Homeಮುಖಪುಟತಾಂತ್ರಿಕತೆ, ಸಿನಿಮಾ ಅಭಿವ್ಯಕ್ತಿಗೆ ಅಡ್ಡಿಯೇ??

ತಾಂತ್ರಿಕತೆ, ಸಿನಿಮಾ ಅಭಿವ್ಯಕ್ತಿಗೆ ಅಡ್ಡಿಯೇ??

- Advertisement -
- Advertisement -

ಕ್ಯಾಮೆರಾ ಎಲ್ಲಿ ಇಡಬೇಕು?’
‘ಝೂಮ್ ಮಾಡಬೇಕಾ ಅಥವಾ ಡಾಲಿ ಮಾಡಬೇಕಾ?’
‘ಯಾವ ಲೆನ್ಸ್ ಹಾಕಬೇಕು?’
‘ಡೆಪ್ತ್ ಆಫ್ ಫೀಲ್ಡ್ ಎಷ್ಟಿರಬೇಕು?’
‘ಸಬ್ಜೆಕ್ಟ್ ಮೂವ್ ಮಾಡ್ತಿಲ್ಲ, ಸ್ಟ್ಯಾಟಿಕ್ ತಗೋಬೇಕಾ ಅಥವಾ ಟ್ರಾಲಿ ಬಳಸೋದಾ?’
‘ಒಂದು ಮಾಸ್ಟರ್ ಆಯ್ತಲ್ಲ, ಈಗ ಎಲ್ಲಾರದೂ ಒಂದೊಂದು ಕ್ಲೋಸ್ ಅಪ್ ತೊಗೊಂಡ್ರೆ ಸಾಕಲ್ವಾ?’
‘ಫಿಲ್ಟರ್ ಯಾವುದು ಹಾಕಬೇಕು? ಸೀರಿಯಸ್ ದೃಶ್ಯ, ಕೆಂಪು ಹಾಕುವಾ?’

ಹೀಗೆ ಹತ್ತಾರು ಪ್ರಶ್ನೆಗಳು ಚಿತ್ರ ನಿರ್ದೇಶನ ಮಾಡುವಾಗ ಕೊರೆಯುತ್ತವೆ. “ಇವುಗಳೆಲ್ಲ ತಾಂತ್ರಿಕ ಪ್ರಶ್ನೆಗಳು, ಡಿಓಪಿ ಇವನ್ನೆಲ್ಲಾ ನೋಡಿಕೊಳ್ಳುತ್ತಾನೆ. ಒಳ್ಳೇ ಡಿಓಪಿ ಇದ್ರೆ ಸಾಕು. ನಿರ್ದೇಶಕ ಕಲಾತ್ಮಕ ಅಂಶಗಳ ಮೇಲೆ ಕಾನ್ಸಂಟ್ರೇಟ್ ಮಾಡಿದರೆ ಸಾಕು, ಕಲೆಯ ಅಭಿವ್ಯಕ್ತಿಗೆ ತಾಂತ್ರಿಕತೆ ಅಡ್ಡಿಯಾಗಬಾರದು” ಹೌದಾ?

