Homeಮುಖಪುಟಎಸ್‌ಐಆರ್ 'ಸಾಂಸ್ಥಿಕ ಮತಗಳ್ಳತನ', ಚುನಾವಣಾ ಆಯೋಗ ಬಿಜೆಪಿ ಜೊತೆ ಕೈ ಜೋಡಿಸಿದೆ: ರಾಹುಲ್ ಗಾಂಧಿ

ಎಸ್‌ಐಆರ್ ‘ಸಾಂಸ್ಥಿಕ ಮತಗಳ್ಳತನ’, ಚುನಾವಣಾ ಆಯೋಗ ಬಿಜೆಪಿ ಜೊತೆ ಕೈ ಜೋಡಿಸಿದೆ: ರಾಹುಲ್ ಗಾಂಧಿ

- Advertisement -
- Advertisement -

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಾಂಸ್ಥಿಕ ಮತಗಳ್ಳತನವಾಗಿದೆ. ಚುನಾವಣಾ ಆಯೋಗ ಬಿಜೆಪಿ ಜೊತೆ ಕೈ ಜೋಡಿಸಿದೆ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಎಸ್‌ಐಆರ್ ಮತ್ತು ಮತಗಳ್ಳತನದ ವಿರುದ್ದ ಬಿಹಾರದಲ್ಲಿ ಹಮ್ಮಿಕೊಂಡಿರುವ ‘ವೋಟರ್ ಅಧಿಕಾರ್’ ಯಾತ್ರೆಯಲ್ಲಿ ಭಾನುವಾರ ಅವರು ಚುನಾವಣಾ ಆಯೋಗ ಮತ್ತು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ನಕಲಿ ಮತದಾರರನ್ನು ಹೇಗೆ ಸೇರ್ಪಡೆ ಮಾಡಲಾಗಿದೆ ಎಂಬ ನಮ್ಮ ಪ್ರಶ್ನೆಗೆ ಚುನಾವಣಾ ಆಯೋಗ ಉತ್ತರ ನೀಡಿಲ್ಲ. ಹಾಗಾಗಿ, ಅದರ ಎಲ್ಲರಿಗೂ ಸ್ಪಷ್ಟವಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಬಿಹಾರದ ಅರಾರಿಯಾದಲ್ಲಿ ‘ವೋಟರ್ ಅಧಿಕಾರ್’ ಯಾತ್ರೆಯ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ಮುಂಬರುವ ಬಿಹಾರ ಚುನಾವಣೆಗಾಗಿ ಇಂಡಿಯಾ ಒಕ್ಕೂಟವು ‘ಸೈದ್ಧಾಂತಿಕ ಮತ್ತು ರಾಜಕೀಯವಾಗಿ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದೆ. ಚುನಾವಣೆಯ ಫಲಿತಾಂಶ ನಮಗೆ ಫಲಪ್ರದವಾಗಲಿದೆ. ನಾವೆಲ್ಲ ಸಾಮಾನ್ಯ ಪ್ರಣಾಳಿಕೆಯೊಂದಿಗೆ ಮತದಾರರ ಮುಂದೆ ಹೋಗುತ್ತೇವೆ” ಎಂದಿದ್ದಾರೆ.

ಮತಗಳ್ಳತನಕ್ಕೆ ಸಂಬಂಧಿಸಿದ ತನ್ನ ಆರೋಪಕ್ಕೆ ಚುನಾವಣಾ ಆಯೋಗ ಪ್ರಮಾಣಪತ್ರ ಕೇಳಿದೆ ಎಂದ ರಾಹುಲ್ ಗಾಂಧಿ, ಅನುರಾಗ್ ಠಾಕೂರ್ ಅಂತಹದ್ದೇ ಆರೋಪ ಮಾಡಿದರೂ ಅವರಿಂದ ಪ್ರಮಾಣಪತ್ರ ಕೇಳಿಲ್ಲ ಎಂದಿದ್ದಾರೆ.

