Homeಮುಖಪುಟಯಾವ ಕಥೆ ಹೇಳಬೇಕು? ಇನ್ನಷ್ಟು ಪ್ರಶ್ನೆಗಳು

ಯಾವ ಕಥೆ ಹೇಳಬೇಕು? ಇನ್ನಷ್ಟು ಪ್ರಶ್ನೆಗಳು

- Advertisement -
- Advertisement -

“ಕುದುರೆಯನ್ನೇರಿ ರಾಜಕುಮಾರಿಗಾಗಿ ಓಡೋಡಿ ಬರುತ್ತಿರುವ ರಾಜಕುಮಾರ, ರಾಜ್ಯ, ರಾಜ ಮತ್ತು ರಾಣಿಯವರ ಕಥೆಯನ್ನೇಕೆ ನನಗೆ ಹೇಳಲಾಗುವುದಿಲ್ಲ” ಒರ್ಹಾನ್ ಪಾಮುಕ್ ಹೀಗೆ ತಮ್ಮ ಒಂದು ಪುಸ್ತಕದಲ್ಲಿ ವಿಷಾದಿಸುತ್ತಾರೆ.

“ಯುದ್ಧದ ಸಮಯದಲ್ಲಿ ಪ್ರೀತಿಯ ಕಥೆಯನ್ನು ಹೇಳು, ಶಾಂತಿಯ ಸಮಯದಲ್ಲಿ ಯುದ್ಧದ ಕಥೆಯನ್ನು” ಯಾರೋ ಹೇಳಿದ್ದು.

“ಮನಸ್ಸಿಗೆ ನೆಮ್ಮದಿ (ಸುಕೂನ್) ಸಿಗುತ್ತೆ” ಉತ್ತರಪ್ರದೇಶದಲ್ಲಿ ನಿಜವಾದ ರೇಪ್ ವೀಡಿಯೊಗಳನ್ನು ಮಾರುವ ಅಂಗಡಿಗೆ ಬಂದ ಗ್ರಾಹಕನೊಬ್ಬ ಹೇಳಿದ್ದು.

“ನನಗೆ ಕಥೆ ಇಷ್ಟವಾಯಿತು ಎಂದರೆ ಸಾಕಲ್ಲ, ಅದನ್ನಿಟ್ಟುಕೊಂಡು ಸಿನೆಮಾ ಮಾಡಲು ಏನು ತೊಂದರೆ?”
ಕಥೆಗಳನ್ನು ಬರೆಯುವುದಕ್ಕೆ ಮತ್ತು ನಾಟಕ ಅಥವಾ ಸಿನೆಮಾ ಮಾಡಲು ಒಂದು ದೊಡ್ಡ ವ್ಯತ್ಯಾಸವಿದೆ. ಒಬ್ಬ ಲೇಖಕನಿಗೆ ತಟ್ಟಿದ ವಿಷಯ, ಕತೆಯನ್ನು ಇಟ್ಟುಕೊಂಡು ಬರೆಯಲು ನೇರವಾಗಿ ಪ್ರಾರಂಭಿಸಬಹುದು ಆದರೆ ಸಿನೆಮಾ ಮತ್ತು ನಾಟಕದಲ್ಲಿ ಹಾಗಲ್ಲ. ಒಂದು ಸಿನೆಮಾ ನಿರ್ಮಿಸಲು ಕೆಲವು ವರ್ಷಗಳೇ ಬೇಕಾಗುವುದೆಂಬ ಮತ್ತು ಇದೊಂದು ಸಾಮೂಹಿಕ ಕಲೆಯಾಗಿರುವ ಕಾರಣದಿಂದ ಹಾಗೂ ಒಂದು ನಿರ್ದಿಷ್ಟ ಸಂಖ್ಯೆಯ ನೋಡುಗರನ್ನು ತಲುಪಲೇಬೇಕಾದ ಕಾರಣದಿಂದ ನಾವು ಹೇಳುವ ಕಥೆಯನ್ನು ಆಯ್ಕೆ ಮಾಡುವಾಗ ಅನೇಕ ಪ್ರಶ್ನೆಗಳನ್ನು ಎದುರಿಸಬೇಕಾಗುತ್ತದೆ.

