HomeಅಂಕಣಗಳುKarnataka against SIRಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

- Advertisement -
- Advertisement -

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ ಪದೇ ಹೇಳಿಕೊಳ್ಳುತ್ತಿದ್ದಾರೆ.

ಆದರೆ, ತಳಮಟ್ಟದಲ್ಲಿ ವಾಸ್ತವ ಸ್ಥಿತಿ ಬೇರೆಯೇ ಇದೆ. ಮುಖ್ಯವಾಗಿ ಆದಿವಾಸಿಗಳು, ದಲಿತರು, ಅಲ್ಪಸಂಖ್ಯಾತರು ಸೇರಿದಂತೆ ತಳ ಸಮುದಾಯಗಳ ಪರಿಸ್ಥಿತಿ ಶೋಚನೀಯವಾಗಿದೆ. ವ್ಯವಸ್ಥೆಯ ಲೋಪದಿಂದ ಈ ಸಮುದಾಯಗಳ ಸಾವಿರಾರು ಜನರು ತಮ್ಮ ಅಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳುವುದು ಖಚಿತವಾಗಿದೆ.

ಆಗಸ್ಟ್ 8ರಂದು ಎಸ್‌ಐಆರ್ ಪ್ರಕ್ರಿಯೆಯ ಮನೆ ಮನೆ ಗಣತಿ ಅಥವಾ ಫಾರಂ ವಿತರಣೆ ಮತ್ತು ವಾಪಸ್ ಪಡೆಯುವ ಅವಧಿ ಕೊನೆಗೊಳ್ಳಲಿದೆ. ಆದರೆ, ಕೊಡಗು ಜಿಲ್ಲೆಯ ಆದಿವಾಸಿ ಹಾಡಿಗಳಿಗೆ ಇನ್ನೂ ಫಾರಂ ತಲುಪಿಯೇ ಇಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

2026 ಜುಲೈ 29ರಂದು ಆಂದೋಲನ ಪತ್ರಿಕೆ ಪ್ರಕಟಿಸಿದ ವರದಿ ಪ್ರಕಾರ, ಕೊಡಗು ಜಿಲ್ಲೆಯಲ್ಲಿ ಎಸ್‌ಐಆರ್ ಫಾರಂ ವಿತರಣೆ ಕಾರ್ಯ ಪೂರ್ಣಗೊಂಡಿದೆ ಎಂದು ಜಿಲ್ಲಾಧಿಕಾರಿ ಎಸ್‌. ಜೆ ಸೋಮಶೇಖರ್ ಹೇಳಿದ್ದಾರೆ. ಆದರೆ, ವಿರಾಜಪೇಟೆ ತಾಲೂಕಿನ ಬಾಳುಗೋಡು ಮತ್ತು ಬಿ.ಶೆಟ್ಟಿಗಿರಿ ಹಾಡಿಗಳಲ್ಲಿ (ಹಳ್ಳಿಗಳಲ್ಲಿ) ಸುಮಾರು 26 ಜನರಿಗೆ ಇನ್ನೂ ಫಾರಂ ತಲುಪಿಲ್ಲ ಎಂದು ನಾಗರಿಕ ಮತ ಕಾವಲು ಸಮಿತಿಯ ಹೇಮಂತ್ ಹೇಳುತ್ತಾರೆ.

ಫಾರಂ ತಲುಪದವರ ಕಥೆ ಒಂದೆಡೆಯಾದರೆ, ಇನ್ನು ಫಾರಂ ತಲುಪಿದವರ ಕಥೆ ಬೇರೆಯದ್ದೇ ಆಗಿದೆ. ಎರಡೂ ಹಳ್ಳಿಗಳ ಮತದಾರರು ಆದಿವಾಸಿಗಳು, ದಲಿತರು ಆಗಿರುವುದರಿಂದ ಅವರಿಗೆ ಫಾರಂ ತುಂಬುವುದು ಗೊತ್ತಿಲ್ಲ. ಇನ್ನೂ ಸ್ಪಷ್ಟವಾಗಿ ಹೇಳುವುದಾದರೆ ಈ ಫಾರಂ ಏಕೆ ಕೊಟ್ಟಿದ್ದಾರೆ ಎಂದೇ ಮಾಹಿತಿಯಿಲ್ಲ. ಕೆಲವೆಡೆ ಫಾರಂ ತುಂಬಲು ಬಿಎಲ್‌ಒಗಳು ಸಹಾಯ ಮಾಡಿದ್ದು, ಆದರೆ, ತಪ್ಪು ತಪ್ಪಾಗಿ ತುಂಬಿದ್ದಾರೆ ಎಂದು ಹೇಮಂತ್ ವಿವರಿಸಿದ್ದಾರೆ.

