Homeಮುಖಪುಟಸಿನೆಮಾ ಎಂದರೆ ಒಂದು ಕಥೆ ಹೇಳುವ ಮಾಧ್ಯಮ - ಮೈಕೆಲ್ ಹಾನೆಕೆ

ಸಿನೆಮಾ ಎಂದರೆ ಒಂದು ಕಥೆ ಹೇಳುವ ಮಾಧ್ಯಮ – ಮೈಕೆಲ್ ಹಾನೆಕೆ

- Advertisement -
- Advertisement -

ಸಿನಿಯಾನ: 04

ರಾಜಶೇಖರ್ ಅಕ್ಕಿ

ಸಿನೆಮಾ ಎಂದರೆ ಒಂದು ಕಥೆ ಹೇಳುವ ಮಾಧ್ಯಮ. ಆ ಕಥೆಯಲ್ಲಿ ಒಬ್ಬ ಹೀರೋ ಇರ್ತಾನೆ, ಒಬ್ಳು ಹೀರೋಯಿನ್ ಇರ್ತಾಳೆ, ಒಬ್ಬ ಖಳನಾಯಕ ಇರ್ತಾನೆ, ಪೋಷಕ ಪಾತ್ರಗಳಿರ್ತಾವೆ ಎಂತೆಲ್ಲಾ ನಾವು ಅಂದುಕೊಂಡಿದ್ದು. ನಂತರ ಸಿನೆಮಾ ಅಭ್ಯಸಿಸುತ್ತ ಹೋದತ್ತ ಡ್ರಾಮಾ, ಸ್ಟ್ರಕ್ಚರ್ ಎನ್ನುವ ಅಂಶಗಳು ನಮಗೆ ತಿಳಿದವು. ಯಾವುದೇ ಒಂದು ಕಥೆಯಲ್ಲಿ ಆರಂಭ, ಮಧ್ಯ, ಮುಕ್ತಾಯ ಇರುತ್ತವೆ ಬೇರೆ ಪದಗಳಲ್ಲಿ ಹೇಳಬೇಕೆಂದರೆ, ಸಿನೆಮಾದ ಮೊದಲ ಇಪ್ಪತ್ತು ನಿಮಿಷಗಳವರೆಗೆ ಸೆಟ್‍ಅಪ್ ಅಂದರೆ ಪಾತ್ರಗಳು, ಆ ಪಾತ್ರಗಳ ಇರುವ ಸನ್ನಿವೇಶ ಇವೆಲ್ಲ ವೀಕ್ಷಕರಿಗೆ ತಿಳಿಯುತ್ತವೆ ಮುಂದಿನ ಸುಮಾರು ಒಂದು ಗಂಟೆಯ ವರೆಗೆ ಆ ಪಾತ್ರಗಳ ನಡುವಿನ ಸಂಘರ್ಷ ವ್ಯಕ್ತವಾಗಿ, ಆಯಾ ಪಾತ್ರಗಳು, ಮುಖ್ಯವಾಗಿ ನಾಯಕ(ಕಿ)ಯ ಪಾತ್ರ ಆ ಸಂಘರ್ಷವನ್ನು, ತನ್ನ ಗುರಿಗೆ ಇರುವ ತೊಡಕುಗಳನ್ನು ಹೇಗೆ ಎದುರಿಸುತ್ತವೆ ಎಂದೂ ಹಾಗೂ ಕೊನೆಯ ಇಪ್ಪತ್ತು ನಿಮಿಷಗಳಲ್ಲಿ ಆ ಸಂಘರ್ಷ ಹೇಗೆ ನಿಷ್ಕರ್ಷವಾಗುತ್ತದೆ ಎಂದು ತಿಳಿಯುತ್ತದೆ. ಅನೇಕ ಚಿತ್ರಗಳಲ್ಲಿ ಸಂಘರ್ಷ ಬಾಹ್ಯವಾಗಿದ್ದರೆ ಕೆಲವು ಚಿತ್ರಗಳಲ್ಲಿ ಆಂತರಿಕವಾಗಿರುತ್ತದೆ ಅಂದರೆ ಆ ಪ್ರಮುಖ ಪಾತ್ರಕ್ಕೆ ತಾನೇ, ತನ್ನ ದೌರ್ಬಲ್ಯಗಳೇ ಮುಖ್ಯ ಶತ್ರುವಾಗಿದ್ದಾಗಿರುವಾಗ ಸಂಘರ್ಷ ಹುಟ್ಟಿಕೊಳ್ಳುತ್ತವೆ.

