Homeಕರ್ನಾಟಕಎಸ್‌ಐಆರ್ ಬಡವರ ವಿರುದ್ಧದ 'ಅಘೋಷಿತ ಯುದ್ಧ': ಶಿವಸುಂದರ್

ಎಸ್‌ಐಆರ್ ಬಡವರ ವಿರುದ್ಧದ ‘ಅಘೋಷಿತ ಯುದ್ಧ’: ಶಿವಸುಂದರ್

- Advertisement -
- Advertisement -

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಡವರ ವಿರುದ್ದದ ‘ಅಘೋಷಿತ ಯುದ್ದ’ವಾಗಿದೆ. ಇದು ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಮಹಿಳೆಯರನ್ನು ಗುರಿಯಾಗಿಸಿಕೊಂಡಿದೆ ಚಿಂತಕ ಶಿವಸುಂದರ್ ಹೇಳಿದರು.

ಕಲಬುರಗಿ ನಗರದ ಕನ್ನಡ ಭವನದಲ್ಲಿ ಸಂವಿಧಾನ ರಕ್ಷಣಾ ಸಮಿತಿ ಹಾಗೂ ಎದ್ದೇಳು ಕರ್ನಾಟಕ ಭಾನುವಾರ (ಮಾ.1) ಹಮ್ಮಿಕೊಂಡಿದ್ದ ‘ಎಸ್‌ಐಆರ್ ಪರಿಣಾಮ-ಸವಾಲು ಸಂವಾದಗೋಷ್ಠಿ’ಯಲ್ಲಿ ಅವರು ಮಾತನಾಡಿದರು.

ಎಸ್‌ಐಆರ್ ಕೇವಲ ಮತದಾರರ ಪಟ್ಟಿಯ ಪರಿಷ್ಕರಣೆ ಅಲ್ಲ, ಬದಲಿಗೆ ಅಂಚಿನ ಸಮುದಾಯಗಳ ವಿರುದ್ಧ ನಡೆಸುತ್ತಿರುವ ಸಂಚಿನ ಭಾಗವಾಗಿದೆ ಎಂದು ದೂರಿದರು.

ಎಸ್‌ಐಆರ್ ಎಂದರೆ ಸಾಮಾನ್ಯ ಪರಿಷ್ಕರಣೆ ಅಲ್ಲ. ಇದು ಅಲ್ಪಸಂಖ್ಯಾತರು, ಆದಿವಾಸಿಗಳು, ದಲಿತರು, ಮಹಿಳೆಯರು ಮತ್ತು ಇತರೆ ಹಿಂದುಳಿದ ವರ್ಗಗಳ ಮೇಲೆ ನಡೆಸುತ್ತಿರುವ ವ್ಯವಸ್ಥಿತ ಯುದ್ಧ. ಈ ಯುದ್ಧಕ್ಕೆ ಒಗ್ಗಟ್ಟಿನಿಂದ ಪ್ರತಿರೋಧ ತೋರಿಸದಿದ್ದರೆ, ನಮ್ಮದೇ ದೇಶದಲ್ಲಿ ನಾವು ದ್ವಿತೀಯ ದರ್ಜೆ ನಾಗರಿಕರಾಗಿ ಬದುಕಬೇಕಾದ ಪರಿಸ್ಥಿತಿ ಬರುತ್ತದೆ ಎಂದು ಶಿವಸುಂದರ್ ಎಚ್ಚರಿಸಿದರು.

ಎಸ್‌ಐಆರ್ ಹಿಂದೆ ರಾಜಕೀಯ ಉದ್ದೇಶಗಳಿವೆ ಎಂದು ಆರೋಪಿಸಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾಂವಿಧಾನಿಕ ಸಂಸ್ಥೆಗಳನ್ನು ಚುನಾವಣಾ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಟೀಕಿಸಿದರು. ಎಸ್‌ಐಆರ್ ಪ್ರಕ್ರಿಯೆ ಮತದಾರರ ಪಟ್ಟಿಯನ್ನು ನವೀಕರಿಸುವುದಕ್ಕಿಂತ ಹೆಚ್ಚಾಗಿ ನಾಗರಿಕತ್ವವನ್ನು ಪರೀಕ್ಷಿಸುವ ಕ್ರಮವಾಗಿ ಪರಿಣಮಿಸಿದೆ ಎಂದು ಹೇಳಿದರು.

