Homeನ್ಯಾಯ ಪಥಡೇವಿಡ್ ಮ್ಯಾಮೆಟ್ ಮತ್ತು ಅವರ ಉಗ್ರವಾದಿ ಸಿನೆಮಾ ಸಿದ್ಧಾಂತ

ಡೇವಿಡ್ ಮ್ಯಾಮೆಟ್ ಮತ್ತು ಅವರ ಉಗ್ರವಾದಿ ಸಿನೆಮಾ ಸಿದ್ಧಾಂತ

- Advertisement -
- Advertisement -

ಸಿನಿಯಾನ:03

| ರಾಜಶೇಖರ್ ಅಕ್ಕಿ |

`ಮೊದಲ ಶಾಟ್ -ಒಬ್ಬ ಮಹಿಳೆ ಅಳುತ್ತ ಕುಳಿತಿದ್ದಾಳೆ, ಎರಡನೇ ಶಾಟ್- ನೇಣುಗಂಬದ ಪಕ್ಕ ನಿಂತಿರುವ ವ್ಯಕ್ತಿ ತನ್ನ ಗಡಿಯಾರ ನೋಡಿ, ಕ್ಯಾಮರಾ ಕಡೆ ನೋಡುತ್ತಾನೆ

ಪ್ರೇಕ್ಷಕರ ಮನದಲ್ಲಿ ಮೂಡುವುದು- ಓಹ್ ಈ ಮಹಿಳೆಯನ್ನು ಗಲ್ಲಿಗೇರಿಸುವ ಸಮಯ, ಅದಕ್ಕೇ ಅಳುತ್ತಿದ್ದಾಳೆ.

ಈಗ ಇನ್ನೊಂದು ಚಿತ್ರ; ಮೊದಲ ಶಾಟ್ – ಮಹಿಳೆ ಅಳುತ್ತ ಕುಳಿತಿದ್ದ ಅದೇ ಶಾಟ್; ಯಾವುದೇ ಬದಲಾವಣೆ ಇಲ್ಲ. ಎರಡನೇ ಶಾಟ್- ಒಬ್ಬ ನಾಲ್ಕೈದು ವರ್ಷದ ಮಗು ಬ್ಯಾಗ್ ಹಾಕಿಕೊಂಡು ಅಳುತ್ತ ಸ್ಕೂಲ್ ಬಸ್ ಹತ್ತುತ್ತಿದ್ದಾನೆ

ಪ್ರೇಕ್ಷಕರ ಮನದಲ್ಲಿ ಮೂಡುವುದು? ಹೇಳುವ ಅಗತ್ಯವಿಲ್ಲ’

ಡೇವಿಡ್ ಮ್ಯಾಮೆಟ್, ಸಿನೆಮಾ ನಿರ್ದೇಶನದ ಬಗ್ಗೆ ಮಾತನಾಡುತ್ತ.

ಇದನ್ನು ಜಕ್ಸ್ಟಾಪೊಸಿಷನ್ ಎನ್ನುತ್ತಾರೆ. ಇದು ಮೋಂಟಾಜ್ ಥಿಯರಿಯ ಒಂದು ಉದಾಹರಣೆ. ಇದನ್ನು ಮೊದಲ ಸಲ ಪ್ರತಿಪಾದಿಸಿದ್ದು ರಷಿಯಾದ ಚಿತ್ರನಿರ್ದೇಶಕ ಸರ್ಗೇಯ್ ಐಸಿನ್‍ಸ್ಟೇನ್. 1925 ರಲ್ಲಿ ಬಂದ ಬ್ಯಾಟಲ್‍ಶಿಪ್ ಪೊಟಮ್ಕಿನ್ ಎನ್ನುವ ಐತಿಹಾಸಿಕ ಸಿನೆಮಾ ನಿರ್ದೇಶಿಸಿದ್ದು ಇದೇ ಐಸಿನ್‍ಸ್ಟೇನ್.