ಒಂದು ಚಿತ್ರ ರಚಿಸುವಲ್ಲಿ ತಾಂತ್ರಿಕ ಅಂಶಗಳೇ ಅಡ್ಡಿಯಾಗಬಲ್ಲವೇ? ಕೆಲವೊಂದು ಚಿತ್ರಗಳಲ್ಲಿ ತಾಂತ್ರಿಕ ದೋಷಗಳು ಎದ್ದುಕಾಣುತ್ತವೆ. ಕೆಲವು ಚಿತ್ರಗಳಲ್ಲಿ ಕಂಡುಬರುವ ತಾಂತ್ರಿಕ ದೋಷಗಳು ನೋಡುಗರಿಗೆ ಕಿರಿಕಿರಿ ಉಂಟುಮಾಡಿದರೂ, ಆ ಚಿತ್ರ ಇಷ್ಟವಾದರೆ ಅವುಗಳನ್ನು ಕ್ಷಮಿಸಲಾಗುತ್ತದೆ. ಆದರೆ, ಚಿತ್ರ ನಿರ್ದೇಶಕರಿಗೆ ತಾಂತ್ರಿಕ ಅಂಶಗಳು ಎಂದಿಗೂ ಅಡ್ಡಿಯಾಗಲಾರವು. ಚಲನಚಿತ್ರ ರಚಿಸುವುದು ಕಲೆಯ ಇತರ ಕಲೆಯ ಮಾಧ್ಯಮಗಳಂತೆ ನಮ್ಮ ಭಾವನೆಗಳ, ಕಥೆಗಳ, ಜೀವನದ ಮತ್ತು ಈ ಜಗತ್ತಿನ ಪ್ರಶ್ನೆಗಳ ಹುಡುಕಾಟ ಹಾಗೂ ಅದರ ಅಭಿವ್ಯಕ್ತಿಯ ಮಾಧ್ಯಮವೆಷ್ಟೋ, ಅಷ್ಟೇ ಸಂಕೀರ್ಣ ತಾಂತ್ರಿಕತೆಯ ಮಾಧ್ಯಮವೂ ಹೌದು. ತಾಂತ್ರಿಕತೆಯನ್ನು ಅಭಿವ್ಯಕ್ತಿಯಲ್ಲಿ ಅಡ್ಡಿ ಎಂದು ಭಾವಿಸುವುದು ಅಥವಾ ಅದನ್ನು ಕಡೆಗಣಿಸುವುದು ಒಬ್ಬ ಕಲಾವಿದ ತನ್ನ ಕುಂಚ ತನ್ನ ಕ್ಯಾನ್ವಾಸ್‍ನ್ನು ತಾನು ಬಿಡಿಸಬಯಸುವ ಚಿತ್ರಕ್ಕೆ ಅಡ್ಡಿ ಎಂದಹಾಗೆ. ಬರಹಗಾರನಿಗೆ ತನ್ನ ಭಾಷೆ ಮತ್ತು ಪದಗಳೇ ಅಡ್ಡಿಯಾದ ಹಾಗೆ.

ಸಿನೆಮಾ ಎಂದರೆ ಕತೆ ಹೇಳುವ ಮಾಧ್ಯಮ ಎಂದು ನಾವೀಗಾಗಲೇ ತಿಳಿದಿದ್ದೇವೆ; ಸಿನೆಮಾದ ಕಥೆ ಎಂದರೆ ಅದಕ್ಕೆ ತನ್ನದೇ ಆದ ಮಿತಿಗಳಿರುತ್ತವೆ ಹಾಗೂ ಅ ಮಿತಿಗಳನ್ನೇ ಚಿತ್ರದ ಸಾಮಥ್ರ್ಯಗಳೆಂದೂ ಪರಿಗಣಿಸಬಹುದಾಗಿದೆ. ಈ ವಿಷಯದ ಬಗ್ಗೆ ಮುಂಚೆ ಬರೆಯಲಾಗಿದೆ ಹಾಗಾಗಿ ಅದನ್ನು ವಿಸ್ತರಿಸುತ್ತಿಲ್ಲ.

ತಾಂತ್ರಿಕವಾಗಿ ಗಟ್ಟಿಯಾಗಿರುವ ಚಿತ್ರ ಎಂದರೆ ಹಾಲಿವುಡ್‍ನ ಸಾಹಸ ಚಿತ್ರಗಳಲ್ಲ, ಹೆಲಿಕಾಪ್ಟರ್‍ನಿಂದ ತೆಗೆದ ಶಾಟ್‍ಗಳಲ್ಲ, ಪರ್ವತದ, ಅನ್ಯಗ್ರಹಗಳ ಅದ್ಭುತ ಶಾಟ್‍ಗಳನ್ನು ಹೊಂದಿದ ಚಿತ್ರವಲ್ಲ, ಚಾಣಾಕ್ಷತೆಯಿಂದ ಮಾಡಿದ ಸಂಕಲನವಲ್ಲ. ಒಂದು ಸರಳವಾದ ದೃಶ್ಯವನ್ನು ಅಷ್ಟೇ ಸರಳವಾಗಿ ಪರದೆಯ ಮೇಲೆ ತೋರಿಸಿದರೂ ಅದನ್ನು ತಾಂತ್ರಿಕವಾಗಿ ಗಟ್ಟಿಯಾಗಿರುವ ದೃಶ್ಯ ಎನ್ನಬಹುದು.