ಒಂದು ಕಥೆ ಇಷ್ಟವಾಯಿತು ಎನ್ನುವುದು ಖಂಡಿತವಾಗಿಯೂ ಸಮಾಧಾನಕರ ಉತ್ತರವಲ್ಲ. ಆ ಕಥೆ ನಮಗೆ ಯಾವ ಕಾರಣಕ್ಕೆ ಇಷ್ಟವಾಯಿತು ಎನ್ನುವ ಪ್ರಶ್ನೆಗೂ ಸೂಕ್ತ ಉತ್ತರವನ್ನು ಪಡೆಯಬೇಕಾಗುತ್ತದೆ. ನಾವಿರುವ ಸಮಯದಲ್ಲಿ ನಮಗಿಷ್ಟವಾದ ಕಥೆಯು ಪ್ರಸ್ತುತವೇ? ಏನಾದರೂ ಹೊಸತನ್ನು ಹೊಂದಿದೆಯೇ ಈ ಕಥೆ? ಮೊದಲಿಗೆ ಈ ಎರಡು ಪ್ರಶ್ನೆಗಳನ್ನು ನೋಡುವ.

ಪ್ರಸ್ತುತ ಎಂದರೇನು? ನಾಟಕ ಮಾಡುವಾಗಂತೂ ನಮ್ಮ ಪರಿಚಯದ ಅನೇಕರಿಗೆ ಇನ್ನೂ ಬಾದಲ್ ಸರ್ಕಾರ್, ಮೋಹನ್ ರಾಕೇಶ್, ಟೆಂಡುಳ್ಕರ್, ಗಿರೀಶ್ ಕಾರ್ನಾಡ್ ಅವರ ಕೃತಿಗಳೇ ಸೆಳೆಯುತ್ತವೆ. ತಮಗಿಷ್ಟವಾದ ಕೃತಿಗಳು ಇಂದಿಗೂ ಪ್ರಸ್ತುತ ಎಂದು ಗಟ್ಟಿಯಾಗಿಯೇ ಪ್ರತಿಪಾದಿಸುತ್ತಾರೆ. ಆದರೆ ಈ ಶ್ರೇಷ್ಠ ಲೇಖಕರ ಅದ್ಭುತ ಕೃತಿಗಳು ನಿಜವಾಗಿಯೂ ಪ್ರಸ್ತುತವಾಗಿ ಉಳಿದಿವೆಯೇ? ಅದನ್ನು ಪತ್ತೆ ಹಚ್ಚುವುದು ಹೇಗೆ? ಆಯಾ ಕೃತಿಗಳು ಸದಾಕಾಲ ಚಾಲ್ತಿಯಲ್ಲಿರುವ ಮಾನವೀಯ ಅಂಶಗಳನ್ನು, ಮನುಷ್ಯನ ತುಡಿತಗಳನ್ನು ಹೊಂದಿರುವ ಕಾರಣದಿಂದ ಅ ಕೃತಿಗಳು ಇಂದಿಗೂ ಪ್ರಸ್ತುತ ಎನ್ನುವ ಉತ್ತರವನ್ನು ನೀಡಬಹುದು. ಇನ್ನು ಆಯಾಕಾಲದಲ್ಲಿ ಮಾತ್ರ ಚಾಲ್ತಿಯಲ್ಲಿದ್ದ ಸಮಸ್ಯೆಗಳನ್ನು ಕೆಲವು ಕೃತಿಗಳು ಉದ್ದೇಶಿಸಿದ್ದರಿಂದ ಅವುಗಳು