Homeಮುಖಪುಟಕೇಂದ್ರ ಸರ್ಕಾರದ ನೇಮಕಾತಿಗಳಿಗೆ 'ಒಂದೇ' ಸಾಮಾನ್ಯ ಅರ್ಹತಾ ಪರೀಕ್ಷೆ: ಸಂಸತ್ತು ಒಪ್ಪಿಗೆ

ಕೇಂದ್ರ ಸರ್ಕಾರದ ನೇಮಕಾತಿಗಳಿಗೆ ‘ಒಂದೇ’ ಸಾಮಾನ್ಯ ಅರ್ಹತಾ ಪರೀಕ್ಷೆ: ಸಂಸತ್ತು ಒಪ್ಪಿಗೆ

ಸಚಿವ ಪ್ರಕಾಶ್ ಜಾವಡೇಕರ್ ಇದು ಐತಿಹಾಸಿಕ ನಿರ್ಧಾರವಾಗಿದ್ದು, ಉದ್ಯೋಗಾಕಾಂಕ್ಷಿಗಳು 'ಒಂದು' ಸಾಮಾನ್ಯ ಪರೀಕ್ಷೆಯನ್ನು ತೆಗೆದುಕೊಳ್ಳುವ ಮೂಲಕ, ಹತ್ತಾರು ಪರೀಕ್ಷೆಗಳನ್ನು ಬರೆಯುವ ಸಮಯವನ್ನು ಉಳಿಸಲು ಅವಕಾಶ ನೀಡುತ್ತದೆ ಎಂದಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರದ ಉದ್ಯೋಗಗಳಿಗೆ ಸಾಮಾನ್ಯ ಅರ್ಹತಾ ಪರೀಕ್ಷೆ ನಡೆಸಲು ರಾಷ್ಟ್ರೀಯ ನೇಮಕಾತಿ ಸಂಸ್ಥೆ (ಎನ್‌ಆರ್‌ಎ) ರಚಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದ್ದು, ನೇಮಕಾತಿ ಪ್ರಕ್ರಿಯೆಯಲ್ಲಿ ಇದು ಒಂದು ಮೈಲಿಗಲ್ಲು ಎಂದಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಚಿವ ಪ್ರಕಾಶ್ ಜಾವಡೇಕರ್ ಇದು ಐತಿಹಾಸಿಕ ನಿರ್ಧಾರವಾಗಿದ್ದು, ಉದ್ಯೋಗಾಕಾಂಕ್ಷಿಗಳು ‘ಒಂದು’ ಸಾಮಾನ್ಯ ಪರೀಕ್ಷೆಯನ್ನು ತೆಗೆದುಕೊಳ್ಳುವ ಮೂಲಕ, ಹತ್ತಾರು ಪರೀಕ್ಷೆಗಳನ್ನು ಬರೆಯುವ ಸಮಯವನ್ನು ಉಳಿಸಲು ಅವಕಾಶ ನೀಡುತ್ತದೆ ಎಂದಿದ್ದಾರೆ.

ಇದು ಅನೇಕ ವರ್ಷಗಳಿಂದ ಯುವಕರ ಪ್ರಮುಖ ಬೇಡಿಕೆಯಾಗಿದೆ. ಈಗ ಅದು ಈಡೇರಿದೆ ಎಂದು ಅವರು ಹೇಳಿದರು.

ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಇದನ್ನು ದೇಶದ ಇತಿಹಾಸದಲ್ಲಿ ಒಂದು ಕ್ರಾಂತಿಕಾರಿ ಮತ್ತು ಮೈಲಿಗಲ್ಲು ಎಂದು ಬಣ್ಣಿಸಿದರು.

ಇದು ವಿವಿಧ ಉದ್ಯೋಗಗಳಿಗೆ ಪರೀಕ್ಷೆಗಳನ್ನು ತೆಗೆದುಕೊಳ್ಳಲು ದೂರದ ಪ್ರಯಾಣ ಮಾಡಬೇಕಾದ ಬಡವರಿಗೆ ಮತ್ತು ಮಹಿಳೆಯರಿಗೆ ಸಹಾಯ ಮಾಡುತ್ತದೆ ಎಂದರು.