ಸಾಮಾನ್ಯ ಪರಿಷ್ಕರಣೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಯಾರಾದರೂ ಮತದಾರರು ನಿಧನರಾಗಿದ್ದಾರೆಯೇ?.. ಸ್ಥಳಾಂತರಗೊಂಡಿದ್ದಾರೆಯೇ? ಅಥವಾ ಹೊಸ ಮತದಾರ ಅರ್ಹರಾಗಿದ್ದಾರೆಯೇ? ಎಂಬುದನ್ನು ಪರಿಶೀಲಿಸುತ್ತಾರೆ. ಆದರೆ, ಎಸ್‌ಐಆರ್‌ನಲ್ಲಿ ನೀವು ಭಾರತೀಯ ನಾಗರಿಕರೇ?’ ಎಂಬ ಪ್ರಶ್ನೆಯನ್ನು ಆರಂಭದಲ್ಲೇ ಕೇಳಲಾಗುತ್ತಿದೆ. ಬಹುತೇಕ ಆದಿವಾಸಿಗಳು, ಅಲ್ಪಸಂಖ್ಯಾತರು, ಬಡವರು ಮತ್ತು ಮಹಿಳೆಯರ ಬಳಿ ಕೇಳಲಾಗುತ್ತಿರುವ ದಾಖಲೆಗಳು ಇಲ್ಲ. ಇದು ಮುಂದುವರಿದರೆ ಅನೇಕರ ಮತಹಕ್ಕು ಕಳೆದುಹೋಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.

ಭಾರತದ ಸಂವಿಧಾನ ರೂಪಿಸಿದ ಮಹನೀಯರು ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಖಾತ್ರಿ ಮಾಡುವ ಪ್ರಜಾಸತ್ತಾತ್ಮಕ, ಸಮಾಜವಾದಿ ಗಣರಾಜ್ಯದ ಕನಸು ಕಂಡಿದ್ದರು. ಎಸ್‌ಐಆರ್ ಈ ಸಂವಿಧಾನಿಕ ಮೌಲ್ಯಗಳನ್ನು ದುರ್ಬಲಗೊಳಿಸುವ ಸಂಚಾಗಿದೆ ಎಂದು ಶಿವಸುಂದರ್ ಹೇಳಿದರು.

ಎಸ್‌ಐಆರ್ ಕೇವಲ ಮತದಾರರ ಪಟ್ಟಿಯ ಪರಿಷ್ಕರಣೆ ಅಲ್ಲ. ಇದು ಪ್ರಜಾಸತ್ತಾತ್ಮಕ ಹಾಗೂ ನಾಗರಿಕ ಹಕ್ಕುಗಳ ಹತ್ಯೆ ಎಂದು ಅವರು ಆರೋಪಿಸಿದರು.

ಇತರೆ ರಾಜ್ಯಗಳ ಅಂಕಿ ಅಂಶಗಳನ್ನು ಉಲ್ಲೇಖಿಸಿದ ಅವರು, ಬಿಹಾರದಲ್ಲಿ 65 ಲಕ್ಷ, ತಮಿಳುನಾಡಿನಲ್ಲಿ 74 ಲಕ್ಷ ಹಾಗೂ ಉತ್ತರ ಪ್ರದೇಶದಲ್ಲಿ ಸುಮಾರು 3 ಕೋಟಿ ಮತದಾರರನ್ನು ಎಸ್‌ಐಆರ್ ಮೂಲಕ ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ. ಇವರಲ್ಲಿ ಬಹುತೇಕರು ಮುಸ್ಲಿಮರು ಅಥವಾ ಆಡಳಿತ ಪಕ್ಷದ ವಿರೋಧಿಗಳು ಎಂದು ವಿವರಿಸಿದರು.

ಎಸ್‌ಐಆರ್ ಮೂಲಕ ಆಡಳಿತ ಪಕ್ಷ ತನ್ನ ವಿರೋಧಿಗಳನ್ನು ಮತದಾರರ ಪಟ್ಟಿಯಿಂದ ಅಳಿಸಿ ಚುನಾವಣೆಯಲ್ಲಿ ಸುಲಭವಾಗಿ ಗೆಲ್ಲಲು ಯತ್ನಿಸುತ್ತಿದೆ. ಇದು ಹಗಲಿನಲ್ಲಿ ನಡೆಯುತ್ತಿರುವ ಪ್ರಜಾಪ್ರಭುತ್ವದ ಹತ್ಯೆಯಾಗಿದೆ. ಸಂವಿಧಾನ ಮತ್ತು ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ರಕ್ಷಿಸಲು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಬೇಕು ಎಂದು ಕರೆ ನೀಡಿದರು.

ನಾಗರಿಕ ಸಮಾಜ ಸಂಸ್ಥೆಗಳು, ವಿದ್ಯಾರ್ಥಿಗಳು, ಯುವಜನರು ಹಾಗೂ ಪ್ರಗತಿಪರ ಸಂಘಟನೆಗಳು ಒಗ್ಗಟ್ಟಿನಿಂದ ಜನರನ್ನು ಜಾಗೃತಿಗೊಳಿಸಿ ಹೋರಾಟ ನಡೆಸಬೇಕು ಎಂದು ಅವರು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ವಿವಿಧ ಸಂಘಟನೆಗಳ ಮುಖಂಡರು, ಹೋರಾಟಗಾರರು ಹಾಗೂ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ನಾಗರಿಕರು, ಯುವಜನರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...