Homeಚಳವಳಿರೈತ ಹೋರಾಟ ನೆಲದಲ್ಲಿ ಹತ್ಯೆ: ಬಿಜೆಪಿ ಸಚಿವರೊಂದಿಗೆ ಆರೋಪಿತ ನಿಹಾಂಗ್ ಗುಂಪಿನ ಮುಖ್ಯಸ್ಥ ಸಭೆ

ರೈತ ಹೋರಾಟ ನೆಲದಲ್ಲಿ ಹತ್ಯೆ: ಬಿಜೆಪಿ ಸಚಿವರೊಂದಿಗೆ ಆರೋಪಿತ ನಿಹಾಂಗ್ ಗುಂಪಿನ ಮುಖ್ಯಸ್ಥ ಸಭೆ

ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ನಿಹಾಂಗ್ ಮುಖ್ಯಸ್ಥ ಬಾಬಾ ಅಮನ್ ಸಿಂಗ್, ಬಿಜೆಪಿ ಕಿಸಾನ್ ಮೋರ್ಚಾದ ಸುಖ್ಮೀಂದರ್ ಪಾಲ್ ಸಿಂಗ್ ಗ್ರೇವಾಲ್ ಜುಲೈ ಅಂತ್ಯದಲ್ಲಿ ಸಭೆ ನಡೆಸಿದ್ದರು.

- Advertisement -
- Advertisement -

ಕಳೆದ ಒಂದು ವರ್ಷದಿಂದ ಶಾಂತಿಯುತವಾಗಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಅ.15 ರಂದು ಹೋರಾಟ ನಿರತ ಸಿಂಘು ಗಡಿಯಲ್ಲಿ ದಲಿತ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಇದು ಪ್ರತಿಭಟನೆಯನ್ನು ಹತ್ತಿಕ್ಕಲೂ ಸರ್ಕಾರ ನಡೆಸಿರುವ ಸಂಚು ಎಂದು ರೈತ ಮುಖಂಡರು ಆರೋಪಿಸಿದ್ದರು.

ರೈತ ಮುಖಂಡರ ಆರೋಪಕ್ಕೆ ನಿದರ್ಶನ ಎಂಬಂತೆ ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿರುವ ಆರೋಪಿಗಳ ನಿಹಾಂಗ್ ಗುಂಪಿನ ಮುಖ್ಯಸ್ಥ ಬಾಬಾ ಅಮನ್ ಸಿಂಗ್ ಬಿಜೆಪಿ ಸಚಿವರನ್ನು ಭೇಟಿಯಾಗಿ ಸಭೆ ನಡೆಸಿರುವ ಚಿತ್ರಗಳು ದೊರಕಿದ್ದು, ಎಸ್‌ಕೆಎಂ ಟ್ವೀಟ್ ಮಾಡಿದೆ.

ನಿಹಾಂಗ್ ಪಂಥಗಳಲ್ಲಿ ಒಂದರ ಮುಖ್ಯಸ್ಥ, ಕೆನಡಾದ ಒಂಟಾರಿಯೊದಲ್ಲಿ ನೆಲೆಸಿರುವ ಸಿಖ್ ಗುಂಪಿಂನ ಬಾಬಾ ಅಮನ್ ಸಿಂಗ್, ರೈತರ ಪ್ರತಿಭಟನೆಯನ್ನು ಕೊನೆಗೊಳಿಸಲು ಸರ್ಕಾರದ ಪ್ರಯತ್ನಗಳಲ್ಲಿ ತೆರೆಮರೆಯ  ಪಾತ್ರವನ್ನು ಹೊಂದಿರಬಹುದು ಎಂದು ಶಂಕಿಸಲಾಗಿದೆ ಎಂದು ದಿ ಟ್ರಿಬ್ಯೂನ್ ವರದಿ ಮಾಡಿದೆ.