ಬಾಳುಗೋಡು ಹಾಡಿಯಲ್ಲಿ 80 ಮಂದಿ ಆದಿವಾಸಿ ಎರವ ಸಮುದಾಯದ ಮತದಾರರಿದ್ದಾರೆ. ಈ ಪೈಕಿ 40 ಮತದಾರರ ಫಾರಂಗಳನ್ನು ನಾವು ಪರಿಶೀಲನೆ ಮಾಡಿದ್ದೇವೆ. ಒಬ್ಬರು ಮಾತ್ರ ಸರಿಯಾಗಿ ಫಾರಂ ತುಂಬಿರುವುದು ಕಂಡು ಬಂದಿದೆ. ಬಿ.ಶೆಟ್ಟಿಗೆರಿಯಲ್ಲಿ 500ಕ್ಕೂ ಹೆಚ್ಚು ಎರವ, ಜೇನು ಕುರುಬ ಮತ್ತು ದಲಿತ ಸಮುದಾಯಗಳ ಮತದಾರರಿದ್ದಾರೆ. ಈ ಪೈಕಿ 100ಕ್ಕೂ ಹೆಚ್ಚು ಮಂದಿಯ ಫಾರಂಗಳನ್ನು ನಾವು ಪರಿಶೀಲಿಸಿದ್ದೇವೆ. ಕೇವಲ 26ರ ಜನರು ಮಾತ್ರ ಸರಿಯಾಗಿ ಫಾರಂ ತುಂಬಿದ್ದಾರೆ ಎಂದು ಹೇಮಂತ್ ತಿಳಿಸಿದ್ದಾರೆ.

ವಿವಿಧ ಇಲಾಖೆಯ ಸಿಬ್ಬಂದಿಯನ್ನು ಬಿಎಲ್‌ಒಗಳಾಗಿ ನೇಮಿಸಲಾಗಿದೆ. ಅವರಿಗೆ ಸಹಾಯ ಮಾಡಲು ಕೆಲವರನ್ನು ನಿಯೋಜಿಸಲಾಗಿದೆ. ಈ ಪೈಕಿ ಬಹುತೇಕರಿಗೆ ಸರಿಯಾದ ತರಬೇತಿ ನೀಡಿಲ್ಲ. 2002ರ ಮತದಾರರ ಪಟ್ಟಿಯಲ್ಲಿ ಹೆಸರು ಇರುವವರ ವಿವರಗಳನ್ನು 2025ರ ಮಾಹಿತಿ ತುಂಬಬೇಕಾದಲ್ಲಿ ತುಂಬಿದ್ದಾರೆ. ಇನ್ನೂ 2002ರ ಪಟ್ಟಿಯಲ್ಲಿ ಹೆಸರು ಇಲ್ಲದವರ ಫಾರಂನಲ್ಲಿ ಸಂಬಂಧಿಕರ ಬದಲು ಅದೇ ಮತದಾರರ ಮಾಹಿತಿಯನ್ನೇ ತುಂಬಿದ್ದಾರೆ. ಈ ರೀತಿ ಹಲವು ಲೋಪಗಳು ಆಗಿವೆ ಎಂದು ವಿವರಿಸಿದ್ದಾರೆ.

