Homeಕರ್ನಾಟಕಏಕಪತ್ನಿ ವ್ರತಸ್ಥ ವಿವಾದ: ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ತಮ್ಮ ವೈವಾಹಿಕ ಸಂಬಂಧವನ್ನು ಬಹಿರಂಗಪಡಿಸಲಿ- ಸಿದ್ದರಾಮಯ್ಯ

ಏಕಪತ್ನಿ ವ್ರತಸ್ಥ ವಿವಾದ: ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ತಮ್ಮ ವೈವಾಹಿಕ ಸಂಬಂಧವನ್ನು ಬಹಿರಂಗಪಡಿಸಲಿ- ಸಿದ್ದರಾಮಯ್ಯ

- Advertisement -
- Advertisement -

“ರಾಜ್ಯದ ಯಾವ ಶಾಸಕರೂ ಏಕಪತ್ನಿ ವ್ರತಸ್ಥರಲ್ಲ” ಎಂಬ ಸಚಿವ ಸುಧಾಕರ್‌ ಹೇಳಿಕೆ ಬಿಜೆಪಿ ಶಾಸಕರಿಗೂ ಅನ್ವಯವಾಗುವ ಕಾರಣ, ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಎಲ್ಲರೂ ತಕ್ಷಣ ತಮ್ಮ ವೈವಾಹಿಕ ಸಂಬಂಧವನ್ನು ಸಾರ್ವಜನಿಕವಾಗಿ ಸ್ಪಷ್ಟಪಡಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಗುರುವಾರ ಆ‌ಗ್ರಹಿಸಿದ್ದಾರೆ.

ಸಚಿವ ಸುಧಾಕರ ಅವರು ಬುಧವಾರ ಮಾತನಾಡುತ್ತಾ ಎಲ್ಲಾ ಶಾಸಕರು ಏಕಪತ್ನಿ ವ್ರತಸ್ಥರೇ ಎಂದು ಪ್ರಶ್ನಿಸಿದ್ದರು. ಇದು ಸದನದಲ್ಲಿ ಭಾರಿ ಗದ್ದಲವನ್ನು ಸೃಷ್ಟಿಸಿತ್ತು. ಈ ಬಗ್ಗೆ ಸಿದ್ದರಾಮಯ್ಯ ಗುರುವಾರ ಸರಣಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: 224 ಶಾಸಕರು ಶ್ರೀರಾಮಚಂದ್ರರೇ?: ಹೇಳಿಕೆಗೆ ವಿಷಾಧ ವ್ಯಕ್ತಪಡಿಸಿದ ಸಚಿವ ಸುಧಾಕರ್!

“ಸಚಿವ ಸುಧಾಕರ್‌ ಹೇಳಿಕೆಯನ್ನು ಕರ್ನಾಟಕದ ಬಿಜೆಪಿ ಶಾಸಕರು ಶಾಸಕರು ವಿರೋಧಿಸುವುದಾಗಿದ್ದರೆ ನಮ್ಮ ಪಕ್ಷದ ಶಾಸಕರೆಲ್ಲರೂ ಸ್ವ ಇಚ್ಚೆಯಿಂದ ತನಿಖೆಗೆ ಒಳಪಡಲು ನಿರ್ಧರಿಸಿದಂತೆ ಅವರೂ ಕೂಡಾ ಮುಖ್ಯಮಂತ್ರಿಗೆ ತಕ್ಷಣ ಪತ್ರ ಬರೆದು ತಮ್ಮ ಬಗ್ಗೆ ಕೂಡಾ ತನಿಖೆ ನಡೆಯಬೇಕೆಂದು ಮನವಿ ಮಾಡಬೇಕು” ಎಂದು ಅವರು ಆಗ್ರಹಿಸಿದ್ದಾರೆ.

“ಸಚಿವ ಸುಧಾಕರ್‌ ಹೇಳಿಕೆಯನ್ನು ಬಿಜೆಪಿ ಶಾಸಕರು ಒಪ್ಪಿಕೊಳ್ಳುವುದಾದರೆ, ರಾಜ್ಯ ಸರ್ಕಾರ ತಕ್ಷಣ ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 494 ಮತ್ತು 495ರ ಅನ್ವಯ ಕಾನೂನು ಕ್ರಮಕೈಗೊಳ್ಳಬೇಕು. 1955ರ ಹಿಂದೂ ವಿವಾಹ ಕಾಯ್ದೆಯಡಿ ಬಹುಪತ್ನಿತ್ವ ಕಾನೂನು ಪ್ರಕಾರ ಅಪರಾಧವಾಗಿದೆ” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಭಾಧ್ಯಕ್ಷರು ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ರಾಜ್ಯದ 225 ಶಾಸಕರ ಮಾನಹಾನಿ:ಸಿದ್ದರಾಮಯ್ಯ