ನಮ್ಮಲ್ಲರಲ್ಲೂ ಅನೇಕ ಕಥೆಗಳಿರುತ್ತವೆ. ನಾವೆಲ್ಲರೂ ನಮ್ಮ ಸುತ್ತಮುತ್ತ ಆಗುತ್ತಿರುವ ಅನ್ಯಾಯ, ಸೋಜಿಗ, ಹೋರಾಟ, ಸಾಹಸಗಳನ್ನು ನೋಡಿ ಅನೇಕ ಕಥೆಗಳನ್ನು ಕಟ್ಟಿಕೊಂಡಿರುತ್ತೇವೆ, ಆಯಾ ಚಿತ್ರಗಳು ಮತ್ತು ಅದರಲ್ಲಿಯ ನಮ್ಮ ಒಳ್ಳೆಯತನ, ಕೆಟ್ಟತನ ಮುಂತಾದವುಗಳ ವ್ಯಾಖ್ಯೆಯ ಪರಿಧಿಯಲ್ಲಿ ಬರುತ್ತವೆ.

ಮೈಕೆಲ್ ಹಾನೆಕೆಯ ಚಿತ್ರಗಳನ್ನು ನೋಡಿದಾಗ ಇವೆಲ್ಲವುಗಳನ್ನೂ ಪ್ರಶ್ನಿಸಬೇಕಾಗುತ್ತದೆ. ಕಥೆ ಎಂದರೇನು, ಅದರ ಪರಿಭಾಷೆ ಏನು, ನಾಯಕನ ಪಾತ್ರ ಹೇಗಿರಬೇಕು, ಅವನು ಏನಾದರೂ ಒಳ್ಳೆಯದನ್ನು ಬಿಂಬಿಸಬೇಕಲ್ಲವೇ ಅಥವಾ ಅದಕ್ಕಾಗಿ ಹೋರಾಡಬೇಕಲ್ಲವೇ, ನಾಯಕ ಕೆಟ್ಟವನಾಗಿದ್ದರೂ ಅವನೊಳಗೇ ಏನಾದರೂ ತುಮುಲಗಳಿರಬೇಕಲ್ಲವೇ, ಅವನ/ಳ ಮನಸ್ಥಿತಿಯಲ್ಲಿ ಬದಲಾವಣೆ ಆಗಬೇಕಲ್ಲವೇ, ಪ್ರಮುಖ ಪಾತ್ರ ಕೆಟ್ಟವನಾಗಿದ್ದರೆ ಇತರ ಪಾತ್ರಗಳಾದರೂ ಅದರ ವಿರುದ್ಧ ಮನಸ್ಥಿತಿಯನ್ನು ಹೊಂದಿ ಸಂಘರ್ಷ ನಿರ್ಮಾಣವಾಗನೇಕಲ್ಲವೇ, ಕೆಟ್ಟದ್ದು ಮತ್ತು ಒಳ್ಳೇದು ಎನ್ನುವವುದೇನಾದರೂ ಕಥೆಯಲ್ಲಿ ಇರಬೇಕಲ್ಲವೇ, ಚಿತ್ರಕ್ಕೆ ನೈತಿಕ ಸ್ಪಷ್ಟತೆ ಇರಬೇಕಲ್ಲವೇ? ಮೈಕೆಲ್ ಹಾನೆಕೆಯ ಸಿನೆಮಾ ನೋಡಿದರೆ ಇವಕ್ಕೆ ಯಾವುದೇ ಉತ್ತರ ಸಿಗುವುದಿಲ್ಲ; ಸಿಗುವುದು ಪ್ರಶ್ನೆಗಳಷ್ಟೆ.