“ನಾನು ಮಹದೇವಪುರದ ಮತಗಳ್ಳತನದ ಕುರಿತು ಪತ್ರಿಕಾಗೋಷ್ಠಿ ಮಾಡುತ್ತಿದ್ದೆ. ಐದು ನಿಮಿಷಗಳಲ್ಲಿ, ರಾಹುಲ್ ಗಾಂಧಿ ಪ್ರಮಾಣಪತ್ರ ನೀಡಬೇಕು. ಅವರು ಪ್ರಮಾಣಪತ್ರ ಸಲ್ಲಿಸದಿದ್ದರೆ ಆರೋಪಗಳನ್ನು ಸ್ವೀಕರಿಸುವುದಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ. ಕೆಲ ದಿನಗಳ ನಂತರ, ಅನುರಾಗ್ ಠಾಕೂರ್ ಅದೇ  ರೀತಿಯ ಆರೋಪಗಳನ್ನು ಮಾಡಿದರು. ಆದರೆ, ಅವರಿಂದ ಯಾವುದೇ ಪ್ರಮಾಣಪತ್ರ ಕೇಳಿಲ್ಲ. ನಾನು ನಕಲಿ ಮತದಾರರ ಬಗ್ಗೆ ಮಾತನಾಡಿದ್ದೆ, ಅವರು ಕೂಡ ಅದನ್ನೇ ಮಾಡಿದ್ದರು. ಐದು ನಿಮಿಷಗಳಲ್ಲಿ ನನ್ನಿಂದ ಪ್ರಮಾಣಪತ್ರ ಕೇಳಲಾಯಿತು. ಆದರೆ, ಇಂದಿನವರೆಗೆ ಅನುರಾಗ್ ಠಾಕೂರ್ ಅವರಿಂದ ಕೇಳಿಲ್ಲ” ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಸಿಪಿಐ (ಎಂಎಲ್) ನ ದೀಪಂಕರ್ ಭಟ್ಟಾಚಾರ್ಯ ಮತ್ತು ವಿಐಪಿಯ ಮುಖೇಶ್ ಸೈನಿ ಇದ್ದರು.

ಇದಕ್ಕೂ ಮೊದಲು ಅರಾರಿಯಾದಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ಸಾರ್ವಜನಿಕ ವಲಯದ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಿದ ಮೋದಿ ಸರ್ಕಾರ, ಈಗ ಚುನಾವಣಾ ಆಯೋಗದ ಸಹಾಯದಿಂದ ಎಸ್‌ಐಆರ್ ಮೂಲಕ ಬಡವರ ಮತಗಳನ್ನು ಕದಿಯಲು ಬಯಸುತ್ತಿದೆ. ಇದಕ್ಕೆ ಬಿಹಾರದಲ್ಲಿ ಇಂಡಿಯಾ ಒಕ್ಕೂಟ ಅವಕಾಶ ನೀಡುವುದಿಲ್ಲ” ಎಂದು ಹೇಳಿದ್ದಾರೆ.

“ಚುನಾವಣಾ ಆಯೋಗ ತಟಸ್ಥವಾಗಿಲ್ಲ, ಅವರು ಮತಗಳನ್ನು ಕದಿಯುತ್ತಿದ್ದಾರೆ. ಎಸ್‌ಐಆರ್ ಎಂಬುವುದು ಮತಗಳನ್ನು ಕದಿಯಲು ಚುನಾವಣಾ ಆಯೋಗ ಮಾಡಿರುವ ಸಾಂಸ್ಥಿಕ ಪ್ರಯತ್ನವಾಗಿದೆ. ಪ್ರತಿಪಕ್ಷಗಳು ಮತದಾರರನ್ನು ಕೈಬಿಟ್ಟ ಬಗ್ಗೆ ದೂರು ನೀಡುತ್ತಿವೆ. ಆದರೆ, ಬಿಜೆಪಿ ಯಾವುದೇ ದೂರು ನೀಡುತ್ತಿಲ್ಲ. ಅದೇಕೆ ಹೀಗೆ? ಏಕೆಂದರೆ, ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಮತ್ತು ಬಿಜೆಪಿ ನಡುವೆ ಒಪ್ಪಂದ ಇದೆ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

