Homeಕರ್ನಾಟಕಎಸ್‌ಐಆರ್ ಬಡವರ ವಿರುದ್ಧದ 'ಅಘೋಷಿತ ಯುದ್ಧ': ಶಿವಸುಂದರ್

ಎಸ್‌ಐಆರ್ ಬಡವರ ವಿರುದ್ಧದ ‘ಅಘೋಷಿತ ಯುದ್ಧ’: ಶಿವಸುಂದರ್

- Advertisement -
- Advertisement -

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಡವರ ವಿರುದ್ದದ ‘ಅಘೋಷಿತ ಯುದ್ದ’ವಾಗಿದೆ. ಇದು ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಮಹಿಳೆಯರನ್ನು ಗುರಿಯಾಗಿಸಿಕೊಂಡಿದೆ ಚಿಂತಕ ಶಿವಸುಂದರ್ ಹೇಳಿದರು.

ಕಲಬುರಗಿ ನಗರದ ಕನ್ನಡ ಭವನದಲ್ಲಿ ಸಂವಿಧಾನ ರಕ್ಷಣಾ ಸಮಿತಿ ಹಾಗೂ ಎದ್ದೇಳು ಕರ್ನಾಟಕ ಭಾನುವಾರ (ಮಾ.1) ಹಮ್ಮಿಕೊಂಡಿದ್ದ ‘ಎಸ್‌ಐಆರ್ ಪರಿಣಾಮ-ಸವಾಲು ಸಂವಾದಗೋಷ್ಠಿ’ಯಲ್ಲಿ ಅವರು ಮಾತನಾಡಿದರು.

ಎಸ್‌ಐಆರ್ ಕೇವಲ ಮತದಾರರ ಪಟ್ಟಿಯ ಪರಿಷ್ಕರಣೆ ಅಲ್ಲ, ಬದಲಿಗೆ ಅಂಚಿನ ಸಮುದಾಯಗಳ ವಿರುದ್ಧ ನಡೆಸುತ್ತಿರುವ ಸಂಚಿನ ಭಾಗವಾಗಿದೆ ಎಂದು ದೂರಿದರು.

ಎಸ್‌ಐಆರ್ ಎಂದರೆ ಸಾಮಾನ್ಯ ಪರಿಷ್ಕರಣೆ ಅಲ್ಲ. ಇದು ಅಲ್ಪಸಂಖ್ಯಾತರು, ಆದಿವಾಸಿಗಳು, ದಲಿತರು, ಮಹಿಳೆಯರು ಮತ್ತು ಇತರೆ ಹಿಂದುಳಿದ ವರ್ಗಗಳ ಮೇಲೆ ನಡೆಸುತ್ತಿರುವ ವ್ಯವಸ್ಥಿತ ಯುದ್ಧ. ಈ ಯುದ್ಧಕ್ಕೆ ಒಗ್ಗಟ್ಟಿನಿಂದ ಪ್ರತಿರೋಧ ತೋರಿಸದಿದ್ದರೆ, ನಮ್ಮದೇ ದೇಶದಲ್ಲಿ ನಾವು ದ್ವಿತೀಯ ದರ್ಜೆ ನಾಗರಿಕರಾಗಿ ಬದುಕಬೇಕಾದ ಪರಿಸ್ಥಿತಿ ಬರುತ್ತದೆ ಎಂದು ಶಿವಸುಂದರ್ ಎಚ್ಚರಿಸಿದರು.

ಎಸ್‌ಐಆರ್ ಹಿಂದೆ ರಾಜಕೀಯ ಉದ್ದೇಶಗಳಿವೆ ಎಂದು ಆರೋಪಿಸಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾಂವಿಧಾನಿಕ ಸಂಸ್ಥೆಗಳನ್ನು ಚುನಾವಣಾ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಟೀಕಿಸಿದರು. ಎಸ್‌ಐಆರ್ ಪ್ರಕ್ರಿಯೆ ಮತದಾರರ ಪಟ್ಟಿಯನ್ನು ನವೀಕರಿಸುವುದಕ್ಕಿಂತ ಹೆಚ್ಚಾಗಿ ನಾಗರಿಕತ್ವವನ್ನು ಪರೀಕ್ಷಿಸುವ ಕ್ರಮವಾಗಿ ಪರಿಣಮಿಸಿದೆ ಎಂದು ಹೇಳಿದರು.

