Homeಮುಖಪುಟಕೇಂದ್ರ ಸರ್ಕಾರದ ನೇಮಕಾತಿಗಳಿಗೆ 'ಒಂದೇ' ಸಾಮಾನ್ಯ ಅರ್ಹತಾ ಪರೀಕ್ಷೆ: ಸಂಸತ್ತು ಒಪ್ಪಿಗೆ

ಕೇಂದ್ರ ಸರ್ಕಾರದ ನೇಮಕಾತಿಗಳಿಗೆ ‘ಒಂದೇ’ ಸಾಮಾನ್ಯ ಅರ್ಹತಾ ಪರೀಕ್ಷೆ: ಸಂಸತ್ತು ಒಪ್ಪಿಗೆ

ಸಚಿವ ಪ್ರಕಾಶ್ ಜಾವಡೇಕರ್ ಇದು ಐತಿಹಾಸಿಕ ನಿರ್ಧಾರವಾಗಿದ್ದು, ಉದ್ಯೋಗಾಕಾಂಕ್ಷಿಗಳು 'ಒಂದು' ಸಾಮಾನ್ಯ ಪರೀಕ್ಷೆಯನ್ನು ತೆಗೆದುಕೊಳ್ಳುವ ಮೂಲಕ, ಹತ್ತಾರು ಪರೀಕ್ಷೆಗಳನ್ನು ಬರೆಯುವ ಸಮಯವನ್ನು ಉಳಿಸಲು ಅವಕಾಶ ನೀಡುತ್ತದೆ ಎಂದಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರದ ಉದ್ಯೋಗಗಳಿಗೆ ಸಾಮಾನ್ಯ ಅರ್ಹತಾ ಪರೀಕ್ಷೆ ನಡೆಸಲು ರಾಷ್ಟ್ರೀಯ ನೇಮಕಾತಿ ಸಂಸ್ಥೆ (ಎನ್‌ಆರ್‌ಎ) ರಚಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದ್ದು, ನೇಮಕಾತಿ ಪ್ರಕ್ರಿಯೆಯಲ್ಲಿ ಇದು ಒಂದು ಮೈಲಿಗಲ್ಲು ಎಂದಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಚಿವ ಪ್ರಕಾಶ್ ಜಾವಡೇಕರ್ ಇದು ಐತಿಹಾಸಿಕ ನಿರ್ಧಾರವಾಗಿದ್ದು, ಉದ್ಯೋಗಾಕಾಂಕ್ಷಿಗಳು ‘ಒಂದು’ ಸಾಮಾನ್ಯ ಪರೀಕ್ಷೆಯನ್ನು ತೆಗೆದುಕೊಳ್ಳುವ ಮೂಲಕ, ಹತ್ತಾರು ಪರೀಕ್ಷೆಗಳನ್ನು ಬರೆಯುವ ಸಮಯವನ್ನು ಉಳಿಸಲು ಅವಕಾಶ ನೀಡುತ್ತದೆ ಎಂದಿದ್ದಾರೆ.

ಇದು ಅನೇಕ ವರ್ಷಗಳಿಂದ ಯುವಕರ ಪ್ರಮುಖ ಬೇಡಿಕೆಯಾಗಿದೆ. ಈಗ ಅದು ಈಡೇರಿದೆ ಎಂದು ಅವರು ಹೇಳಿದರು.

ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಇದನ್ನು ದೇಶದ ಇತಿಹಾಸದಲ್ಲಿ ಒಂದು ಕ್ರಾಂತಿಕಾರಿ ಮತ್ತು ಮೈಲಿಗಲ್ಲು ಎಂದು ಬಣ್ಣಿಸಿದರು.

ಇದು ವಿವಿಧ ಉದ್ಯೋಗಗಳಿಗೆ ಪರೀಕ್ಷೆಗಳನ್ನು ತೆಗೆದುಕೊಳ್ಳಲು ದೂರದ ಪ್ರಯಾಣ ಮಾಡಬೇಕಾದ ಬಡವರಿಗೆ ಮತ್ತು ಮಹಿಳೆಯರಿಗೆ ಸಹಾಯ ಮಾಡುತ್ತದೆ ಎಂದರು.