ಪ್ರಸ್ತುತವಲ್ಲ ಎಂದು ಉತ್ತರ ಸಿಗಬಹುದು; ಉದಾಹರಣೆಗೆ ವರದಕ್ಷಿಣೆ ಅಥವಾ ನಿರುದ್ಯೋಗ (ಇವುಗಳು ಮುಂಚೆ ಇದ್ದವು ಈಗ ಇಲ್ಲ ಎಂದು ಹೇಳುತ್ತಿಲ್ಲ, ಆದರೆ ಇಂತಹ ಸಮಸ್ಯೆಗಳು ಆ ಬ್ರ್ಯಾಕೆಟ್‍ನಲ್ಲಿ ಹಾಕಬಹುದು). ಆದರೆ ಪ್ರಸಕ್ತ ಸಮಯದಲ್ಲಿ ಇರುವ ಸಮಸ್ಯೆಗಳನ್ನು ಉದ್ದೇಶಿಸುವ ಕೃತಿಗಳೇ ಪ್ರಸ್ತುತ ಎಂತಲೂ ಹೇಳಲಾಗುವುದಿಲ್ಲ. ರಾಜರಾಣಿಯರ, ರಾಜಕುಮಾರರ, ಪೌರಾಣಿಕ ಕಥೆಗಳ ಕೃತಿಗಳು ಪ್ರಸ್ತುತವಲ್ಲ ಹಾಗೂ ಇತ್ತೀಚಿನ ಇತಿಹಾಸದ ಮತ್ತು ಕೆಲವು ದಶಕ, ಶತಕಗಳ ಹಿಂದಿನ ಸಬ್‍ಆಲ್ಟರ್ನ್ ಇತಿಹಾಸವನ್ನು, ಜನರ ಸಮಸ್ಯೆಗಳನ್ನು ಪ್ರಸಕ್ತ ಸಮಾಜಕ್ಕೆ ತೋರಿಸುವುದೂ ಪ್ರಸ್ತುತವಲ್ಲ ಎಂದು ಹೇಳಲಾಗದು. ಅಂದರೆ ಇಂದು ಹೆಚ್ಚಾಗಿ ಕಾಣುತ್ತಿರುವ ಸಮಸ್ಯೆಗಳನ್ನು ಉದ್ದೇಶಿಸಿ ಕೃತಿ ರಚಿಸಿದಲ್ಲಿ ಅದನ್ನು ಪ್ರಸ್ತುತ ಎಂದು ಖಡಾಖಂಡಿತವಾಗಿ ಹೇಳಬಹುದೇ? ಪ್ರಸ್ತುತ ಏನು ಎಂದು ನಿರ್ಧರಿಸುವುದನ್ನು ಆಯಾ ಕರ್ತೃ ಮತ್ತು ನೋಡುಗರಿಗೆ ಬಿಟ್ಟ ವಿಷಯವೇ? ಒಂದು ಕೃತಿಯನ್ನು ಇದು ಪ್ರಸ್ತುತ ಅಥವಾ ಇಲ್ಲ ಎಂದು ಹೇಳಬಹುದೇ ಹೊರತು, ಪ್ರಸ್ತುತ ಎನ್ನುವುದಕ್ಕೆ ಮಾನದಂಡಗಳೇನು ಎನ್ನುವುದಕ್ಕೆ ಮಾನದಂಡಗಳನ್ನು ನಿರ್ಧರಿಸಲು ಸಾಧ್ಯವೋ ಇಲ್ಲವೋ, ನನಗೂ ಹೊಳೆಯುತ್ತಿಲ್ಲ.