“ಸರಿಯಾದ’ ಮತದಾರರ ಪಟ್ಟಿಯನ್ನು ಒದಗಿಸುವುದು ಚುನಾವಣಾ ಆಯೋಗದ ಕೆಲಸ. ಆದರೆ, ಅವರು ಮಹಾರಾಷ್ಟ್ರ, ಹರಿಯಾಣ ಮತ್ತು ಕರ್ನಾಟಕದಲ್ಲಿ ಆ ಕೆಲಸ ಮಾಡಿಲ್ಲ” ಎಂದು ಒತ್ತಿ ಹೇಳಿದ ರಾಹುಲ್ ಗಾಂಧಿ, “ಚುನಾವಣಾ ಆಯೋಗ ತನ್ನ ನಡವಳಿಕೆಯನ್ನು ಬದಲಾಯಿಸಿರುವುದನ್ನು ಸಾಬೀತುಪಡಿಸುವುದು ನಮ್ಮ ಪ್ರಯತ್ನವಾಗಿದೆ” ಎಂದು ಹೇಳಿದ್ದಾರೆ.

ಚುನಾವಣಾ ಆಯೋಗವು ‘ಗೋದಿ ಆಯೋಗ’ವಾಗಿ ಮಾರ್ಪಟ್ಟಿದೆ. ಚುನಾವಣಾ ಸಂಸ್ಥೆಯ ವಿಶ್ವಾಸಾರ್ಹತೆ ತಳಮಟ್ಟಕ್ಕೆ ಕುಸಿದಿದೆ ಎಂದು ತೇಜಸ್ವಿ ಯಾದವ್ ಆರೋಪಿಸಿದ್ದಾರೆ. ನರೇಂದ್ರ ಮೋದಿ ಸುಳ್ಳು ಹೇಳುತ್ತಿದ್ದಾರೆ. ಅಕ್ರಮ ಮತದಾರರನ್ನು ಪತ್ತೆ ಮಾಡಲು ಎಸ್‌ಐಆರ್ ಮಾಡಲಾಗುತ್ತದೆ ಎಂದು ಪ್ರಧಾನಿ ಹೇಳಿಕೊಂಡಿದ್ದಾರೆ ಆದರೆ, ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಚುನಾವಣಾ ಆಯೋಗವು ಹಾಗೆ ಉಲ್ಲೇಖಿಸಿಲ್ಲ” ಎಂದಿದ್ದಾರೆ.

“ತನ್ನ ವರ್ಚಸ್ಸು ನಷ್ಟಕ್ಕೆ ಚುನಾವಣಾ ಆಯೋಗವನ್ನೇ ದೂಷಿಸಬೇಕು” ಎಂದು ಭಟ್ಟಾಚಾರ್ಯ ಹೇಳಿದ್ದು, “ಇದು ಚುನಾವಣಾ ಆಯೋಗವಲ್ಲ, ಬದಲಾಗಿ ಭಾರತದ ಚುನಾವಣಾ ಲೋಪ” (It is not the Election Commission, but the Election Omission of India) ಎಂದು ಕರೆದಿದ್ದಾರೆ.

‘ಬಿಜೆಪಿ ಗೆಲ್ಲಬೇಕೆಂದು ಬಯಸುವ ಕ್ಷೇತ್ರಗಳಿಗೆ ಇತರ ರಾಜ್ಯಗಳಿಂದ ಜನರನ್ನು ಕರೆ ತರಲಿದೆ’: ಚರ್ಚೆಗೆ ಕಾರಣವಾದ ಕೇರಳ ಬಿಜೆಪಿ ನಾಯಕನ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...