Homeಕರ್ನಾಟಕಎಸ್‌ಐಆರ್ ಬಡವರ ವಿರುದ್ಧದ 'ಅಘೋಷಿತ ಯುದ್ಧ': ಶಿವಸುಂದರ್

ಎಸ್‌ಐಆರ್ ಬಡವರ ವಿರುದ್ಧದ ‘ಅಘೋಷಿತ ಯುದ್ಧ’: ಶಿವಸುಂದರ್

- Advertisement -
- Advertisement -

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಡವರ ವಿರುದ್ದದ ‘ಅಘೋಷಿತ ಯುದ್ದ’ವಾಗಿದೆ. ಇದು ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಮಹಿಳೆಯರನ್ನು ಗುರಿಯಾಗಿಸಿಕೊಂಡಿದೆ ಚಿಂತಕ ಶಿವಸುಂದರ್ ಹೇಳಿದರು.

ಕಲಬುರಗಿ ನಗರದ ಕನ್ನಡ ಭವನದಲ್ಲಿ ಸಂವಿಧಾನ ರಕ್ಷಣಾ ಸಮಿತಿ ಹಾಗೂ ಎದ್ದೇಳು ಕರ್ನಾಟಕ ಭಾನುವಾರ (ಮಾ.1) ಹಮ್ಮಿಕೊಂಡಿದ್ದ ‘ಎಸ್‌ಐಆರ್ ಪರಿಣಾಮ-ಸವಾಲು ಸಂವಾದಗೋಷ್ಠಿ’ಯಲ್ಲಿ ಅವರು ಮಾತನಾಡಿದರು.

ಎಸ್‌ಐಆರ್ ಕೇವಲ ಮತದಾರರ ಪಟ್ಟಿಯ ಪರಿಷ್ಕರಣೆ ಅಲ್ಲ, ಬದಲಿಗೆ ಅಂಚಿನ ಸಮುದಾಯಗಳ ವಿರುದ್ಧ ನಡೆಸುತ್ತಿರುವ ಸಂಚಿನ ಭಾಗವಾಗಿದೆ ಎಂದು ದೂರಿದರು.

ಎಸ್‌ಐಆರ್ ಎಂದರೆ ಸಾಮಾನ್ಯ ಪರಿಷ್ಕರಣೆ ಅಲ್ಲ. ಇದು ಅಲ್ಪಸಂಖ್ಯಾತರು, ಆದಿವಾಸಿಗಳು, ದಲಿತರು, ಮಹಿಳೆಯರು ಮತ್ತು ಇತರೆ ಹಿಂದುಳಿದ ವರ್ಗಗಳ ಮೇಲೆ ನಡೆಸುತ್ತಿರುವ ವ್ಯವಸ್ಥಿತ ಯುದ್ಧ. ಈ ಯುದ್ಧಕ್ಕೆ ಒಗ್ಗಟ್ಟಿನಿಂದ ಪ್ರತಿರೋಧ ತೋರಿಸದಿದ್ದರೆ, ನಮ್ಮದೇ ದೇಶದಲ್ಲಿ ನಾವು ದ್ವಿತೀಯ ದರ್ಜೆ ನಾಗರಿಕರಾಗಿ ಬದುಕಬೇಕಾದ ಪರಿಸ್ಥಿತಿ ಬರುತ್ತದೆ ಎಂದು ಶಿವಸುಂದರ್ ಎಚ್ಚರಿಸಿದರು.

ಎಸ್‌ಐಆರ್ ಹಿಂದೆ ರಾಜಕೀಯ ಉದ್ದೇಶಗಳಿವೆ ಎಂದು ಆರೋಪಿಸಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾಂವಿಧಾನಿಕ ಸಂಸ್ಥೆಗಳನ್ನು ಚುನಾವಣಾ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಟೀಕಿಸಿದರು. ಎಸ್‌ಐಆರ್ ಪ್ರಕ್ರಿಯೆ ಮತದಾರರ ಪಟ್ಟಿಯನ್ನು ನವೀಕರಿಸುವುದಕ್ಕಿಂತ ಹೆಚ್ಚಾಗಿ ನಾಗರಿಕತ್ವವನ್ನು ಪರೀಕ್ಷಿಸುವ ಕ್ರಮವಾಗಿ ಪರಿಣಮಿಸಿದೆ ಎಂದು ಹೇಳಿದರು.