ತಾಂತ್ರಿಕವಾಗಿ ಗಟ್ಟಿಯಾಗಿರುವ ನಾವೆಲ್ಲರೂ ನೋಡಿದ ಒಂದು ಕನ್ನಡ ಚಿತ್ರವನ್ನು ಹೆಸರಿಸಬೇಕಾದರೆ, ನನಗೆ ಮೊದಲು ಹೊಳೆಯುವುದು ರಾಮ್ ರೆಡ್ಡಿ ನಿರ್ದೇಶಿಸಿದ ‘ತಿಥಿ’. ಹೌದು, ತಾಂತ್ರಿಕವಾಗಿಯೂ ಅದೊಂದು ಅದ್ಭುತ ಚಿತ್ರ. ಆ ಚಿತ್ರದಲ್ಲಿ ಅದ್ಭುತ ಎನ್ನಿಸಬಹುದಾದ ಯಾವುದೇ ಶಾಟ್‍ಗಳಿಲ್ಲ; ಸಾಹಸ ದೃಶ್ಯಗಳಿಲ್ಲ, ಹಳ್ಳಿಗಾಡಿನ, ಪರಿಸರದ, ನದಿ ಬೆಟ್ಟದ ಮನಮೋಹಕ ಚಿತ್ರಣಗಳಿಲ್ಲ. ಚಿತ್ರದಲ್ಲಿ ಅದ್ಭುತವಾದ ಕ್ಯಾಮೆರಾ ಮೂವ್‍ಮೆಂಟ್‍ಗಳೂ ಕಾಣಿಸಿಕೊಳ್ಳುವುದಿಲ್ಲ ಆದರೂ ಅದೊಂದು ತಾಂತ್ರಿಕವಾಗಿ ಅದ್ಭುತ ಚಿತ್ರ. ತನ್ನ ಕಥೆಯನ್ನು ಹೇಳಲು ಏನು ಬೇಕಾಗುತ್ತದೆಯೋ ಅದನ್ನು ಪರಿಣಾಮಕಾರಿಯಾಗಿ ಬಳಸಿಕೊಂಡಿದ್ದಾರೆ. ಆ ಚಿತ್ರ ನೋಡುವಾಗ ನೋಡುಗರು ಅದರಲ್ಲಿ ಬರುವ ಪಾತ್ರಗಳು, ಆಯಾ ಪಾತ್ರಗಳ ತೊಳಲಾಟ, ಕಥೆಯಲ್ಲಿ ಮುಂದೇನಾಗುತ್ತದೆ ಎನ್ನುವುದರ ಬಗ್ಗೆ ಗಮನ ಹರಿಸುತ್ತಾರೆಯೇ ಹೊರತು ಕ್ಯಾಮರಾ ಚಳಕದ ಕಡೆ ಅಲ್ಲ.

ಆದರೆ ಅದು ಸುಮ್ಮನೇ ಆಗಿದ್ದಲ್ಲ. ಪ್ರತಿಯೊಂದು ದೃಶ್ಯಕ್ಕೂ ಅದರ ತಿರುಳು ಅಥವಾ ಆತ್ಮ ಎಂಬುದೊಂದಿರುತ್ತದೆ. ಆ ತಿರುಳು ಅಥವಾ ಆತ್ಮವನ್ನು ಸಮರ್ಪಕವಾಗಿ ಸೆರೆ ಹಿಡಿಯಬೇಕೆಂದರೆ, ಯಾವ ಲೆನ್ಸ್ ಬಳಸಬೇಕು, ಫಿಲ್ಟರ್ ಬಳಸಬೇಕಾ, ಫೋಕಸ್ ಯಾರ ಮೇಲಿರಬೇಕು, ಆ ಒಂದು ದೃಶ್ಯಕ್ಕೆ ಎಷ್ಟು ಮತ್ತು ಯಾವ್ಯಾವ ಶಾಟ್ ತೆಗೆದುಕೊಳ್ಳಬೇಕು, ಆಯಾ ಶಾಟ್‍ನಲ್ಲಿ ಕ್ಯಾಮರ ಚಲಿಸಬೇಕೇ ಅಥವಾ ಒಂದೇ ಕಡೆ ಇರಬೇಕೇ ಎನ್ನುವ ಹಲವಾರು ತಾಂತ್ರಿಕ ಪ್ರಶ್ನೆಗಳಿಗೆ ಉತ್ತರ ನೀಡಬೇಕಾಗುತ್ತದೆ. ಆಗ ಮಾತ್ರ ಆ ದೃಶ್ಯದ ಜೀವವು, ನಿರ್ದೇಶಕನು ಬಯಸಿದಂತೆ ಪರದೆಯ ಮೇಲೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಬರಹಗಾರರಿಗೆ ತನ್ನ ಭಾಷೆ, ಗಾಯಕನಿಗೆ ತನ್ನ ಕಂಠವು, ನಟನಿಗೆ ತನ್ನ ಇಡೀ ದೇಹ ತಾನು ಹೇಳುವುದನ್ನು ಮುಟ್ಟಿಸುವ ಸಾಧನವಾದ ಹಾಗೆ ಚಲನಚಿತ್ರ ನಿರ್ದೇಶಕರಿಗೆ ಸಿನೆಮಾದ ತಾಂತ್ರಿಕತೆಯೇ ಸಾಧನ. ಸಿನೆಮಾ ಮಾಧ್ಯಮವು ಸಂಕೀರ್ಣವೆನಿಸುವುದು ಇದೇ ಕಾರಣಕ್ಕಾಗಿ. ಸ್ಟೀವನ್ ಸ್ಪೀಲ್‍ಬರ್ಗ್‍ನಿಂದ ಹಿಡಿದು ವಿಶ್ವದ ಬಹುತೇಕ ನಿರ್ದೇಶಕರು, ತಮ್ಮ ಚಿಕ್ಕವಯಸ್ಸಿನಿಂದಲೇ ಕ್ಯಾಮೆರ ಜೊತೆಗೆ ಆಟವಾಡಿದರು; ಹಲವಾರು ಕಿರುಚಿತ್ರಗಳನ್ನು ನಿರ್ದೇಶಿಸಿದರು, ಕ್ಯಾಮರಾದ, ಚಿತ್ರ ಮಾಧ್ಯಮದ ಅಪಾರ ಸಾಧ್ಯತೆಗಳನ್ನು ಕಂಡು ಬೆರಗುಗೊಂಡರು. ಅವರಲ್ಲಿ ಹೆಚ್ಚಿನವು ತಾವು ಹೇಳಬಯಸಬಹುದಾದ ಕಥೆಗಳಿಗಿಂತಲೂ ಕ್ಯಾಮರ ಸೃಷ್ಟಿಸುವ ಮ್ಯಾಜಿಕ್ ಅನ್ನು ಪ್ರೀತಿಸಿದವರು. ಹಾಗಾಗಿಯೇ ಅವರ ಚಿತ್ರಗಳಲ್ಲಿ ತಾಂತ್ರಿಕ ದೋಷಗಳು ಹಾಗೂ ಕೇವಲ ತಾಂತ್ರಿಕ ಶ್ರೇಷ್ಠತೆಯೂ ಕಾಣಿಸಿಕೊಳ್ಳುವುದಿಲ್ಲ.

