Homeಮುಖಪುಟಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ಗಂಭೀರ ಸವಾಲು: ಪಿಣರಾಯಿ ವಿಜಯನ್ ಎಸ್‌ಐಆರ್‌ಗೆ ವಾಗ್ದಾಳಿ

ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ಗಂಭೀರ ಸವಾಲು: ಪಿಣರಾಯಿ ವಿಜಯನ್ ಎಸ್‌ಐಆರ್‌ಗೆ ವಾಗ್ದಾಳಿ

- Advertisement -
- Advertisement -

12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತದ ಚುನಾವಣಾ ಆಯೋಗದ ನಿರ್ಧಾರವನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ ತೀವ್ರವಾಗಿ ಟೀಕಿಸಿದ್ದು, “ಪ್ರಜಾಪ್ರಭುತ್ವ ಪ್ರಕ್ರಿಯೆಗೆ ಗಂಭೀರ ಸವಾಲು” ಎಂದು ಬಣ್ಣಿಸಿದ್ದಾರೆ.

ಅಸ್ತಿತ್ವದಲ್ಲಿರುವ ಪಟ್ಟಿ ಬದಲಿಗೆ 2002 ರಿಂದ 2004 ರವರೆಗಿನ ಮತದಾರರ ಪಟ್ಟಿಗಳ ಪರಿಷ್ಕರಣೆಯನ್ನು ಆಧರಿಸಿದ ಚುನಾವಣಾ ಸಮಿತಿಯ ಕ್ರಮವು 1950 ರ ಜನತಾ ಪ್ರಾತಿನಿಧ್ಯ ಕಾಯ್ದೆ ಮತ್ತು 1960 ರ ಮತದಾರರ ನೋಂದಣಿ ನಿಯಮಗಳನ್ನು ಉಲ್ಲಂಘಿಸುತ್ತದೆ ಎಂದು ವಿಜಯನ್ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.

“ಪ್ರಸ್ತುತ ಮತದಾರರ ಪಟ್ಟಿಯನ್ನು ಅದರ ಅಡಿಪಾಯವಾಗಿ ಬಳಸಿಕೊಂಡು ಯಾವುದೇ ನವೀಕರಣವನ್ನು ಮಾಡಬೇಕು ಎಂದು ಈ ಕಾನೂನುಗಳು ಸ್ಪಷ್ಟವಾಗಿ ಹೇಳುತ್ತವೆ” ಎಂದು ಅವರು ಹೇಳಿದರು.

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಯಾರಿ ನಡೆಸುತ್ತಿರುವುದರಿಂದ, ಈಗ ವಿಶೇಷ ತೀವ್ರ ಪರಿಷ್ಕರಣೆ ನಡೆಸುವುದು ಅಪ್ರಾಯೋಗಿಕ ಎಂದು ರಾಜ್ಯ ಚುನಾವಣಾ ಅಧಿಕಾರಿ ಈಗಾಗಲೇ ಆಯೋಗಕ್ಕೆ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು. “ಈ ಹಂತದಲ್ಲಿ ಎಸ್‌ಐಆರ್‌ನೊಂದಿಗೆ ಮುಂದುವರಿಯುವುದು, ಈ ಕ್ರಮದ ಹಿಂದಿನ ಉದ್ದೇಶದ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕುತ್ತದೆ” ಎಂದು ಅವರು ಹೇಳಿದರು.

ಬಿಹಾರದಲ್ಲಿ ಹಿಂದಿನ ಎಸ್‌ಐಆರ್‌ ಪ್ರಕ್ರಿಯೆಯನ್ನು ವಿಜಯನ್ ಉಲ್ಲೇಖಿಸಿ, ಬಿಹಾರದಲ್ಲಿ ಸುಮಾರು 65 ಲಕ್ಷ ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ಈ ಕ್ರಮವು ಸಂವಿಧಾನದ 326 ನೇ ವಿಧಿಯ ಅಡಿಯಲ್ಲಿ ನಾಗರಿಕರ ಸಾರ್ವತ್ರಿಕ ಮತದಾನದ ಹಕ್ಕಿನ ‘ಸಂಪೂರ್ಣ ಉಲ್ಲಂಘನೆ’ ಎಂದು ಅವರು ಪ್ರತಿಪಾದಿಸಿದರು.

“ನಾಗರಿಕರ ಮೂಲಭೂತ ಹಕ್ಕಾಗಿರುವ ಮತದಾನದ ಹಕ್ಕನ್ನು ರಾಜಕೀಯ ಹಿತಾಸಕ್ತಿಗಳ ಪ್ರಕಾರ ಕಸಿದುಕೊಳ್ಳಲಾಗುವುದಿಲ್ಲ” ಎಂದು ಅವರು ಹೇಳಿದರು.

ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಅನ್ನು ಕಾರ್ಯಗತಗೊಳಿಸಲು ಎಸ್‌ಐಆರ್‌ ಪ್ರಕ್ರಿಯೆಯು ‘ಅನ್ಯ ಮಾರ್ಗ’ವಾಗಬಹುದು ಎಂದು ಮುಖ್ಯಮಂತ್ರಿ ಮತ್ತಷ್ಟು ಕಳವಳ ವ್ಯಕ್ತಪಡಿಸಿದರು. ಈ ಹಿಂದೆ ಮಾಡಿದ ಇದೇ ರೀತಿಯ ಟೀಕೆಗಳನ್ನು ಕೇಂದ್ರ ಅಧಿಕಾರಿಗಳು ನಿರಾಕರಿಸಿಲ್ಲ ಎಂದು ಹೇಳಿದರು.

“ಬಿಹಾರ ಎಸ್‌ಐಆರ್‌ನ ಸಾಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಪರಿಗಣಿಸುತ್ತಿದೆ. ಆದರೆ, ಅದೇ ಪ್ರಕ್ರಿಯೆಯನ್ನು ಇತರ ರಾಜ್ಯಗಳಿಗೆ ವಿಸ್ತರಿಸುವುದನ್ನು ನಾವು ಮುಗ್ಧವಾಗಿ ನೋಡಲಾಗುವುದಿಲ್ಲ. ಪರಿಷ್ಕರಣೆಯನ್ನು ಜನರ ಇಚ್ಛೆಯನ್ನು ಬುಡಮೇಲು ಮಾಡುವ ಆತುರದಲ್ಲಿ ನಡೆಸಲಾಗುತ್ತಿದೆ” ಎಂದು ಆರೋಪಿಸಿದರು.

ಎಸ್‌ಐಆರ್‌ ವಿಶ್ವಾಸಾರ್ಹತೆಯ ಮೇಲೆ ಪರಿಣಾಮ ಬೀರುವ ನಿರ್ಧಾರಗಳಿಂದ ದೂರವಿರಲು ಅವರು ಚುನಾವಣಾ ಆಯೋಗವನ್ನು ಒತ್ತಾಯಿಸಿದರು. ಚುನಾವಣಾ ಸಮಿತಿಯಂತಹ ಸಂಸ್ಥೆಗಳು ‘ಕೇಂದ್ರದಲ್ಲಿ ಆಡಳಿತ ಪಕ್ಷದ ಕೈಗೊಂಬೆಗಳಾಗಬಾರದು’ ಎಂದು ಎಚ್ಚರಿಸಿದರು.

ಎಸ್‌ಐಆರ್ ಅನ್ನು ವಿರೋಧಿಸಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದ ಏಕೈಕ ರಾಜ್ಯ ಕೇರಳ. ಎರಡನೇ ಹಂತದ ಪರಿಷ್ಕರಣಾ ಪ್ರಕ್ರಿಯೆಯ ವಿರುದ್ಧ ‘ಪ್ರಜಾಪ್ರಭುತ್ವವನ್ನು ರಕ್ಷಿಸುವಲ್ಲಿ ಆಸಕ್ತಿ ಹೊಂದಿರುವ ಎಲ್ಲರೂ’ ಒಗ್ಗೂಡಬೇಕು ಎಂದು ವಿಜಯನ್ ಕರೆ ನೀಡಿದರು.

2026 ರಲ್ಲಿ ವಿಧಾನಸಭಾ ಚುನಾವಣೆಗಳನ್ನು ನಡೆಸಲು ನಿರ್ಧರಿಸಲಾಗಿರುವ ಕೇರಳ, ತಮಿಳುನಾಡು, ಪುದುಚೇರಿ, ಪಶ್ಚಿಮ ಬಂಗಾಳ ಸೇರಿದಂತೆ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನವೆಂಬರ್ ಮತ್ತು ಫೆಬ್ರವರಿ ನಡುವೆ ಎಸ್‌ಐಆರ್ ನಡೆಸಲಾಗುವುದು ಎಂದು ಚುನಾವಣಾ ಆಯೋಗ ಸೋಮವಾರ ಘೋಷಿಸಿತ್ತು.

8ನೇ ವೇತನ ಆಯೋಗದ ಉಲ್ಲೇಖಿತ ನಿಯಮಗಳಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...