ಮೈಕೆಲ್ ಹಾನೆಕೆ ಒಬ್ಬ ಆಸ್ಟ್ರಿಯಾದ ಚಿತ್ರನಿರ್ದೇಶಕ. ಇವರು 1942 ರಲ್ಲಿ ಜರ್ಮನಿಯಲ್ಲಿ ಹುಟ್ಟಿ ಆಸ್ಟ್ರಿಯಾದಲ್ಲಿ ತಮ್ಮ ಶಿಕ್ಷಣ ಮುಗಿಸಿದರು. ನಟನಾಗಿ ಯಶಸ್ಸು ಸಿಗದಾಗ ವಿಮರ್ಶಕರಾಗಿ, ಸಂಕಲನಕಾರರಾಗಿ ಕೆಲಸ ಮಾಡಿ ನಂತರ ಟಿವಿ ಕಾರ್ಯಕ್ರಮಗಳನ್ನು ನಿರ್ದೇಶಿಸಿದರು. ಇವರು ನಿರ್ದೇಶಿಸಿದ ಮೊದಲ ಚಿತ್ರ ‘ದಿ ಸೆವೆಂತ್ ಕಾಂಟಿನೆಂಟ್’. ಈ ಚಿತ್ರ ಅವರು ಮುಂದು ನಿರ್ದೇಶಿಸಲಿರುವ ಚಿತ್ರಗಳಲ್ಲಿಯ ಹಿಂಸೆ ಮತ್ತು ಬೋಲ್ಡ್ ಶೈಲಿಯ ಒಂದು ಝಲಕ್ ತೋರಿಸಿಕೊಟ್ಟಿತು. (ಸ್ಪಾಯ್ಲರ್ ಅಲರ್ಟ್) ಆಸ್ಟ್ರಿಯಾದ ಒಂದು ಮಧ್ಯಮ ವರ್ಗದ ಕುಟುಂಬ. ಜಾರ್ಜ್, ಒಬ್ಬ ಇಂಜಿನೀಯರ್, ಅವನ ಹೆಂಡತಿ ಆನಾ ಮತ್ತು ಅವರ ಮಗಳು ಈವಾ. ಆಸ್ಟ್ರಿಯಾದಿಂದ ಆಸ್ಟ್ರೇಲಿಯಾಗೆ ವಲಸೆ ಹೋಗಬೇಕೆಂದು ಕನಸು ಕಂಡ ಈ ಕಟುಂಬ, ಹಳ್ಳಿಯಲ್ಲಿರುವ ಜಾರ್ಜ್‍ನ ತಂದೆಯನ್ನು ಭೇಟಿ ಮಾಡಿ ಬಂದ ನಂತರ ತಮ್ಮ ಕಾರನ್ನು ಮಾರಿ, ಬ್ಯಾಂಕ್ ಖಾತೆಯಲ್ಲಿಯ ಎಲ್ಲ ದುಡ್ಡನ್ನು ತೆಗೆದುಕೊಂಡು, ಖಾತೆಯನ್ನು ಮುಚ್ಚಿ, ತಮ್ಮ ಮನೆಯಲ್ಲಿಯ ಎಲ್ಲಾ ವಸ್ತುಗಳನ್ನು ನಾಶಪಡಿಸಿ, ಇದ್ದ ದುಡ್ಡನ್ನೆಲ್ಲ ಹರಿದು ಹಾಕಿ, ಹರಿದ ತುಣುಕಗಳನ್ನೆಲ್ಲ ಟಾಯ್ಲೆಟ್‍ನಲ್ಲಿ ಫ್ಲಷ್ ಮಾಡಿ, ಮೂವರೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಹೆಂಡತಿ ಮಗಳು ಸತ್ತ ನಂತರ ಗೋಡೆಯ ಮೇಲೆ ಅವರ ಹೆಸರು, ಅವರು ಸತ್ತ ದಿನಾಂಕ ಮತ್ತು ಸಮಯವನ್ನು ಬರೆದು ತನ್ನ ಹೆಸರಿನ ಮುಂದೆ ಪ್ರಶ್ನಾರ್ಥಕ ಚಿನ್ಹೆ ಹಾಕಿ, ತಾನೂ ಸಾಯುತ್ತಾನೆ. ಆತ್ಮಹತ್ಯೆಗೂ ಮುಂಚೆ ಬರೆದ ಪತ್ರದಲ್ಲಿ ತಾವು ತಮ್ಮ ಕೆಲಸವನ್ನು ಬಿಟ್ಟಿರುವುದಾಗಿ, ತಾವೆಲ್ಲ ಹೋಗುತ್ತಿರುವುದಾಗಿ ಹಾಗೂ ಮಗಳನ್ನೂ ತಮ್ಮೊಂದಿಗೆ ಒಯ್ಯುವುದು ಕಷ್ಟದ ನಿರ್ಧಾರವಾಗಿತ್ತೆಂದು ಆದರೆ ಮಗಳು ಈವಾ ಬರಲು ಸಿದ್ಧವಾಗಿದ್ದರಿಂದ ತಮ್ಮೊಂದಿಗೆ ಕರೆದುಕೊಂಡು ಹೋಗುವದಾಗಿ ಹೇಳುತ್ತಾನೆ.