ಗ್ರೂಪ್ ಬಿ ಮತ್ತು ಗ್ರೂಪ್ ಸಿ (ತಾಂತ್ರಿಕೇತರ) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಕ್ರೀನ್/ಶಾರ್ಟ್‌ಲಿಸ್ಟ್ ಮಾಡಲು ಎನ್‌ಆರ್‌ಎ ಸಾಮಾನ್ಯ ಅರ್ಹತಾ ಪರೀಕ್ಷೆ (ಸಿಇಟಿ) ನಡೆಸಲಿದೆ.

ಎನ್‌ಆರ್‌ಎ ನಲ್ಲಿ, ರೈಲ್ವೆ ಸಚಿವಾಲಯ, ಹಣಕಾಸು ಸಚಿವಾಲಯ/ಹಣಕಾಸು ಸೇವೆಗಳ ಇಲಾಖೆ, ಸಿಬ್ಬಂದಿ ಆಯ್ಕೆ ಆಯೋಗ (ಎಸ್‌ಎಸ್‌ಸಿ), ರೈಲ್ವೆ ನೇಮಕಾತಿ ಮಂಡಳಿ (ಆರ್‌ಆರ್‌ಬಿ) ಮತ್ತು ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ (ಐಬಿಪಿಎಸ್) ಪ್ರತಿನಿಧಿಗಳು ಇರಲಿದ್ದಾರೆ.

ಎನ್‌ಆರ್‌ಎ ಕೇಂದ್ರ ಸರ್ಕಾರದ ನೇಮಕಾತಿ ಕ್ಷೇತ್ರದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಮತ್ತು ಉತ್ತಮ ಅಭ್ಯಾಸಗಳನ್ನು ತರುವ ವಿಶೇಷ ಸಂಸ್ಥೆಯಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಸದ್ಯಕ್ಕೆ, ಸಾಮಾನ್ಯ ಪರೀಕ್ಷೆಯ ಅಂಕಗಳನ್ನು ಮೂರು ಪ್ರಮುಖ ನೇಮಕಾತಿ ಏಜೆನ್ಸಿಗಳು ಬಳಸುತ್ತವೆ. ಇತರ ಏಜೆನ್ಸಿಗಳನ್ನು ನಿರ್ದಿಷ್ಟ ಅವಧಿಯಲ್ಲಿ ಸೇರಿಸಲಾಗುತ್ತದೆ.

ಇದರ ಸಿಇಟಿ ಅಂಕವನ್ನು ಅನ್ನು ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು/ಕೇಂದ್ರಾಡಳಿತ ಪ್ರದೇಶಗಳು, ಸಾರ್ವಜನಿಕ ವಲಯದ ಉದ್ಯಮಗಳು ಮತ್ತು ಖಾಸಗಿ ವಲಯದ ಇತರ ನೇಮಕಾತಿ ಸಂಸ್ಥೆಗಳೊಂದಿಗೆ ಹಂಚಿಕೊಳ್ಳಬಹುದು ಎಂದು ಜಿತೇಂದ್ರ ಸಿಂಗ್ ಹೇಳಿದರು.

ಇದು ನೇಮಕಾತಿಯಲ್ಲಿನ ಖರ್ಚು ಮತ್ತು ಸಮಯವನ್ನು ಉಳಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.

ದೆಹಲಿಯಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ರಾಷ್ಟ್ರೀಯ ನೇಮಕಾತಿ ಸಂಸ್ಥೆ (ಎನ್‌ಆರ್‌ಎ)ಯನ್ನು ಸ್ಥಾಪಿಸಲು ಸರ್ಕಾರ 1,517.57 ಕೋಟಿ ರೂ.ಗಳನ್ನು ಮಂಜೂರು ಮಾಡಿದೆ.

ಇದು ಸರ್ಕಾರದ ಕಾರ್ಯದರ್ಶಿ ಹುದ್ದೆಯ ಅಧ್ಯಕ್ಷರನ್ನು ಹೊಂದಿರುತ್ತದೆ.