ಐಸಿನ್‍ಸ್ಟೇನ್‍ನಿಂದ ಪ್ರಭಾವಿತರಾದ ಡೇವಿಡ್ ಮ್ಯಾಮೆಟ್ ಹುಟ್ಟಿದ್ದು 1947ರಲ್ಲಿ. ಶಿಕಾಗೋದಲ್ಲಿ ಹುಟ್ಟಿ ಬೆಳೆದ ಇವರು ಒಬ್ಬ ನಟನಾಗಿ ತನ್ನ ಕಲಾಜೀವನ ಶುರು ಮಾಡಿದರು, ಅದು ಸರಿಹೊಂದಲಿಲ್ಲ ಎಂದು ನಾಟಕಗಳ ನಿರ್ದೇಶನಕ್ಕಿಳಿದರು. ನಂತರ ನಾಟಕ ಬರೆಯೋಕ್ಕೆ ಶುರು ಮಾಡಿದರು. ಸೆಕ್ಷುವಲ್ ಪರ್ವರ್ಸಿಟಿ ಇನ್ ಷಿಕಾಗೋ, ಗ್ಲೆನ್‍ಗೆರಿ ಗ್ಲೆನ್ ರಾಸ್,  ಎ ಲೈಫ್ ಇನ ಥಿಯೇಟರ್ ಎನ್ನುವ ಅನೇಕ ಯಶಸ್ವೀ ನಾಟಕಗಳನ್ನು ಬರೆದರು. ಬರಹ ಮುಂದುವರೆಸುತ್ತ ಸಿನೆಮಾ ಬರೆಯಲು ಶುರು ಮಾಡಿದರು. ಸಿಡ್ನಿ ಲುಮೆಟ್‍ಯ ವರ್ಡಿಕ್ಟ್‍ನ ಚಿತ್ರಕಥೆಯನ್ನು ಬರೆದದ್ದು ಇವರೆ. ಅನೇಕ ಸಿನೆಮಾಗಳಿಗೆ ಬರೆದರೂ ಅದರ ಕ್ರೆಡಿಟ್ ತೆಗೆದುಕೊಳ್ಳಲಿಲ್ಲ. ಹಾಲಿವುಡ್‍ನ ಸ್ಕ್ರಿಪ್ಟ್ ಡಾಕ್ಟರ್ ಆಗಿಯೂ ಪ್ರಸಿದ್ಧರಾದವರು.  1989 ರಲ್ಲಿ ಶಾನ್ ಪೆನ್ ಮತ್ತು ರಾಬರ್ಟ್ ಡಿನೀರೊ ಅಭಿನಯದ ‘ವಿ ಆರ್ ನೋ ಏಂಜೆಲ್ಸ್’ ಎನ್ನುವ ಚಿತ್ರ ನೋಡಿದರೆ ಇವರ ಬರಹದಲ್ಲಿರುವ ನಿಷ್ಠುರತೆ ಎದ್ದು ಕಾಣುತ್ತದೆ.

ಮ್ಯಾಮೆಟ್ ಅವರು ತಮ್ಮ ಸಂಭಾಷಣೆಯ ಶೈಲಿಗಾಗಿಯೇ ವಿಖ್ಯಾತರಾದವರು.

‘ನೀವು ಸಂಭಾಷಣೆ ಚೆನ್ನಾಗಿ ಬರೆಯುತ್ತೀರಿ ಎಂತಿದ್ದರೆ, ಆ ಸಂಭಾಷಣೆಗಳನ್ನು ಸಿನೆಮಾದಲ್ಲಿ ಬಳಸದಿರುವುದೇ ಉತ್ತಮ.’ ಇದು ಸಂಭಾಷಣೆ ಬಗ್ಗೆ ಮ್ಯಾಮೆಟ್ ಹೇಳಿದ್ದು.  ಇಷ್ಟು ನಿಷ್ಠುರವಾಗಿ ಸಂಭಾಷಣೆ ಹೇಗೆ ಬರೆಯುತ್ತೀರಿ ಎಂದು ಕೇಳಿದಾಗ ‘‘ಆಗಿನ್ನೂ ನಮ್ಮ ಮನೆಗಳಲ್ಲಿ ಟಿವಿ ಬಂದಿರದ ಸಮಯ, ಸಂಜೆ ಮನೆಯ ಎಲ್ಲಾ ಸದಸ್ಯರು ಕುಳಿತುಕೊಂಡು ನಾವೆಷ್ಟು ದುಷ್ಟತನದ ಮಾತುಗಳನ್ನು ಆಡಬಹುದೋ ಎನ್ನುವ ಸಾಮಥ್ರ್ಯದ ಆಧಾರದ ಮೇಲೆ ನಮ್ಮನ್ನು ನಾವು ಶೋಚನೀಯ ಮಾಡಿಕೊಳ್ಳುತ್ತ ನಮ್ಮ ಸಮಯ ಕಳೆಯುತಿದ್ದೆವು. ‘ 