ಇನ್ನೂ ಕೆಲ ಮತದಾರರ ಫಾರಂಗಳಲ್ಲಿ ಮಾಹಿತಿ ಸಿಕ್ಕಿಲ್ಲ ಎಂದು ಬಿಎಲ್‌ಒಗಳೇ ಬರೆದಿದ್ದಾರೆ. ಈ ಎಲ್ಲಾ ಕಾರಣಗಳಿಗೆ ಈ ಜನರು ತಮ್ಮ ಮತದಾನದ ಹಕ್ಕನ್ನು ಕಳೆದುಕೊಳ್ಳುವುದು ಖಂಡಿತ ಎಂದು ಹೇಮಂತ್ ಕಳವಳ ವ್ಯಕ್ತಪಡಿಸಿದ್ದಾರೆ.

ಆದಿವಾಸಿ ಮತದಾರರ 2002ರ ಪಟ್ಟಿ ಹುಡುಕುವುದು ಸವಾಲಾಗಿದೆ. ಹಾಡಿ ಜನರ ಸಹಾಯಕ್ಕೆ ಯಾವುದೇ ಪಕ್ಷಗಳ ಬಿಎಲ್‌ಎಗಳು ಬರುತಿಲ್ಲ. ಬಿಎಲ್‌ಒಗಳಿಗೆ ಸರಿಯಾಗಿ ತರಬೇತಿ ಇಲ್ಲ ಎಂದು ಹೇಮಂತ್ ಸಮಸ್ಯೆ ವಿವರಿಸಿದ್ದಾರೆ.

ದಾಖಲೆಗಳು ಇಲ್ಲ, ಪಿಆರ್‌ಸಿ, ಜಾತಿ ಪ್ರಮಾಣ ಪತ್ರ ಸಿಗುವುದು ಅನುಮಾನ

ಇನ್ನೂ ಫಾರಂ ಸಿಗದ ಮತದಾರರು ತಮ್ಮ ಹಕ್ಕು ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಫಾರಂ ಸಿಕ್ಕವರ ಪೈಕಿ ಬಹುತೇಕರು ಸರಿಯಾಗಿ ತುಂಬದೆ, ವಿವರಗಳು ಮ್ಯಾಚ್ ಆಗದೆ ಕರಡು ಪಟ್ಟಿಯಿಂದ ಹೊರ ಬೀಳುವುದು ಖಚಿತವಾಗಿದೆ. ಇಆರ್‌ಒ ನೋಟಿಸ್ ಕೊಟ್ಟರೆ ಸಮರ್ಥಿಸಿಕೊಳ್ಳಲು ಈ ಜನಗಳ ಬಳಿ ಯಾವುದೇ ದಾಖಲೆಗಳಿಲ್ಲ. ಶಾಶ್ವತ ನಿವಾಸಿ ಪ್ರಮಾಣ ಪತ್ರ ಪಡೆಯೋಣ ಅಂದರೆ, ಇವರದ್ದು ಸರ್ಕಾರಿ ಜಾಗದಲ್ಲಿ ಹೋರಾಟ ನಿರತ ಹಳ್ಳಿಗಳಾಗಿವೆ. ಜಾತಿ ಪ್ರಮಾಣ ಪತ್ರ ಪಡೆಯಲು ಇವರ ಜಾತಿಗಳು ಸರಿಯಾಗಿ ವಿಂಗಡಣೆಯೇ ಆಗಿಲ್ಲ ಎಂದು ಹೇಮಂತ್ ಹೇಳಿದ್ದಾರೆ.

ನಾನುಗೌರಿ.ಕಾಂ ವಿರಾಜಪೇಟೆ ತಾಲೂಕು ಬಾಳುಗೋಡು ಗ್ರಾಮದ ಹಿರಿಯ ಮತದಾರರೊಬ್ಬರ ಗಣತಿ ನಮೂನೆಯನ್ನು ಪರಿಶೀಲನೆ ನಡೆಸಿದೆ. ಈ ವೇಳೆ ಅವರ ನಮೂನೆಯಲ್ಲಿ ಎರಡೂ ಬದಿಯ ಕಾಲಂಗಳನ್ನು ತುಂಬಿರುವುದು ಕಂಡು ಬಂದಿದೆ. ಈ ರೀತಿಯ ಉದಾಹರಣೆಗಳು ಹಲವಿದೆ ಎಂದು ಹೇಮಂತ್ ಹೇಳುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...