ಸಾಮಾನ್ಯ ಪರಿಷ್ಕರಣೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಯಾರಾದರೂ ಮತದಾರರು ನಿಧನರಾಗಿದ್ದಾರೆಯೇ?.. ಸ್ಥಳಾಂತರಗೊಂಡಿದ್ದಾರೆಯೇ? ಅಥವಾ ಹೊಸ ಮತದಾರ ಅರ್ಹರಾಗಿದ್ದಾರೆಯೇ? ಎಂಬುದನ್ನು ಪರಿಶೀಲಿಸುತ್ತಾರೆ. ಆದರೆ, ಎಸ್‌ಐಆರ್‌ನಲ್ಲಿ ನೀವು ಭಾರತೀಯ ನಾಗರಿಕರೇ?’ ಎಂಬ ಪ್ರಶ್ನೆಯನ್ನು ಆರಂಭದಲ್ಲೇ ಕೇಳಲಾಗುತ್ತಿದೆ. ಬಹುತೇಕ ಆದಿವಾಸಿಗಳು, ಅಲ್ಪಸಂಖ್ಯಾತರು, ಬಡವರು ಮತ್ತು ಮಹಿಳೆಯರ ಬಳಿ ಕೇಳಲಾಗುತ್ತಿರುವ ದಾಖಲೆಗಳು ಇಲ್ಲ. ಇದು ಮುಂದುವರಿದರೆ ಅನೇಕರ ಮತಹಕ್ಕು ಕಳೆದುಹೋಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.

ಭಾರತದ ಸಂವಿಧಾನ ರೂಪಿಸಿದ ಮಹನೀಯರು ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಖಾತ್ರಿ ಮಾಡುವ ಪ್ರಜಾಸತ್ತಾತ್ಮಕ, ಸಮಾಜವಾದಿ ಗಣರಾಜ್ಯದ ಕನಸು ಕಂಡಿದ್ದರು. ಎಸ್‌ಐಆರ್ ಈ ಸಂವಿಧಾನಿಕ ಮೌಲ್ಯಗಳನ್ನು ದುರ್ಬಲಗೊಳಿಸುವ ಸಂಚಾಗಿದೆ ಎಂದು ಶಿವಸುಂದರ್ ಹೇಳಿದರು.

ಎಸ್‌ಐಆರ್ ಕೇವಲ ಮತದಾರರ ಪಟ್ಟಿಯ ಪರಿಷ್ಕರಣೆ ಅಲ್ಲ. ಇದು ಪ್ರಜಾಸತ್ತಾತ್ಮಕ ಹಾಗೂ ನಾಗರಿಕ ಹಕ್ಕುಗಳ ಹತ್ಯೆ ಎಂದು ಅವರು ಆರೋಪಿಸಿದರು.

ಇತರೆ ರಾಜ್ಯಗಳ ಅಂಕಿ ಅಂಶಗಳನ್ನು ಉಲ್ಲೇಖಿಸಿದ ಅವರು, ಬಿಹಾರದಲ್ಲಿ 65 ಲಕ್ಷ, ತಮಿಳುನಾಡಿನಲ್ಲಿ 74 ಲಕ್ಷ ಹಾಗೂ ಉತ್ತರ ಪ್ರದೇಶದಲ್ಲಿ ಸುಮಾರು 3 ಕೋಟಿ ಮತದಾರರನ್ನು ಎಸ್‌ಐಆರ್ ಮೂಲಕ ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ. ಇವರಲ್ಲಿ ಬಹುತೇಕರು ಮುಸ್ಲಿಮರು ಅಥವಾ ಆಡಳಿತ ಪಕ್ಷದ ವಿರೋಧಿಗಳು ಎಂದು ವಿವರಿಸಿದರು.

ಎಸ್‌ಐಆರ್ ಮೂಲಕ ಆಡಳಿತ ಪಕ್ಷ ತನ್ನ ವಿರೋಧಿಗಳನ್ನು ಮತದಾರರ ಪಟ್ಟಿಯಿಂದ ಅಳಿಸಿ ಚುನಾವಣೆಯಲ್ಲಿ ಸುಲಭವಾಗಿ ಗೆಲ್ಲಲು ಯತ್ನಿಸುತ್ತಿದೆ. ಇದು ಹಗಲಿನಲ್ಲಿ ನಡೆಯುತ್ತಿರುವ ಪ್ರಜಾಪ್ರಭುತ್ವದ ಹತ್ಯೆಯಾಗಿದೆ. ಸಂವಿಧಾನ ಮತ್ತು ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ರಕ್ಷಿಸಲು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಬೇಕು ಎಂದು ಕರೆ ನೀಡಿದರು.

ನಾಗರಿಕ ಸಮಾಜ ಸಂಸ್ಥೆಗಳು, ವಿದ್ಯಾರ್ಥಿಗಳು, ಯುವಜನರು ಹಾಗೂ ಪ್ರಗತಿಪರ ಸಂಘಟನೆಗಳು ಒಗ್ಗಟ್ಟಿನಿಂದ ಜನರನ್ನು ಜಾಗೃತಿಗೊಳಿಸಿ ಹೋರಾಟ ನಡೆಸಬೇಕು ಎಂದು ಅವರು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ವಿವಿಧ ಸಂಘಟನೆಗಳ ಮುಖಂಡರು, ಹೋರಾಟಗಾರರು ಹಾಗೂ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ನಾಗರಿಕರು, ಯುವಜನರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...