Homeಕರ್ನಾಟಕಏಕಪತ್ನಿ ವ್ರತಸ್ಥ ವಿವಾದ: ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ತಮ್ಮ ವೈವಾಹಿಕ ಸಂಬಂಧವನ್ನು ಬಹಿರಂಗಪಡಿಸಲಿ- ಸಿದ್ದರಾಮಯ್ಯ

ಏಕಪತ್ನಿ ವ್ರತಸ್ಥ ವಿವಾದ: ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ತಮ್ಮ ವೈವಾಹಿಕ ಸಂಬಂಧವನ್ನು ಬಹಿರಂಗಪಡಿಸಲಿ- ಸಿದ್ದರಾಮಯ್ಯ

- Advertisement -
- Advertisement -

“ರಾಜ್ಯದ ಯಾವ ಶಾಸಕರೂ ಏಕಪತ್ನಿ ವ್ರತಸ್ಥರಲ್ಲ” ಎಂಬ ಸಚಿವ ಸುಧಾಕರ್‌ ಹೇಳಿಕೆ ಬಿಜೆಪಿ ಶಾಸಕರಿಗೂ ಅನ್ವಯವಾಗುವ ಕಾರಣ, ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಎಲ್ಲರೂ ತಕ್ಷಣ ತಮ್ಮ ವೈವಾಹಿಕ ಸಂಬಂಧವನ್ನು ಸಾರ್ವಜನಿಕವಾಗಿ ಸ್ಪಷ್ಟಪಡಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಗುರುವಾರ ಆ‌ಗ್ರಹಿಸಿದ್ದಾರೆ.

ಸಚಿವ ಸುಧಾಕರ ಅವರು ಬುಧವಾರ ಮಾತನಾಡುತ್ತಾ ಎಲ್ಲಾ ಶಾಸಕರು ಏಕಪತ್ನಿ ವ್ರತಸ್ಥರೇ ಎಂದು ಪ್ರಶ್ನಿಸಿದ್ದರು. ಇದು ಸದನದಲ್ಲಿ ಭಾರಿ ಗದ್ದಲವನ್ನು ಸೃಷ್ಟಿಸಿತ್ತು. ಈ ಬಗ್ಗೆ ಸಿದ್ದರಾಮಯ್ಯ ಗುರುವಾರ ಸರಣಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: 224 ಶಾಸಕರು ಶ್ರೀರಾಮಚಂದ್ರರೇ?: ಹೇಳಿಕೆಗೆ ವಿಷಾಧ ವ್ಯಕ್ತಪಡಿಸಿದ ಸಚಿವ ಸುಧಾಕರ್!

“ಸಚಿವ ಸುಧಾಕರ್‌ ಹೇಳಿಕೆಯನ್ನು ಕರ್ನಾಟಕದ ಬಿಜೆಪಿ ಶಾಸಕರು ಶಾಸಕರು ವಿರೋಧಿಸುವುದಾಗಿದ್ದರೆ ನಮ್ಮ ಪಕ್ಷದ ಶಾಸಕರೆಲ್ಲರೂ ಸ್ವ ಇಚ್ಚೆಯಿಂದ ತನಿಖೆಗೆ ಒಳಪಡಲು ನಿರ್ಧರಿಸಿದಂತೆ ಅವರೂ ಕೂಡಾ ಮುಖ್ಯಮಂತ್ರಿಗೆ ತಕ್ಷಣ ಪತ್ರ ಬರೆದು ತಮ್ಮ ಬಗ್ಗೆ ಕೂಡಾ ತನಿಖೆ ನಡೆಯಬೇಕೆಂದು ಮನವಿ ಮಾಡಬೇಕು” ಎಂದು ಅವರು ಆಗ್ರಹಿಸಿದ್ದಾರೆ.

“ಸಚಿವ ಸುಧಾಕರ್‌ ಹೇಳಿಕೆಯನ್ನು ಬಿಜೆಪಿ ಶಾಸಕರು ಒಪ್ಪಿಕೊಳ್ಳುವುದಾದರೆ, ರಾಜ್ಯ ಸರ್ಕಾರ ತಕ್ಷಣ ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 494 ಮತ್ತು 495ರ ಅನ್ವಯ ಕಾನೂನು ಕ್ರಮಕೈಗೊಳ್ಳಬೇಕು. 1955ರ ಹಿಂದೂ ವಿವಾಹ ಕಾಯ್ದೆಯಡಿ ಬಹುಪತ್ನಿತ್ವ ಕಾನೂನು ಪ್ರಕಾರ ಅಪರಾಧವಾಗಿದೆ” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಭಾಧ್ಯಕ್ಷರು ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ರಾಜ್ಯದ 225 ಶಾಸಕರ ಮಾನಹಾನಿ:ಸಿದ್ದರಾಮಯ್ಯ