ಗ್ರೂಪ್ ಬಿ ಮತ್ತು ಗ್ರೂಪ್ ಸಿ (ತಾಂತ್ರಿಕೇತರ) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಕ್ರೀನ್/ಶಾರ್ಟ್‌ಲಿಸ್ಟ್ ಮಾಡಲು ಎನ್‌ಆರ್‌ಎ ಸಾಮಾನ್ಯ ಅರ್ಹತಾ ಪರೀಕ್ಷೆ (ಸಿಇಟಿ) ನಡೆಸಲಿದೆ.

ಎನ್‌ಆರ್‌ಎ ನಲ್ಲಿ, ರೈಲ್ವೆ ಸಚಿವಾಲಯ, ಹಣಕಾಸು ಸಚಿವಾಲಯ/ಹಣಕಾಸು ಸೇವೆಗಳ ಇಲಾಖೆ, ಸಿಬ್ಬಂದಿ ಆಯ್ಕೆ ಆಯೋಗ (ಎಸ್‌ಎಸ್‌ಸಿ), ರೈಲ್ವೆ ನೇಮಕಾತಿ ಮಂಡಳಿ (ಆರ್‌ಆರ್‌ಬಿ) ಮತ್ತು ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ (ಐಬಿಪಿಎಸ್) ಪ್ರತಿನಿಧಿಗಳು ಇರಲಿದ್ದಾರೆ.

ಎನ್‌ಆರ್‌ಎ ಕೇಂದ್ರ ಸರ್ಕಾರದ ನೇಮಕಾತಿ ಕ್ಷೇತ್ರದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಮತ್ತು ಉತ್ತಮ ಅಭ್ಯಾಸಗಳನ್ನು ತರುವ ವಿಶೇಷ ಸಂಸ್ಥೆಯಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಸದ್ಯಕ್ಕೆ, ಸಾಮಾನ್ಯ ಪರೀಕ್ಷೆಯ ಅಂಕಗಳನ್ನು ಮೂರು ಪ್ರಮುಖ ನೇಮಕಾತಿ ಏಜೆನ್ಸಿಗಳು ಬಳಸುತ್ತವೆ. ಇತರ ಏಜೆನ್ಸಿಗಳನ್ನು ನಿರ್ದಿಷ್ಟ ಅವಧಿಯಲ್ಲಿ ಸೇರಿಸಲಾಗುತ್ತದೆ.

ಇದರ ಸಿಇಟಿ ಅಂಕವನ್ನು ಅನ್ನು ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು/ಕೇಂದ್ರಾಡಳಿತ ಪ್ರದೇಶಗಳು, ಸಾರ್ವಜನಿಕ ವಲಯದ ಉದ್ಯಮಗಳು ಮತ್ತು ಖಾಸಗಿ ವಲಯದ ಇತರ ನೇಮಕಾತಿ ಸಂಸ್ಥೆಗಳೊಂದಿಗೆ ಹಂಚಿಕೊಳ್ಳಬಹುದು ಎಂದು ಜಿತೇಂದ್ರ ಸಿಂಗ್ ಹೇಳಿದರು.

ಇದು ನೇಮಕಾತಿಯಲ್ಲಿನ ಖರ್ಚು ಮತ್ತು ಸಮಯವನ್ನು ಉಳಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.

ದೆಹಲಿಯಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ರಾಷ್ಟ್ರೀಯ ನೇಮಕಾತಿ ಸಂಸ್ಥೆ (ಎನ್‌ಆರ್‌ಎ)ಯನ್ನು ಸ್ಥಾಪಿಸಲು ಸರ್ಕಾರ 1,517.57 ಕೋಟಿ ರೂ.ಗಳನ್ನು ಮಂಜೂರು ಮಾಡಿದೆ.

ಇದು ಸರ್ಕಾರದ ಕಾರ್ಯದರ್ಶಿ ಹುದ್ದೆಯ ಅಧ್ಯಕ್ಷರನ್ನು ಹೊಂದಿರುತ್ತದೆ.