ಇವರುಗಳ ಆತ್ಮಹತ್ಯೆ, ಅದರ ತಯ್ಯಾರಿ, ತಮ್ಮೆಲ್ಲ ವಸ್ತುಗಳನ್ನು ನಾಶಪಡಿಸುವುದೇ ಈ ಚಿತ್ರ.

1997 ರಲ್ಲಿ ಮೈಕೆಲ್ ಫನಿ ಗೇಮ್ಸ್ ಎನ್ನುವ ಚಿತ್ರವನ್ನು ಮಾಡಿದರು. ಇದೇ ಚಿತ್ರವನ್ನು ಹತ್ತು ವರ್ಷಗಳ ನಂತರ ಹಾಲಿವುಡ್‍ನಲ್ಲಿಯೂ ಇವರೇ ಮತ್ತೊಮ್ಮೆ ನಿರ್ದೇಶಿಸಿದರು. ಒಂದು ಉಚ್ಚ ಮಧ್ಯಮಗ ವರ್ಗದ ಕುಟುಂಬ, ಗಂಡ, ಹೆಂಡತಿ, ಮಗ ಮತ್ತು ಅವರ ನಾಯಿ ತಾವು ರಜಾದಿನಗಳಿಗಾಗಿಯೇ ನಗರದಿಂದ ದೂರದಲ್ಲಿ ನಿರ್ಮಸಿದ ತಮ್ಮ ಮನೆಗೆ ಬರುತ್ತಾರೆ. ಅಲ್ಲಿ ಅವರಿಗೆ ಸಿಗುವವರು ಪಾಲ್ ಮತ್ತು ಪೀಟರ್ ಎನ್ನುವ ಯುವಕರು. ಈ ಇಬ್ಬರು ಕುಟುಂಬದ ಸ್ನೇಹ ಸಂಪಾದಿಸಿ, ನಂತರ ಅವರ ಪೋನ್ ಲೈನ್ ಅನ್ನು ಕಿತ್ತು ಹಾಕಿ ಇಡೀ ಕುಟುಂಬವನ್ನು ಬಂಧಿತರನ್ನಾಗಿಸಿ, ಅವರೊಂದಿಗೆ ನೋವು ಸಾವಿನ ಆಟವಾಡಿ, ಪಾರಾಗಲು ಅವಕಾಶ ಕೊಟ್ಟಂತೆ ಮಾಡಿ ಮರುದಿನ ಬೆಳಗ್ಗೆಯ ತನಕ ಒಬ್ಬೊಬ್ಬರನ್ನಾಗಿ ಎಲ್ಲರನ್ನೂ ಕೊಂದು ಹಾಕುವುದು ಈ ಚಿತ್ರದ ಸಾರಾಂಶ. ಇವರನ್ನು ಮುಗಿಸಿದ ನಂತರ ಇದೇ ಆಟವನ್ನು ಮುಂದುವರೆಸಲು ಪಾಲ್ ಮತ್ತು ಪೀಟರ್ ಇನ್ನೊಂದು ಕುಟುಂಬದ ಸ್ನೇಹ ಸಂಪಾದಿಸುವ ದೃಶ್ಯದಿಂದ ಚಿತ್ರ ಮುಕ್ತಾಯಗೊಳ್ಳುತ್ತದೆ.