ಇನ್ನೂ ಹೊಸತು ಎಂದರೇನು ಎನ್ನುವ ಪ್ರಶ್ನೆಗೂ ನಮ್ಮ ಬಳಿ ಸರಳ ಉತ್ತರಗಳಿಲ್ಲ. ಜಗತ್ತಿನಲ್ಲಿ ಇರುವ ಜೋಕ್‍ಗಳು ಕೇವಲ ಏಳೋ ಎಂಟೋ ಎಂದು ಹೇಳಲಾಗುತ್ತದೆ. ಅವೇ ಜೋಕ್‍ಗಳನ್ನು ಬೇರೆ ಬೇರೆ ಪಾತ್ರಗಳು ಮತ್ತು ಸಂದರ್ಭಗಳಿಗೆ ತುರುಕಿಸಿ ಹೊಸ ಜೋಕ್‍ಗಳೆಂದು ಹೇಳಲಾಗುತ್ತದೆ. ಇದೇ ಮಾತನ್ನು ಕಥೆಗಳಿಗೂ ಅನ್ವಯಿಸಬಹುದಾದರೆ, ಹೊಸ ಕಥೆ ಎಂದರೇನು? ಹೊಸ ಕಥೆಗಳನ್ನು ತರಲು ಸಾಧ್ಯವೇ ಇಲ್ಲವೇ? ಅನೇಕರು ಅನೇಕ ರೀತಿಯಲ್ಲಿ ಈ ಪ್ರಶ್ನೆಗೆ ಉತ್ತರ ನೀಡಬಹುದು ಆದರೆ ಮುಖ್ಯ ವಿಷಯವೆಂದರೆ, ನಾವು ಯಾವುದಾದರೂ ಕಥೆಯನ್ನು ಆಯ್ಕೆ ಮಾಡಿಕೊಂಡಾಗ ಈ ಎಲ್ಲ ಪ್ರಶ್ನೆಗಳನ್ನು ಆ ಕಥೆಗೆ ಕೇಳಲೇಬೇಕಾಗುತ್ತದೆ. ಅಲ್ಲಿ ಸಮಾಧಾನಕರ ಉತ್ತರ ಸಿಗಬಹುದು ಅಥವಾ ಸಿಗದೇ ಇರಬಹುದು.

ಕೆಲವರು ನೋಡುಗರ ಆಯ್ಕೆಯ ಅಧ್ಯಯನ ಮಾಡಿ ತಾವು ಯಾವ ಕಥೆ ಹೇಳಬೇಕು ಎನ್ನುವುದನ್ನು ನಿರ್ಧರಿಸುತ್ತಾರೆ. ‘ಜನ ಇಂಥದ್ದನ್ನೇ ಇಷ್ಟಪಡ್ತಾರೆ, ನಾವೇನು ಮಾಡಬೇಕು?’ ಎನ್ನುವ ಉಡಾಫೆಯ ಕಾರಣಗಳನ್ನು ತಮ್ಮ ರಚನೆಗಳಿಗೆ ನೀಡುತ್ತಾರೆ. ಈ ಧೋರಣೆ ತಪ್ಪು ಎಂದು ನಿಸ್ಸಂಶಯವಾಗಿ ಹೇಳಬಲ್ಲೆ. ಇದಕ್ಕೆ ಹಲವಾರು ಕಾರಣಗಳಿವೆ. ಒಂದು, ಜನ ಏನು ಇಷ್ಟ ಪಡುತ್ತಾರೆ ಎಂದು ಯೋಚಿಸಿ ಚಿತ್ರವನ್ನು ಮಾಡಿದಾಗ, ಅವರು ಆ ಚಿತ್ರವನ್ನು ಮಾಡುವಷ್ಟರಲ್ಲಿ ಅಂತಹ ಕಥೆಗಳನ್ನು ನೋಡಿರುತ್ತಾರೆ. ಮತ್ತೇ ಅಂತಹ ಕಥೆಗಳನ್ನು ಜನರು ಏಕೆ ಇಷ್ಟಪಡಬೇಕು ಎನ್ನುವ ಪ್ರಶ್ನೆಗೆ ಅವರಲ್ಲಿ ಉತ್ತರವಿರುವುದಿಲ್ಲ. ಇಲ್ಲಿ ಕೆಲವು ವರ್ಷಗಳ ಹಿಂದೆ ಬಂದ ಕನ್ನಡ ಚಿತ್ರ ‘ತಿಥಿ’ಯ ಉದಾಹರಣೆ ಕೊಡಬಹುದು. ತಿಥಿ ಚಿತ್ರ ಹಿಟ್ ಆದಕೂಡಲೇ ಅಂತಹದ್ದೇ ಹಲವಾರು ಚಿತ್ರಗಳು ಬಂದವು ಆದರೆ ಅವ್ಯಾವೂ ಸ್ವಾಭಾವಿಕವಾಗಿಯೇ ಯಶಸ್ವಿಯಾಗಲಿಲ್ಲ. ಹಾಗೂ ‘ಜನ ಏನು ಇಷ್ಟಪಡುತ್ತಾರೆ’ ಎನ್ನುವ ನಿರ್ಣಯಕ್ಕೆ ಆಳವಾದ ಅಧ್ಯಯನದಿಂದ ಬಂದಿರುವುದಿಲ್ಲ.