ಬರಹಕ್ಕಷ್ಟೇ ನಿಲ್ಲದೇ ಸಿನೆಮಾ ನಿರ್ದೇಶನಕ್ಕೂ ಲಗ್ಗೆ ಇಟ್ಟರು ಮ್ಯಾಮೆಟ್. ಹೌಸ್ ಆಫ್ ಗೇಮ್ಸ್ ಇವರ ನಿರ್ದೇಶನದ ಮೊದಲ ಚಿತ್ರ. ನಂತರ ಹೋಮಿಸೈಡ್, ಸ್ಪಾರ್ಟನ್, ಒಲಿಯಾನಾ, ಸ್ಪ್ಯಾನಿಷ್ ಪ್ರಿಸನರ್ ಇವರು ನಿದೇಶಿಸಿದ ಕೆಲವು ಚಿತ್ರಗಳು. ಇವುಗಳಲ್ಲಿ ಹೆಚ್ಚಿನ ಚಿತ್ರಗಳು ಬಾಕ್ಸಾಫೀಸಿನಲ್ಲಿ ಗೆಲ್ಲಲಿಲ್ಲ.

1991 ರಲ್ಲಿ ಮ್ಯಾಮೆಟ್  ಸಿನೆಮಾ ನಿರ್ದೇಶನದ ಬಗ್ಗೆ ‘ಆನ್ ಡಿರೆಕ್ಟಿಂಗ್ ಫಿಲ್ಮ್’ ಎನ್ನುವ ಪುಸ್ತಕ ಬರೆದರು. ನಮಗೆಲ್ಲಾ ಡೇವಿಡ್ ಮ್ಯಾಮೆಟ್ ಪರಿಚಯವಾಗಿದ್ದು ಈ ಪುಸ್ತಕದಿಂದಲೇ. ಸಿನೆಮಾ ನಿರ್ದೇಶನ ಕಲಿಯುವಾಗ ಓದಲೇಬೇಕಾದ ಪುಸ್ತಕಗಳಾದ ಟಾರ್ಕೋವಸ್ಕಿಯ ‘ಸ್ಕಲ್ಪ್ಟಿಂಗ್ ಇನ್ ಟೈಮ್’, ಸ್ಟೀವನ್ ಕಾಟ್ಜ್‍ನ ‘ಶಾಟ್ ಬೈ ಶಾಟ್’, ಆ್ಯಂಡ್ರಿ ವೈಯದಾ ಅವರ ‘ವೈಯದಾ ಆನ್ ಫಿಲ್ಮ್ಸ್’, ವಾಲ್ಟರ್ ಮರ್ಚ್‍ನ ‘ಇನ್ ದಿ ಬ್ಲಿಂಕ್ ಆಫ್ ಅ್ಯನ್ ಐ’ ಐಸಿನ್‍ಸ್ಟೇನ್ ನ ‘ಫಿಲ್ಮ್ ಸೆನ್ಸ್’ ಇವೆಲ್ಲವುಗಳಲ್ಲಿ ಡೇವಿಡ್ ಮ್ಯಾಮೆಟ್ ಅವರ ಪುಸ್ತಕ ಎಲ್ಲಕ್ಕಿಂತ ಅತಿರೇಕದ ನಿಲುವುಗಳನ್ನು ಹೊಂದಿದ ಪುಸ್ತಕ. ಇವರ ಪುಸ್ತಕದಲ್ಲಿರುವ ಥಿಯರಿ ಮತ್ತು ಇವರು ಪ್ರತಿಪಾದಿಸುವ ಥಿಯರಿಗಳನ್ನು ಅನುಷ್ಠಾನಗೊಳಿಸಿಕೊಳ್ಳಬೇಕೋ ಇಲ್ಲವೋ ಎನ್ನುವದನ್ನು ಚರ್ಚಿಸಬಹುದು ಆದರೆ ಇವರ ಥಿಯರಿಗಳನ್ನು ತಿಳಿದುಕೊಳ್ಳದೇ ಇರುವುದು ಒಬ್ಬ ನಿರ್ದೇಶಕನಿಗೆ ದೊಡ್ಡ ಲಾಸ್.