ಈ ಚಿತ್ರ ನೋಡಿದಾಗ ವೀಕ್ಷಕರ ಮನದಲ್ಲಿ ಪ್ರಶ್ನೆಗಳು ಏಳುವುದು ಸಹಜ. ಏಕೀ ಸಿನೆಮಾ? ಮೈಕೆಲ್ ಹೇಳುವಂತೆ ಅವರ ಸಿನೆಮಾಗಳು ವೀಕ್ಷಕರ ಕಲ್ಪನೆಗೆ ಅವಕಾಶ ಮಾಡಿಕೊಡುತ್ತವೆ ಹಾಗೂ ವೀಕ್ಷಕರು ತಮ್ಮನ್ನು ತಾವು ಪ್ರಶ್ನಿಸುವಂತೆ ಮಾಡುತ್ತವೆ. ಖಂಡಿತವಾಗಿಯೂ ಈ ಎರಡೂ ಉದ್ದೇಶಗಳು ಇವರ ಸಿನೆಮಾಗಳಲ್ಲಿ ಸಾಕಾರಗೊಳ್ಳುತ್ತವೆ ಆದರೂ ಹಲವಾರೂ ಪ್ರಶ್ನೆಗಳು ಉಳಿದುಕೊಳ್ಳುತ್ತವೆ. ಒಂದು ಪತ್ರಿಕೆ ಫನಿ ಗೇಮ್ಸ್ ಚಿತ್ರವನ್ನು ಕಲಾತ್ಮಕ ಚಿತ್ರಹಿಂಸೆ ಎಂದು ಕರೆದು ಅತಿ ಕಟ್ಟ ಚಿತ್ರಗಳ ಪಟ್ಟಿಯಲ್ಲಿ ಸೇರಿಸಿದೆ. ಆದರೆ ಹಲವಾರು ವೀಕ್ಷಕರು ಮತ್ತು ವಿಮರ್ಶಕರು ಈ ಚಿತ್ರಗಳನ್ನು ವೀಕ್ಷಿಸುವದು ಒಂದು ವಿಶಿಷ್ಟ ಅನುಭವ, ನಮ್ಮ ಆಳದ ಹಿಂಸೆಯನ್ನು ಹೊರಗೆ ತರುತ್ತವೆ ಎಂದು ಅಭಿಪ್ರಾಯ ಪಟ್ಟಿದ್ದಿದೆ.

2001 ರಲ್ಲಿ ಬಂದ ಫ್ರೆಂಚ್ ಸಿನೆಮಾ ‘ದಿ ಪಿಯಾನೋ ಟೀಚರ್’ ಇವರ ಇನ್ನೊಂದು ಚಿತ್ರ. ಒಬ್ಬ ಮಧ್ಯವಯಸ್ಕ ಪಿಯಾನೋ ಶಿಕ್ಷಕಿ ಎರಿಕಾ ಕೊಹಟ್‍ಯ ಕಥೆ. ಎರಿಕಾಳ ಲೈಂಗಿಕ ತುಮುಲಗಳು, ತನ್ನ ವಿದ್ಯಾರ್ಥಿಗಳೊಂದಿಗಿನ ಕ್ಲಿಷ್ಟಕರ ಸಂಬಂಧಗಳನ್ನು ಎಲ್ಲಿಯೂ ಜಜ್‍ಮೆಂಟಲ್ ಆಗದೇ ತೋರಿಸುತ್ತ ಹೋಗುತ್ತದೆ. ಕ್ಯಾಷೆ(2005), ದಿ ವೈಟ್ ರಿಬನ್(2009), ಅಮೋರ್(2012) ಮುಂತಾದವುಗಳು ಮೈಕೆಲ್ ಹಾನೆಕೆ ನಿರ್ದೇಶಿಸಿದ ಖ್ಯಾತ ಚಿತ್ರಗಳು. ಮನುಷ್ಯನ ಆಳಕ್ಕಿಳಿದು ಅಲ್ಲಿಯ ಹಿಂಸೆ, ನೋವು, ಲೈಂಗಿಕತೆಯ ತುಮುಲಗಳನ್ನು ಪರೀಕ್ಷಿಸುವ ಮತ್ತು ಪ್ರಶ್ನಿಸುವ ಇವರ ಚಿತ್ರಗಳು ತಮ್ಮದೇ ಆದ ಮಹತ್ವವನ್ನು ಹೊಂದಿವೆ. ಮೈಕಲ್ ಹಾನೆಕೆ ಸದ್ಯಕ್ಕೆ ವಿಯೆನ್ನಾದ ಫಿಲ್ಮ್ ಅಕಾಡೆಮಿಯಲ್ಲಿ ಚಲನಚಿತ್ರ ನಿರ್ದೇಶನ ಕಲಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...