Homeಮುಖಪುಟಎಸ್‌ಐಆರ್ : 12 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಗಡುವು ವಿಸ್ತರಿಸಿದ ಚು. ಆಯೋಗ

ಎಸ್‌ಐಆರ್ : 12 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಗಡುವು ವಿಸ್ತರಿಸಿದ ಚು. ಆಯೋಗ

- Advertisement -
- Advertisement -

ಒಂಬತ್ತು ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌)ಯಲ್ಲಿ ಮತದಾರರು ಎಣಿಕೆ ನಮೂನೆಗಳನ್ನು ಸಲ್ಲಿಸುವ ಗಡುವನ್ನು ಡಿಸೆಂಬರ್ 4 ರಿಂದ 11ಕ್ಕೆ ಚುನಾವಣಾ ಆಯೋಗ ಭಾನುವಾರ ವಿಸ್ತರಿಸಿದೆ.

ಇದರಿಂದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಛತ್ತೀಸ್‌ಗಢ, ಗೋವಾ, ಗುಜರಾತ್, ಕೇರಳ, ಲಕ್ಷದ್ವೀಪ, ಮಧ್ಯಪ್ರದೇಶ, ಪುದುಚೇರಿ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದ ನೋಂದಾಯಿತ ಮತದಾರರು ತಮ್ಮ ಎಣಿಕೆ ನಮೂನೆಗಳನ್ನು ಪೂರ್ಣಗೊಳಿಸಲು ಮತ್ತು ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್‌ಒ) ಹಸ್ತಾಂತರಿಸಲು ಹೆಚ್ಚುವರಿ ಒಂದು ವಾರದ ಸಮಯವನ್ನು ಪಡೆಯಲಿದ್ದಾರೆ.

ನಂತರ ಅವುಗಳನ್ನು ಬಿಎಲ್‌ಒಗಳು ಚುನಾವಣಾ ಆಯೋಗದ ECINetಪೋರ್ಟಲ್‌ಗೆ ಅಪ್‌ಲೋಡ್ ಮಾಡುತ್ತಾರೆ. ಡಿಸೆಂಬರ್ 9ರಂದು ಈ ಹಿಂದೆ ನಿಗದಿಪಡಿಸಲಾಗಿದ್ದ ದಿನಾಂಕಕ್ಕೆ ಬದಲಾಗಿ ಡಿಸೆಂಬರ್ 16ರಂದು ಮತದಾರರ ಕರಡು ಪಟ್ಟಿಯನ್ನು ಪ್ರಕಟಿಸಲಾಗುವುದು. ಡಿಸೆಂಬರ್ 11 ರವರೆಗೆ ಫಾರ್ಮ್‌ಗಳನ್ನು ಸಲ್ಲಿಸುವ ಎಲ್ಲರನ್ನು ಕರಡು ಪಟ್ಟಿಯಲ್ಲಿ ಸೇರಿಸಲಾಗುವುದು. ಅಂತಿಮ ಪಟ್ಟಿಯನ್ನು ಫೆಬ್ರವರಿ 7ರ ಹಿಂದಿನ ದಿನಾಂಕಕ್ಕೆ ಬದಲಾಗಿ ಫೆಬ್ರವರಿ 14, 2026ರಂದು ಪ್ರಕಟಿಸಲಾಗುವುದು ಎಂದು ಚುನವಣಾ ಆಯೋಗ ಹೇಳಿದೆ.

12 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಪತ್ರ ಬರೆದಿರುವ ಭಾರತೀಯ ಚುನಾವಣಾ ಆಯೋಗ, ಹೊಸ ವೇಳಾಪಟ್ಟಿಯು ಅಕ್ಟೋಬರ್ 27ರಂದು ಅವರಿಗೆ ನೀಡಲಾದ ಸೂಚನೆಗಳನ್ನು ರದ್ದುಗೊಳಿಸುತ್ತದೆ ಎಂದು ತಿಳಿಸಿದೆ. ಬದಲಾವಣೆಗೆ ಕಾರಣವನ್ನು ಚುನಾವಣಾ ಆಯೋಗ ಉಲ್ಲೇಖಿಸಿಲ್ಲ. ಶನಿವಾರದ ವೇಳೆಗೆ, ಚುನಾವಣಾ ಆಯೋಗವು ಪತ್ರಿಕಾ ಹೇಳಿಕೆಯಲ್ಲಿ, 51 ಕೋಟಿ ಮತದಾರರಿಗೆ 99.53% ಎಣಿಕೆ ನಮೂನೆಗಳನ್ನು ವಿತರಿಸಲಾಗಿದೆ ಮತ್ತು ಅವುಗಳಲ್ಲಿ 78.97% ಡಿಜಿಟಲೀಕರಣಗೊಳಿಸಲಾಗಿದೆ ಎಂದು ತಿಳಿಸಿದೆ.

ಜೂನ್ 24ರಂದು ಚುನಾವಣಾ ಆಯೋಗವು ದೇಶದ ಮತದಾರರ ಪಟ್ಟಿಯ ಎಸ್‌ಐಆರ್‌ ಬಗ್ಗೆ ಮೊದಲ ಆದೇಶ ಹೊರಡಿಸಿತು. ಬಿಹಾರದಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ಇದನ್ನು ಪ್ರಾರಂಭಿಸಲಾಯಿತು. ಬಿಹಾರ ಎಸ್‌ಐಆರ್‌ನಿಂದ ರಾಜ್ಯದಲ್ಲಿ ನೋಂದಾಯಿತ ಮತದಾರರ ಸಂಖ್ಯೆಯಲ್ಲಿ 6%ರಷ್ಟು ಇಳಿಕೆಯಾಗಿದೆ.

ನಂತರ, ಅಕ್ಟೋಬರ್ 27ರಂದು ಚುನಾವಣಾ ಆಯೋಗ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಎಸ್‌ಐಆರ್‌ ಬಗ್ಗೆ ಘೋಷಣೆ ಮಾಡಿತು. ಉಳಿದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಲ್ಲೂ ಮುಂದಿನ ಹಂತಗಳಲ್ಲಿ ಎಸ್‌ಐಆರ್‌ ನಡೆಯುವ ಸಾಧ್ಯತೆ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...