ಎನ್‌ಆರ್‌ಎ ಸ್ಥಾಪಿಸುವುದರ ಹೊರತಾಗಿ, 117 ಮಹತ್ವಾಕಾಂಕ್ಷೆಯ ಜಿಲ್ಲೆಗಳಲ್ಲಿ ಪರೀಕ್ಷಾ ಮೂಲಸೌಕರ್ಯಗಳನ್ನು ಸ್ಥಾಪಿಸಲು ವೆಚ್ಚವಾಗಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಪ್ರಸ್ತುತ, ಸರ್ಕಾರಿ ಉದ್ಯೋಗಗಳನ್ನು ಬಯಸುವ ಅಭ್ಯರ್ಥಿಗಳು ಒಂದೇ ರೀತಿಯ ಅರ್ಹತಾ ಷರತ್ತುಗಳನ್ನು ಹೊಂದಿದ್ದರೂ ಸಹ ವಿವಿಧ ಹುದ್ದೆಗಳಿಗೆ ಬಹು ನೇಮಕಾತಿ ಏಜೆನ್ಸಿಗಳು ನಡೆಸುವ ಪ್ರತ್ಯೇಕ ಪರೀಕ್ಷೆಗಳಿಗೆ ಹಾಜರಾಗಬೇಕಾಗುತ್ತದೆ.

ಅಭ್ಯರ್ಥಿಗಳು ಹೀಗೆ ಅನೇಕ ನೇಮಕಾತಿ ಏಜೆನ್ಸಿಗಳಿಗೆ ಶುಲ್ಕವನ್ನು ಪಾವತಿಸುವುದನ್ನು ಕೊನೆಗೊಳಿಸಿದ್ದು, ಈ ಪರೀಕ್ಷೆಗಳಲ್ಲಿ ಹಾಜರಾಗಲು ದೂರದ ಪ್ರಯಾಣವನ್ನು ಕಡಿಮೆಗೊಳಿಸುತ್ತದೆ.

ಈ ಸಾಮಾನ್ಯ ಪರೀಕ್ಷೆಯನ್ನು ನಡೆಸಲು ದೇಶಾದ್ಯಂತ 1,000 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸುವುದು ಆರಂಭಿಕ ಯೋಜನೆಯಾಗಿದೆ ಎಂದು ಜಿತೇಂದ್ರ ಸಿಂಗ್ ಹೇಳಿದರು.

ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಒಂದು ಪರೀಕ್ಷಾ ಕೇಂದ್ರವಿರುತ್ತದೆ ಮತ್ತು ಈ ಸಾಮಾನ್ಯ ಪರೀಕ್ಷೆಯನ್ನು ತೆಗೆದುಕೊಳ್ಳಲು ಯಾವುದೇ ಅಭ್ಯರ್ಥಿಗಳು ತಮ್ಮ ಜಿಲ್ಲೆಯಿಂದ ಹೊರಹೋಗಬೇಕಾಗಿಲ್ಲ ಎಂದು ಅವರು ಹೇಳಿದರು.

ಈ ಪ್ರತಿಯೊಂದು ಪರೀಕ್ಷೆಯಲ್ಲಿ ಸರಾಸರಿ 2.5 ಕೋಟಿಯಿಂದ 3 ಕೋಟಿ ಅಭ್ಯರ್ಥಿಗಳು ಹಾಜರಾಗುತ್ತಾರೆ.

ಸಾಮಾನ್ಯ ಅರ್ಹತಾ ಪರೀಕ್ಷೆಯನ್ನು ಒಮ್ಮೆ ತೆಗೆದುಕೊಂಡರೆ ಅದು ಉನ್ನತ ಮಟ್ಟದ ಯಾವುದೇ/ಎಲ್ಲಾ ನೇಮಕಾತಿ ಏಜೆನ್ಸಿಗಳಿಗೆ ಅನ್ವಯಿಸುತ್ತದೆ ಎಂದು ಅವರು ಹೇಳಿದರು.


ಇದನ್ನೂ ಓದಿ: ಶೋಷಿತರಿಗೆ ಮೀಸಲಾತಿ ಯಾಕೆ ಬೇಕಿದೆ? : ವಿಕಾಸ್‌ ಆರ್‌ ಮೌರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...