂಪಿನ ಸದಸ್ಯರು,  ಸಿಂಘು ಗಡಿಯಲ್ಲಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಕ್ಕಾಗಿ ಬಂಧಿಸಲ್ಪಟ್ಟಿದ್ದಾರೋ ಅವರ ಗುಂಪಿನ ಮುಖ್ಯಸ್ಥ ಬಿಜೆಪಿ ಸಚಿವರನ್ನು ಭೇಟಿಯಾಗಿದ್ದಾರೆ ಎಂದು ಹೇಳಿದೆ.

“ಸಿಂಘು ಗಡಿ ಪ್ರಕರಣದಲ್ಲಿ ಹೊಸ ವಿಷಯಗಳು ಕಾಣಿಸಿಕೊಳ್ಳತೊಡಗಿದ್ದು, ಸರ್ಕಾರದಿಂದ ದೊಡ್ಡ ಪಿತೂರಿ ನಡೆದಿದೆ ಎಂದು ತೋರುತ್ತದೆ. ಇದು ಮೂರು ರೈತ ವಿರೋಧಿ ಕಾನೂನುಗಳು ಮತ್ತು ಎಂಎಸ್‌ಪಿ ಬೇಡಿಕೆಯಿಂದ ನಮ್ಮ ಗಮನವನ್ನು ಬೇರೆಡೆಗೆ ಸೆಳೆಯಲು ನಡೆಸುತ್ತಿರುವ ಪಿತೂರಿ. ಆದರೆ ನಾವು ನಮ್ಮ ಬೇಡಿಕೆಗಳಿಗೆ ಬದ್ಧರಾಗಿದ್ದೇವೆ. ಕೃಷಿ ಕಾನೂನನ್ನು ರದ್ದುಗೊಳಿಸಬೇಕು, ಎಂಎಸ್‌ಪಿ ಕಾನೂನನ್ನು ಜಾರಿ ಮಾಡಬೇಕು” ಎಂದು ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಸಿಂಘು ಗಡಿಯಲ್ಲಿ ಲಖ್ಬೀರ್‌‌ ಹತ್ಯೆ ಪ್ರಕರಣ: ಹರಿಂದರ್‌‌‌ ಸಿಂಗ್‌‌ ಬರಹ

ನಿಹಾಂಗ್ ಮುಖ್ಯಸ್ಥ ಬಾಬಾ ಅಮನ್ ಸಿಂಗ್‌ ಬಿಜೆಪಿ ಸಚಿವರ ಜೊತೆಗೆ ಸಭೆ ಮಾಡಿರುವ ಬಗ್ಗೆ ಅಧಿಕೃತ ಹೇಳಿಕೆ ನೀಡಿರುವ ಬಿಜೆಪಿ ಕಿಸಾನ್ ಮೋರ್ಚಾದ ಸುಖ್ಮೀಂದರ್ ಪಾಲ್ ಸಿಂಗ್ ಗ್ರೇವಾಲ್, “ಪಂಜಾಬ್‌ನಲ್ಲಿ  ಕೃಷಿ ಚಳವಳಿಗೆ ಕೋಮು ಸೌಹಾರ್ದತೆಯನ್ನು ಹಾಳುಗೆಡವದಂತಹ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳಲು ಸಭೆಗಳನ್ನು ನಡೆಸಿದ್ದೇವೆ. ಬಾಬಾ ಅಮನ್ ಸಿಂಗ್ ಅಂತಹ ಒಂದು ಸಭೆಯಲ್ಲಿ ಭಾಗವಹಿಸಿದ್ದರು. ಅವರು ಕೂಡ ಸಮಸ್ಯೆಯನ್ನು ಪರಿಹರಿಸಬೇಕೆಂದು ಬಯಸಿದ್ದರು. ಕೆನಡಾದ ಒಂಟಾರಿಯೊ ಸಿಖ್ಖರು ಮತ್ತು ಗುರುದ್ವಾರ ಕೌನ್ಸಿಲ್ ಈ ಪ್ರಯತ್ನದಲ್ಲಿ ನಮಗೆ ಸಹಾಯ ಮಾಡುತ್ತಿದೆ” ಎಂದಿದ್ದಾರೆ ಎಂದು ದಿ ಟ್ರಿಬ್ಯೂನ್‌ ವರದಿ ಮಾಡಿದೆ.

ಇದೇ ಸಭೆಯಲ್ಲಿದ್ದ ವಜಾಗೊಂಡಿರುವ ಪೊಲೀಸ್ ಅಧಿಕಾರಿ ಗುರ್ಮೀತ್ ‘ಪಿಂಕಿ’, ನಿಹಾಂಗ್ ಮುಖ್ಯಸ್ಥ ಅಮನ್ ಸಿಂಗ್ ಬಾಬಾ ಪಟಿಯಾಲಾದ ಸೆಂಟ್ರಲ್ ಜೈಲಿನಲ್ಲಿರುವ ದಿನಗಳಿಂದಲೂ ಪರಿಚರವಿದ್ದರು ಎಂದು ಹೇಳಿದ್ದಾರೆ.

ಒಕ್ಕೂಟ ಸರ್ಕಾರ ಜಾರಿಗೊಳಿಸಿರುವ ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ಹಲವು ಪ್ರಯತ್ನಗಳು ಮಡುತ್ತಿದ್ದು, ಇದು ಕೂಡ ಸರ್ಕಾರದ ಪ್ರಯತ್ನವೇ ಆಗಿದೆ ಎಂದು ರೈತ ನಾಯಕರು ಆರೋಪಿಸಿದ್ದಾರೆ. ಘಟನೆಯ ಸಂಪೂರ್ಣ ತನಿಖೆಗೆ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಲಖಿಂಪುರ್‌ ಹತ್ಯಾಕಾಂಡ: ಅಜಯ್ ಮಿಶ್ರಾ ಬಂಧನ, ವಜಾಗೆ ಆಗ್ರಹಿಸಿ ರೈತರ ರೈಲ್ ರೋಕೋ ಚಳವಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...