ಸಾಮಾನ್ಯ ಪರಿಷ್ಕರಣೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಯಾರಾದರೂ ಮತದಾರರು ನಿಧನರಾಗಿದ್ದಾರೆಯೇ?.. ಸ್ಥಳಾಂತರಗೊಂಡಿದ್ದಾರೆಯೇ? ಅಥವಾ ಹೊಸ ಮತದಾರ ಅರ್ಹರಾಗಿದ್ದಾರೆಯೇ? ಎಂಬುದನ್ನು ಪರಿಶೀಲಿಸುತ್ತಾರೆ. ಆದರೆ, ಎಸ್‌ಐಆರ್‌ನಲ್ಲಿ ನೀವು ಭಾರತೀಯ ನಾಗರಿಕರೇ?’ ಎಂಬ ಪ್ರಶ್ನೆಯನ್ನು ಆರಂಭದಲ್ಲೇ ಕೇಳಲಾಗುತ್ತಿದೆ. ಬಹುತೇಕ ಆದಿವಾಸಿಗಳು, ಅಲ್ಪಸಂಖ್ಯಾತರು, ಬಡವರು ಮತ್ತು ಮಹಿಳೆಯರ ಬಳಿ ಕೇಳಲಾಗುತ್ತಿರುವ ದಾಖಲೆಗಳು ಇಲ್ಲ. ಇದು ಮುಂದುವರಿದರೆ ಅನೇಕರ ಮತಹಕ್ಕು ಕಳೆದುಹೋಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.

ಭಾರತದ ಸಂವಿಧಾನ ರೂಪಿಸಿದ ಮಹನೀಯರು ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಖಾತ್ರಿ ಮಾಡುವ ಪ್ರಜಾಸತ್ತಾತ್ಮಕ, ಸಮಾಜವಾದಿ ಗಣರಾಜ್ಯದ ಕನಸು ಕಂಡಿದ್ದರು. ಎಸ್‌ಐಆರ್ ಈ ಸಂವಿಧಾನಿಕ ಮೌಲ್ಯಗಳನ್ನು ದುರ್ಬಲಗೊಳಿಸುವ ಸಂಚಾಗಿದೆ ಎಂದು ಶಿವಸುಂದರ್ ಹೇಳಿದರು.

ಎಸ್‌ಐಆರ್ ಕೇವಲ ಮತದಾರರ ಪಟ್ಟಿಯ ಪರಿಷ್ಕರಣೆ ಅಲ್ಲ. ಇದು ಪ್ರಜಾಸತ್ತಾತ್ಮಕ ಹಾಗೂ ನಾಗರಿಕ ಹಕ್ಕುಗಳ ಹತ್ಯೆ ಎಂದು ಅವರು ಆರೋಪಿಸಿದರು.

ಇತರೆ ರಾಜ್ಯಗಳ ಅಂಕಿ ಅಂಶಗಳನ್ನು ಉಲ್ಲೇಖಿಸಿದ ಅವರು, ಬಿಹಾರದಲ್ಲಿ 65 ಲಕ್ಷ, ತಮಿಳುನಾಡಿನಲ್ಲಿ 74 ಲಕ್ಷ ಹಾಗೂ ಉತ್ತರ ಪ್ರದೇಶದಲ್ಲಿ ಸುಮಾರು 3 ಕೋಟಿ ಮತದಾರರನ್ನು ಎಸ್‌ಐಆರ್ ಮೂಲಕ ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ. ಇವರಲ್ಲಿ ಬಹುತೇಕರು ಮುಸ್ಲಿಮರು ಅಥವಾ ಆಡಳಿತ ಪಕ್ಷದ ವಿರೋಧಿಗಳು ಎಂದು ವಿವರಿಸಿದರು.

ಎಸ್‌ಐಆರ್ ಮೂಲಕ ಆಡಳಿತ ಪಕ್ಷ ತನ್ನ ವಿರೋಧಿಗಳನ್ನು ಮತದಾರರ ಪಟ್ಟಿಯಿಂದ ಅಳಿಸಿ ಚುನಾವಣೆಯಲ್ಲಿ ಸುಲಭವಾಗಿ ಗೆಲ್ಲಲು ಯತ್ನಿಸುತ್ತಿದೆ. ಇದು ಹಗಲಿನಲ್ಲಿ ನಡೆಯುತ್ತಿರುವ ಪ್ರಜಾಪ್ರಭುತ್ವದ ಹತ್ಯೆಯಾಗಿದೆ. ಸಂವಿಧಾನ ಮತ್ತು ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ರಕ್ಷಿಸಲು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಬೇಕು ಎಂದು ಕರೆ ನೀಡಿದರು.