ಇದನ್ನೂ ಓದಿ: ರೈತ ಹೋರಾಟ ನೆಲದಲ್ಲಿ ಕೊಲೆ: ನಿಹಾಂಗ್‌‌ ಬೆಂಬಲಿತ ವ್ಯಕ್ತಿ ಪೊಲೀಸರಿಗೆ ಶರಣು

ಮೂಲಗಳ ಪ್ರಕಾರ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸಿದ್ದ, ವಜಾಗೊಂಡಿರುವ ಪೊಲೀಸ್ ಅಧಿಕಾರಿ ಗುರ್ಮೀತ್ ‘ಪಿಂಕಿ‘ ಮತ್ತು ಬಿಜೆಪಿ ಕಿಸಾನ್ ಮೋರ್ಚಾದ ಸುಖ್ಮೀಂದರ್ ಪಾಲ್ ಸಿಂಗ್ ಗ್ರೇವಾಲ್ ಈ ವರ್ಷದ ಜುಲೈ ಅಂತ್ಯದಲ್ಲಿ ನವದೆಹಲಿಯ ಕೇಂದ್ರ ಕೃಷಿ ಸಚಿವಾಲಯದ ರಾಜ್ಯ ಸಚಿವ ಕೈಲಾಶ್ ಚೌಧರಿಯ ಬಂಗಲೆಯಲ್ಲಿ ಭೇಟಿಯಾಗಿ ಸಭೆ ನಡೆಸಿದ್ದರು ಎಂದು ತಿಳಿದು ಬಂದಿದೆ.

 

ದಿ ಟ್ರಿಬ್ಯೂನ್ ಈ ಬಗ್ಗೆ ವರದಿ ಮಾಡಿದ್ದು, ವರದಿಯ ತುಣುಕುಗಳನ್ನು ಸಂಯುಕ್ತ ಕಿಸಾನ್ ಮೋರ್ಚಾದ ಅಧಿಕೃತ ಟ್ವಿಟರ್‌ ಖಾತೆ ಕಿಸಾನ್ ಏಕ್ತಾ ಮೋರ್ಚಾ ಹಂಚಿಕೊಂಡಿದೆ. ಜೊತೆಗೆ ಯಾವ ನಿಹಾಂಗ್ ಗುಂಪಿನ ಸದಸ್ಯರು,  ಸಿಂಘು ಗಡಿಯಲ್ಲಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಕ್ಕಾಗಿ ಬಂಧಿಸಲ್ಪಟ್ಟಿದ್ದಾರೋ ಅವರ ಗುಂಪಿನ ಮುಖ್ಯಸ್ಥ ಬಿಜೆಪಿ ಸಚಿವರನ್ನು ಭೇಟಿಯಾಗಿದ್ದಾರೆ ಎಂದು ಹೇಳಿದೆ.

“ಸಿಂಘು ಗಡಿ ಪ್ರಕರಣದಲ್ಲಿ ಹೊಸ ವಿಷಯಗಳು ಕಾಣಿಸಿಕೊಳ್ಳತೊಡಗಿದ್ದು, ಸರ್ಕಾರದಿಂದ ದೊಡ್ಡ ಪಿತೂರಿ ನಡೆದಿದೆ ಎಂದು ತೋರುತ್ತದೆ. ಇದು ಮೂರು ರೈತ ವಿರೋಧಿ ಕಾನೂನುಗಳು ಮತ್ತು ಎಂಎಸ್‌ಪಿ ಬೇಡಿಕೆಯಿಂದ ನಮ್ಮ ಗಮನವನ್ನು ಬೇರೆಡೆಗೆ ಸೆಳೆಯಲು ನಡೆಸುತ್ತಿರುವ ಪಿತೂರಿ. ಆದರೆ ನಾವು ನಮ್ಮ ಬೇಡಿಕೆಗಳಿಗೆ ಬದ್ಧರಾಗಿದ್ದೇವೆ. ಕೃಷಿ ಕಾನೂನನ್ನು ರದ್ದುಗೊಳಿಸಬೇಕು, ಎಂಎಸ್‌ಪಿ ಕಾನೂನನ್ನು ಜಾರಿ ಮಾಡಬೇಕು” ಎಂದು ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಸಿಂಘು ಗಡಿಯಲ್ಲಿ ಲಖ್ಬೀರ್‌‌ ಹತ್ಯೆ ಪ್ರಕರಣ: ಹರಿಂದರ್‌‌‌ ಸಿಂಗ್‌‌ ಬರಹ