ಎನ್‌ಆರ್‌ಎ ಸ್ಥಾಪಿಸುವುದರ ಹೊರತಾಗಿ, 117 ಮಹತ್ವಾಕಾಂಕ್ಷೆಯ ಜಿಲ್ಲೆಗಳಲ್ಲಿ ಪರೀಕ್ಷಾ ಮೂಲಸೌಕರ್ಯಗಳನ್ನು ಸ್ಥಾಪಿಸಲು ವೆಚ್ಚವಾಗಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಪ್ರಸ್ತುತ, ಸರ್ಕಾರಿ ಉದ್ಯೋಗಗಳನ್ನು ಬಯಸುವ ಅಭ್ಯರ್ಥಿಗಳು ಒಂದೇ ರೀತಿಯ ಅರ್ಹತಾ ಷರತ್ತುಗಳನ್ನು ಹೊಂದಿದ್ದರೂ ಸಹ ವಿವಿಧ ಹುದ್ದೆಗಳಿಗೆ ಬಹು ನೇಮಕಾತಿ ಏಜೆನ್ಸಿಗಳು ನಡೆಸುವ ಪ್ರತ್ಯೇಕ ಪರೀಕ್ಷೆಗಳಿಗೆ ಹಾಜರಾಗಬೇಕಾಗುತ್ತದೆ.

ಅಭ್ಯರ್ಥಿಗಳು ಹೀಗೆ ಅನೇಕ ನೇಮಕಾತಿ ಏಜೆನ್ಸಿಗಳಿಗೆ ಶುಲ್ಕವನ್ನು ಪಾವತಿಸುವುದನ್ನು ಕೊನೆಗೊಳಿಸಿದ್ದು, ಈ ಪರೀಕ್ಷೆಗಳಲ್ಲಿ ಹಾಜರಾಗಲು ದೂರದ ಪ್ರಯಾಣವನ್ನು ಕಡಿಮೆಗೊಳಿಸುತ್ತದೆ.

ಈ ಸಾಮಾನ್ಯ ಪರೀಕ್ಷೆಯನ್ನು ನಡೆಸಲು ದೇಶಾದ್ಯಂತ 1,000 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸುವುದು ಆರಂಭಿಕ ಯೋಜನೆಯಾಗಿದೆ ಎಂದು ಜಿತೇಂದ್ರ ಸಿಂಗ್ ಹೇಳಿದರು.

ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಒಂದು ಪರೀಕ್ಷಾ ಕೇಂದ್ರವಿರುತ್ತದೆ ಮತ್ತು ಈ ಸಾಮಾನ್ಯ ಪರೀಕ್ಷೆಯನ್ನು ತೆಗೆದುಕೊಳ್ಳಲು ಯಾವುದೇ ಅಭ್ಯರ್ಥಿಗಳು ತಮ್ಮ ಜಿಲ್ಲೆಯಿಂದ ಹೊರಹೋಗಬೇಕಾಗಿಲ್ಲ ಎಂದು ಅವರು ಹೇಳಿದರು.

ಈ ಪ್ರತಿಯೊಂದು ಪರೀಕ್ಷೆಯಲ್ಲಿ ಸರಾಸರಿ 2.5 ಕೋಟಿಯಿಂದ 3 ಕೋಟಿ ಅಭ್ಯರ್ಥಿಗಳು ಹಾಜರಾಗುತ್ತಾರೆ.

ಸಾಮಾನ್ಯ ಅರ್ಹತಾ ಪರೀಕ್ಷೆಯನ್ನು ಒಮ್ಮೆ ತೆಗೆದುಕೊಂಡರೆ ಅದು ಉನ್ನತ ಮಟ್ಟದ ಯಾವುದೇ/ಎಲ್ಲಾ ನೇಮಕಾತಿ ಏಜೆನ್ಸಿಗಳಿಗೆ ಅನ್ವಯಿಸುತ್ತದೆ ಎಂದು ಅವರು ಹೇಳಿದರು.


ಇದನ್ನೂ ಓದಿ: ಶೋಷಿತರಿಗೆ ಮೀಸಲಾತಿ ಯಾಕೆ ಬೇಕಿದೆ? : ವಿಕಾಸ್‌ ಆರ್‌ ಮೌರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...