ಚಿತ್ರ ನಿರ್ದೇಶನಕ್ಕೆ ಕ್ಯಾಮರ ಚಳಕ ಮಾತ್ರ ತಾಂತ್ರಿಕ ಅಂಶವಲ್ಲ. ಅದರೊಂದಿಗೆ ಚಿತ್ರದ ಕಲಾ ನಿರ್ದೇಶನ (ಆರ್ಟ್ ಡೈರೆಕ್ಷನ್), ಹಿನ್ನೆಲೆ ಸಂಗೀತ, ಸಂಕಲನ, ಸ್ಪೆಷಲ್ ಎಫೆಕ್ಟ್ಸ್ ಮುಂತಾದ ಹಲವಾರು ತಾಂತ್ರಿಕ ಅಂಶಗಳಿರುತ್ತವೆ. ಅವೆಲ್ಲವೂ ಆ ಚಿತ್ರದ ಜೀವಕ್ಕೆ, ಆಯಾ ದೃಶ್ಯದ ಜೀವಕ್ಕೆ ಹೇಗೆ ಪೂರಕವಾಗಿಸಬಹುದು ಮತ್ತು ಅವುಗಳೇ ದೃಶ್ಯದ ಜೀವವನ್ನು ಮೀರಿ ನೋಡುಗರು ಆ ತಾಂತ್ರಿಕ ಅಂಶಗಳನ್ನೇ ಮೆಚ್ಚಬಹುದಾದ ಸನ್ನಿವೇಶ ಹೇಗೆ ತಡೆಯಬೇಕು ಎನ್ನುವುದನ್ನೂ ಆಯಾ ವಿಭಾಗಗಳ ತಾಂತ್ರಿಕತೆಯನ್ನು ಅಭ್ಯಸಿಸಿದಾಗ ಮಾತ್ರ ತಿಳಿಯುವುದು.

ಈ ಎಲ್ಲ ತಾಂತ್ರಿಕತೆಗಳನ್ನು ತಾನು ಹೇಳಬೇಕಾದ ಕಥೆಯನ್ನು ತಾಂತ್ರಿಕತೆ ಎದ್ದುಕಾಣದಂತೆ, ತಾಂತ್ರಿಕ ದೋಷಗಳಂತೂ ನುಸುಳದಂತೆ ಸರಳವಾಗಿ ಹೇಳಲು ಬಳಸಿಕೊಂಡಿರುವುದಕ್ಕೆ ತಿಥಿ ಎಂಬ ಚಿತ್ರ ಒಂದು ಒಳ್ಳೆಯ ಉದಾಹರಣೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...