ಇದರೊಂದಿಗೆ, ಆಳವಾದ ಸಾಮಾಜಿಕ ವಿಷಯವನ್ನು ಹೊಂದಿರುವ ಕಥೆಗಳಿಂದ ಹಿಡಿದು ಕೇವಲ ವೈಭವೀಕರಿಸಿದ ಹಿಂಸೆ, ಪೊಳ್ಳು ಕಥೆಗಳನ್ನು ಹೊಂದಿರುವ ಚಿತ್ರಗಳೂ ಯಶಸ್ವಿಯಾಗಿದ್ದು ವಾಸ್ತವ. ಹಾಗಾದರೆ ಜನ ಏನು ಇಷ್ಟಪಡುತ್ತಾರೆ ಎಂದು ಖಚಿತವಾಗಿ ಹೇಳುವುದು ಹೇಗೆ? ಹಾಗೂ ಅವರ ಇಷ್ಟ ಚಿತ್ರ ನಿರ್ಮಿಸುವವರಿಗೆ ಏಕೆ ಮಾನದಂಡವಾಗಬೇಕು? ಮೇಲೆ ಹೇಳಿದಂತೆ, ರೇಪ್ ವಿಡಿಯೋಗಳನ್ನು ಮಾರಾಟ ಮಾಡಲಾಗುತ್ತದೆ, ಅದಕ್ಕೂ ಗ್ರಾಹಕರಿದ್ದಾರೆ, ಹಾಗಿರುವಾಗ ಅವೇ ಚಿತ್ರಗಳನ್ನೇಕೆ ನಿರ್ಮಿಸಬಾರದು? ಕಥೆ ಹೇಳುವವರೇ ತನಗೆ ಈ ಕಥೆ ಇಷ್ಟವೇ? ಯಾವ ಕಾರಣಕ್ಕೆ ಇಷ್ಟ ಎನ್ನುವ ನಿರ್ದಿಷ್ಟ ಉತ್ತರವನ್ನು ಕಂಡುಕೊಳ್ಳಬೇಕಾಗುತ್ತದೆ. ಆ ಉತ್ತರ ಇತರರಿಗೆ ಸಮಂಜಸ ಎನ್ನಿಸದೇ ಇರಬಹುದು, ಆದರೆ ತನ್ನ ಉತ್ತರಗಳಲ್ಲಿ ರಚಿಸುವವನಿಗೆ ಬಲವಾದ ನಂಬಿಕೆಯಿದ್ದರೆ ಅಲ್ಲೊಂದು ಉತ್ತಮ ಕೃತಿ ಬೆಳೆಯುತ್ತಿರುತ್ತದೆ. ಜಗತ್ತಿನ ಎಲ್ಲಾ ಶ್ರೇಷ್ಠ ಕೃತಿಗಳು ಹುಟ್ಟಿದ್ದು ಹೀಗೆ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...