ಬುಧವಾರ ರಾತ್ರಿ ಕೂಡಾ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, “ಸಚಿವ ಡಾ.ಸುಧಾಕರ್ ನೀಡಿರುವ ಉದ್ದಟತನದ ಹೇಳಿಕೆಯಿಂದ ವಿಧಾನಸಭಾ ಸಭಾಧ್ಯಕ್ಷರು ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೂ ಸೇರಿದಂತೆ ರಾಜ್ಯದ 225 ಶಾಸಕರ ಮಾನಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಮೇಶ್ ಜಾರಕಿಹೊಳಿಯವರಿಗೆ ಸಂಬಂಧಿಸಿದ ಸಿಡಿ ಹಗರಣದ ಜೊತೆ ಈ ಆರೋಪದ ಬಗ್ಗೆಯೂ ಹೈಕೋರ್ಟ್ ಹಾಲಿ ನ್ಯಾಯಾಧೀಶರ ಮೇಲುಸ್ತುವಾರಿಯಲ್ಲಿ ವಿಶೇಷ ತನಿಖಾ ತಂಡ ತನಿಖೆ ನಡೆಸಿ ಸತ್ಯಸಂಗತಿಯನ್ನು ಬಹಿರಂಗ ಪಡಿಸಬೇಕು” ಎಂದು ಆಗ್ರಹಿಸಿದ್ದರು.

ಇದನ್ನೂ ಓದಿ: ’ಗೋಮಾಂಸ ರಾಷ್ಟ್ರೀಯ ಆಹಾರ’ ಎಂದ ಬಿಜೆಪಿ ಅಭ್ಯರ್ಥಿ ವಿರುದ್ಧ ಎಫ್‌ಐಆರ್ ದಾಖಲು‌

“ಕಾನೂನಿನ ಹೋರಾಟದ ಮೂಲಕ ಈ ಪ್ರಕರಣವನ್ನು ಹೇಗೆ ಎದುರಿಸಬೇಕು ಎಂಬ ಬಗ್ಗೆ ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸುತ್ತಿದ್ದೇವೆ. ಇಂತಹ ನಿಂದನಾತ್ಮಕ ಹೇಳಿಕೆ ನೀಡಿರುವ ಸಚಿವ ಡಾ.ಸುಧಾಕರ್ ವಿರುದ್ದ ಪ್ರತ್ಯೇಕವಾಗಿ ಮಾನನಷ್ಟ ಮೊಕದ್ದಮೆ ಹಾಕಬೇಕು ಎಂದು ಕೆಲವು ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳುತ್ತೇವೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯದೆ ನಾವು ಬಿಡುವುದಿಲ್ಲ. ಸುಧಾಕರ್ ಒಬ್ಬ ಸಾಮಾನ್ಯ ವ್ಯಕ್ತಿ ಅಲ್ಲ, ಅವರೊಬ್ಬ ಜನಪ್ರತಿನಿಧಿ ಮತ್ತು ಸಚಿವ. ಇಂತಹವರು ನಾಲಿಗೆ ಸಡಿಲು ಬಿಟ್ಟು ಬೇರೆ ಜನಪ್ರತಿನಿಧಿಗಳನ್ನು ನಿಂದಿಸಿರುವುದು ಸ್ಪಷ್ಟವಾಗಿ ಸದಸ್ಯರ ವಿಶೇಷ ರಕ್ಷಣೆಯ (Privilage) ಉಲ್ಲಂಘಣೆಯಾಗಿದೆ. ಸುಧಾಕರ್ ಸ್ಥಿತಿ ತಾ ಕಳ್ಳ ಇತರರನ್ನು ನಂಬ ಎಂಬಂತಾಗಿದೆ” ಎಂದು ಅವರು ವ್ಯಂಗ್ಯವಾಡಿದ್ದಾರೆ.

“ಪುರುಷಪ್ರಧಾನ ಸಮಾಜದಲ್ಲಿ ಪುರುಷ ಶಾಸಕರು ಇಂತಹ ಆರೋಪಗಳನ್ನು ಸುಲಭವಾಗಿ ಜೀರ್ಣಿಸಿಕೊಳ್ಳಬಲ್ಲರು. ಆದರೆ ಮಹಿಳಾ ಶಾಸಕರಿಗೆ ಇಂತಹ ಸುಳ್ಳು ಆರೋಪಗಳು ಬಹಳ ಹಾನಿ ಉಂಟುಮಾಡುತ್ತದೆ. ಅವರು ಮನೆಯಲ್ಲಿ ಕುಟುಂಬದವರನ್ನು ಹೇಗೆ ಎದುರಿಸಬೇಕು? ಇಂತಹ ಕೀಳು ಮನಸ್ಸಿನ ಪುರುಷ ರಾಜಕಾರಣಿಗಳ ಕಾರಣದಿಂದಾಗಿಯೇ ರಾಜಕೀಯ ಪ್ರವೇಶಕ್ಕೆ ಮಹಿಳೆಯರು ಹಿಂದೇಟು ಹಾಕುತ್ತಿದ್ದಾರೆ” ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ’ಮಮತಾ ಬರ್ಮೋಡಾ ಧರಿಸಲಿ’ ಎಂಬ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಹೇಳಿಕೆಗೆ ವ್ಯಾಪಕ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...