ಬುಧವಾರ ರಾತ್ರಿ ಕೂಡಾ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, “ಸಚಿವ ಡಾ.ಸುಧಾಕರ್ ನೀಡಿರುವ ಉದ್ದಟತನದ ಹೇಳಿಕೆಯಿಂದ ವಿಧಾನಸಭಾ ಸಭಾಧ್ಯಕ್ಷರು ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೂ ಸೇರಿದಂತೆ ರಾಜ್ಯದ 225 ಶಾಸಕರ ಮಾನಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಮೇಶ್ ಜಾರಕಿಹೊಳಿಯವರಿಗೆ ಸಂಬಂಧಿಸಿದ ಸಿಡಿ ಹಗರಣದ ಜೊತೆ ಈ ಆರೋಪದ ಬಗ್ಗೆಯೂ ಹೈಕೋರ್ಟ್ ಹಾಲಿ ನ್ಯಾಯಾಧೀಶರ ಮೇಲುಸ್ತುವಾರಿಯಲ್ಲಿ ವಿಶೇಷ ತನಿಖಾ ತಂಡ ತನಿಖೆ ನಡೆಸಿ ಸತ್ಯಸಂಗತಿಯನ್ನು ಬಹಿರಂಗ ಪಡಿಸಬೇಕು” ಎಂದು ಆಗ್ರಹಿಸಿದ್ದರು.

ಇದನ್ನೂ ಓದಿ: ’ಗೋಮಾಂಸ ರಾಷ್ಟ್ರೀಯ ಆಹಾರ’ ಎಂದ ಬಿಜೆಪಿ ಅಭ್ಯರ್ಥಿ ವಿರುದ್ಧ ಎಫ್‌ಐಆರ್ ದಾಖಲು‌

“ಕಾನೂನಿನ ಹೋರಾಟದ ಮೂಲಕ ಈ ಪ್ರಕರಣವನ್ನು ಹೇಗೆ ಎದುರಿಸಬೇಕು ಎಂಬ ಬಗ್ಗೆ ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸುತ್ತಿದ್ದೇವೆ. ಇಂತಹ ನಿಂದನಾತ್ಮಕ ಹೇಳಿಕೆ ನೀಡಿರುವ ಸಚಿವ ಡಾ.ಸುಧಾಕರ್ ವಿರುದ್ದ ಪ್ರತ್ಯೇಕವಾಗಿ ಮಾನನಷ್ಟ ಮೊಕದ್ದಮೆ ಹಾಕಬೇಕು ಎಂದು ಕೆಲವು ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳುತ್ತೇವೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯದೆ ನಾವು ಬಿಡುವುದಿಲ್ಲ. ಸುಧಾಕರ್ ಒಬ್ಬ ಸಾಮಾನ್ಯ ವ್ಯಕ್ತಿ ಅಲ್ಲ, ಅವರೊಬ್ಬ ಜನಪ್ರತಿನಿಧಿ ಮತ್ತು ಸಚಿವ. ಇಂತಹವರು ನಾಲಿಗೆ ಸಡಿಲು ಬಿಟ್ಟು ಬೇರೆ ಜನಪ್ರತಿನಿಧಿಗಳನ್ನು ನಿಂದಿಸಿರುವುದು ಸ್ಪಷ್ಟವಾಗಿ ಸದಸ್ಯರ ವಿಶೇಷ ರಕ್ಷಣೆಯ (Privilage) ಉಲ್ಲಂಘಣೆಯಾಗಿದೆ. ಸುಧಾಕರ್ ಸ್ಥಿತಿ ತಾ ಕಳ್ಳ ಇತರರನ್ನು ನಂಬ ಎಂಬಂತಾಗಿದೆ” ಎಂದು ಅವರು ವ್ಯಂಗ್ಯವಾಡಿದ್ದಾರೆ.

“ಪುರುಷಪ್ರಧಾನ ಸಮಾಜದಲ್ಲಿ ಪುರುಷ ಶಾಸಕರು ಇಂತಹ ಆರೋಪಗಳನ್ನು ಸುಲಭವಾಗಿ ಜೀರ್ಣಿಸಿಕೊಳ್ಳಬಲ್ಲರು. ಆದರೆ ಮಹಿಳಾ ಶಾಸಕರಿಗೆ ಇಂತಹ ಸುಳ್ಳು ಆರೋಪಗಳು ಬಹಳ ಹಾನಿ ಉಂಟುಮಾಡುತ್ತದೆ. ಅವರು ಮನೆಯಲ್ಲಿ ಕುಟುಂಬದವರನ್ನು ಹೇಗೆ ಎದುರಿಸಬೇಕು? ಇಂತಹ ಕೀಳು ಮನಸ್ಸಿನ ಪುರುಷ ರಾಜಕಾರಣಿಗಳ ಕಾರಣದಿಂದಾಗಿಯೇ ರಾಜಕೀಯ ಪ್ರವೇಶಕ್ಕೆ ಮಹಿಳೆಯರು ಹಿಂದೇಟು ಹಾಕುತ್ತಿದ್ದಾರೆ” ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ’ಮಮತಾ ಬರ್ಮೋಡಾ ಧರಿಸಲಿ’ ಎಂಬ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಹೇಳಿಕೆಗೆ ವ್ಯಾಪಕ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...