ಮುಂದೇನಾಗಬೇಕು ಎಂದು ತಿಳಿದುಕೊಳ್ಳಲು ಪ್ರೇಕ್ಷಕನನ್ನು ತುದಿಗಾಲಲ್ಲಿ ನಿಲ್ಲಿಸಬೇಕು, ಪ್ರತಿಯೊಂದು ಶಾಟ್ ಕೂಡ ಅದರ ಮುಂಚಿನ ಶಾಟ್‍ದಿಂದ ಕಥೆಯನ್ನು ಮುಂದುವರೆಸುವಂತಿರಬೇಕು, ಪ್ರೇಕ್ಷಕರಿಗೆ ಎಲ್ಲವನ್ನೂ ಹೇಳುವ ಅವಶ್ಯಕತೆ ಇಲ್ಲ,  ‘ಯಾವುದೇ ಸಿನೆಮಾದ ಮೊದಲ ಹತ್ತು ನಿಮಿಷಗಳನ್ನು ಕತ್ತರಿಸಿಬಿಡಿ, ಚೆನ್ನಾಗಾಗುತ್ತೆ.’ ‘ಸಿನೆಮಾ ಮಾಡುವುದು ಒಂದು ಜೋಕ್ ಇದ್ದಂತೆ, ಪ್ರೇಕ್ಷಕರು ಇನ್ನೇನೋ ನಿರೀಕ್ಸಿಸುತ್ತಿದ್ದಾಗ ಬೇರೇನೋ ಆಗುತ್ತೆ. ಹಾಗಿಲ್ಲದಿದ್ದರೆ ಏನಕ್ಕೆ ನೋಡಬೇಕು ನಿಮ್ಮ ಸಿನೆಮಾ?’

2003ರಲ್ಲಿ ಇರ್ಫಾನ್ ಮತ್ತು ನವಾಝುದ್ದಿನ್ ಸಿದ್ದಿಕಿ ಅಭಿನಯದ ‘ದಿ ಬೈಪಾಸ್’ ಎನ್ನುವ ಕಿರುಚಿತ್ರ ಬಿಡುಗಡೆಯಾಯಿತು. ಆ ಸಿನೆಮಾ ನೋಡಿದರೆ ಅದರ ನಿರ್ದೇಶಕ ಡೇವಿಡ್ ಮ್ಯಾಮೆಟ್‍ನಿಂದ ಎಷ್ಟು ಪ್ರಭಾವಿತರಾಗಿದ್ದಾರೆ ಎಂದು ಸುಲಭವಾಗಿ ತಿಳಿಯುತ್ತದೆ. ಆ ಚಿತ್ರಕ್ಕೆ ನೋಡುಗರಿಂದ, ವಿಮರ್ಶಕರಿಂದ ಮೆಚ್ಚುಗೆಯ ಸುರಿಮಳೆಯಾಯಿತು. ಅನೇಕ ಸಿನಿಹಬ್ಬಗಳಲ್ಲಿ ಪ್ರದರ್ಶಿತವಾಯಿತು. ಆಗತಾನೇ ಮ್ಯಾಮೆಟ್ ಅವರ ಪುಸ್ತಕ ಓದಿ ಪ್ರಭಾವಿತನಾಗಿದ್ದ ನನಗೆ ಆ ಚಿತ್ರ ನೋಡಿ ವಾಕರಿಗೆ ಬಂತು. ನಮಗೆಲ್ಲರಿಗೂ ಗೊತ್ತಿರುವಂತೆ ಸಿನೆಮಾ ಎನ್ನುವುದು ಕಥೆ ಹೇಳುವ ಒಂದು ಮಾಧ್ಯಮ. ದಿ ಬ್ಯಪಾಸ್ ಎನ್ನುವ ಚಿತ್ರದಲ್ಲಿ ಅದನ್ನು ಬಿಟ್ಟು ಆ ಮತಿಗೆಟ್ಟ ನಿರ್ದೇಶಕ ತನ್ನ ಕೌಶಲ್ಯವನ್ನು ಪ್ರದರ್ಶಿಸಲೆಂದೇ ಆ ಚಿತ್ರ ಮಾಡಿದ್ದು.