ನಾಗರಿಕ ಸಮಾಜ ಸಂಸ್ಥೆಗಳು, ವಿದ್ಯಾರ್ಥಿಗಳು, ಯುವಜನರು ಹಾಗೂ ಪ್ರಗತಿಪರ ಸಂಘಟನೆಗಳು ಒಗ್ಗಟ್ಟಿನಿಂದ ಜನರನ್ನು ಜಾಗೃತಿಗೊಳಿಸಿ ಹೋರಾಟ ನಡೆಸಬೇಕು ಎಂದು ಅವರು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ವಿವಿಧ ಸಂಘಟನೆಗಳ ಮುಖಂಡರು, ಹೋರಾಟಗಾರರು ಹಾಗೂ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ನಾಗರಿಕರು, ಯುವಜನರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಉದ್ವಿಗ್ನತೆ: ಅಂತರರಾಷ್ಟ್ರೀಯ ಕಾನೂನು ಸತ್ತಿದೆ ಎಂದ ರಷ್ಯಾ, ಯುಎನ್ಎಸ್‌ಸಿ ಪಿ-5 ಶೃಂಗಸಭೆಗೆ ಒತ್ತಾಯ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವ ನಡುವೆ, ಇರಾನ್ ಮೇಲೆ ಅಮೆರಿಕ-ಇಸ್ರೇಲಿ ದಾಳಿಯ ನಂತರ ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಅಂತರರಾಷ್ಟ್ರೀಯ ಕಾನೂನು ಪರಿಣಾಮಕಾರಿಯಾಗಿ ಸತ್ತಿದೆ ಎಂದು ರಷ್ಯಾ ಹೇಳಿದೆ ಮತ್ತು ಯುಎನ್ ಭದ್ರತಾ...

ಕೊಚ್ಚಿ ಬಂದರಿನಲ್ಲಿ ಇರಾನ್ ಯುದ್ಧನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನ : ಇಬ್ಬರು ‘ರಿಪಬ್ಲಿಕ್ ಟಿವಿ’ ಪತ್ರಕರ್ತರ ಬಂಧನ-ವರದಿ

ಕೇರಳದ ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಿರುವ ಇರಾನಿನ ಯುದ್ಧ ನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನಿಸಿದ ಇಬ್ಬರು ರಿಪಬ್ಲಿಕ್ ಟಿವಿ ಪತ್ರಕರ್ತರು ಸೇರಿದಂತೆ ಮೂವರನ್ನು ಶನಿವಾರ (ಮಾ.7) ಬಂಧಿಸಲಾಗಿದೆ ಎಂದು thenewsminute.com ವರದಿ ಮಾಡಿದೆ. ಅಂತಾರಾಷ್ಟ್ರೀಯ...

ಬಿಹಾರ | ಅಧಿಕೃತವಾಗಿ ಜೆಡಿಯು ಸೇರಿದ ನಿತೀಶ್ ಕುಮಾರ್ ಮಗ ನಿಶಾಂತ್ ಕುಮಾರ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಗ ನಿಶಾಂತ್ ಕುಮಾರ್ ಅವರು ಭಾನುವಾರ (ಮಾ.8) ಔಪಚಾರಿಕವಾಗಿ ಜೆಡಿಯು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಅಧಿಕೃತವಾಗಿ ರಾಜಕೀಯಕ್ಕೆ ಪಾದಾರ್ಪಾಣೆ ಮಾಡಿದ್ದಾರೆ. ಸಿಎಂ ನಿತೀಶ್ ಕುಮಾರ್...

ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಹೆಚ್ಚಳ; 2025 ರ ವರದಿಯಲ್ಲಿ 3.6 ಲಕ್ಷ ದಾಟಿದ ಅತಿಸಾರ ಪ್ರಕರಣಗಳು

ಮುಂಬೈ: ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಸಂಖ್ಯೆ ಹೆಚ್ಚುತ್ತಿರುವುದು ಆರೋಗ್ಯ ಅಧಿಕಾರಿಗಳಲ್ಲಿ ಕಳವಳವನ್ನು ಮೂಡಿಸಿದೆ.  ಅಧಿಕೃತ ಅಂಕಿಅಂಶಗಳು ಪ್ರತಿ ವರ್ಷ ಸಾವಿರಾರು ಜನರು ಕಲುಷಿತ ನೀರು ಮತ್ತು ಕಳಪೆ ನೈರ್ಮಲ್ಯಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ...

ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆರೋಪ : ಬಂಗಾಳ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ ಕೇಂದ್ರ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪಶ್ಚಿಮ ಬಂಗಾಳ ಭೇಟಿಗೆ ಸಂಬಂಧಿಸಿದಂತೆ ರಾಜ್ಯದ ಟಿಎಂಸಿ ಸರ್ಕಾರ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ನಡುವೆ ರಾಜಕೀಯ ಕಿತ್ತಾಟ ತೀವ್ರಗೊಂಡಂತೆ ಗೋಚರಿಸುತ್ತಿದೆ. ರಾಷ್ಟ್ರಪತಿ ಭೇಟಿಯ ವೇಳೆ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಒಂದು ವಾರದಲ್ಲಿ ಗಲ್ಫ್ ದೇಶಗಳಿಂದ 52,000 ಕ್ಕೂ ಹೆಚ್ಚು ಭಾರತೀಯರು ಮರಳಿದ್ದಾರೆ: ವಿದೇಶಾಂಗ ಸಚಿವಾಲಯ

ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿಯನ್ನು ಸರ್ಕಾರ ಮೇಲ್ವಿಚಾರಣೆ ಮಾಡುತ್ತಿರುವುದರಿಂದ ಮಾರ್ಚ್ 1 ರಿಂದ 7 ರವರೆಗೆ ಗಲ್ಫ್ ಪ್ರದೇಶದಿಂದ 52,000 ಕ್ಕೂ ಹೆಚ್ಚು ಭಾರತೀಯರು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

‘ನೀವು ಅಮೆರಿಕನ್ನರನ್ನು ಕೊಂದರೆ ನಾವು, ನಿಮ್ಮನ್ನು ಬೇಟೆಯಾಡುತ್ತೇವೆ’: ಅಮೆರಿಕ ಬೆದರಿಕೆ 

ವಾಷಿಂಗ್ಟನ್: "ನೀವು ಅಮೆರಿಕನ್ನರನ್ನು ಕೊಂದರೆ, ನಾವು ನಿಮ್ಮನ್ನು ಬೇಟೆಯಾಡುತ್ತೇವೆ" ಎಂದು ಯುದ್ಧ ಕಾರ್ಯದರ್ಶಿ ಪೀಟ್ ಹೆಗ್ಸೆತ್ ರೀಡ್ ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆ ಪೋಸ್ಟ್ ಹಾಕಿದ್ದಾರೆ.  ಅಮೆರಿಕ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಯಾವುದೇ ದೇಶ...

ಬಳ್ಳಾರಿ | ವಸತಿ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ದಾಳಿ : ಓರ್ವ ಸಾವು, 8 ಜನರಿಗೆ ಗಾಯ

ಬಳ್ಳಾರಿ ನಗರದ 'ಗುರುಕುಲ ವಸತಿ ಶಾಲೆ'ಯಲ್ಲಿ ಶನಿವಾರ (ಮಾ.7) ರಾತ್ರಿ ವಿದ್ಯಾರ್ಥಿಯೋರ್ವ ತನ್ನ ಸಹಪಾಠಿಗಳ ಮೇಲೆ ರಾಡ್, ಸ್ಕ್ರೂ ಡ್ರೈವರ್‌ನಿಂದ ದಾಳಿ ನಡೆಸಿದ್ದು, ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಎಂಟು ಜನರು ಗಾಯಗೊಂಡಿದ್ದಾರೆ...

ಗೋವುಗಳ ಕಳ್ಳಸಾಗಣೆ ಆರೋಪ: ಹಣ್ಣು-ತರಕಾರಿ ಸಾಗಿಸುತ್ತಿದ್ದ 28 ವರ್ಷದ ಮುಸ್ಲಿಂ ಚಾಲಕನಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಹಿಂದುತ್ವ ಗುಂಪು

ಭಿವಾಡಿ: ರಾಜಸ್ಥಾನದ ಭಿವಾಡಿ ಪ್ರದೇಶದಲ್ಲಿ ಮಾರ್ಚ್ 2 ರ ಮುಂಜಾನೆ 28 ವರ್ಷದ ಆಮಿರ್ ಎಂಬ ವ್ಯಕ್ತಿಯನ್ನು ಗೋರಕ್ಷಕರು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಅಕ್ರಮವಾಗಿ ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆಂದು ಶಂಕಿಸಿ ಬಜರಂಗದಳದ ಸದಸ್ಯರು...