ನಿಹಾಂಗ್ ಮುಖ್ಯಸ್ಥ ಬಾಬಾ ಅಮನ್ ಸಿಂಗ್‌ ಬಿಜೆಪಿ ಸಚಿವರ ಜೊತೆಗೆ ಸಭೆ ಮಾಡಿರುವ ಬಗ್ಗೆ ಅಧಿಕೃತ ಹೇಳಿಕೆ ನೀಡಿರುವ ಬಿಜೆಪಿ ಕಿಸಾನ್ ಮೋರ್ಚಾದ ಸುಖ್ಮೀಂದರ್ ಪಾಲ್ ಸಿಂಗ್ ಗ್ರೇವಾಲ್, “ಪಂಜಾಬ್‌ನಲ್ಲಿ  ಕೃಷಿ ಚಳವಳಿಗೆ ಕೋಮು ಸೌಹಾರ್ದತೆಯನ್ನು ಹಾಳುಗೆಡವದಂತಹ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳಲು ಸಭೆಗಳನ್ನು ನಡೆಸಿದ್ದೇವೆ. ಬಾಬಾ ಅಮನ್ ಸಿಂಗ್ ಅಂತಹ ಒಂದು ಸಭೆಯಲ್ಲಿ ಭಾಗವಹಿಸಿದ್ದರು. ಅವರು ಕೂಡ ಸಮಸ್ಯೆಯನ್ನು ಪರಿಹರಿಸಬೇಕೆಂದು ಬಯಸಿದ್ದರು. ಕೆನಡಾದ ಒಂಟಾರಿಯೊ ಸಿಖ್ಖರು ಮತ್ತು ಗುರುದ್ವಾರ ಕೌನ್ಸಿಲ್ ಈ ಪ್ರಯತ್ನದಲ್ಲಿ ನಮಗೆ ಸಹಾಯ ಮಾಡುತ್ತಿದೆ” ಎಂದಿದ್ದಾರೆ ಎಂದು ದಿ ಟ್ರಿಬ್ಯೂನ್‌ ವರದಿ ಮಾಡಿದೆ.

ಇದೇ ಸಭೆಯಲ್ಲಿದ್ದ ವಜಾಗೊಂಡಿರುವ ಪೊಲೀಸ್ ಅಧಿಕಾರಿ ಗುರ್ಮೀತ್ ‘ಪಿಂಕಿ’, ನಿಹಾಂಗ್ ಮುಖ್ಯಸ್ಥ ಅಮನ್ ಸಿಂಗ್ ಬಾಬಾ ಪಟಿಯಾಲಾದ ಸೆಂಟ್ರಲ್ ಜೈಲಿನಲ್ಲಿರುವ ದಿನಗಳಿಂದಲೂ ಪರಿಚರವಿದ್ದರು ಎಂದು ಹೇಳಿದ್ದಾರೆ.

ಒಕ್ಕೂಟ ಸರ್ಕಾರ ಜಾರಿಗೊಳಿಸಿರುವ ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ಹಲವು ಪ್ರಯತ್ನಗಳು ಮಡುತ್ತಿದ್ದು, ಇದು ಕೂಡ ಸರ್ಕಾರದ ಪ್ರಯತ್ನವೇ ಆಗಿದೆ ಎಂದು ರೈತ ನಾಯಕರು ಆರೋಪಿಸಿದ್ದಾರೆ. ಘಟನೆಯ ಸಂಪೂರ್ಣ ತನಿಖೆಗೆ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಲಖಿಂಪುರ್‌ ಹತ್ಯಾಕಾಂಡ: ಅಜಯ್ ಮಿಶ್ರಾ ಬಂಧನ, ವಜಾಗೆ ಆಗ್ರಹಿಸಿ ರೈತರ ರೈಲ್ ರೋಕೋ ಚಳವಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...