ಇಂತಹದ್ದೇ ದೌರ್ಬಲ್ಯವನ್ನು ಸ್ವತಃ ಮ್ಯಾಮೆಟ್ ಕೂಡ 2008ರಲ್ಲಿ ಬಂದ ತಮ್ಮ ‘ರೆಡ್‍ಬೆಲ್ಟ್’ ಮಿಕ್ಸಡ್ ಮಾರ್ಷಿಯಲ್ ಆರ್ಟ್‍ನ ಚಿತ್ರದಲ್ಲಿ ಪ್ರದರ್ಶಿಸಿದರು. ಅದು ಒಬ್ಬ ಮಾರ್ಷಿಯಲ್ ಆರ್ಟ್ ತರಬೇತುದಾರನ ಕಥೆ. ಅವನು ಬಿಕ್ಕಟ್ಟಿಗೆ ಸಿಕ್ಕಿಹಾಕಿಕೊಳ್ಳುವುದು, ಅವನ ಹೆಂಡತಿ ಮಾಡಿಕೊಳ್ಳುವ ಸಾಲ, ಇವನ ಸಣ್ಣ ತಪ್ಪಿನಿಂದಾಗಿ ಒಬ್ಬ ಪೋಲೀಸ್ ಅಧಿಕಾರಿಯ ಆತ್ಮಹತ್ಯೆ, ಬಿಕ್ಕಟ್ಟಿನಿಂದ ಹೊರಬರುವ ಯಾವುದೇ ದಾರಿಕಾಣದಿದ್ದಾಗ ಇವನೇನು ಮಾಡುತ್ತಾನೆ ಎನ್ನವುದು ಚಿತ್ರದ ಸಾರಾಂಶ. ಚಿತ್ರ ಒಂದು ಕ್ಷಣವೂ ಬೋರ್ ಹೊಡೆಸುವುದಿಲ್ಲ, ಪ್ರತಯೊಂದು ಶಾಟ್‍ಗೆ ತನ್ನದೇ ಆದ ಉದ್ದೇಶವಿದ್ದು ಕಥೆಯನ್ನು ಯಶಸ್ವಿಯಾಗಿ ಮುಂದೊಯ್ಯುತ್ತದೆ.  ಚಿತ್ರಕಥೆ, ಅಭಿನಯ, ತಾಂತ್ರಿಕತೆ, ನಿರ್ದೇಶನ ಎಲ್ಲವೂ ಸರಿಯಾಗಿಯೇ ಇದ್ದರೂ ಮ್ಯಾಮೆಟ್ ಅವರು ತಮ್ಮ ಬರಹ ಮತ್ತು ನಿರ್ದೇಶನದ ತಮ್ಮದೇ ಸಿದ್ಧಾಂತಗಳಿಗೆ ಜೋತುಬೀಳುವುದರಿಂದ ಚಿತ್ರ ಸೋಲುತ್ತದೆ.

ಆದರೆ ಡೇವಿಡ್ ಮ್ಯಾಮೆಟ್ ಸಿನೆಮಾ ಇತಿಹಾಸದಲ್ಲಿ ಬಹುಮುಖ್ಯ ವ್ಯಕ್ತಿ.  ಸಂಭಾಷಣೆಗಳಲ್ಲಿ, ನಿರ್ದೇಶನದಲ್ಲಿ, ಚಿತ್ರಕಥೆಯಲ್ಲಿ ನಿಷ್ಠುರತೆಯನ್ನು ಕಲಿಸುತ್ತಿರುವ ಮ್ಯಾಮೆಟ್ ಇಂದಿಗೂ ಸಕ್ರಿಯವಾಗಿದ್ದಾರೆ. ವಿಶ್ವಾದ್ಯಂತ ಸಾವಿರಾರು ವಿದ್ಯಾರ್ಥಿಗಳನ್ನು ಒಳ್ಳೇ ಸಿನೆಮಾ ಮಾಡಲು ತಮ್ಮ ವಿಶಿಷ್ಟ್ ‘ಮ್ಯಾಮೆಟ್‍ಸ್ಪೀಕ್’ ನಿಂದ ಹುರಿದುಂಬಿಸುತ್ತಲೇ ಇದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...